Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಹ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಔತಣಕೂಟ ಸಹ ಏರ್ಪಡಿಸಿದ್ದರು. ಹೀಗಾಗಿ ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಡಿಸೇಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತು ಸಚಿವ ರಾಮಲಿಂಗ ರೆಡ್ಡಿ ಇದೀಗ ಮಹಾತ್ವದ ಸುಳಿವು ಕೊಟ್ಟಿದ್ದಾರೆ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ ಅವಕಾಶ ಕೊಡಬೇಕಲ್ವಾ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.

Read More

ಬೆಂಗಳೂರು : ಆರ್ ಎಸ್ ಎಸ್ ನಿಷೇಧದ ಕುರಿತಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನೆಲ್ಲೆ ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿವೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹೌದ ನನಗೆ ಗೊತ್ತಿಲ್ಲ ಈ ಗುರುತು ಪ್ರಿಯಾಂಕ ಖರ್ಗೆ ಕರೆದು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿದ್ದು, ಇದಕ್ಕೆ ನಾನು ಯಾವುದಕ್ಕೂ ವಿಚಲಿತಲಾಗಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.

Read More

ಹಾಸನ : ಆರ್ ಎಸ್ ಎಸ್ ನಿಷೇಧದ ಕುರಿತು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಆರ್ ಎಸ್ ಎಸ್ ಇದು ಒಂದು ತಾಲಿಬಾನ್ ಸಂಘಟನೆ ಆಗಿದೆ ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಬಿಕೆ ಹರಿಪ್ರಸಾದ್ ತಾಲಿಬಾನ್ ಚೀಲಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ಧಮ್, ತಾಕತ್ ಇದ್ದರೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಸೀದಿಗಳನ್ನು ತೆರವುಗೊಳಿಸಲಿ. ಆರ್ ಎಸ್ ಎಸ್ ನಿಷೇಧಿಸಲು ಕಾಂಗ್ರೆಸ್ ನವರಿಗೆ ಅಧಿಕಾರ ಇಲ್ಲ. ಆರ್ ಎಸ್ ಎಸ್ ಟಾರ್ಗೆಟ್ ಮಾಡಿ ಇವರು ಮಾತನಾಡುತ್ತಿದ್ದಾರೆ. ಆರ್ ಎಸ್ ಎಸ್ ಶಾಖೆಯಲ್ಲಿ ದೇಶ ಪ್ರೇಮದ ಬಗ್ಗೆ ಚರ್ಚೆ ಆಗುತ್ತೆ. ಪ್ರಿಯಾಂಕ ಖರ್ಗೆ ತಾಲಿಬಾನಿಗಳ ಬಚ್ಚಾ, ಸಿಎಂ ಸಿದ್ದರಾಮಯ್ಯ ಹರಿಪ್ರಸಾದ್ ತಾಲಿಬಾನ್ ಪರ ಮಾತನಾಡುವ ಚೇಲಾಗಳು. ಪ್ರಿಯಾಂಕ ಖರ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹಿಂಬಾಲಕರಲ್ಲ. ಸೋನಿಯಾ ಗಾಂಧಿ, ನೆಹರು ಹಿಂಬಾಲಕರು…

Read More

ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇದೀಗ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಇದೀಗ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಫಲಿತಾಂಶವನ್ನು ಮುಚ್ಚಿದಲಕೋಟೆಯಲ್ಲಿ ಸಲ್ಲಿಸಲು ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಪ್ರಕರಣದ ಹಿನ್ನೆಲೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್​​ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು…

Read More

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಶಾಲಾ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಬಾಲಕ 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ. ನಿನ್ನೆ ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಸಾವನ್ನು ಅಸಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷರೂ…

Read More

ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿಷೇಧದ ಕುರಿತು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪ್ರಿಯಾಂಕ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗನಿಸುವುದು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಪ್ರಶ್ನಿಸಲು ಧೈರ್ಯ ಮಾಡಿದರಿಂದ ಬೆದರಿಕೆ ಕರೆಗಳು ಬರುತ್ತಿವೆ.ನನ್ನ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆಗಳು ಹಾಗೂ ನಿಂದನೆ ಕರೆಗಳು ಬರುತ್ತಿದ್ದು, ಆದರೆ ನಾನು ಇದು ಯಾವುದಕ್ಕೂ ವಿಚಲಿತನಾಗುವುದಿಲ್ಲ. ಅಥವಾ ಆಶ್ಚರ್ಯ ಪಡುವುದಿಲ್ಲ ಆರ್ ಎಸ್ ಎಸ್ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ಇನ್ನು ಅವರು ನನ್ನನ್ನು ಏಕೆ ಬಿಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಮಾನತೆ ವಿವೇಚನೆ ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಈ ದೇಶವನ್ನು ಅತ್ಯಂತ…

Read More

ಕೊಪ್ಪಳ : ಕೊಪ್ಪಳದಲ್ಲಿ ಬಲ್ಡೊಟಾ ಕಾರ್ಖಾನೆ ವಿಚಾರವಾಗಿ, ಗವಿಸಿದ್ದೇಶ್ವರ ಸ್ವಾಮೀಜಿ ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ವಾರದಲ್ಲಿ 6 ದಿನಗಳ ಕಾಲ ಗವಿ ಸಿದ್ದೇಶ್ವರ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ಹೌದು ಬಲ್ಡೊಟಾ ಕಾರ್ಖಾನೆ ವಿಚಾರವಾಗಿ, ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಎಲ್ಲ ಜನರೊಂದಿಗೆ ಪ್ರತಿಭಟನೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಾರದಲ್ಲಿ 6 ದಿನಗಳ ಕಾಲ ಗವಿ ಸಿದ್ದೇಶ್ವರ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಖಾನೆ ರದ್ಧತಿ ಆದೇಶ ತರಬೇಕು ಎಂದಿದ್ದರು. ಫೆಬ್ರವರಿ ನಡೆದ ಹೋರಾಟದ ವೇಳೆ ಶ್ರೀಗಳು ಹೇಳಿದ್ದರು. ಬೃಹತ್ ಹೋರಾಟ ನಡೆಸಿದರು, ಕಾರ್ಖಾನೆ ನಿಲ್ಲುವ ಲಕ್ಷಣ ಕಾಣುತಿಲ್ಲ. ಬಲ್ಡೊಟಾ ಕಾರ್ಖಾನೆಯಾದರೆ ಕೊಪ್ಪಳ ತೊರೆಯುವೆ ಎಂದು ಹೇಳಿದ್ದರು. ಇದೀಗ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ ಹಿನ್ನೆಲೆ ಭಕ್ತರಲ್ಲಿ ಆತಂಕ ಹೆಚ್ಚಿದೆ. ಯಾವಾಗಲು ಮಂಗಳವಾರ ಮಾತ್ರ ಮೌನ ಅನುಷ್ಠಾನ ಕೈಗೊಳ್ಳುತ್ತಿದ್ದರು. ಇದೀಗ ವಾರದಲ್ಲಿ 6 ದಿನ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ…

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಪೆಡ್ಲಿಂಗ್ ಮಾಡಿತ್ತಿದ್ದ ಇಬ್ಬರು ನೈಜೆರಿಯಾ ಮೂಲದ ಇಬ್ಬರು ಅರೆಸ್ಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದು, ಒಕೆ ಚಿನ್ಯಾಡು ಸ್ಯಾಮ್ಯೂಯಲ್, ಕ್ಯೂಕಿರಿಜಾ ಟೋಪಿಸ್ಟಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಿಂದ 2.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ 43 ಗ್ರಾಂ ಕೊಕೇನ್, 490 ಗ್ರಾಂ MDMA ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿಗಳು 2011ಕ್ಕೂ ಮೊದಲೇ ನೈಜೆರಿಯಾದಿಂದ ಬೆಂಗಳೂರಿಗೆ ಬಂದಿದ್ದರು. ನಕಲಿ ಪಾಸ್ಪೋರ್ಟ್ ವೀಸಾ ಬಳಸಿ ಬೆಂಗಳೂರಲ್ಲೇ ನೆಲೆಸಿದ್ದರು. ಐಟಿ ಉದ್ಯೋಗಿಗಳು, ಸ್ಥಳೀಯರನ್ನು ಟಾರ್ಗೆಟ್ ಮಾಡಿ ಡ್ರಗ್ ಪೆಡ್ಲಿಂಗ್ ಮಾಡಿತ್ತಿದ್ದರು. ಬೈಕ್ ನಲ್ಲಿ ಬಂದು ಡ್ರಗ್ ಮಾರುತ್ತಿದ್ದಾಗ ದಾಳಿ ಮಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ರಾಯಚೂರು : ರಾಯಚೂರಲ್ಲಿ ಘೋರ ದುರಂತ ಸಂಭವಿಸಿದ್ದು, ತಾಲೂಕಿನ ಮರ್ಚೆಡ್ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕೊಠಡಿಯೊಂದು ಹೊತ್ತಿ ಉರಿದಿದೆ. ಕಿಡಿಗೇಡಿಗಳು ಶಾಲೆಯ ಕೊಠಡಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸರ್ಕಾರಿ ಶಾಲೆಯ LKG ಕ್ಲಾಸ್ ರೂಂ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕ್ಲಾಸ್ ರೂಂನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪುಸ್ತಕಗಳು, ಚೇರ್, ಟೇಬಲ್, ಮಕ್ಕಳ ಆಟಿಕೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Read More