Subscribe to Updates
Get the latest creative news from FooBar about art, design and business.
Author: kannadanewsnow05
ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ : ಬಂಕ್ ಮಾಲೀಕರಿಗೆ ಮಂಡ್ಯ ಡಿಸಿ ಡಾ.ಕುಮಾರ ಎಚ್ಚರಿಕೆ
ಮಂಡ್ಯ : ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.ಪೆಟ್ರೋಲ್ ಬಂಕ್ ಮಾಲೀಕರ ಜೊತೆಗೆ ಈಗಾಗಲೇ ಸಭೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಗತ್ಯ ಇರುವಷ್ಟು ಪೆಟ್ರೋಲ್ ಡೀಸೆಲ್ ಸಂಗ್ರಹವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಕ್ಯಾನ್ ಗಳಿಗೆ ಪೆಟ್ರೋಲ್ ತುಂಬಿಸಿದರೆ ಬಂಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ಯಾನ್, ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸುವುದು ಸುರಕ್ಷಿತ ಕ್ರಮವಲ್ಲ. ಗೃಹ ಬಳಕೆ ಗ್ಯಾಸ್ ಸಮಸ್ಯೆ ಇಲ್ಲ ಸಾರ್ವಜನಿಕರು ಆತಂಕ ಪಡಬೇಕಿಲ್ಲ ಗ್ಯಾಸ್ ಬುಕಿಂಗ್ ಆನ್ಲೈನ್ ಸಮಸ್ಯೆ ಸರಿಪಡಿಸಲು ಸೂಚನೆ ನೀಡಿದ್ದೇನೆ. ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಗ್ಯಾಸ್ ಏಜೆನ್ಸಿಗಳ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಎಚ್ಚರಿಕೆ ನೀಡಿದರು.
ನವದೆಹಲಿ : ಇಂದಿನ ಕೋರಿಕೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ಸ್ಥಿರವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಇದೀಗ ಮಾಹಿತಿ ನೀಡಿದೆ. ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ವದಂತಿಗಳಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸ್ಪಷ್ಟನೆ ನೀಡಿದೆ. ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ಕಂಪನಿ ತಿಳಿಸಿದೆ.ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ನಿರಂತರವಾಗಿ ಇಂಧನ ಸರಬರಾಜು ಮಾಡಲಾಗುತ್ತಿದ್ದು, ಅಗತ್ಯವಿರುವಷ್ಟು ದಾಸ್ತಾನು ಲಭ್ಯವಿದೆ ಎಂದು ಕಂಪನಿಯು ಸಾರ್ವಜನಿಕರಿಗೆ ಭರವಸೆ ನೀಡಿದೆ.
ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲಾ ಕೋರ್ಟ್ ಗಳಿಗೆ ಸೇರಿದಂತೆ ಸರಕಾರಿ ಕಚೇರಿಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಸಿದ್ದ ಪ್ರಕರಣಗಳು ನಡೆದಿದ್ದವು. ಇದೀಗ ಕೋಲಾರ ಆರ್ ಟಿ ಓ ಕಚರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕಿಡಿಗೇಡಿಗಳು ಆರ್ಟಿಓ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಸಂದೇಶ ಕಳುಹಿಸಿದ್ದಾರೆ. ಅಪರಿಚಿತ ಇಮೇಲ್ ಐಡಿ ಇಂದ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ನಗರ ಪೋಲಿಸರಿಂದಲೂ ಆರ್ಟಿಓ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಉತ್ತರಪ್ರದೇಶ : ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಇಂದು ರಾಮ ನವಮಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇದೇ ವೇಳೆ ಶ್ರೀ ರಾಮಲಲ್ಲ ಹಣೆಗೆ ಸೂರ್ಯ ರಶ್ಮಿ ತಿಲಕ ನೋಡಿ ಭಕ್ತರು ಪುನೀತರಾದರು. ಸೂರ್ಯ ರಶ್ಮಿ ನೇರವಾಗಿ ರಾಮಲಲ್ಲ ವಿಗ್ರಹದ ಹಣೆಗೆ ಸ್ಪರ್ಶಿಸಿದ್ದು ರಾಮಲಲ್ಲಾಗೆ ಸೂರ್ಯನ ತಿಲಕವಿಟ್ಟಂತೇ ಕಾಣಿಸಿತು. ಸುಮಾರು 4 ನಿಮಿಷಗಳ ಕಾಲ ರಾಮಲಲ್ಲ ಹಣೆಗೆ ಸೂರ್ಯ ರಶ್ಮಿ ತಿಲಕ ಇತ್ತು.ಅಯ್ಯೋಧ್ಯಯಲ್ಲಿ ರಾಮ ಲಾಲ ದರ್ಶನ ಪಡೆದ ಸಹಸ್ರಾರ ಭಕ್ತರು, ಕರ್ನಾಟಕದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದಂತಹ ಕಪ್ಪು ಶಿಲೆಯಲ್ಲಿ ಶ್ರೀ ರಾಮನ ಸುಮಾರು 15 ಅಡಿ ಎತ್ತರದ ಭವ್ಯ ಮೂರ್ತಿಗೆ ಇಂದು ವಿಶೇಷವಾದ ಪೂಜೆ ಪುನಸ್ಕಾರ ಹಾಗೂ ವಿಶಿಷ್ಟವಾದ ಅಲಂಕಾರ ನೆರವೇರಿಸಲಾಯಿತು.
ಬೆಂಗಳೂರು : ಬರ್ತಡೇ ಪಾರ್ಟಿ ಆಚರಣೆಗಾಗಿ ದರೋಡೆ ಮಾಡಿದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಐವರನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲಿಸರಿಂದ ಕಾರ್ಯಾಚರಣೆ ನಡೆದಿದೆ. ಮುನೇಗೌಡ, ಆನಂದ, ಗಗನ, ತಿಲಕ್ ಮತ್ತು ಆಕಾಶ್ ಬಂದಿದ ಆರೋಪಿಗಳು ಎಂದು ತಿಳಿದುಬಂದಿದೆ. ನಾಗದೇವ ಹಳ್ಳಿಯ ಗೀತಂ ವಿಶ್ವವಿದ್ಯಾಲಯ ಬಳಿ ವಿದ್ಯಾರ್ಥಿಗಳನ್ನು ಬೆದರಿಸಿ ದರೋಡೆ ಮಾಡಿದ್ದರು. ದೊಡ್ಡಬಳ್ಳಾಪುರದ ಹರವಲಯದಲ್ಲಿರುವ ಗೀತಂ ವಿಶ್ವವಿದ್ಯಾಲಯದ ಬಳಿ ವಿದ್ಯಾರ್ಥಿಗಳನ್ನು ಬೆದರಿಸಿ ಸುಲಿಗೆ ಮಾಡಿದ್ದರು. ಆನಂದನ ಬರ್ತಡೆ ಪಾರ್ಟಿ ಮಾಡಲು ಈ ಒಂದು ಗ್ಯಾಂಗ್ ದರೋಡೆ ಮಾಡಿತ್ತು.ಪಿಜಿ ಮೇಲೆ ಹಲ್ಲೆ ನಡೆಸಿ ಫೋನ್ ಪೇ ಮೂಲಕ ಹಣ ಸುಲಿಗೆ ಮಾಡಿದ್ದಾರೆ. ಹಲ್ಲೆಗೆ ಒಳಗಾದ ಬಿಇ ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಂತರ ಠಾಣೆ ಪೋಲಿಸರು ಪ್ರಕರಣದ ಕಲಿಸಿಕೊಂಡು ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಹಾಸನ : ಹಾಸನದಲ್ಲಿ ಪ್ರಿವೆಡಿಂಗ್ ಶೂಟ್ ಗೆ ತೆರಳಿದ ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯ ಬಳಿ ಈ ಒಂದು ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯದ ಬಳಿ ಪ್ರಿವೆಡ್ಡಿಂಗ್ ಶೂಟ್ ಮಾಡುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಅಡ್ಡಿ ಮಾಡಿದ್ದಾರೆ. ದೇವಾಲಯ ಆವರಣದಲ್ಲಿ ಫೋಟೋಶೂಟ್ ಮಾಡುತ್ತಿದ್ದಕ್ಕೆ ಅಡ್ಡಿ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮಾಡಿದ್ದಾರೆ. ಫೋಟೋಗ್ರಾಫರ್ ಯಶ್ ಸೇರಿದಂತೆ ಹಲವರ ಮೇಲೆ ಹಲ್ಲಿ ನಡೆದಿದೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಫೋಟೋಗ್ರಾಫರ್ಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು ವಂಚನೆ ಎಸಗಲಾಗಿದೆ. ಮೈಸೂರಿನ ಅರಣ್ಯ ಪ್ರದೇಶದಲ್ಲಿ ಹುದ್ದೆ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಲಾಗಿದೆ. ಯುವಕರಿಗೆ ನಕಲಿ ನೇಮಕಾತಿ ಆದೇಶ ಪ್ರತಿನಿಧಿ ಕಳುಹಿಸಿ ವಂಚನೆ ಎಸಲಾಗಿದೆ. ಇನ್ನು ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ್ ಕೂಡ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಮೇಲಾಧಿಕಾರಿಗಳ ನಕಲಿ ಲೆಟರ್ ಹೆಡ್ ಬಳಸಿ ಯುವಕರಿಗೆ ನಕಲಿ ಆದೇಶ ಪತ್ರ ಕೂಡ ನೀಡಿದ್ದಾರೆ. ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ ನೀಡಿದ್ದು, ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಕಲಿ ತರಬೇತಿ ಕೂಡ ಕೊಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಇದೀಗ ಯುವಕರು ದೂರು ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವನ್ ಮತ್ತು ಕಿರಣ್ ಎಂಬ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರು, ಮಾ.27: * ಬೆಂಗಳೂರು ಉತ್ತರ ತಾಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ. ಈ ಸಂಬಂಧ ಅಪರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎರಡು ಪ್ರತ್ಯೇಕ ಸೂಚನೆ ನೀಡಿರುವ ಅವರು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ವಾಯುಪಡೆಗೆ ನೀಡಲಾಗಿದ್ದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರಾಜ್ಯ ಸರ್ಕಾರ 2017ರ ಅಕ್ಟೋಬರ್ 09ರಂದು ರದ್ದುಗೊಳಿಸಿದ್ದು, ಇದನ್ನು ಅತ್ಯಗತ್ಯವಾದ ಶ್ವಾಸತಾಣವಾಗಿ ಉಳಿಸಲು ತೀರ್ಮಾನಿಸಲಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ. ರಾಷ್ಟ್ರೀಯ ಹಿತದ ದೃಷ್ಟಿಯಿಂದ ಭೂಮಂಜೂರಾತಿ ರದ್ದು ಪಡಿಸಿದ ಬಳಿಕವೂ ಭಾರತೀಯ ವಾಯುಪಡೆ ಸದರಿ ಭೂಮಿಯನ್ನು ಬಳಸಲು, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ರಡಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರ್ಯಾಯ ಭೂಮಿ ನೀಡುವಂತೆ ತಿಳಿಸಿದ್ದರೂ ವಾಯುಪಡೆ…
ಬೆಂಗಳೂರು : ದೇಶಾದ್ಯಂತ 20,911 ಆರೋಗ್ಯ ವೃತ್ತಿಪರರನ್ನು ಕಬ್ಬಿಣದ ಕೊರತೆಯ ರಕ್ತಹೀನತೆಯ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿಸುವ ಮೂಲಕ ಡ್ಯಾನೋನ್ ಇಂಡಿಯಾ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಈ ಸಾಧನೆಯು ಜಾಗೃತಿ ಮೂಡಿಸಲು, ಆರಂಭಿಕ ರೋಗನಿರ್ಣಯವನ್ನು ಉತ್ತೇಜಿಸಲು ಮತ್ತು ರಕ್ತಹೀನತೆಯನ್ನು ನಿಭಾಯಿಸಲು ಸರಿಯಾದ ಪೋಷಣೆಯನ್ನು ಉತ್ತೇಜಿಸಲು ಅವರ ಬಲವಾದ ಪ್ರಯತ್ನವನ್ನು ತೋರಿಸುತ್ತದೆ. ಇದು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಮತ್ತು ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡಲು ಒಟ್ಟಾಗಿ ಕೆಲಸ ಮಾಡುವ ಮಹತ್ವವನ್ನು ಎತ್ತಿ ತೋರಿಸುತ್ತದೆ. ಡ್ಯಾನೋನ್ ಇಂಡಿಯಾ ನವೆಂಬರ್ 2025 ರಲ್ಲಿ ‘IRON UP!’ ಉಪಕ್ರಮವನ್ನು ಪ್ರಾರಂಭಿಸಿತು, ಇದು ಕಬ್ಬಿಣದ ಕೊರತೆಯ ರಕ್ತಹೀನತೆ (IDA) ಪತ್ತೆ ಮತ್ತು ತಡೆಗಟ್ಟುವಿಕೆಯನ್ನು ವೇಗಗೊಳಿಸುವತ್ತ ಗಮನಹರಿಸಿದ ರಾಷ್ಟ್ರವ್ಯಾಪಿ ಪ್ರಯತ್ನವಾಗಿದೆ. ಈ ಉಪಕ್ರಮದ ಭಾಗವಾಗಿ, IDA ಪ್ರತಿಜ್ಞೆ ಅಭಿಯಾನವನ್ನು ಪರಿಚಯಿಸಲಾಯಿತು, ಇದು ಭಾರತದಾದ್ಯಂತ ಆರೋಗ್ಯ ವೃತ್ತಿಪರರು ಜಾಗೃತಿ ಮೂಡಿಸಲು, ಸಕಾಲಿಕ ರೋಗನಿರ್ಣಯವನ್ನು ಖಚಿತಪಡಿಸಿಕೊಳ್ಳಲು ಮತ್ತು ತಡೆಗಟ್ಟುವ ಪೋಷಣೆಯನ್ನು ಉತ್ತೇಜಿಸಲು ಬದ್ಧರಾಗಲು ಪ್ರೋತ್ಸಾಹಿಸುತ್ತದೆ. ಈ ಸಾಮೂಹಿಕ ಪ್ರಯತ್ನವು…
ಬೆಂಗಳೂರು : ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸಂಘ ಇಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದಿಂದಲೂ ಅಬಕಾರಿ ಸುಂಕ ಇಳಿಸುತ್ತೀರಾ ಅಂದ್ರೆ ಪ್ರಶ್ನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಸಂಪುಟದಲ್ಲಿ ಚರ್ಚೆಗೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಹೌದು ಗಲ್ಫ್ ಯುದ್ಧದ ಮಧ್ಯೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ ಅಬಕಾರಿ ಸುಂಕ 13 ರೂ. ಇಂದ ರೂ.3 ಗೆ ಇಳಿಕೆ ಮಾಡಿದರೆ ಇನ್ನು ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಹಾಕಲಾಗುತ್ತಿತ್ತು. ಈಗ ಡೀಸೆಲ್ ಮೇಲಿನ ಅಬಕಾರಿ ಸುಂಕ ಶೂನ್ಯಕ್ಕೆ ಇಳಿಸಲಾಗಿದೆ. ಇದೀಗ ಸಂಪುಟದಲ್ಲೂ ಕೂಡ ಅಬಕಾರಿ ಸುಖವಿಲ್ಲ ಕುರಿತು ವಿಷಯ ಬಂದರೆ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ.…














