Author: kannadanewsnow05

ಬೆಂಗಳೂರು : ರಾಜ್ಯ ಬಜೆಟ್ ಖಂಡಿಸಿ, ಜೆಡಿಎಸ್ ನಿಂದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದು, ಜೆಡಿಎಸ್ ಬಾಬು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರದ ಲೂಟಿ ಮತ್ತು ದಿವಾಳಿತನ ಸಾಲರಾಮಯ್ಯ ಎಂಬ ಕಿರುಹೊತ್ತಿಗೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಸಾಲ ಎತ್ತುವುದನ್ನೇ ಬಂಡವಾಳ ಮಾಡಿಕೊಂಡಿರುವ ಸಾಲಗಾರ ಮುಖ್ಯಮಂತ್ರಿ @siddaramaiah, ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಘೋಷಿಸಿದ್ದಾರೆ. ಅದಕ್ಷ @INCKarnataka ಸರ್ಕಾರದ ದುರಾಡಳಿತದಲ್ಲಿ ಕರ್ನಾಟಕ ರಾಜ್ಯದ ಒಟ್ಟು ಸಾಲ 8,24,389 ಲಕ್ಷ ಕೋಟಿ ರೂ. ಏರಿಕೆಯಾಗಿದೆ. 👉 2026-27ನೇ ಸಾಲಿನಲ್ಲಿ – ₹1.32 ಲಕ್ಷ ಕೋಟಿ ಸಾಲ 👉 2025-26ನೇ ಸಾಲಿನಲ್ಲಿ – ₹1.16 ಲಕ್ಷ ಕೋಟಿ ಸಾಲ 👉 2024-25ನೇ ಸಾಲಿನಲ್ಲಿ – ₹1.05 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯರ ಆರ್ಥಿಕ ಅಶಿಸ್ತಿನಿಂದ ಕರ್ನಾಟಕದ ಅಭಿವೃದ್ಧಿ ಹಳಿತಪ್ಪಿದೆ. 📉 ಎಂದು…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ. ಈ ವೇಳೆ ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಜೊತೆ ಸಭೆ ಮಾಡುತ್ತೇವೆ. ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಸದಸ್ಯರು ಭರವಸೆ ನೀಡಿದರು. ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುತ್ತಿಗೆದಾರರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧಡೆಯಿಂದ ಗುತ್ತಿಗೆದಾರರು ಆಗಮಿಸಿದ್ದಾರೆ. 37,370 ಕೋಟಿ ಬಾಕಿ ಹಣ ರಾಜ್ಯ ಸರ್ಕಾರ ಉಳಿಸಿಕೊಂಡಿದೆ ಈ ನೆಲೆಯಲ್ಲಿ ಬೆಂಗಳೂರಿನ ಪ್ರದಂ ಪಾರ್ಕ್ ನಲ್ಲಿ ರಾಜ್ಯದ ವಿವಿಧತೆಯಿಂದ ಗುತ್ತಿಗೆದಾರರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ ಪ್ರತಿಭಟನಾ ನಿರದ ಗುತ್ತಿಗೆದಾರರ ಜೊತೆಗೆ ಡಿಸಿಎಂ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುತ್ತಿಗೆದಾರರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧಡೆಯಿಂದ ಗುತ್ತಿಗೆದಾರರು ಆಗಮಿಸಿದ್ದಾರೆ. 37,370 ಕೋಟಿ ಬಾಕಿ ಹಣ ರಾಜ್ಯ ಸರ್ಕಾರ ಉಳಿಸಿಕೊಂಡಿದೆ ಈ ನೆಲೆಯಲ್ಲಿ ಬೆಂಗಳೂರಿನ ಪ್ರದಂ ಪಾರ್ಕ್ ನಲ್ಲಿ ರಾಜ್ಯದ ವಿವಿಧತೆಯಿಂದ ಗುತ್ತಿಗೆದಾರರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ ಪ್ರತಿಭಟನಾ ನಿರದ ಗುತ್ತಿಗೆದಾರರ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಸ್ಥಳಕ್ಕೆ ತೆರಳಿ ಗುತ್ತಿಗೆದಾರರೊಂದಿಗೆ ಚರ್ಚಿಸುತ್ತಿದ್ದಾರೆ ಅವರ ಜೊತೆಗೆ ಸಣ್ಣ ನೀರಾವರಿ ಸಚಿವ…

Read More

ಬೆಂಗಳೂರು : ರಾಜ್ಯದ ಜನರಿಗೆ ಬಜೆಟ್ನಿಂದ ಯಾವುದೇ ಪ್ರಯೋಜನ ಆಗಿಲ್ಲ ಈ ಬಜೆಟ್ ಸಾಹಿತಿಗಳು ಬರೆದುಕೊಟ್ಟ ರೀತಿ ಕಾಣುತ್ತಿದೆ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಚಂಬು ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು. ಸಿದ್ದರಾಮಯ್ಯ ಸಾಲ ಮಾಡಿರುವುದೇ ದಾಖಲೆಯ ಸಾಧನೆಯಾಗಿದೆ. ಆಡಳಿತ ಪಕ್ಷದ ಸದಸ್ಯರಿಗೂ ಸಹ ಬಜೆಟ್ ನಲ್ಲಿ ಯಾವುದೇ ಆಸಕ್ತಿ ಇರಲಿಲ್ಲ. ಉತ್ತರ ಕರ್ನಾಟಕದ ಭಾಗದ ಬಗ್ಗೆ ಯಾವುದೇ ಕಾಳಜಿತವರು ಇಲ್ಲ. ಕರಾವಳಿ ಭಾಗದ ಬಗ್ಗೆಯೂ ಬಜೆಟ್ ನಲ್ಲಿ ಉಲ್ಲೇಖ ಮಾಡಿಲ್ಲ. ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಜೆಟ್ ಕುರಿತು ಕಿಡಿಕಾರಿದರು.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್​ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಾರಿ 4.48 ಲಕ್ಷ ಕೋಟಿ ಗಾತ್ರದ ಬಜೆಟ್​ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹಲವು ನೂತನ ಯೋಜನೆಗಳನ್ನು ನೀಡಿದ್ದಾರೆ. ಹಾಗಾದ್ರೆ ಯಾವ ಜಿಲ್ಲೆಗೆ ಯಾವ ಯಾವ ಯೋಜನೆಗಳು ಮಂಜೂರಾಗಿವೆ, ಅದಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ, ಮುಂದಿನ ಗುರಿ ಏನು ಎಂಬ ಜಿಲ್ಲಾವಾರು ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಜಿಲ್ಲಾವಾರು ಮತ್ತು ಪ್ರಾದೇಶಿಕವಾರು ಬಜೆಟ್‌ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಬೆಂಗಳೂರು (ನಗರ ಮತ್ತು ಗ್ರಾಮಾಂತರ) ಬೆಂಗಳೂರನ್ನು ವಿಶ್ವದ ಅತ್ಯುತ್ತಮ ನಗರವನ್ನಾಗಿ ಮಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ಎರಡನೇ ವಿಮಾನ ನಿಲ್ದಾಣ: ಕೆಂಪೇಗೌಡ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಸಮೀಕ್ಷೆ. ರಸ್ತೆ ಮತ್ತು ಸುರಂಗ ಮಾರ್ಗ: ಹೆಬ್ಬಾಳ ಜಂಕ್ಷನ್‌ನಿಂದ ಎಚ್‌ಎಸ್‌ಆರ್ ಲೇಔಟ್‌ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಅಭಿವೃದ್ಧಿಗೆ ₹17,780 ಕೋಟಿ. ಸಾರ್ವಜನಿಕ ಸಾರಿಗೆ:…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ. 2026-27ನೇ ಸಾಲಿನ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕೊಡುವ ಘೋಷಣೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.ಅಲ್ಲದೇ, ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್‌ಗಳ ಅಭಿವೃದ್ಧಿ, 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಿವಿಗಳಲ್ಲಿ 1000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. 31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು. 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.

Read More

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, ರಾಜ್ಯದ ಎಲ್ಲಾ ಇಲಾಖೆಗಳಿಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ಪ್ರತಿ ಇಲಾಖೆಗೂ ಭರ್ಜರಿ ಅನುದಾನ ಘೋಷಣೆ ಮಾಡಿದ್ದು ಇಲಾಖಾವಾರು ಅನುದಾನ ಹಂಚಿಕೆ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದು, ಗ್ರಾಮೀಣ ಅಭಿವೃದ್ಧಿ ಇಲಾಖೆಗೆ 26,559 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಜಲ ಸಂಪನ್ಮೂಲ ಇಲಾಖೆಗೆ 22, 436 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ನಗರ ಅಭಿವೃದ್ಧಿ ಮತ್ತು ವಸತಿ ಇಲಾಖೆಗೆ 22, 203 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಒಳ ಆಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 2026-27ನೇ ಸಾಲಿನ ಬಜೆಟ್​ ಮಂಡಿಸಿದ್ದು, ಇದು ಸಿದ್ದರಾಮಯ್ಯ ಮಂಡಿಸಿದ 17ನೇ ದಾಖಲೆಯ ಬಜೆಟ್​ ಆಗಿದೆ. ಈ ಬಜೆಟ್ ಬಾರಿ ಬಜೆಟ್​ನಲ್ಲಿ ರಾಜ್ಯಕ್ಕೆ ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ ಮಾಡಲಾಗುವುದು ಎಂದರು.ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಪಿವಿಟಿಜಿಗಳಿಗೆ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು. ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ ʻಕಾಯಕ ಭಾಗ್ಯʼ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ…

Read More

ಬೆಂಗಳೂರು : ಉನ್ನತ ವ್ಯಾಸಂಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬರುವ ವಿದ್ಯಾರ್ಥಿಗಳಿಗಾಗಿ ಧಾರವಾಡದಲ್ಲಿ ನಾಲ್ಕು ಮತ್ತು ಬೆಂಗಳೂರಿನಲ್ಲಿ ಎರಡು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಡಿಜಿಟಲ್​ ಯುಗದಲ್ಲಿ ಹೆಚ್ಚುತ್ತಿರುವ ಮೊಬೈಲ್​ ವ್ಯಸನದಿಂದ ಮಕ್ಕಳ ಮೇಲೆ ಬೀರುತ್ತಿರುವ ಅಡ್ಡ ಪರಿಣಾಮವನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 2026-27ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ ಸಿದ್ದರಾಮಯ್ಯ , ಮಕ್ಕಳಲ್ಲಿನ ಒತ್ತಡ ನಿವಾರಿಸಿ, ಮಾನಸಿಕ ಆರೋಗ್ಯವನ್ನು ಸುಧಾರಿಸಲು 24 ಬಿಆರ್​ಸಿ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು ಎಂದು ಘೋಷಿಸಿದರು. ಶಾಲಾ – ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಮತ್ತು ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟು ನಿಟ್ಟಿನ ನಿರ್ಬಂಧ ಹೇರಲಾಗುವುದು ಸಿಎಂ…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಈ ವೇಳೆ ಮೀನುಗಾರರಿಗೆ 20,000 ಪ್ರೋತ್ಸಾಹ ಧನ ಏರಿಕೆ ಮಾಡಿದ್ದು ಮೀನುಗಾರಿಕಾ ವಿವಿಯಲ್ಲಿ ವಿಶೇಷ ವಿಭಾಗ ಸ್ಥಾಪನೆ ಮಾಡಲಾಗುತ್ತೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೀನುಗಾರಿಕಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತೆ ಅಲ್ಲದೆ ಮೀನು ಮಾರಾಟ ಮಾಡಲು ಮಾರುಕಟ್ಟೆ ಸ್ಥಾಪನೆಗೆ ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮಾವಸ್ತ್ರ ನೀಡಲಾಗುತ್ತದೆ ಅಂಗನವಾಡಿ ಕಟ್ಟಡಿ ನಿರ್ಮಾಣಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಆರೋಗ್ಯ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳು ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…

Read More