Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಇನ್ನೇನು ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಿ ಮದುವೆ ಆಗಬೇಕಿದ್ದ ವರನಿಗೆ, ವಧುವಿನ ಮಾಜಿ ಲವರ್ ಚಾಕು ಇರಿದಿರುವ ಘಟನೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್. ರವೀಶ್ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿತವಾಗಿದೆ. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಎಲ್. ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ.ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರತಕ್ಷತೆಗೆ ತೆರಳುವ ವೇಳೆ ವರನನ್ನು ಅಡ್ಡಗಟ್ಟಿ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ನವದೆಹಲಿ : ಇನ್ಸ್ಟಾಗ್ರಾಮ್ ನಲ್ಲಿ ಸುಮಾರು 274 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ. ಇದು ಅವರ ಫಾಲೋವರ್ಸ್ ಅನ್ನು ಗೊಂದಲಕ್ಕೀಡು ಮಾಡಿದ್ದಲ್ಲದೇ ಆನ್ಲೈನ್ನಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೊಹ್ಲಿ ಇನ್ಸ್ಟಾಗ್ರಾಮ್ ಖಾತೆ ಡಿ-ಆಕ್ಟಿವೇಟ್ ಆಗ್ತಿದ್ದಂತೆ ಸೋಶಿಯಲ್ ಮೀಡಿಯಾದ ಎಲ್ಲಾ ಪ್ಲಾಟ್ಫಾರಂಗಳಲ್ಲಿ ಇದರ ಬಗ್ಗೆಯೇ ಬಿಸಿಬಿಸಿ ಚರ್ಚೆ ಆರಂಭವಾಗಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಏನೋ ಮಿಸ್ ಆಗಿದೆ ಎಂದು ಅನುಮಾನ ವ್ಯಕ್ತವಾಗಿದೆ. ವಿರಾಟ್ ಕೊಹ್ಲಿ ಈಗ ಕ್ರೀಸ್ನಲ್ಲಿ ಇಲ್ಲದಿರಬಹುದು, ಆದರೆ ಇನ್ಸ್ಟಾಗ್ರಾಮ್ನಲ್ಲಿ ಅವರ ಅನುಪಸ್ಥಿತಿಯು ಅಭಿಮಾನಿಗಳನ್ನು ದುಃಖಿತರನ್ನಾಗಿ ಮಾಡಿದೆ. ಆದರೆ ಇದೀಗ ಕೊಹ್ಲಿ ಅಕೌಂಟ್ ಆಕ್ಟಿವೇಟ್ ಆಗಿದ್ದು ಅಭಿಮಾನಿಗಳಿಗೆ ಖುಷಿ ತಂದಿದೆ. ಹೌದು ಜನವರಿ 30 ರಂದು 274 ಮಿಲಿಯನ್ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ ಅವರ ಖಾತೆಯು ಇನ್ಸ್ಟಾಗ್ರಾಮ್ನಿಂದ ಕಣ್ಮರೆಯಾಗಿತ್ತು. ಸ್ವಲ್ಪ ಸಮಯದ ನಂತರ, ಖಾತೆಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ಎಲ್ಲವೂ ಸಾಮಾನ್ಯ…
ಶಿವಮೊಗ್ಗ : ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ cm ಕುರ್ಚಿ ಕುರಿತು ಮಾತನಾಡಿದ್ದು, ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಕ್ರಿಯಿಸಿದರು. ಜಾರ್ಜ್ ರಾಜೀನಾಮೆ ಬಗ್ಗೆ ನನಗೇನೂ ಗೊತ್ತಿಲ್ಲ. ವಿಪಕ್ಷದವರು ಏನಾದರೊಂದು ಹೇಳುತ್ತಲೇ ಇರುತ್ತಾರೆ. ಯಾರೇ ಆದರೂ ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ನಮ್ಮ ಕಾರ್ಯಕರ್ತರು ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಲೇ ಇರುತ್ತಾರೆ. ಆಗ ಅಧಿಕಾರಿಗಳಿಗೆ ನಾವು ಕೆಲವೊಂದು ಸೂಚನೆ ನೀಡಬೇಕಾಗುತ್ತದೆ. ಅದನ್ನು ಹೊರತುಪಡಿಸಿ ಇನ್ಯಾವುದೇ ರೀತಿಯ ಹಸ್ತಕ್ಷೇಪದ ವಿಚಾರ ನನಗೆ ಗೊತ್ತಿಲ್ಲ ಎಂದರು. ಗಾಂಧಿ ಹೆಸರನ್ನು ತೆಗೆದು ಹಾಕಿ, ಅದೇ ಗಾಂಧಿ ಪ್ರತಿಮೆ ಮುಂದೆ ಕುಳಿತು ಪ್ರತಿಭಟನೆ ಮಾಡುವ ಬಿಜೆಪಿ-ಜೆಡಿಎಸ್ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಡಿಕೆಶಿ, ಎಲ್ಲಾ ಗ್ರಾಮ ಪಂಚಾಯತ್ಗಳಿಗೆ ಮಹಾತ್ಮಾಗಾಂಧಿ ಹೆಸರಿಡುವಂತೆ ಮನವಿ ಮಾಡಿದ್ದೇವೆ ಎಂದರು. ಚೋರ್ಲಾ ಘಾಟ್ನಲ್ಲಿ 400…
ಬೆಂಗಳೂರು : ವಿಧಾನ ಮಂಡಲ ಜಂಟಿ ಅಧಿವೇಶನ ವಿಸ್ತರಣೆ ಮಾಡಲಾಗಿದೆ. ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಇದೀಗ ವಿಸ್ತರಣೆ ಮಾಡಲಾಗಿದೆ. ಆದರೆ ಜನವರಿ 31 ರಂದು ಶನಿವಾರ ಅಧಿವೇಶನ ಇರುವುದಿಲ್ಲ. ಹಾಗಾಗಿ ಫೆಬ್ರವರಿ 4 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಇದೀಗ ವಿಸ್ತರಣೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಹಸ್ತಕ್ಷೇಪ ಮಾಡಿದ್ದರಿಂದ ಸಚಿವ ಕೇಜೆ ಜಾರ್ಜ್ ಬೇಸರದಿಂದ ರಾಜಿನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಸ್ವತಃ ಸಚಿವ ಕೆಜೆ ಚಾರ್ಜ್ ಅವರೇ ಸ್ಪಷ್ಟನೆ ನೀಡಿದ್ದು ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದಿನ ಸಚಿವ ಕೆ.ಜೆ ಜಾರ್ಜ್ ಮಾತನಾಡಿದ್ದು ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಈಗಾಗಲೇ ವಿಧಾನಸಭೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದೇನೆ. ಒಬ್ಬ ಸಚಿವರು ರಾಜೀನಾಮೆ ನೀಡುವುದು ಅಷ್ಟು ಸುಲಭವೇ? ನಾನು ಯಾವುದೇ ಅಧಿಕಾರಿ ವಿಚಾರದಲ್ಲಿ ಪಟ್ಟು ಹಿಡಿಯಲ್ಲ. ಯತೀಂದ್ರ ಒಳ್ಳೆಯವರು ಅವರಿಗೆ ಯಾಕೆ ಕೆಟ್ಟ ಹೆಸರು ನೀಡಲಿ? ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಸುದ್ದಿಗೋಷ್ಠಿ ಸಹ ನಡೆಸಿದ್ದೆ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಿದ್ದೆ. ನಾನು ಸಿಎಂ ಸಿದ್ದರಾಮಯ್ಯ ಪ್ರತಿದಿನ ಮಾತನಾಡುತ್ತೇವೆ. ಡಿಸಿಗಳು ಎಸಿಗಳು ಬರುತ್ತಾರೆ ಹೋಗುತ್ತಾರೆ. ಅಧಿಕಾರಿಗಳ ವರ್ಗಾವಣೆಯ ಬಗ್ಗೆ…
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದು ಸಿಬ್ಬಂದಿಗಳ ಹುಟ್ಟು ಹಬ್ಬ ಅಥವಾ ವಿವಾಹ ವಾರ್ಷಿಕೋತ್ಸವಕ್ಕೆ ಸಾಂಧರ್ಭಿಕ ರಜೆ ನೀಡುವಂತೆ ಡಿಜಿ ಮತ್ತು ಐಜಿಪಿ ಡಾ. ಸಲೀಂ ಆದೇಶ ಹೊರಡಿಸಿದ್ದಾರೆ. ಒತ್ತಡದ ಕೆಲಸ ವೈಯಕ್ತಿಕ ಜೀವನ ಸಮತೋಲನಕ್ಕೆ ರಜೆ ನೆರವಾಗುತ್ತದೆ ಹೀಗಾಗಿ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟು ಹಬ್ಬ ಆಗಿರಬಹುದು ಅಥವಾ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಂದರ್ಭಿಕ ರಜೆ ನೀಡುವಂತೆ ಟಿಜಿ ಮತ್ತು ಐಜಿಪಿ ಡಾ. ಸಲೀಂ ಆದೇಶ ಹೊರಡಿಸಿದ್ದಾರೆ.
ಕೋಲಾರ : ಕೋಲಾರದಲ್ಲಿ ಅನೈತಿಕ ಸಂಬಂಧಕ್ಕೆ ಕೊಲೆ ನಡೆದಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫೇಸ್ ಬುಕ್ ನಲ್ಲಿ ಕೊಲೆ ಮಾಡಿದ ಆರೋಪಿ ಸಂತೋಷ ಇದೀಗ ನಾನು ಕೊಲೆ ಮಾಡಿಲ್ಲ ನನ್ನ ಲೊಕೇಶನ್ ಅದಕ್ಕೆ ಸಾಕ್ಷಿ ಎಂದು ಹೇಳಿಕೆ ನೀಡಿದ್ದಾನೆ. ಅವನು ಮಾಡಿದ ಪಾಪ ಕರ್ಮಗಳಿಗೆ ಅವನೇ ಬಲಿಯಾಗಿದ್ದಾನೆ. ನನ್ನ ಪತ್ನಿಯೊಂದಿಗೆ ನನಗೆ ಬದುಕಲು ಬಿಡಲಿಲ್ಲ ನನ್ನ ಪತ್ನಿ ಕರೆದುಕೊಂಡು ಹೋದಾಗ ಯಾರು ಸಹ ಬರಲಿಲ್ಲ. ಇವನ ಅಣ್ಣ-ತಮ್ಮಂದಿರು ಅವತ್ತು ಇನ್ನೊಬ್ಬರ ಮನೆ ಹೆಣ್ಣು ಮಕ್ಕಳು ಕರೆದುಕೊಂಡು ಓಡಿ ಹೋದಾಗ ಯಾಕೆ ನ್ಯಾಯ ಪಂಚಾಯಿತಿ ಮಾಡಲಿಲ್ಲ? ನೀನು ಇದು ಮಾಡುವುದು ತಪ್ಪು ಇನ್ನೊಬ್ಬರ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬರೋದು ತಪ್ಪು. ಅವರಿಗೆ ಮಕ್ಕಳಿದ್ದಾರೆ ಸಂಸಾರ ಇದೆ ಎಂದು ನ್ಯಾಯ ಪಂಚಾಯತಿ ಮಾಡಬೇಕಾಗಿತ್ತಲ್ವಾ? ಟೇಕಲ್ ಹತ್ರ ಯಾವುದೋ ಒಂದು ಊರಿನಲ್ಲಿ ಇವಳನ್ನು ಇಟ್ಟಿದ್ದರು. ಅವತ್ತು ಎಲ್ಲರೂ ಸಪೋರ್ಟ್ ಮಾಡಿದ್ದೀರಾ ಕರ್ಕೊಂಡು ಹೋಗಿದ್ದವನು ಹೋಗಿಬಿಟ್ಟಿದ್ದಾನೆ ಬಿಟ್ಬಿಡು ಇನ್ಮೇಲೆ ಅವಳ…
ಬೆಂಗಳೂರು : ಗುತ್ತಿಗೆದಾರರ ಹಣ ಬಿಡುಗಡೆ ಮಾಡದೆ ಸರ್ಕಾರ ಬಾಗಿ ಉಳಿಸಿಕೊಂಡಿದೆ ವಿವಿಧ ಇಲಾಖೆಗಳ ಗುತ್ತಿಗೆದಾರರ ಹಣವನ್ನು ಇದೀಗ ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದ್ದು, ರಾಜ್ಯ ಸರ್ಕಾರ ಒಟ್ಟು 37,370 ಕೋಟಿ ರೂಪಾಯಿ ಗುತ್ತಿಗೆದಾರರಿಗೆ ನೀಡಬೇಕಿದೆ. ಲೋಕೋಪಯೋಗಿ ಇಲಾಖೆಯಿಂದ 13,000 ಕೋಟಿ ರೂಪಾಯಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 3800 ಕೋಟಿ, ಸಣ್ಣ ನೀರಾವರಿ ಇಲಾಖೆಯ 3000 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆಯ 2000 ಕೋಟಿ, ವಸತಿ ಮತ್ತು ಇಲಾಖೆಯ 2600 ಕೋಟಿ ರೂಪಾಯಿ, ಕಾರ್ಮಿಕ ಇಲಾಖೆಯ 2000 ಕೋಟಿ ರೂಪಾಯಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ 2600 ಕೋಟಿ ರೂಪಾಯಿ ಸೇರಿದಂತೆ ಒಟ್ಟು 37,370 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಬಾಗಿ ಉಳಿಸಿಕೊಂಡಿದೆ.
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಬುಧವಾರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪತಿಯ ಕಾಲಿಗೆ ಪತ್ನಿ ಸುನೇತ್ರ ನಮಸ್ಕರಿಸಿ ಕಣ್ಣೀರು ಹಾಕಿದರು ಬಾರಾಮತಿ ವಿದ್ಯಾ ಪ್ರತಿಷ್ಠಾನ ವಿಧಾನದಲ್ಲಿ ಅಂತ್ಯಕ್ರಿಯೆ ನೆರವೇರಿತು. ಪುತ್ರರಾದ ಪಾರ್ಥ ಮತ್ತು ಜಯ್ ರಿಂದ ಅಂತಿಮ ವಿಧಿ ವಿಧಾನ ನೆರವೇರಿತು. ಅಜಿತ್ ಪವಾರ್ ಅವರು ನಿನ್ನೆ ಬಾರಾಮತಿಗೆ ಪ್ರಯಾಣಿಸುತ್ತಿದ್ದರು, ಅಲ್ಲಿ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು.ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ವಿಮಾನ ಸಿಬ್ಬಂದಿ ಮತ್ತು ಇಬ್ಬರು ಪೈಲಟ್ಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಐದು ಜನರು ಅಪಘಾತದಲ್ಲಿ ಸಾವನ್ನಪ್ಪಿದರು. ರಾಜ್ಯ ಸರ್ಕಾರ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಮಹಾರಾಷ್ಟ್ರದ ಅತಿ ಹೆಚ್ಚು ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಜಿತ್ ಪವಾರ್ ಅವರನ್ನು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಮತ್ತು…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಇಂದಿನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರಿಂದ ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದರು. ಇದಕ್ಕೆ ಸಚಿವ ಕೆಜಿ ಜಾರ್ಜ್ ಸ್ಪಷ್ಟನೆ ನೀಡಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾದ ನಂಬಿಕೆ ನಮಗೆ ಇದೆ ನಿನ್ನೆ ಸಹ CLP ಮೀಟಿಂಗ್ ಇತ್ತು. ನನಗೆ ಗೊತ್ತಿಲ್ಲದ ವಿಚಾರ ಕೇಳಿದರೆ ನಾನು ಏನು ಹೇಳಲಿ? ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ. ಆವರಿಗೆ ಬೆಳಿಗ್ಗೆ ಸಾಯಂಕಾಲ ಸುದ್ದಿ ಬೇಕಾಗಿದೆ ಈ ರೀತಿ…














