Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು, ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಹೌದು ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ವೆ ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಲಾಗಿದೆ. ಅಲ್ಲದೆ ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆದರಿಕೆ ಹಾಕಿರುವುದಾಗಿ ರಾಜ್ಯಪಾಲ…
ನವದೆಹಲಿ : ರಾಜ್ಯ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ಆರಂಭಿಸಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ವಿಚಾರ ಪ್ರಸ್ತಾಪಿಸಿದಾಗ ತಾತ್ವಿಕ ಒಪ್ಪಿಗೆ ದೊರಕಿದೆ. ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿ ಮಾಡಿ ಸಂಪುಟ ಪುನಾರಚನೆ ವಿಚಾರ ಪ್ರಸ್ತಾಪಿಸಿದಾಗ ಈ ತಾತ್ವಿಕ ಒಪ್ಪಿಗೆ ದೊರಕಿದೆ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ನವೆಂಬರ್ 21ಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಮಾಡಲು ಅವಕಾಶ ನೀಡಬೇಕು ಎಂಬ ಸಿದ್ದರಾಮಯ್ಯ ಅವರ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಮಾಲೋಚನೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನಡೆದ ಮಾತುಕತೆಯಲ್ಲಿ ಬಹುಪಾಲು ಚರ್ಚೆ ಬಿಹಾರ ಚುನಾವಣೆ ಫಲಿತಾಂಶ ಕುರಿತು ನಡೆದಿದೆ ಎನ್ನಲಾಗಿದೆ. ಈ ಚರ್ಚೆಯ ನಂತರ ರಾಹುಲ್ ಹಾಗೂ ಸಿದ್ದರಾಮಯ್ಯ ಅವರು…
ಬೆಂಗಳೂರು : ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ ಕಡಿತ ಹಾಗೂ ಹಾವು ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಚೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಗಳಿಗೆ ಸುತ್ತೋಲೆ ಹೊರಡಿಸಿದೆ. ಹೌದು ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ, ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಹೊಸ ಸುತ್ತೋಲೆ ಹೊರಡಿಸಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್ಗಳ ಕಡ್ಡಾಯ ಸಂಗ್ರಹ…
BREAKING : ಅಕ್ರಮ ಅದಿರು ರಫ್ತು ಪ್ರಕರಣ : ಶಾಸಕ ಸತೀಶ್ ಸೈಲ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ‘ED’
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಸುಮಾರು 44 ಕೋಟಿ ರು. ಮೌಲ್ಯದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ, ಆರೋಪಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ.) ನಗರದ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಡೆಟ್ ಕಂಪನಿಯನ್ನು ಆರೋಪಿ ಎಂದು ಪರಿಗಣಿಸಲಾಗಿದೆ. ಈ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಇ.ಡಿ.ಅಧಿಕಾರಿಗಳು ಸತೀಶ್ ಕೃಷ್ಣ ಸೇಲ್ ಅವರನ್ನು ಬಂಧಿಸಿದ್ದರು. ಕಬ್ಬಿಣದ ಅದಿರು ಅಕ್ರಮ ರಫ್ತು ಸಂಬಂಧ 2010ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಮೇರೆಗೆ ಇ.ಡಿ. ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸುಮಾರು 8 ಲಕ್ಷ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಿರುವುದು…
ಬೆಂಗಳೂರು : ಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನ ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಅವರು, ಹುಟ್ಟಿನಿಂದಲೇ ಭ್ರಷ್ಟಾಚಾರದ ಬೀಜ ಹೊತ್ತು ಬಂದ ಚುನಾವಣಾ ಆಯುಕ್ತನ ಪದವಿಯಿಂದ ಬೇರಿನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಈ ದೇಶದಲ್ಲಿ ಪ್ರಜಾಪ್ರಭುತ್ವ ಒಂದು ಜೋಕ್. ಇಂತಹ ಭ್ರಷ್ಟಬೀಜಾಸುರ ಜೋಕರ್ಗಳು, ಮತದಾನ ಎಂಬ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಪ್ರಕ್ರಿಯೆಯ ಅತ್ಯುನ್ನತ ಸ್ಥಾನದಲ್ಲಿದ್ದಾಗ, ಈ ವ್ಯಕ್ತಿ ಸಂಪೂರ್ಣವಾಗಿ ಭ್ರಷ್ಟ ಎಂದು ಸಾಬೀತುಪಡಿಸಲು ಮೇಲಿನ ಈ ಒಂದು ಹೇಳಿಕೆ ಸಾಕು ಎಂದು ಉಲ್ಲೇಖಿಸಿದ್ದಾರೆ. ಈ ವ್ಯಕ್ತಿಯ ಕಾರಣದಿಂದಾಗಿ, ಸರಕಾರಿ ಹಣವನ್ನು ಬಳಸಿಕೊಂಡು ಜನರಿಗೆ ಲಂಚ ನೀಡಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಗಾಗಿ ಚುನಾವಣೆಯಿಂದಲೇ ನಿಷೇಧಿಸಲ್ಪಡಬೇಕಾಗಿದ್ದ ಒಕ್ಕೂಟವೊಂದು ಮತ್ತೆ ಅಧಿಕಾರಕ್ಕೆ ಬಂದಿದೆ. ‘ಮಹಾಮಾನವ್ ಹೈ ತೋ ಸಬ್ ಕುಚ್…
ಬೆಂಗಳೂರು : ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಂದಿನಿ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ನಂದಿನಿ ಪಾರ್ಲರ್ ಮಳಿಗೆ ಮಾಲಿಕ ಹಾಗೂ ಆತನ ಮಗ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆ ಸಮೀಪದ ಅಜಾದ್ ನಗರದ ನಿವಾಸಿ ಮಹೇಂದ್ರ, ಆತನ ಮಗ ದೀಪಕ್, ವಾಹನ ಚಾಲಕ ಮುನಿರಾಜು ಹಾಗೂ ತಮಿಳುನಾಡಿನ ಅಭಿ ಅರಸ್ ಬಂಧಿತನಾಗಿದ್ದು, ಆರೋಪಿಗಳಿಂದ 8,350 ಲೀಟರ್ನಕಲಿ ತುಪ್ಪ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ತಪ್ಪಿಸಿಕೊಂಡಿರುವ ನಕಲಿ ತುಪ್ಪ ತಯಾರಿಕಾ ಘಟಕದ ಮಾಲಿಕ ಶಿವಕುಮಾರ್ ಸೇರಿ ಇತರರ ಪತ್ತೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಚಾಮರಾಜಪೇಟೆಯಲ್ಲಿ ಆರೋಪಿ ಮಹೇಂದ್ರ ಹೊಂದಿದ್ದ ನಂದಿನಿ ಪಾರ್ಲರ್ ನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಜಾಲ ಬಯಲಾಯಿತು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್…
ಕಲಬುರ್ಗಿ : ದೇಶ ಹಾಗೂ ರಾಜ್ಯದಲ್ಲಿ ಭಾರಿ ಚರ್ಚಿತವಾಗಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ ಅರ್ಎಸ್ಎಸ್ ಪಥಸಂಚಲನವು ಹೈಕೋರ್ಟ್ ಅನುಮತಿ ಯೊಂದಿಗೆ ನ.16ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನಡೆಯಲಿದೆ. ಇದಕ್ಕಾಗಿ ತಾಲೂಕು ಆಡಳಿತ ಹಾಗೂ 1000 ಪೊಲೀಸರು ಭಾರೀ ಭದ್ರತೆ ಕಲ್ಪಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣಾವಲು ಆಯೋಜಿಸಲಾಗಿದೆ. ಹೆಚ್ಚು ಕಡಿಮೆ 1 ತಿಂಗಳ ವಾದ ಪ್ರತಿವಾದ, ಚರ್ಚೆ, ಶಾಂತಿ ಸಭೆ ನಡೆದು ಕೊನೆಗೂ ಹೈ ಕೋಲ್ಟ್ ನ.16ರಂದು ಪಥ ಸಂಚಲನಕ್ಕೆ 10 ಷರತ್ತುಗಳೊಂದಿಗೆ ಒಪ್ಪಿಗೆ ಸೂಚಿಸಿತ್ತು. ಅದರಂತೆ 50 ಬ್ಯಾಂಡ್ ಸೆಟ್ನವರು ಸೇರಿ ಸ್ಥಳೀಯ 350 ಗಣ ವೇಷಧಾರಿಗಳು ಪಥ ಸಂಚಲನ ನಡೆಸಲು ಒಪ್ಪಿಗೆ ನೀಡಲಾಗಿದೆ. ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5.30ರೊಳಗೆ ಪಥ ಸಂಚಲನ ನಡೆಸಲು ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲಬುರಗಿ ಉಪ ಪೊಲಿಸ್ ಅಧೀಕ್ಷಕ ಮೇಹೇಶ ಮೇಘಣ್ಣವರ ಹಾಗೂ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ನೇತೃತ್ವದಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಹುಟ್ಟು ಹಬ್ಬದ ದಿನದಂದೇ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಾಮಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಯತೀಶ್ (26) ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ನಿನ್ನೆ ಸಂಜೆ 7:30 ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಾಮಾನ್ಯವಾಗಿ ಜನರಿಗೆ ಈ ಸರ್ಕಾರಿ ಅಧಿಕಾರಿಗಳ ಕರ್ತವ್ಯ ಜವಾಬ್ದಾರಿ ಏನಿರುತ್ತೆ ಅನ್ನೋದು ಗೊತ್ತಿರಲ್ಲ. ಹಾಗಾಗಿ ಇದೀಗ ತಹಸೀಲ್ದಾರ್ ಕರ್ತವ್ಯ ಏನು? ಅವರು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎನ್ನುವುದನ್ನು ಈ ಕೆಳಗಿನ ಅಂಶಗಳ ಮೂಲಕ ತಿಳಿದುಕೊಳ್ಳಬಹುದಾಗಿದೆ. 1. ಗ್ರಾಮಗಳ ಲೆಕ್ಕಗಳ ಪರಿಶೀಲನೆ: ತಾಲ್ಲೂಕಾ ಜಮಾಬಂದಿ ಅಧಿಕಾರಿಯಾಗಿರುವ ತಹಶೀಲ್ದಾರರು, ಅವರ ತಾಲ್ಲೂಕಾ ವ್ಯಾಪ್ತಿಯ ಶೇಕಡಾ 80 ರಷ್ಟು ಗ್ರಾಮಗಳ ಲೆಕ್ಕಗಳನ್ನು ಪರೀಕ್ಷಿಸಿ, ಸರಿಯಾದ ಲೆಕ್ಕ ಹೊಂದಾಣಿಕೆಗಳನ್ನು ತಯಾರಿಸಿ, ಬಾಕಿ ಮೊತ್ತವನ್ನು ಸರಿಯಾಗಿ, ನಮೂದಿಸತಕ್ಕದ್ದು. ಹಾಗೆಯೇ, ಹುಜೂರು ಜಮಾಬಂದಿ ಅಧಿಕಾರಿಗಳಿಂದ ಅಂತಿಮ ಅನುಮೋದನೆ ಪಡೆಯಲು ಲೆಕ್ಕ ವರದಿಯನ್ನು ಸಿದ್ಧಪಡಿಸಿಟ್ಟುಕೊಂಡಿರುವುದು. 2. ಪಹಣಿ ಪತ್ರಿಕೆಗಳ ಪರಿಶೀಲನೆ: ಪಹಣಿ ಪತ್ರಿಕೆಗಳನ್ನು ತೀವ್ರವಾಗಿ ಪರಿಶೀಲಿಸಬೇಕು. ಗ್ರಾಮಲೆಕ್ಕಾಧಿಕಾರಿಗಳು ಸರಿಯಾಗಿ ಪಹಣಿ ಬರೆದಿರುವುದನ್ನು ಕಂದಾಯ ನಿರೀಕ್ಷಕರು/ತಹಶೀಲ್ದಾರರು ಪರಿಶೀಲಿಸತಕ್ಕದ್ದು. ಹಾಗೂ ವಿವಿಧ ಬೆಳೆಗಳ ಬಗ್ಗೆ ನಿರ್ವಹಿಸಿದ ಬೆಳೆ ಪತ್ರಿಕೆ ಪರಿಶೀಲಿಸುವುದು (ನಮೂನೆ ನಂ 1 (0)) ರಲ್ಲಿ ಮಾಹಿತಿ ಪಡೆಯುವದು. 3. ಆಕಾರಬಂದ ಹಾಗೂ ಪಹಣಿ ಪತ್ರಿಕೆ: ಆಕಾರ ಬಂದದಲ್ಲಿ ನಮೂದಿಸಿದ…
ತುಮಕೂರು : ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಇದಕ್ಕೆ ಪ್ರಮುಖವಾದ ಕಾರಣ ಪಂಚ ಗ್ಯಾರಂಟಿಗಳು. ಈ ಒಂದು 5 ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತವಾಗಿ ಓಡಾಡಲು ಶಕ್ತಿ ಯೋಜನೆ, ಜಾರಿ ಮಾಡಲಾಗಿದೆ ಆದರೆ ಮಹಿಳೆಯರು ಉಚಿತ ಬಸ್ ನಲ್ಲಿ ಓಡಾಡುತ್ತಾರೆ ಆದರೆ ಕಾಂಗ್ರೆಸ್ ಗೆ ಮತ ಹಾಕಿಲ್ಲ ಎಂದು ಶಾಸಕ ಕೆ ಎನ್ ರಾಜಣ್ಣ ಮತ್ತೊಂದು ಡ್ಯಾಮೇಜ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಶಾಸಕ ಕೆ ಎನ್ ರಾಜಣ್ಣ ಮಾತನಾಡಿದ್ದು, ಉಚಿತ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರು ಮತ ಹಾಕಿಲ್ಲ ಅವರು ಮತ ಹಾಕಿದ್ದರೆ, ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಸಿಗುತ್ತಿತ್ತು. ಲಕ್ಷ ಲಕ್ಷ ಸಂಬಳದವರು ಉಚಿತ ಬಸ್ ನಲ್ಲಿ ಸಂಚರಿಸಿದ್ದಾರೆ ಪುಕ್ಕಟೆ ಬಸ್ ನಲ್ಲಿ ಹೆಣ್ಣು ಮಕ್ಕಳು ಓಡಾಡುತ್ತಾರೆ. ಆದರೆ ಮತ ಹಾಕಿಲ್ಲವೆಂದು ಕೆ ಎನ್ ರಾಜಣ್ಣ ಅಸಮಾಧಾನ ಹೊರಹಾಕಿದ್ದಾರೆ.














