Author: kannadanewsnow05

ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜಶೇಖರ್ ಸಾವನ್ನಪ್ಪಿದ್ದು, ನಮ್ಮ ಪಕ್ಷದ ಕಾರ್ಯಕರ್ತರನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಈ ಗಲಾಟೆ ಆಗಿದೆ. ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚಿಕೊಂಡು ಇರಬೇಕು. ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತದೆ. ಮಾಜಿ ಸಚಿವ ಶ್ರೀ ರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದರು. ನಮ್ಮ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಈಡಾಗಲು ಬಿಜೆಪಿನೇ ಕಾರಣ. ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನು ಕೆಣಕಬೇಡಿ. ವಿನಾಕಾರಣ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸರಿ ಇರಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ ಕೆಲವರನ್ನು ಅರೆಸ್ಟ್ ಸಹ ಮಾಡಿದ್ದಾರೆ…

Read More

ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ ಬಿಜಿಯಾಗಿದ್ದಾನೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. 60 ವರ್ಷದ ಮಂಜುನಾಥ್ ಇದೀಗ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಂಗಳೂರು : ಕನ್ನಡ ಭಾಷೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಹಲವಾರು ಘಟನೆಗಳು ನಡೆದಿದ್ದು, ಇದೀಗ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವಾರ್ಡನ್ ಒಬ್ಬ ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಬಳಿ ಇರುವಂತಹ ಎ ಎಂ ಸಿ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಕನ್ನಡಕ್ಕೆ ಅವಮಾನ ಮಾಡಿದ್ದು, ಕನ್ನಡ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಅವಾಜ್ ಹಾಕಿದ್ದಾನೆ. ಕನ್ನಡ ಬೇಡ ಹಿಂದಿಯಲ್ಲಿ ಮಾತಾಡು. ಇದು ಒಂದು ಸಂಸ್ಥೆ ನಿನಗೆ ಕನ್ನಡದಲ್ಲಿ ಮಾತಾಡುವುದಾದರೆ ಮನೆಗೆ ಹೋಗಿ ಮಾತನಾಡು ಇದು ಒಂದು ಸಂಸ್ಥೆ ಅರ್ಥ ಆಯ್ತಾ. ಸಂಸ್ಥೆ ಆದರೆ ಹಿಂದಿಯಲ್ಲಿ ಮಾತಾಡ್ಬೇಕಾ ಕನ್ನಡದಲ್ಲಿ ಮಾತನಾಡಬಾರದ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಇಲ್ಲ ಬೇಡ ಇಲ್ಲಿ ಕಡ್ಡಾಯ ಇಲ್ಲ ಕಡ್ಡಾಯ ಇಲ್ಲ ಅಂದರೆ ಮತ್ತೇನು ಅಂತ ಕೇಳಿದಾಗ ಕಡ್ಡಾಯ ಇಲ್ಲ ಅಷ್ಟೇ. ಏನಾದರೂ ಡೌಟ್ ಇದೆಯಾ ಅಂತ ಅವಾಜ್ ಹಾಕಿದ್ದಾನೆ. ನಿನ್ ಜೊತೆ ಹಿಂದಿಯಲ್ಲಿ ಮಾತಾಡಬೇಕಾ ಅಥವಾ ಕನ್ನಡದಲ್ಲಿ ಮಾತಾಡಬೇಕಾ ಅಂತ ನಾನು…

Read More

ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರು ಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಕೋರ್ಟ್ ಬಳಿ ಪೊಲೀಸರಿಂದ ಭಾರಿ ಬಿಗಿಬದ್ಧತೆ ಒದಗಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಎರಡು ಕೆಎಸ್ಆರ್ಪಿ ತಕುಡಿಗಳನ್ನು ನಿಯೋಜನೆ ಮಾಡಲಾಗಿದ್ದು ಕೆಎಸ್ಆರ್ಪಿ ತುಕುಡಿಗಳ ನಿಯೋಜನೆ ಮಾಡಲಾಗಿದೆ ಜೊತೆಗೆ ಸ್ಥಳೀಯ ಪೊಲೀಸರಿಂದ ಒದಗಿಸಲಾಗಿದೆ.

Read More

ಬಳ್ಳಾರಿ : ಬಳ್ಳಾರಿಯಲಿ ಶಾಸಕ ಜನಾರ್ಧನ ಮನೆಯ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅವರ ಮನೆಗೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿದೆ. ಹೌದು ಗಲಾಟೆಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಆಟೋಗಳಲ್ಲಿ ಪೆಟ್ರೋಲ್ ಬಾಂಬ್, ಬಾಟಲಿಗಳನ್ನು ತಂದಿದ್ದರು ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಜನಾರ್ದನ ರೆಡ್ಡಿ ಮನೆಗೆ ಇಂದು ಬಾಂಬ್ ಸ್ಕಾರ್ಡ್ ಭೇಟಿ ನೀಡಿದ್ದು ತೀವ್ರ ಶೋಧ ನೆಡೆಸುತ್ತಿದೆ.ಬಳ್ಳಾರಿ ಅವಂಭಾವಿಯಲ್ಲಿರುವ ಶಾಸಕ ಜನಾರ್ಧನ್ ರೆಡ್ಡಿ ಮನೆಗೆ ಭೇಟಿ ನೀಡಿದ್ದು ಮನೆಯ ಬಳಿ ಇಂಚಿಂಚು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಬಾಂಬ್ ನಿಷ್ಕ್ರಿಯ ತಂಡದಿಂದ ಬುಲೆಟ್ ಗಳ ಹುಡುಕಾಟ ನಡೆಯುತ್ತಿದೆ. DSMD ಹಾಗು ಮಿಷನ್ಗಳ ಮೂಲಕ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಇಡೀ ಮನೆ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಮೂಲೆ ಮೂಲೆಯನ್ನು ಸಿಬ್ಬಂದಿಗಳು ಸರ್ಚ್ ಮಾಡುತ್ತಿದ್ದಾರೆ ಬಾಂಬ್ ನಿಷ್ಕ್ರಿಯ…

Read More

ಬೆಳಗಾವಿ : ಬೆಳಗಾವಿಯ ಕೇಂದ್ರ ಸಹಕಾರಿ ಬ್ಯಾಂಕ್ (DCC) ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ 189(2), 191(2), 115(2), 351(2), 352 (2), 190 ಕಲಂ‌ ಅಡಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ನಿಂಗರಾಜ ಕರೆಣ್ಣವರ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಿಂದಲೇ ಅಥಣಿ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಶಾಸಕ ಸವದಿ, ಪುತ್ರ ಚಿದಾನಂದ ಸೇರಿದಂತೆ ಒಟ್ಟು 8 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನನ್ನನ್ನು ಲಕ್ಷ್ಮಣ್​ ಸವದಿ ಅವರು ಮನೆಗೆ ಕರೆಯಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದರು. ಲಕ್ಷ್ಮಣ ಸವದಿ ಅವರೇ ಕಪಾಳಕ್ಕೆ ಹೊಡೆದರು. ಪುತ್ರ ಚಿದಾನಂದ ಸವದಿ ಬಲವಾಗಿ ಸೊಂಟಕ್ಕೆ ಒದ್ದರು. ಬಳಿಕ ಕುಸಿದು ನೆಲಕ್ಕೆ ಬಿದ್ದ ನನ್ನ ಮೇಲೆ 7ರಿಂದ 8 ಜನರು ಹಲ್ಲೆ…

Read More

ಲಗ್ನ ಮಂಟಪದಲ್ಲಿರುವ ಮದುಮಕ್ಕಳನ್ನು “ಲಕ್ಷ್ಮಿನಾರಾಯಣ ಸ್ವರೂಪ” ಎಂದು ಪರಿಗಣಿಸುತ್ತೇವೆ. ವೈಕುಂಠದಲ್ಲಿ ಲಕ್ಷ್ಮಿ ಮತ್ತು ನಾರಾಯಣರು ಸದಾ ಜೊತೆ ಜೊತೆ ಯಾಗಿ ವಾಸಿಸುತ್ತಾರೆ. ಲಕ್ಷ್ಮಿ ದೇವಿ ಸಂಪತ್ತು -ಸೌಭಾಗ್ಯದ ಪ್ರತೀಕವಾದರೆ, ನಾರಾ ಯಣ ಧರ್ಮ- ಸತ್ಯ- ಶಾಂತಿಯ ಪ್ರತೀಕ. ಇವರ ಸುಖಿ ದಾಂಪತ್ಯ ನೋಡಿದ ದೇವತೆಗಳೆಲ್ಲ ಒಮ್ಮೆ ವೈಕುಂಠಕ್ಕೆ ಬಂದು ಲಕ್ಷ್ಮೀನಾರಾಯಣರಿಗೆ ನಮಸ್ಕರಿಸಿ, ನಾರಾಯಣನನ್ನು ಕುರಿತು ಪ್ರಭು ನಿಮ್ಮ ದಾಂಪತ್ಯವು, ಭೂ ಲೋಕಕ್ಕೆ ಮಾದರಿ ಯಾಗಿದೆ. ದಂಪತಿಗಳು ಬಾಳಿದರೆ ಲಕ್ಷ್ಮಿ ನಾರಾಯಣರಂತೆ ಬಾಳಬೇಕು ಎಂಬ ಲೋಕೋಕ್ತಿಯಿದೆ. ಆದರೆ ಭೂಲೋಕದಲ್ಲಿ ಎಲ್ಲವೂ ಬದಲಾಗಿದೆ ದಂಪತಿಗಳಾದ ಗಂಡು ಹೆಣ್ಣು ಯಾವಾಗಲೂ ಕಲಹ, ಅಸಹನೆ, ಅತೃಪ್ತಿಯ ಕೊರತೆ ಎದ್ದು ಕಾಣುತ್ತದೆ. ದೀರ್ಘ ಕಾಲಾವಧಿಯ ಬದುಕು ಕಡಿಮೆಯಾಗುತ್ತಿದೆ. ಹೀಗಾದರೆ ಲೋಕದಲ್ಲಿ ಶಾಂತಿ ಹೇಗೆ ನೆಲೆಸುತ್ತದೆ ಎಂದು ಕೇಳಿದರು. ನಾರಾಯಣ ಅದೇ ಮುಗುಳ್ನಗೆಯೊಂದಿಗೆ, ಲಕ್ಷ್ಮಿಯ ಕಡೆ ನೋಡಿ ಇದು ನಿನ್ನ ಪ್ರಶ್ನೆ ನೀನೆ ಉತ್ತರ ಕೊಡು ಎಂದನು. ದೇವತೆ ಗಳು ಲಕ್ಷ್ಮಿಗೆ ದಾಂಪತ್ಯ ಜೀವನ ಧೀರ್ಘಕಾಲ ಸುಖವಾಗಿರಬೇಕಾದರೆ ಏನು ಮಾಡಬೇಕು…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು ಶಾಸಕ ಜನಾರ್ಧನ ರೆಡ್ಡಿ ಮನೆಯಲ್ಲಿ ಐವತ್ತಕ್ಕೂ ಹೆಚ್ಚು ದೊಣ್ಣೆಗಳು ಇದೀಗ ಪತ್ತೆಯಾಗಿವೆ ಹೌದು ಬಳ್ಳಾರಿ ಬ್ಯಾನರ್ ಘರ್ಷಣೆ ಕೇಸಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಶಾಸಕ ಜನಾರ್ಧನ ರೆಡ್ಡಿ ಮನೆಯಲ್ಲೂ ದೊಣ್ಣೆಗಳ ರಾಶಿ ಪತ್ತೆಯಾಗಿದೆ. ಜನಾರ್ದನ ರೆಡ್ಡಿ ಮನೆ ಕಾಂಪೌಂಡ್ ನಲ್ಲಿ ಸುಮಾರು 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿದ್ದು ಗಲಾಟೆಯ ವೇಳೆ ಬೆಂಬಲಿಗರಿಂದಲೂ ದೊಣ್ಣೆಗಳು ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಗಲಾಟೆ ಬಳಿಕ ಕಂಪೌಂಡಲ್ಲಿ ಬೆಂಬಲಿಗರು ದೊಣ್ಣೆಗಳನ್ನು ಇಟ್ಟಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಆಪ್ತನ ಕೈಯಲ್ಲಿ ದೊಣ್ಣೆ ಕಂಡಿದ್ದು ಗಲಾಟೆಯ ವೇಳೆ ಪಾಲಣ್ಣ ದೊಣ್ಣೆ ಹಿಡಿದು ನಿಂತಿದ್ದ. ಗುಂಪು ಕಟ್ಟಿಕೊಂಡು ಪಾಲಣ್ಣ ದೊಣ್ಣೆ ಹಿಡಿದು ನಿಂತಿದ್ದ ಮಾಜಿ ಬೂಡಾ ಅಧ್ಯಕ್ಷನಾಗಿದ್ದ ಪಾಲಣ್ಣ ಗಲಾಟೆಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಜೆಜೆ ನಗರದಲ್ಲಿ ಓಂ ಶಕ್ತಿ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿದರು. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು. ಏನಿದು ಘಟನೆ? ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಿನ್ನೆ ರಾತ್ರಿ ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು…

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿಯ ಆತಂಕ ಮುಂದುವರೆದಿದ್ದು, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇದೀಗ ಹುಲಿ ಪ್ರತ್ಯಕ್ಷ ಆಗಿದೆ. ಅಲ್ಲದೇ ಇಂದು ಮಂಡಕಳ್ಳಿ ಏರ್ಪೋರ್ಟಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಿ ಇ ಎಂ ಎಲ್ ಬಳಿ ಹುಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು ಅದು ಅಲ್ಲದೆ ಸಿಎಂ ಸಿದ್ದರಾಮಯ್ಯ ಕೂಡ ಇಂದು ಏರ್ಪೋರ್ಟಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಹುಲಿ ಪತ್ತೆಗೆ ಮುಂದಾಗಿದ್ದಾರೆ.

Read More