Author: kannadanewsnow05

ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸಿದ್ದು, ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡಿದ ಹಿನ್ನೆಲೆಯಲ್ಲಿ ಯತೀಂದ್ರ ನಡೆಗೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಚರ್ಚಿಗೆ ಕಾರಣವಾಗಿದೆ. ಹೌದು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ನೀಡಲು ಸಚಿವ ಕೆ ಜೆ ಜಾರ್ಜ್ ಮುಂದಾಗಿದ್ದರು ಎನ್ನುವ ಸುದ್ದಿ ಇದೀಗ ಬೆಳಕಿಗೆ ಬಂದಿದೆ. ಕೇಜೆ ಜಾರ್ಜ್ ವಿಶ್ವಾಸಕ್ಕೆ ಪಡೆಯದೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದ್ದ ಕೆ ಜೆ ಚಾರ್ಜ್ ಬೇಸರ ಹೊರಹಾಕಿದ್ದು ಯತೀಂದ್ರ ಹಸ್ತಕ್ಷ ಬಗ್ಗೆ ಸಚಿವ ಜಾರ್ಜ್ ಬೇಸರ ಪ್ರತಿಪಡಿಸಿದ್ದಾರೆ. ಯತೀಂದ್ರ ಹಸ್ತಕ್ಷಪ್ಪಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯಗೆ ಕೆಜೆ ಜಾರ್ಜ್ ರಾಜೀನಾಮೆ ಪತ್ರ ಸಹ ನೀಡಿದ್ದರು ಎನ್ನಲಾಗಿದೆ. ಸಚಿವನಾಗಿ ನನ್ನ ಮಾತಿಗೆ ಬೆಲೆ ಇಲ್ಲದಿರುವಾಗ ನಾನೇಕೆ ಇರಲಿ? ಈ ಸರ್ಕಾರದಲ್ಲಿ ನಾನೇಕೆ ಇರಲಿ ಎಂದು ಕೇಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ. ನಾನು ನಿಮ್ಮ ಜೊತೆ ಇರುತ್ತೇನೆ ಆದರೆ ಸರ್ಕಾರದಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಗೇಟ್ ಮುರಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಒಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಾಯುವ್ಯ ವಿಭಾಗದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಬಿಲ್ಡಿಂಗ್ ಬಳಿ ಸ್ವಾಮಿ ಎಂಬವರು ಗೇಟ್ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಗೂಡ್ಸ್ ವೆಹಿಕಲ್ ಬಂದಿದ್ದ ವೇಳೆ ಸ್ವಾಮಿ ಗೇಟ್ ಓಪನ್ ಮಾಡಿದ್ದಾರೆ ಈ ವೇಳೆ ಸ್ಲೈಡಿಂಗ್ ಗೇಟ್ ಮುರಿದುಬಿದ್ದು ಸ್ವಾಮಿ (55) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Read More

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಕುಮಾರ್ ಅವರು ನಿನ್ನೆ ವಿಮಾನ ದುರಂತದಲ್ಲಿ ಸಾವನಪ್ಪಿದ್ದಾರೆ. ಇದೀಗ ಈ ಒಂದು ದುರ್ಘಟನೆ ನಡೆದ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ. ಅಜಿತ್ ಪವಾರ್ ತೆರಳುತ್ತಿದ್ದ ವಿಮಾನ ದುರಂತದ ರಹಸ್ಯ ಬೇಧಿಸಲು DGCA ಬೆನ್ನುತ್ತಿದ್ದು, ಪೈಲಟ್ ಅಚಾತುರ್ಯವೊ ಅಥವಾ ತಾಂತ್ರಿಕ ದೋಷವೊ, ಇಲ್ಲ ಹವಾಮಾನ ವೈಪರಿತ್ಯದಿಂದ ದುರಂತ ಸಂಭವಿಸಿದೆಯಾ ಎನ್ನುವ ಎಲ್ಲಾ ಪ್ರಶ್ನೆಗಳಿಗೆ ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ. ಹಲವು ವಿಚಾರಗಳು ಹಾಗು ಕೆಲ ಪ್ರಶ್ನೆಗಳಿಗೆ ಈ ಒಂದು ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ.

Read More

ಹಾಸನ : ಅನೈತಿಕ ಸಂಬಂಧದ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕುವಿನಿಂದ ಇರಿದು ಅಡುಗೆ ಕಾಂಟ್ರಾಕ್ಟರ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಸನ ನಗರದ ಕೆಆರ್ ಪುರಂ ಬಡಾವಣೆಯಲ್ಲಿ ತಡರಾತ್ರಿ ಈ ಒಂದು ಘಟನೆ ಸಂಭವಿಸಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ (48) ಎಂಬಾತ್ತನ್ನು ಕೊಲೆ ಮಾಡಲಾಗಿದೆ. ಐದಾರು ಬಾರಿ ಚಾಕುವಿನಿಂದ ಇರಿದು ಧರ್ಮೇಂದ್ರ ಎಂಬಾತ ಆನಂದನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಮಹಿಳೆಯ ಜೊತೆಗೆ ಆನಂದ್ ಮತ್ತು ಧರ್ಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಮಹಿಳೆಯ ಜೊತೆ ಧರ್ಮೇಂದ್ರ ಎಂಟು ವರ್ಷಗಳ ಗೆಳೆತನ ಹೊಂದಿದ್ದ. ಈ ನಡುವೆ ಇದೆ ಮಹಿಳೆ ಜೊತೆ ಆನಂದ್ ಸಹ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ನಿನ್ನೆ ರಾತ್ರಿ ಆನಂದ್ ಮತ್ತು ಧರ್ಮೇಂದ್ರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಗುತ್ತಿಗೆದಾರ ಆನಂದ್ ಮನೆಗೆ ತೆರಳಿದ್ದಾನೆ. ಮತ್ತೆ ಫೋನ್ ಮಾಡಿ ಧರ್ಮೇಂದ್ರ ಆನಂದನ್ನು ಕರೆಸಿಕೊಂಡಿದ್ದಾನೆ. ಕುಡಿದ ಅಮಲಿನಲ್ಲಿ ಆನಂದನನ್ನು ಕೊಲೆ ಮಾಡಿ ಧರ್ಮೇಂದ್ರ ಪರಾರಿಯಾಗಿದ್ದಾನೆ. ಸ್ಥಳಕ್ಕೆ…

Read More

ದಾವಣಗೆರೆ : ಪತ್ನಿ ಮದುವೆಯಾದ 45 ದಿನದಲ್ಲಿ ಬೇರೆ ಯುವಕನೊಂದಿಗೆ ಓಡಿ ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿತ್ತು. ಈ ವಿಚಾರ ತಿಳಿದು ಮುಂದೆ ನಿಂತು ಮದುವೆ ಮಾಡಿಸಿದ್ದ, ಯುವತಿಯ ಸೋದರ ಮಾವ ಕೂಡ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ. ಸರಸ್ವತಿಯ ಪತಿ ಹರೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಚಾರ ತಿಳಿದು ಪತ್ನಿ ಸರಸ್ವತಿಯ ಸೋದರ ಮಾವ ರುದ್ರೇಶ್ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ನಿ ಸರಸ್ವತಿಯನ್ನು ಪೋಲಿಸರು ಬಂಧಿಸಿದ್ದಾರೆ. ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಇದ್ದ ಪತ್ನಿ ಸರಸ್ವತಿಯನ್ನು ಬಂಧಿಸಿ ಪೋಲಿಸರು ಗ್ರಾಮಾಂತರ ಠಾಣೆಗೆ ಕರೆ ತಂದಿದ್ದಾರೆ. ಇನ್ನು ತಲೆಮರಿಸಿಕೊಂಡಿರುವ ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.‌ ಸರಸ್ವತಿ ಪ್ರಿಯಕರ ಶಿವಕುಮಾರ್, ಸೋದರ ಮಾವ ಗಣೇಶ್, ಸರಸ್ವತಿ ಚಿಕ್ಕಮ್ಮ ಅಂಜಿನಮ್ಮ ನಾಪತ್ತೆಯಾಗಿದ್ದು,…

Read More

ನವದೆಹಲಿ : ಸುಪ್ರೀಂ ಕೋರ್ಟ್ ನಲ್ಲಿ ಜಯನಗರ ಶಾಸಕ ರಾಮಮೂರ್ತಿಗೆ ಭಾರಿ ಹಿನ್ನಡೆಯಾಗಿದೆ ಚುನಾವಣಾ ವಿವಾದ ಸಂಬಂಧ ಸಲ್ಲಿಸಿದ ರಾಮಮೂರ್ತಿ ಅರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಶಾಸಕ ರಾಮಮೂರ್ತಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ರಾಮಮೂರ್ತಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿಕ್ರಮನಾಥ್ ಅವರಿದ್ದಾ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Read More

ಧಾರವಾಡ : ಧಾರವಾಡದಲ್ಲಿ ಹುಚ್ಚುನಾಯಿ ಭೀಕರವಾಗಿ ದಾಳಿ ಮಾಡಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 9 ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಶಿರಡಿ ನಗರ ಬಡಾವಣೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬಡಾವಣೆಯ ವಿವಿಧ ಕೆಲಸಕ್ಕೆ ಬರೋವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಕ್ಯಾರಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಒಂದು ಬಡಾವಣೆಯಲ್ಲಿ ಬೀದಿ ನಾಯಿ ದಾಳಿಗೆ ಜನರು ಹೊರಗಡೆ ಬರುವುದಕ್ಕೂ ಹೆದರುತ್ತಿದ್ದಾರೆ. ಹುಚ್ಚುನಾಯಿ ದಾಳಿಗೆ ಮಹಿಳೆಯರ ಕೈ ಕಾಲಿಗೆ ಕಚ್ಚಿದ್ದು, ಅಲ್ಲದೆ ಮಕ್ಕಳ ಮೇಲು ದಾಳಿ ಮಾಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯರು ಹುಚ್ಚುನಾಯಿಯನ್ನು ಹೊಡೆದು ಕೊಂದಿದ್ದಾರೆ.

Read More

ಬೆಳಗಾವಿ : ಪತ್ನಿ ಹೆರಿಗೆಗೆ ತೆರಳಿದಾಗ ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಲ್ಲಾಪುರ ಎಂಬಲ್ಲಿ ನಡೆದಿದೆ. ಹಳೆ ಪ್ರಿಯತಮೆ ಜೊತೆಗೆ ಮಲಪ್ರಭಾ ನದಿಗೆ ಹಾರಿ ಜಗದೀಶ್ ಕವಳೇಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಲ್ಲಾಪುರ ಗ್ರಾಮದ ಜಗದೀಶ್ ಕವಳೇಕರ್ (27) ಹಾಗು ಗಂಗಮ್ಮ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲಿಂದಲೂ ಗಂಗಮ್ಮ ಮತ್ತು ಜಗದೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಪತ್ನಿ ಹೆರಿಗೆಗೆ ತವರಿಗೆ ತೆರಳಿದ ನಂತರ ಪ್ರಿಯತಮೆಯ ಜೊತೆಯ ಜಗದೀಶ್ ವಾಸಿಸುತ್ತಿದ್ದ. ಎರಡು ತಿಂಗಳಿಂದ ಗಂಗಮಗಳನ್ನು ಜಗದೀಶ್ ಮನೆಗೆ ತಂದು ಇರಿಸಿಕೊಂಡಿದ್ದ.ಜಗದೀಶನನ್ನು ಪ್ರೀತಿಸುತಿದ್ದ ಗಂಗಮ್ಮ ಇನ್ನೂ ಮದುವೆಯಾಗಿರಲಿಲ್ಲ. ನಿನ್ನೆ ಸಂಜೆ ಬೈಕ್ ನಲ್ಲಿ ಗಂಗಮ್ಮ ಜಗದೀಶ್ ಜೊತೆ ತೆರಳಿದ್ದಾಳೆ, ನದಿಯ ದಡದಲ್ಲಿ ಮೊಬೈಲ್ ಬೈಕ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರಸ್ಪರ ಅಪ್ಪಿಕೊಂಡು ವೇಲ್ ನಿಂದ ಪ್ರೇಮಿಗಳು ಕಟ್ಟಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ, ಬೆಳಿಗ್ಗೆ ನದಿ ದಡದಲ್ಲಿ ಶವಗಳನ್ನು ಕೊಂಡು ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಸ್ಥಳಕ್ಕೆ…

Read More

ಬೀದರ್ : ಬೀದರ್ ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಜಾತ್ರೆಗೆ ತೆರಳುವಾಗಲೇ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಉದ್ಯಮಿಯೊಬ್ಬರು ದುರಂತ ಸಾವು ಕಂಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಎನ್‌ಹೆಚ್-65ರಲ್ಲಿ ನಡೆದಿದೆ.ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡದ ಪರಿಣಾಮ 30 ವರ್ಷದ ಬಸವಕಲ್ಯಾಣ ಪಟ್ಟಣದ ನಿವಾಸಿ ವಿಶ್ವಜೀತ್ ಸಾವನ್ನಪ್ಪಿದ್ದಾರೆ. ಎರ್ಟಿಗಾ ಕಾರ್‌ನಲ್ಲಿ ತೆರಳುತ್ತಿದ್ದಾಗ ಡೆಡ್ಲಿ ಆಕ್ಸಿಡೆಂಟ್ ಆಗಿ ವಿಶ್ವಜೀತ್ ಸಾವನ್ನಪ್ಪಿದ್ದಾರೆ. ಇಂದು ನಸುಕಿನ ಜಾವ ವೀರಭದ್ರೇಶ್ವರ ಜಾತ್ರೆಗೆಂದು ಬಸವಕಲ್ಯಾಣ ಕಡೆಯಿಂದ ಹುಮನಾಬಾದ್‌ಗೆ ತೆರಳುತ್ತಿದ್ದಾಗ ಭೀಕರ ಅಪಘಾತವಾಗಿ ಉದ್ಯಮಿ ಸಾವನ್ನಪ್ಪಿದ್ದಾರೆ.ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More