Author: kannadanewsnow05

ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಇದೀಗ ಪ್ಲಾನ್ ಮಾಡಿಕೊಂಡಿದ್ದು ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ. ಕರ್ನಾಟಕ ಗೃಹ ಮಂಡಳಿಗೆ ರೈತರ ಕೃಷಿ ಭೂಮಿ ಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಂಡಿದೆ. 2760 ಎಕರೆ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೊಡ್ಡ ಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ, ಸೇರಿದಂತೆ ಒಟ್ಟು 2760 ಎಕರೆ ಭೂಸ್ವಾಧೀನಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರು ಸಮಾವೇಶ ನಡೆಸುತ್ತಿದ್ದಾರೆ. ಚಿಕ್ಕ ಬೆಳವಂಗಲದಿಂದ ದೊಡ್ಡ ಬೆಳವಂಗದವರೆಗೆ ರೈತರು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಮಂಡಳಿ ನೋಟಿಸ್ ಗಳನ್ನು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ…

Read More

ಬೆಂಗಳೂರು : ಹಿರಿಯ ಪತ್ರಕರ್ತ ದಿ.ಜಯಣ್ಣ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಮೂಲದವರಾದ ಜಯಣ್ಣ ಅವರು ಕೋವಿಡ್ ನಿಂದ ಮೃತಪಟ್ಟಿದ್ದರು. ಅವರ ಕುಟುಂಬ ಆರ್ಥಿಕವಾಗಿ ಸಂಷ್ಟದಲ್ಲಿದ್ದ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪತ್ರ ಬರೆದು ಸರ್ಕಾರದ ಗಮನಕ್ಕೆ ತಂದಿದ್ದರು. ಹಾಗಾಗಿ ಬಾಕಿ ಇದ್ದ ಕಡತ ವಿಲೇವಾರಿಗೆ ಸಿಎಂ ಸೂಚಿಸಿದ್ದರು. ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧನ್ಯವಾದಗಳನ್ನು ಸಲ್ಲಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಜಾತಿ ಗಣತಿ ನಡೆಸಿದ ಸಿಬ್ಬಂದಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಕೇಂದ್ರ ಸರ್ಕಾರ ಮುಂದೆ ಗಣತಿ ಮಾಡಿಸುತ್ತದೆ ಅದನ್ನ ನೀವೇ ಮಾಡುವುದು ಹೇಗೆ ಮಾಡಿಸುತ್ತೆ ಅಂತ ನೀವೇ ನೋಡಿ. ಸರಕಾರಿ ನೌಕರರು ಸರ್ಕಾರದ ಏಜೆಂಟ್ ಆಗಬಾರದು. ಇಷ್ಟು ಜನ ಯಾಕೆ ಬಂದಿದ್ದೀರಿ? ಎಷ್ಟು ಪ್ರಶ್ನೆಗಳು ಬೇಕಾ ಇದೆಲ್ಲ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಅಂತ ವಿ ಸೋಮಣ್ಣ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಕೇಂದ್ರ ಸಚಿವ ವಿ ಸೋಮಣ್ಣ ಮನೆಯಲ್ಲಿ 9 ಸಿಬ್ಬಂದಿಯಿಂದ ಸಮೀಕ್ಷೆ ನಡೆಸಲಾಯಿತು. ಈ ವೇಳೆ ಉಪಜಾತಿ ಯಾವುದು ಅಂತ ಕೇಳಿದಾಗ ಅದೆಲ್ಲಾ ಯಾಕೆ ಬೇಕು ಅಂತ ಪ್ರಶ್ನಿಸಿದರು. ಬಳಿಕ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದರು. ಮದುವೆ ಆದಾಗ ನಿಮಗೆ ಎಷ್ಟು ವರ್ಷ ಅಂತ ಕೇಳಿದಾಗ, ದುರಂತ ನಮ್ಮ ಅಮ್ಮನ ಕೇಳಬೇಕು 26 ಅಂತ ಬರೆದುಕೊಳ್ಳಿ ಎಂದರು. ಇದು ಸಿದ್ದರಾಮಯ್ಯ ವೋಟ್…

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಭರ್ಜರಿ ಬರ್ತಡೇ ಪಾರ್ಟಿ ಘಟನೆಗೆ ಸಂಬಂಧಿಸಿದಂತೆ, ಇದೀಗ ಎಡಿಜಿಪಿ ಬಿ.ದಯಾನಂದ ಈ ಒಂದು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಸೀನ, ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು. ಕೇಕ್ ಕತ್ತರಿಸಿ ಸೇಬಿನ ಹಾರ ಹಾಕೊಂಡು ಭರ್ಜರಿಯಾಗಿ ಬರ್ತಡೆ ಆಚರಿಸಿಕೊಂಡಿದ್ದ. ಈ ಒಂದು ವಿಡಿಯೋ ಹೊರಗಡೆ ಬಂದಿದ್ದೆ ತಡ, ಜೈಲಾಧಿಕಾರಿ ಹಾಗೂ ಸಿಬ್ಬಂದಿಗೆ ಬಿ.ದಯಾನಂದ ಕ್ರಾಸ್ ತೆಗೆದುಕೊಂಡಿದ್ದು ಕೂಡಲೇ ಆಂತರಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಘಟನೆ ಹಿನ್ನೆಲೆ? ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ. ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆ್ಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಈತ ಕೊಲೆ ಕೇಸ್‌ನಲ್ಲಿ…

Read More

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆಯಿಂದ ಈ ಒಂದು ಸಮೀಕ್ಷೆ ಆರಂಭವಾಗಿದೆ. ಈ ಒಂದು ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿದ್ದು, ಆದರೆ ಇದೀಗ ಮೈಸೂರಿನಲ್ಲಿ ನೇಮಕಗೊಂಡ ಸಿಬ್ಬಂದಿಗಳು ಸಮೀಕ್ಷೆಗೆ ತಾವು ಬರದೇ ವಿದ್ಯಾರ್ಥಿಗಳನ್ನು ಕಳುಹಿಸಿರುವ ಘಟನೆ ವರದಿಯಾಗಿದೆ. ಮೈಸೂರಿನಲ್ಲಿ ಜಾತಿಗಣತಿಯ ವೇಳೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಸರ್ವೆ ವೇಳೆ ವಿದ್ಯಾರ್ಥಿಗಳಿಗೆ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ ಪ್ರಶ್ನೆಗಳಿಗೆ ಯುವಕರು ಸೂಕ್ತವಾದ ಉತ್ತರ ನೀಡಲು ತಡಬಡಿಸಿದ್ದಾರೆ. ಹಾಗಾಯಗಿ ಯುವಕರಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.ವಿದ್ಯಾರ್ಥಿಗೆ ಕಾಲೇಜು ಎಂದು ತಡೆಯರು ಪ್ರಶ್ನೆ ಮಾಡಿದ್ದಾರೆ. ಆಗ ವಿದ್ಯಾರ್ಥಿಗಳು ನಮ್ದು ಮಹಾರಾಜ ಕಾಲೇಜು ಅಂತ ಹೇಳಿದ್ದಾರೆ. ಈ ವೇಳೆ ಗಣತಿಗೆ ನಿಯೋಜಿಸಿದ ಸಿಬ್ಬಂದಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳೀಯರು ಈ ಕುರಿತು ವಿಡಿಯೋ ಮಾಡಿದ್ದು ವೈರಲ್ ಆಗಿದೆ. ಇತರ ನೀವು ವಿದ್ಯಾರ್ಥಿಗಳನ್ನು ಸರ್ವೆಗೆ ಕಳುಹಿಸೋಕೆ ಅವಕಾಶ…

Read More

ಬೆಂಗಳೂರು : ಮಧ್ಯಪ್ರದೇಶ ರಾಜಸ್ಥಾನದಲ್ಲಿ ಕಿಲ್ಲರ್ ಸಿರಪ್ ಗೆ 12 ಮಕ್ಕಳು ಬಲಿಯಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ, ಇದೀಗ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ರಾಜ್ಯದಲ್ಲಿ ಎಲ್ಲಾ ಬ್ರಾಂಡ್ ಸಿರಪ್ ಗಳ ಸ್ಯಾಂಪಲ್ ಗಳ ಸಂಗ್ರಹಕ್ಕೆ ಮುಂದಾಗಿದ್ದು, ಸ್ಯಾಂಪಲ್ ಗಳನ್ನು ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್ ಗೆ ರವಾನಿಸಲಾಗಿದೆ. ಸದ್ಯ ರಾಜ್ಯದಲ್ಲಿ ಕೋಲ್ಡ್ರಿಫ್ ಸಿರಪ್ ಸರಬರಾಜು ಆಗುತ್ತಿಲ್ಲ. ತಮಿಳುನಾಡಿನಲ್ಲಿ ಸರಬರಾಜು ಆಗಿರುವ ಕೊಲ್ಡ್ರಿಫ್ ಔಷಧಿ ಹೀಗಾಗಿ ಉಳಿದ ಕಂಪನಿಗಳ ಮೇಲು ಹದ್ದಿನ ಕಣ್ಣು ಇಡಲಾಗಿದೆ. ಪೋಷಕರಿಗೆ ಕೋಲ್ಡ್ರಿಫ್ ಸಿರಪ್ ಖರೀದಿ ಮಾಡದಂತೆ ಸೂಚನೆ ನೀಡಲಾಗಿದೆ. ವೈದ್ಯರ ಸಲಹೆ ಪಡೆದು ಮಕ್ಕಳಿಗೆ ಸಿರಪ್ ನೀಡುವಂತೆ ಸೂಚನೆ ಕೊಡಲಾಗಿದೆ.

Read More

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಹಾಗು ಬೈಕ್ ಮಧ್ಯ ಅಪಘಾತ ಸಂಭವಿಸಿ ಅಕ್ಕ ಹಾಗು ತಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಪೊತ್ನಾಳ ಗ್ರಾಮದ ಬಳಿ ನಿನ್ನೆ ನಡೆದಿದೆ. ಮೃತರನ್ನ ಮರಿಯಮ್ಮ(28) ಶೇಖರಪ್ಪ(25) ಎಂದು ಗುರುತಿಸಲಾಗಿದೆ. ಎರಡು ವರ್ಷದ ಮಗಳು ಗೌತಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರಪ್ಪ ತಮ್ಮ ಅಕ್ಕನನ್ನು ಮರಿಯಮ್ಮನ ಜಾತ್ರೆಗೆ ಕರೆದುಕೊಂಡಲು ಬರಲು ವಲ್ಕಂದಿನ್ನಿ ಗ್ರಾಮಕ್ಕೆ ತೆರಳಿದ್ದರು. ಅಲ್ಲಿಂದ ​ಅಕ್ಕ ಹಾಗೂ ಅವರ ಎರಡು ವರ್ಷದ ಮಗಳನ್ನು ಬೈಕ್​ನಲ್ಲಿ ಕೂರಿಸಿಕೊಂಡು ಕರೆಗುಡ್ಡ ಗ್ರಾಮಕ್ಕೆ ಬರುತ್ತಿರುವಾಗ ಕೊಪ್ಪಳದ ದೇಸಾಯಿ ಕ್ಯಾಂಪ್​ಗೆ ತೆರಳುತ್ತಿದ್ದ ಕಾರೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಇನ್ನೊಂದು ಕಾರ್ ಡಿಕ್ಕಿ ಹೊಡೆದಿದ್ದು, ಆ ಕಾರು ಪಲ್ಟಿಯಾಗಿದೆ. ಬೈಕ್ ಮೇಲಿಂದ ಸವಾರರು ಕೆಳಗೆ ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾ ಗಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾನವಿ ಪೊಲೀಸರು ಪರಿಶೀಲನೆ ನಡೆಸಿ ಮೃತ…

Read More

ಬೆಂಗಳೂರು : ಇಂಧನ ಸಚಿವ ಕೆಜೆ ಜಾರ್ಜ್ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗು ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಧಿಕಾರಿ 50 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ‍ಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿರುವ ಜ್ಯೋತಿ ಪ್ರಕಾಶ್‌ ಅವರು, ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಅನುಮತಿ (ಎನ್​ಒಸಿ) ನೀಡಲು ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು‌ ಬಂಧಿಸಿದ್ದಾರೆ. 50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಜ್ಯೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್‌ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಡರಹಳ್ಳಿಯ ನಿವಾಸಿಯಾದ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಎನ್‌ಒಸಿ ನೀಡಲು ಜ್ಯೋತಿ ಪ್ರಕಾಶ್ ಅವರು 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಅನಂತರಾಜು ಅವರು ಲೋಕಾಯುಕ್ತಕ್ಕೆ ದೂರು…

Read More

ಕಲಬುರ್ಗಿ : ಕ್ಷುಲ್ಲಕ ವಿಚಾರಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ. ನಗರದ ಆಳಂದ್ ರಸ್ತೆಯಲ್ಲಿರುವ ವಿಶ್ವರಾಧ್ಯ ದೇವಸ್ಥಾನದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಸಿಬ್ಬಂದಿಯ ಮೇಲೆ ಐದಾರು ಜನರ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಐದಾರು ಜನರ ಗುಂಪಿನಿಂದ ಯುವಕ ತ್ರಿಶೂಲ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಹಾಗೂ ಚಾಕುವಿನಿಂದ ಈ ಒಂದು ಗ್ಯಾಂಗ್ ಇರಿದಿದೆ. ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಲ್ಬುರ್ಗಿಯ ಸಬ್ ಅರ್ಬನ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋದ ಕಾರಣ ಚಾಕು ಇರಿದು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ರಾಯಚೂರು ಮೂಲದ ಮಹದೇವ(65) ಎಂದು ತಿಳಿದುಬಂದಿದ್ದು, ಇನ್ನು ಆರೋಪಿಯಾಗಿರೋ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಇಬ್ಬರೂ ಮಾರತಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಘಟನಾ ಸ್ಥಳಕ್ಕೆ ವೈಟ್​ ಫೀಲ್ಡ್​ ಡಿಸಿಪಿ ಪರಶುರಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರತ್​​ಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More