Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಸುರತ್ಕಲ್ ಕಡೆ ಬರುತ್ತಿದ್ದಾಗ ಬೈಕಂಪಾಡಿ ಬಳಿ ಹೆದ್ದಾರಿಯಲ್ಲಿ ಇದ್ದ ಹೊಂಡಕ್ಕೆ ಸ್ಕೂಟರ್ ಸಿಲುಕಿ ಪಲ್ಟಿಯಾದ ವೇಳೆ ಟ್ಯಾಂಕರ್ ಹರಿದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಸುರತ್ಕಲ್ ಸಮೀಪದ ಆಶ್ರಯ ಕಾಲನಿ ನಿವಾಸಿ ಅಶ್ರಫ್ (36) ಎಂದು ತಿಳಿದುಬಂದಿದೆ. ಮೂಲ್ಕಿಯ ಶಾಹಿಲ್ (35) ಗಂಭೀರ ಗಾಯಗೊಂಡು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕಂಪಾಡಿ ಸಮೀಪ ಹೆದ್ದಾರಿಯಲ್ಲಿ ಆಗಿರುವ ಹೊಂಡಕ್ಕೆ ಸ್ಕೂಟರ್ನ ಟೈಯರ್ ಸಿಲುಕಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಬಿದ್ದ ಅಶ್ರಫ್ ಅವರ ಮೇಲೆ ಹಿಂದಿನಿಂದ ಬಂದ ಟ್ಯಾಂಕರ್ ಚಲಿಸಿದ್ದರಿಂದ ಮೃತಪಟ್ಟರು. ಸುರತ್ಕಲ್ನಲ್ಲಿ ಪರಿಚಿತರಾಗಿದ್ದ ಇವರು ಹೂ ವ್ಯಾಪಾರ, ಹೊಟೇಲ್ ಮತ್ತಿತರ ವ್ಯವಹಾರ ನಡೆಸುತ್ತಿದ್ದರು. ಅವರು ಕೊರೊನಾ ಸಂದರ್ಭ ಕಿಟ್ ವಿತರಿಸಿ ಹಲವರಿಗೆ ನೆರವಾಗಿದ್ದರು. ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಸಂಸದ ಇ ತುಕಾರಾಂ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಕಾರಣಕ್ಕೆ ಇಡಿ ಅಧಿಕಾರಿಗಳು ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಶಾಸಕರಾದ ನಾರಾ ಭರತ್ ರೆಡ್ಡಿ ಮತ್ತು ಕಂಪ್ಲಿ ಗಣೇಶ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಮಾಜಿ ಸಚಿವ ನಾಗೇಂದ್ರ ಪಿ ಎ ಗೋವರ್ಧನಗು ಇಡಿ ಶಾಕ್ ನೀಡಿದೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರಂಭದ ಮೇಲೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿತ್ತು ಇತ್ತೀಚಿಗೆ ಅವರು ಮೇಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು ಇದೀಗ ಸಂಸದ ತುಕಾರಾಂ…
ವಿಜಯಪುರ : ವಿಜಯಪುರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಹಿಡಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ. ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ. ಹಲ್ಲಿಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಇಂಡಿ ಪಟ್ಟಣ ಪೊಲೀಸರು ಭೇಟಿ ನೀಡಿ…
ಮಂಡ್ಯ : ಮಂಡ್ಯದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೊಮ್ಮೂರು ಅಗ್ರಹಾರ ಗ್ರಾಮದ ಬಳಿ 12 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮುರು ಅಗ್ರಹಾರದಲ್ಲಿ ಗಾಂಜಾ ಸಾಗಿಸುತ್ತಿದ್ದ ಇರ್ಶಾದ್ ಮತ್ತು ಅಕ್ಬರ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಬಕಾರಿ ಡಿಸಿ ನಾಗಶಯ ನೇತೃತ್ವದಲ್ಲಿ ದಾಳಿ ನಡೆಸಿ 12 ಕೆಜಿ ಗಾಂಚಾವನ್ನು ಜಪ್ತಿ ಮಾಡಿಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಆರೋಪಿಗಳು ಗಾಜಾ ಸಾಗಿಸುತ್ತಿದ್ದರು ಎನ್ನಲಾಗಿದೆ.
ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹನುಮೇನಹಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಕುಸುಮ್-ಸಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಪ್ರವಾಸ ಕೈಗೊಂಡಿದ್ದು, ಹನುಮೇನಹಳ್ಳಿಯಲ್ಲಿ ಸೌರ ವಿದ್ಯುತ್ ಘಟಕ ನಿರ್ಮಾಣಗೊಂಡಿದ್ದು 20 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಗೊಂಡಿದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಕುಸುಮ್-ಸಿ ಯೋಜನೆ ಬೆಳಿಗ್ಗೆ 10:30 ಕ್ಕೆ ಸಿಎಂ ಸಿದ್ದರಾಮಯ್ಯ ಸೌರ ವಿದ್ಯುತ್ ಘಟಕವನ್ನು ಉದ್ಘಾಟಿಸಲಿದ್ದಾರೆ. ಗೌರಿಬಿದನೂರಿಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ವೇದಿಕೆ, ಹೆಲಿಪ್ಯಾಡ್ ಮತ್ತು ಸೌರ ಘಟಕದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. 800 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತಾರೆ. ಹೀಗಾಗಿ, ಬಂಧನಕ್ಕೆ ಅವಕಾಶ ನೀಡಬಾರದು. ಇದೆಲ್ಲವೂ ರಾಜಕೀಯ ಪ್ರೇರಿತ ಪ್ರಕರಣ ಎಂದರು. ಇದಕ್ಕೆ ಆಕ್ಷೇಪಿಸಿದ್ದ ಸಂತ್ರಸ್ತೆ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಮುನಿರತ್ನ ಮತ್ತು ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಕಸ್ಟಡಿಗೆ ತನಿಖೆ ನಡೆಸಬೇಕಾದ ಅಗತ್ಯವಿದೆ. ಮುನಿರತ್ನ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಹೀಗಾಗಿ, ರಕ್ಷಣೆ ನೀಡಬಾರದು ಎಂದು ವಾದ ಮಂಡಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಆನೇಕಲ್ ನ ನಾರಾಯಣಘಟ್ಟ ಮೂಲದ ತನಿಷ್ಕ ಎಂದು ಗುರುತಿಸಲಾಗಿದೆ. ಸಂಪಂಗಿ ಮತ್ತು ಮಂಜುಳಾ ದಂಪತಿ ಪುತ್ರಿ ತನಿಷ್ಕ, ಇಲ್ಲಿನ ವಿಸ್ಮಯ ಶಾಲೆಯಲ್ಲಿ ಓದುತ್ತಿದ್ದಳು. ಇಂದು ಶಾಲೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿದ್ದಳು.ಮನೆ ಮುಂದೆ ಆಟ ಆಡುವಾಗ ವಿದ್ಯುತ್ ತಂತಿ ತಗಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಚರ್ಚಿಸಿದ್ದೇನೆ.ಲ್ ಎಂದು ಹೇಳಿದರು. ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿದ್ದೇವೆ. ಮೊದಲು ನೈತಿಕ ವಿಜ್ಞಾನ ಅಂತ ವಿಷಯ ಇತ್ತು. 10-15 ವರ್ಷದಿಂದ ನೈತಿಕ ವಿಜ್ಞಾನ ಇಲ್ಲ. ಮಕ್ಕಳಲ್ಲೂ ನೈತಿಕ ಇಲ್ಲ ಅದು ಕಳೆದು ಹೋಗಿದೆ. ಈ ವರ್ಷದಿಂದ ಮತ್ತೆ ಅದನ್ನ ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ. ಪಠ್ಯಪುಸ್ತಕ ಕೂಡ ತಯಾರಾಗುತ್ತಿದೆ ಎಂದು ಹೇಳಿದರು.
ಚಿಕ್ಕಮಗಳೂರು : ಗೂಗಲ್ ಮ್ಯಾಪ್ ಆಧರಿಸಿ ಚಾರಣ ಹೋಗಿದ್ದ 10 ಜನ ವಿದ್ಯಾರ್ಥಿಗಳು ದಿಕ್ಕುತಪ್ಪಿ ಕಾಡಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದರು. ಅವರನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೌದು ನಿನ್ನೆ ಚಿತ್ರದುರ್ಗ ಮೂಲದ ಐವರು ಕಾಲೇಜು ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನದುರ್ಗ ಮತ್ತು ಬಂಡಾಜೆ ಜಲಪಾತಕ್ಕೆ ಚಾರಣ ಹೋಗಲು ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಿದ್ದರು. ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿಝರಿ ಕಡೆಯಿಂದ ಚಾರಣ ಆರಂಭಿಸಬೇಕಿತ್ತು. ಗೂಗಲ್ ಮ್ಯಾಪ್ನಲ್ಲಿ ಬಂಡಾಜೆ ಟ್ರಕ್ಕಿಂಗ್ ಎಂದು ನಮೂದಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ದಿಡಪೆ ಮಾರ್ಗ ತೋರಿಸಿದೆ. ಅಲ್ಲಿಗೆ ಬಂದು ಚಾರಣ ಆರಂಭಿಸಿದ್ದು, ಬಂಡಾಜೆ ಜಲಪಾತ ತನಕ ಹೋಗಿದ್ದಾರೆ. ವಾಪಸ್ ಬರಲು ಬಲ್ಲಾಳರಾಯನದುರ್ಗ ಹಾಗೂ ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅದಕ್ಕೂ ಮುನ್ನ ತಾವು ಬಂದಿದ್ದ ಟೆಂಪೊ ಟ್ರಾವೆಲರ್ ಚಾಲಕನಿಗೆ ವಿಷಯ ಮುಟ್ಟಿಸಿ ರಾಣಿಝರಿ ಕಡೆಗೆ ಬರಲು ತಿಳಿಸಿದ್ದಾರೆ. ವಾಪಸ್ ಚಾರಣ ಹೊರಟ ಸ್ವಲ್ಪ ದೂರದಲ್ಲೇ ದಿಕ್ಕು ತಪ್ಪಿದ್ದಾರೆ.…