Author: kannadanewsnow05

ಮೈಸೂರು : ಮುಡಾ ಕೇಸ್ ಗೆ ಸಂಬಂಧಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಶಿಕ್ಷೆ ಕೊಡಿಸದೆ ಇದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ದೂರುದಾರ ಸ್ನೇಹದ ಕೃಷ್ಣ ಶಪಥ ಮಾಡಿದ್ದಾರೆ. ಲೋಕಾಯುಕ್ತದ ಮೇಲಿನ ಅನುಮಾನ ಹೆಚ್ಚಾಗಿದೆ. ಲೋಕಾಯುಕ್ತ ಅಧಿಕಾರಿಗಳು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನು ಕೊಟ್ಟಿದ್ದೇನೆ ನಾಲ್ವರ ವಿರುದ್ಧದ ಆರೋಪದಲ್ಲಿ ಸಾಕ್ಷಿಗಳ ಕೊರತೆ ಇದೆ. ನೀವು ಕೋರ್ಟ್ ಅಲ್ಲಿ ಪ್ರಶಂಸೆ ಅಂತ ನೋಟಿಸ್ ಕೊಟ್ಟಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆಕ್ರೋಶ ಹೊರ ಹಾಕಿದ್ದಾರೆ. ತನಿಖೆ ಇನ್ನು ಬಾಕಿರುವಾಗಲೇ ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.…

Read More

ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ ರಿಪೋಸ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸೋ ಮಾಹಿತಿ ಇದೆ. ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿಸಿದರು.

Read More

ಬೆಂಗಳೂರು : ಜಾತಿ ಗಣತಿ ವರದಿ ಜಾರಿಯಾಗುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ ನೀಡಿದ್ದು, ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ಶತಾಯಗತಾಯ ಜಾರಿಗೊಳಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ‌ ಸರ್ಕಾರದ ಈ ಹಿಂದಿನ ಅವಧಿಯಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ವೈಜ್ಞಾನಿಕವಾಗಿ ನಡೆದಿದೆ. ಹೀಗಾಗಿ ವರದಿ ಜಾರಿಯ ಬಗ್ಗೆ ಯಾವುದೇ ಅನುಮಾನ ಅಥವಾ ಗೊಂದಲಗಳಿಗೆ ಆಸ್ಪದವಿಲ್ಲ. ನೂರಕ್ಕೆ ನೂರರಷ್ಟು ವರದಿ ಜಾರಿಯಾಗುವುದು ಸತ್ಯ ಎಂದಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿನ್ನೆ ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿ, ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದೇನೆ ಎಂದರು. ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ…

Read More

ಚಿಕ್ಕಬಳ್ಳಾಪುರ : ಗಾಂಜಾ ಸಾಗಿಸುತ್ತಿದ್ದ ತಂದೆ ಮಗಳು ಮೊಮ್ಮಗ ಸೇರಿದಂತೆ ಒಟ್ಟು ಐವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಡಿಕೆರೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 35 ಕೆ.ಜಿ ಗಾಂಜಾ XUV 500 ಕಾರು ಜಪ್ತಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಸೆನ್ ಠಾಣೆಯ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಲ್ಲಿಗುಂಟೆಯ ಮಾರಪ್ಪ ಗರಿಗೆರೆಪಾಳ್ಯ ನಿವಾಸಿಗಳಾದ ತಾಯಿ ದೇವಮ್ಮ ಮಗ ಅಂಜಿ ಎನ್ನುವವರನ್ನು ಬಂಧಿಸಲಾಗಿದೆ. ಆಂಧ್ರದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು. ಬಂಧಿತರು ಗಾಂಜಾ ಮಾರಾಟವನ್ನೇ ವೃತ್ತಿಯಾಗಿಸಿಕೊಂಡಿದ್ದರು.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದರೂ ಸಹ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ವ್ಯಕ್ತಿಯೋಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರನಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವಾನಂದ್ (36) ಎಂದು ತಿಳಿದುಬಂದಿದೆ. ಶಿವಾನಂದ್ ಕಾರ್ತಿಕ್ ಬಳ್ಳಾರಿ ಎಂಬುವವರಿಂದ 4 ಲಕ್ಷ ಸಾಲ ಪಡೆದಿದ್ದರು. 4 ಲಕ್ಷಕ್ಕೆ 4 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಸಾಲ ಮರುಪಾವತಿ ಮಾಡಿದ್ದರೂ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಲೇ ಇದ್ದರಂತೆ. ಇದರಿಂದ ಬೇಸತ್ತ ಶಿವಾನಂದ್ ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಶಿವಾನಂದ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಕಲಬುರ್ಗಿ : ಟಿಬಿ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬ ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಆದರೆ ಇಂದು ತೀವ್ರವಾಗಿ ಆತ ಮನನೊಂದಿದ್ದು ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೋಗಿಯನ್ನು ನಗರದ ಡೆಕ್ಕನ್ ಕಾಲೇಜು ಬಳಿಯ ನಿವಾಸಿ ಸೈಯದ್ ಅಝರುದ್ದೀನ್ (33) ಎಂದು ಗುರುತಿಸಲಾಗಿದೆ. ಸೈಯದ್ ಅಭಿವೃದ್ಧಿ ನಿಗೆ ಟಿವಿ ರೋಗ ಇತ್ತು ಕಳೆದ ಕೆಲವು ದಿನಗಳ ಹಿಂದೆ ಆತನನ್ನು ಜಲಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದ ಆತ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ಇಡೀ ಹುಬ್ಬಳ್ಳಿ ಜನತೆಯನ್ನು ಬೆಚ್ಚಿಬೀಳಿಸಿದ್ದು 18 ವಯಸ್ಸಿನ ಯುವತಿ ಒಬ್ಬಳು 50 ವರ್ಷದ ಅಂಕಲ್ ಜೊತೆಗೆ ಓಡಿ ಹೋಗಿ ಮದುವೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 50 ವರ್ಷದ ಅಕಲ್ ಜೊತೆ 18 ವರ್ಷದ ಯುವತಿ ಮದುವೆ ಪ್ರಕರಣದಲ್ಲಿ ಹುಬ್ಬಳ್ಳಿ ಪೊಲೀಸರು ಕಿಲಾಡಿ ಅಂಕಲ್‌ನನ್ನು ಬಂಧಿಸಿದ್ದಾರೆ. ಕೇಶ್ವಾಪುರದ ಚಾಲುಕ್ಯ ನಗರದ ಪ್ರಕಾಶ್ ಕಂಜರಘಾಟ ಬಂಧಿತ ಆರೋಪಿಯಾಗಿದ್ದಾನೆ. ಹೌದು ಮನೆಯಿಂದ ನಾಪತ್ತೆಯಾಗಿದ್ದ ಹುಬ್ಬಳ್ಳಿಯ ಕರೀಷ್ಮಾ, 50 ವರ್ಷದ ಸೆಕ್ಯೂರಿಟಿ ಪ್ರಕಾಶ್​​ ಎನ್ನುವಾತನ ಜೊತೆ ಪತ್ತೆಯಾಗಿದ್ದಳು. ಅಲ್ಲದೇ ಇಬ್ಬರು ಮದುವೆಯಾಗಿದ್ದರು. ಆದ್ರೆ, ಅದೇನಾಯ್ತೋ ಏನೋ ಕರೀಷ್ಮಾ ಪ್ರಕಾಶನನ್ನು ಬಿಟ್ಟು ವಾಪಸ್ ಮನೆಗೆ ಓಡಿ ಬಂದಿದ್ದಾಳೆ. ಅಲ್ಲದೇ ಬಲವಂತವಾಗಿ ನನ್ನ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ಪ್ರಕಾಶನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಅಲ್ಲದೇ ಈ ಸಂಬಂಧ ಕರೀಷ್ಮಾ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಒಂದು ವರ್ಷದ ಹಿಂದೆಯೂ ನನಗೆ ಪ್ರಕಾಶ್…

Read More

ಹಾಸನ : ಹಾಸನದಲ್ಲಿ ಘೋರವಾದ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಒಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಗ್ರಾಂ ಪಂಚಾಯತಿ ಅಧ್ಯಕ್ಷೆಯನ್ನು ಮಲ್ಲಿಗೆಮ್ಮ (58) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆಮ್ಮ ಟಿಪ್ಪರ್ ಹರಿದು ಸಾವನಪ್ಪಿದ್ದಾರೆ. ಮಲ್ಲಿಗಮ್ಮ ಬ್ಯಾಂಕಿಗೆ ಹೋಗಿ ವಾಪಾಸ್ ನಡೆದುಕೊಂಡು ಬರುವಾಗ ಈ ಒಂದು ಘಟನೆ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದು KA56 8961 ನಂಬರಿನ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ಮಲ್ಲಿಗೆಮ್ಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಫಲಾನುಭವಿಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಮಾತನಾಡಿ, ಫೆಬ್ರುವರಿಯಲ್ಲಿ ಪೂರ್ಣ ಪ್ರಮಾಣದ ಅನ್ನಭಾಗ್ಯ ಯೋಜನೆಯ 10 ಕೆ.ಜಿ ಅಕ್ಕಿಯನ್ನು ನೀಡುತ್ತೇವೆ.…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಜೆಬಿಜಿ ಹರಿದು ದಾರಿಣವಾಗಿ ಸಾವನ್ನಪ್ಪಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಥವನ್ ರೆಡ್ಡಿ (2) ಎಂದು ತಿಳಿದುಬಂದಿದೆ.ನಿನ್ನೆ ಸಂಜೆ 6.30 ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೆಸಿಬಿ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಎಂದಿನಂತೆ ಮನೆಯ ಮುಂದೆ ಥವನ್ ಆಟವಡುತ್ತಿದ್ದ ವೇಳೆ JCB ವೇಗವಾಗಿ ಬಂದಿದೆ. ಜೆಸಿಬಿ ಬರುವುದನ್ನು ಗಮನಿಸದೇ ಥವನ್ ಆಟದಲ್ಲಿ ಮಗ್ನನಾಗಿದ್ದ.ಈ ವೇಳೆ JCB ಆತನ ತಲೆಯ ಮೇಲೆ ಹರಿದಿದೆ.ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆದರೆ, ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು…

Read More