Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ಕ್ಯಾನ್ಸರ್ ಗೆ ವ್ಯರ್ಥವಾಗಿ ಹಣ ಖರ್ಚು ಆಗಬಾರದು ಎಂದು ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಿನ್ನೆ ನಡೆದಿದೆ. ಕುಲದೀಪ್ ತ್ಯಾಗಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ನನಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದೆವು. ಪತ್ನಿ ಅಂಶು ತ್ಯಾಗಿ ಮತ್ತು ನಾನು ಒಟ್ಟಿಗೆ ಇರುವುದಾಗಿ ನಿರ್ಧರಿಸಿದೆವು. ಹೀಗಾಗಿ, ಅವಳನ್ನೂ ಕೊಂದಿದ್ದೇನೆ ಎಂದು ಉಲ್ಲೇಖವಾಗಿದೆ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ಕುಲದೀಪ್ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ.ಪೊಲೀಸರ ಪ್ರಕಾರ, ರಾಜ್ ನಗರ ಎಕ್ಸ್ಟೆನ್ಶನ್ನ ರಾಧಾ ಕುಂಜ್ ಸೊಸೈಟಿಯಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್ನಿಂದ ಗುಂಡು ಹಾರಿಸಿ ಕುಲದೀಪ್ ಮೊದಲಿಗೆ ತನ್ನ ಪತ್ನಿಯನ್ನು ಕೊಂದಿದ್ದಾರೆ. ನಂತರ ತಾನು ಗುಂಡು ಹಾರಿಸಿಕೊಂಡಿದ್ದಾರೆ. ಘಟನೆ…
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ. ಇಬ್ಬರು ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕನಕಪುರ : ಕನಕಪುರದಲ್ಲಿ ಕಾಡಾನೆ ಹಿಂಡು ‘BMTC’ ಬಸ್ ತಡೆದು ಅಡ್ಡ ಹಾಕಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಸುತ್ತುವರೆದು ಕಾಡಾನೆಗಳು ತಳ್ಳಿವೆ. ಕಾಡಿನಲ್ಲಿ ಇರಬೇಕಾದಂತಹ ಆನೆಗಳು ಏಕಾಏಕಿ ನಾಡಿಗೆ ಬಂದಿದ್ದು, ಜನರನ್ನು ಆತಂಕಕ್ಕೆ ದೂಡಿವೆ. ಕನಕಪುರದ ಕಗ್ಗಲಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಏಕಾಏಕಿ ಐದಾರು ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಐದಾರು ಆನೆಗಳನ್ನು ಕಂಡು ಕಕ್ಕಾಬಿಕ್ಕಿ ಆಗಿರುವ ಘಟನೆ ನಡೆದಿದೆ.ಐದಾರು ಕಾಡಾನೆಗಳು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ಕೆ ಆರ್ ಮಾರುಕಟ್ಟೆಯಿಂದ ಗುಲ್ಲಹಟ್ಟಿ, ಕಡೆಗೆ ಬಿಎಂಟಿಸಿ ಬಸ್ ಹೊರಟಿತ್ತು. ಕನಕಪುರ ರಸ್ತೆಯ ಕಗ್ಗಲಿಪುರ ಬಳಿಯ ಗುಲ್ಲಹಟ್ಟಿಯಲ್ಲಿ ಆನೆ ಪ್ರತ್ಯಕ್ಷವಾಗಿದೆ. ಕಾಡಾನೆ ಕಂಡು ಸ್ಥಳೀಯ ಜನರು ಮತ್ತು ಪ್ರಯಾಣಿಕರು ಏಕಾಏಕಿ ಭಯಭೀತರಾಗಿದ್ದಾರೆ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ದೂರು ನೀಡಿದ್ದು ತಕ್ಷಣ ಸ್ಥಳಕ್ಕೆ ಸಿಬ್ಬಂದಿಗಳು ಧಾವಿಸಿದ್ದಾರೆ ಬಳಿಕ ಸಿಬ್ಬಂದಿಗಳು ಬನ್ನೇರುಘಟ್ಟ ಉದ್ಯಾನವನಕ್ಕೆ ಆನೆಯನ್ನು ಕಳುಹಿಸಿದ್ದಾರೆ.
ಬೆಂಗಳೂರು : ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಬಿಬಿಎಂಪಿ ಲಾರಿ ಚಾಲಕ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಬಿಬಿಎಂಪಿ ಲಾರಿ ಚಾಲಕ ಕೊಂಡಯ್ಯ ಇದೀಗ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಬಿಎಂಪಿ ಲಾರಿ ಚಾಲಕ ಕೊಂಡಯ್ಯ ಇಂದು ಸಾವನ್ನಪ್ಪಿದ್ದಾರೆ. ಕಳೆದ ಮಾರ್ಚ್ 19 ರಂದು ಬಿಬಿಎಂಪಿ ಲಾರಿ ಬೈಕ್ ಸ್ಥಳದಲ್ಲೇ ಸಾವನಪ್ಪಿದ್ದ. ಈ ವೇಳೆ ಬಿಬಿಎಂಪಿ ಲಾರಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸ್ಥಳೀಯ ನಿವಾಸಿಗಳು ಕೊಂಡಯ್ಯನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದರು. ಲಾರಿ ಚಾಲಕ ಕೊಂಡೊಯ್ಯನ ಮೇಲೆ ಸ್ಥಳಿಯ ನಿವಾಸಿಗಳು ಭೀಕರವಾಗಿ ಹಲ್ಲೆ ಮಾಡಿದ್ದರು. ತಕ್ಷಣ ಲಾರಿ ಚಾಲಕ ಕೊಂಡಯ್ಯನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಚಾಲಕ ಕೊಂಡಯ್ಯ ಗಂಭೀರ ಸ್ಥಿತಿಗೆ ತಲುಪಿದ್ದ. ಆದರೆ ಇಂದು ಚಿಕಿತ್ಸೆ ಫಲಿಸದೆ ಲಾರಿ ಚಾಲಕ ಕೊಂಡಯ್ಯ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಭಂದ ಈಗಾಗಲೇ ಹಲ್ಲೆ ಮಾಡಿದ ಹಾಗೂ ಲಾರಿಗೆ ಬೆಂಕಿ ಹಚ್ಚಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್ಸೈಟ್ ಬಳಸಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ…
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಾಚಾಪುರ ಬಳಿ ನಡೆದಿದೆ. ಮೃತರನ್ನು ಮಂಜುನಾಥ (19) ಮತ್ತು ಬಸವರಾಜ ಸೋಮಣ್ಣನವರ (36) ಎಂದು ತಿಳಿದು ಬಂದಿದೆ. ಬಸವರಾಜ್ ಮೂಲತಃ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಮಂಜುನಾಥ್ ಧಾರವಾಡ ಜಿಲ್ಲೆಯ ಜೋಗೆಲ್ಲಾಪುರ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮತ್ತಿಬ್ಬರಿಗೆ ಗಾಯವಾಗಿದ್ದು, ತಕ್ಷಣ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿಯ ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲಾರಿ ಚಾಲಕ, NCC ಕಂಪನಿ ಮ್ಯಾನೇಜರ್ ಮತ್ತು ಗುತ್ತಿಗೆದಾರನ ವಿರುದ್ಧ FIR ದಾಖಲಾಗಿದೆ. BNS 281, 106 ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಒಂದು ಘಟನೆ ನಡೆದಿತ್ತು. ಘಟನೆಯಲ್ಲಿ ಆಟೋ ಚಾಲಕ ಖಾಸಿಂಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆ ಹಿನ್ನೆಲೆ ನಿನ್ನೆ ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾಗಿರುವ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿತ್ತು. ಕಾಸಿಂ ಸಾಬ್ (35) ಮೃತ ದುರ್ದೈವಿಯಾಗಿದ್ದು, ರಾತ್ರಿ ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ವಯಾಡೆಕ್ಟ್ ತರಲಾಗುತಿತ್ತು. ವಯಾಡೆಕ್ಟ್ ಕೆಳಗೆ ಬಿದಿದ್ದು,…
ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕರು ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಗದಗ ನಗರದ ಎಸ್ಎಮ್ ಕೃಷ್ಣ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಘಟನೆಯಲ್ಲಿ ಹಲವು ಯುವಕರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಜಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗುಂಪುಗಳ ಗಲಾಟೆ ನೋಡಿ ಸ್ಥಳೀಯರು ಸಹಜವಾಗಿ ಭಯಭೀತರಾಗಿದ್ದಾರೆ. ಗಾಂಜಾ ಸೇವನೆ ಮಾಡಿ ರೌಡಿಸಂ ಮಾಡುತ್ತಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗಿದೆ. ಬೆಟಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ನವದೆಹಲಿ : ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಈ ತಿಂಗಳಾಂತ್ಯಕ್ಕೆ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಆಗುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಷಾ ಮತ್ತು ಜೆಪಿ ನಡ್ದ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಇದೆ ವೇಳೆ 15 ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗು ಓಡಿಸ್ಸಾ ಸೇರಿದಂತೆ 15 ರಾಜ್ಯಗಳ ಬಿಜೆಪಿ ಅಧ್ಯಕ್ಷರ ಚುನಾವಣೆಯ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.