Subscribe to Updates
Get the latest creative news from FooBar about art, design and business.
Author: kannadanewsnow05
BIG NEWS : ಪಾರ್ಟಿಯಲ್ಲಿ ಯಾವುದೇ ಡ್ರಗ್ಸ್ ಬಳಸಿಲ್ಲ, ಸ್ಥಳೀಯ ಮದ್ಯ ಮಾತ್ರ ಹಂಚಲಾಗಿತ್ತು : ಗಾಯಕಿ ಮಂಗ್ಲಿ ಸ್ಪಷ್ಟನೆ
ತೆಲಂಗಾಣ : ಖ್ಯಾತ ಗಾಯಕಿ ಮಂಗ್ಲಿ ಅವರ ಬರ್ತಡೆ ಪಾರ್ಟಿ ಮೇಲೆ ನಿನ್ನೆ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಮಾದಕ ದ್ರವ್ಯ ಮತ್ತು ಗಾಂಜಾ ಸೇವಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದರು. ಇದೀಗ ವಿಡಿಯೋ ಮೂಲಕ ಮಂಗ್ಲಿ ಸ್ಪಷ್ಟನೆ ನೀಡಿದ್ದು ಬರ್ತಡೆ ಪಾರ್ಟಿಯಲ್ಲಿ ಯಾವುದೇ ಮಾದಕ ದ್ರವ್ಯ ಬಳಸಿಲ್ಲ. ಸ್ಥಳೀಯ ಮದ್ಯ ಮಾತ್ರ ಹಂಚಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಗಾಯಕಿ ಮಂಗ್ಲಿ ಬರ್ತಡೆ ಪಾರ್ಟಿಯಲ್ಲಿ ಗಾಂಜಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆವೆಲ್ಲ ಠಾಣೆಯ ಪೊಲೀಸರ ದಾಳಿಯ ಬಳಿಕ ಗಾಯಕಿ ಮಂಗ್ಲಿ ಸ್ಪಷ್ಟನೇ ನೀಡಿದ್ದಾರೆ. ನನ್ನ ಬರ್ತಡೇ ಪಾರ್ಟಿಯಲ್ಲಿ ನನ್ನ ಆತ್ಮೀಯ ಗೆಳೆಯ ಗೆಳತಿಯರು ನನ್ನ ತಂಡದ ಸದಸ್ಯರು ಹಾಗೂ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು. ಮದ್ಯ, ಸೌಂಡ್ ಸಿಸ್ಟಮಗೆ ಅನುಮತಿ ಪಡೆಯುವ ಬಗ್ಗೆ ಗೊತ್ತಿರಲಿಲ್ಲ. ಯಾರಾದರೂ ಮಾರ್ಗದರ್ಶನ ನೀಡಿದ್ರೆ ನಾನು ಈ ತಪ್ಪು ಮಾಡುತ್ತಿರಲಿಲ್ಲ. ಪಾರ್ಟಿಯಲ್ಲಿ ಯಾವುದೇ ಡ್ರಗ್ಸ್ ಬಳಸಿಲ್ಲ ಸ್ಥಳೀಯ ಮದ್ಯ ಮಾತ್ರ ಹಂಚಲಾಗಿತ್ತು. ಪರೀಕ್ಷೆ ನಡೆಸಲಾಗಿದ್ದ ವ್ಯಕ್ತಿ…
ಬೆಂಗಳೂರು : ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭದ ವೇಳೆ ಕಾಲ್ತುಳಿತದಿಂದ 11 ಜನ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಹೌದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸುಮೊಟೊ ಕೇಸ್ ದಾಖಲಾಗಿದ್ದು, ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡು ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಸಿಐಡಿ ಗೆ ಮಾಹಿತಿ ನೀಡುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ ಬರೆದಿದೆ. ಆರ್ಸಿಬಿ ಸಂಬ್ರಮಚರಣೆಯ ವೇಳೆ 11 ಅಭಿಮಾನಿಗಳ ಸಾವಾಗಿದೆ. ಕಾಲ್ತುಳಿತದ ಸಮಯದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ ಎಂಬ ಬಗ್ಗೆ ಮಾಹಿತಿ ಕೇಳಿ ಪತ್ರ ಬರೆದಿದೆ. ಸಿಐಡಿ ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಇದುವರೆಗೂ ಕೊರೊನಾ ಇಂದ 11 ಜನರು ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಆದರೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮೃತಪಟ್ಟ 11 ಜನರು ಕೋವಿಡ್ ಇಂದ ಸತ್ತಿಲ್ಲ ಎಂದು ಇದೀಗ ಸ್ಪಷ್ಟನೆ ನೀಡಿದ್ದಾರೆ. ಇದೀಗ ರಾಜ ಆರೋಗ್ಯ ಇಲಾಖೆ ಕೂಡ ಕೋಮಾರ್ಬಿಟಿಸ್ ನಿಂದ ಮೃತಪಟ್ಟರೆ ಕೋವಿಡ್ ಎಂದು ಪರಿಗಣಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಹೌದು ಕೋಮಾರ್ಬಿಟಿಸ್ ನಿಂದ ಮೃತಪಟ್ಟರೆ ಕೋವಿಡ್ ಎಂದು ಪರಿಗಣಿಸಬೇಡಿ. ಕೋವಿಡ್ ಸಾವೆಂದು ಪರಿಗಣಿಸದಿರಲು ರಾಜ್ಯ ಆರೋಗ್ಯ ಇಲಾಖೆ ಇದೀಗ ತೀರ್ಮಾನಿಸಿದೆ. ಇ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಷ್ಟು ದಿನ ಕೋಮಾರ್ಬಿಟಿಸ್ ಸಾವು ಕೋವಿಡ್ ಎಂದು ವರದಿ ಬಂದಿದೆ. ಆದರೆ ಇನ್ಮುಂದೆ ಕೋಮಾರ್ಬಿಟೀಸ್ ರೋಗಿಗೆ ಕೋವಿಡ್ ಬಂದರೆ ಪರಿಗಣನೆ ಆಗಲ್ಲ. ಕೋಮಾರ್ಬಿಟಿಸ್ ಇಲ್ಲದ ವ್ಯಕ್ತಿಗೆ ಕೋವಿಡ್ ಬಂದರೆ ಮಾತ್ರ ಪರಿಗಣನೆ, ಕೋವಿಡ್ ಬಂದು ಮೃತಪಟ್ಟರೆ ಮಾತ್ರ ಬುಲೆಟಿನಲ್ಲಿ ವರದಿ ಸಲ್ಲಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ…
ಉತ್ತರಕನ್ನಡ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗೆ ಸುಮಾರು 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಬರಿ ಅವಾಂತರ ಸೃಷ್ಟಿಯಾಗಿದ್ದು, ಕಾರವಾರದಲ್ಲಿ ರಾತ್ರಿ ಇಡೀ ಸುರಿದ ಮಳೆಯಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗಿದ ಪರಿಣಾಮ 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಅನುಮಾನ ದೇವಸ್ಥಾನದ ಬಳಿಯ ಚಿಕ್ಕನಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಾಗಲಕೋಟೆಯಲ್ಲಿ ಪೆಟ್ರೋಲ್ ಬಂಕ್ ಜಲಾವೃತ! ಭಾರಿ ಮಳೆಗೆ ಪೆಟ್ರೋಲ್ ಬಂಕ್ ಸಹ ಜಲಾವೃತವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಕೆರೆಯಂತಾಗಿದೆ. ಯಾವುದೇ ವಾಹನಗಳು ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸೇತುವೆ ಮೇಲೆ ಭಾರಿ ಪ್ರಮಾಣದಲ್ಲಿ…
ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಗನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಲಾಗಿತ್ತು. ಈ ವಿಚಾರ ತಿಳಿದು ಅಲ್ಲಿಗೆ ಒಳಗಾದ ಯುವಕನ ತಾಯಿಯೊಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರೆನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಜಮೀನು ವಿವಾದ ಸಂಬಂಧ ಯುವಕನ ಮೇಲೆ ಹಲ್ಲೆನಡೆಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರಿನಹಳ್ಳಿ ನಡೆದಿತ್ತು, ಕೊಲೆ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ರೆಡ್ಡಿ ಅರೆಸ್ಟ್ ಆಗಿದ್ದಾನೆ. ಪೇರೆಸಂದ್ರ ಠಾಣೆಯ ಪೊಲೀಸರಿಂದ ಆರೋಪಿ ಶಿವಣ್ಣ ಬಂಧನವಾಗಿದೆ. ಜಮೀನು ವಿವಾದ ಸಂಬಂಧ ಯುವಕ ನವೀನ್ ಎನ್ನುವವನ ಮೇಲೆ ಮಚ್ಚಿನಿಂದ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ದಾಳಿ ನಡೆಸಿದ್ದ. ಮಗನ ಮೇಲಿನ ದಾಳಿ ವಿಚಾರ ಕೇಳಿ ನವೀನ್ ತಾಯಿ ಯಶೋದಮ್ಮ ಮೃತಪಟ್ಟಿದ್ದರು. ಸದ್ಯ ಆರೋಪಿ ಶಿವಣ್ಣನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ವಿಧಾನ ಪರಿಷತ್ ಗೆ ನೇಮಕ ಮಾಡದಂತೆ ತಮ್ಮ ವಿರುದ್ಧದ ಆರೋಪಗಳ ಸಂಬಂಧ ದಿನೇಶ್ ಅಮೀನ್ ಮಟ್ಟು ಅವರು ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಜಿ ಎಮ್ ಗಾಡ್ಕರ್ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದು, ಜಿಎಂ ಗಾಡ್ಕರ್ ವಿರುದ್ಧ ಕೇಸ್ ದಾಖಲಿಸಲು ಆದೇಶ ನೀಡುವಂತೆ ದಿನೇಶ್ ಅಮೀನ್ ಮಟ್ಟು ರಾಜ್ಯಪಾಲರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರದಲ್ಲಿ ನನಗೆ ಅಪರಿಚಿತನಾದ ಜಿ.ಎಂ.ಗಾಡ್ಕರ್ ಎಂಬ ವ್ಯಕ್ತಿ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ತಮಗೆ ನೀಡಿರುವ ದೂರು ಕೆಲವು ಪತ್ರಿಕೆಗಳು, ಚಾನೆಲ್ ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟಿಕರಣ ಎಂದು ಉಲ್ಲೆಖಿಸಿದ್ದಾರೆ. ಮೊದಲನೆಯದಾಗಿ, ನಾನು ತುಮಕೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ನಿವೇಶನ ಪಡೆದಿದ್ದೇನೆ ಎನ್ನುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದ್ದು ಮತ್ತು ನಿರಾಧಾರವಾದುದು. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಾನು ಯಾವುದೇ ನಿದೇಶನ ಪಡೆದಿಲ್ಲ. ಕೇಂದ್ರ ಸರ್ಕಾರದ ಯೋಜನೆಯಾದ ಐಡಿಎಸ್…
ತೀರ್ಥಹಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಾಂತರಾ ಸಿನಿಮಾದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಹೃದಯಾ ಘಾತದಿಂದ ಸಾವನ್ನಪ್ಪಿದ್ದರು. ಇದೀಗ ಕಾಂತಾರ ಚಲನಚಿತ್ರದ ಮತ್ತೋರ್ವ ಕಲಾವಿದನೋಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಹೌದು ಹೃದಯಾಘಾತದಿಂದ ಸಾವನಪ್ಪಿದ ಮಿಮಿಕ್ರಿ ಕಲಾವಿದನನ್ನು ವಿಜು ವಿ. ಕೆ ಎಂದು ತಿಳಿದುಬಂದಿದೆ. ವಿಜು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಹುಬ್ಬಳ್ಳಿಯಲ್ಲಿ ಹೊಲದಿಂದ ಮನೆಗೆ ತೆರಳುವಾಗ ಭಾರಿ ಮಳೆಯಿಂದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹುಬ್ಬಳ್ಳಿಯ ಬೆಳಗಲಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಹುಬ್ಬಳ್ಳಿಯಲ್ಲಿ ಮಳೆಯಲ್ಲಿ ವ್ಯಕ್ತಿ ಒಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಬೆಳಗಲಿ ಕ್ರಾಸ್ ರಸ್ತೆ ಪಕ್ಕದಲ್ಲಿರುವ ಚರಂಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹುಸೇನ್ ಎನ್ನುವ ವ್ಯಕ್ತಿ ಕೊಚ್ಚಿ ಹೋಗಿದ್ದಾನೆ. ಹೊಲದಿಂದ ಮನೆಗೆ ತೆರಳುವಾಗ ಹುಸೇನ್ ಕೊಚ್ಚಿ ಹೋಗಿದ್ದಾನೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನೀರಿನಲ್ಲಿ ಕಾಲು ಜಾರಿ ಬಿದ್ದು ಹುಸೇನ್ ಕೊಚ್ಚಿ ಹೋಗಿದ್ದಾನೆ. ಸದ್ಯ ಹುಸೇನ್ ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಗೌರಿಬಿದನೂರು : ಜೂ.11: ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್ಸೆಟ್ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಸ್ಥಾಪಿಸಿರುವ ಸೋಲಾರ್ ಘಟಕವನ್ನು ಬುಧವಾರ ಲೋಕಾರ್ಪಣೆಗೊಳಿಸಿದ ಬಳಿಕ ಪಟ್ಟಣದ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, “ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದೇ ಕುಸುಮ್- ಸಿ ಯೋಜನೆಯ ಉದ್ದೇಶವಾಗಿದೆ,” ಎಂದರು. “ಕುಸುಮ್- ಸಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. 2021ರಲ್ಲಿ ರಾಜ್ಯದಲ್ಲೂ ಇದನ್ನು ಜಾರಿಗೊಳಿಸುವ ಸಂಬಂಧ ಆಗಿನ ಬಿಜೆಪಿ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿತ್ತು. ಆದರೆ, ನಂತರ 2 ವರ್ಷ ಅಧಿಕಾರದಲ್ಲಿದ್ದರೂ ಯೋಜನೆ ಜಾರಿಗೊಳಿಸುವ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಜೆ.ಜಾರ್ಜ್ ಅವರು ಸಚಿವರಾದ ಮೇಲೆ ರಾಜ್ಯದಲ್ಲಿ ಕುಸುಮ್- ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು,” ಎಂದರು. “ಕುಸುಮ್-ಸಿ…
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವನಪ್ಪಿದ್ದಾರೆ. ರಾಜಕುಮಾರ್ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಿನ್ನೆ ಸಂಜೆ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ನಿವೃತ್ತ ಸಿ ಎ ಆರ್ ಸಿಬ್ಬಂದಿ ಹನುಮಂತರಾಯಪ್ಪ (71) ಎಂದು ತಿಳಿದುಬಂದಿದೆ. ಹನುಮಂತರಾಯಪ್ಪ ಬಾಗಲಕುಂಟೆಯಿಂದ ಕೆಲಸದ ನಿಮಿತ್ಯ ರಾಜಾಜಿನಗರಕ್ಕೆ ಬಂದಿದ್ದರು. ನಿನ್ನೆ ಸಂಜೆ 4:30ಗೆ ಹನುಮಂತರಾಯಪ್ಪ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕೆಳಗೆ ಸಿಲುಕಿ ಬಿದ್ದಿದ್ದಾರೆ. ಗಾಯಗೊಂಡಿದ್ದ ಹನುಮಂತ ರಾಯಪ್ಪನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಹನುಮಂತ ರಾಯಪ್ಪ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.