Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮೈಸೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಮೃತ ದೇಹ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಮನೆಯಲ್ಲಿ ಅಮ್ಮ ಮಗಳ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹದೇವಮ್ಮ (40) ಹಾಗೂ ಮಗಳು ಸುಪ್ರಿಯ (20) ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು, ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಕಳೆದ 22 ವರ್ಷಗಳ ಹಿಂದೆ ಜಯರಾಮ ಮತ್ತು ಮಹದೇವಮ್ಮ ವಿವಾಹವಾಗಿದ್ದರು. ಪದೇ ಪದೇ ಪತಿ ಜಯರಾಮು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ ಪತ್ನಿ ಮಹಾದೇವಮ್ಮ ಪತಿ ವಿರುದ್ಧ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಘಟನೆ ಕುರಿತಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…
ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನಪೋಡಿಯಲ್ಲಿ ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ವೇಳೆ ರವಿ ಎನ್ನುವವರ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಹುಲಿ ದಾಳಿಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿ ಆರ್ ಟಿ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ರಂಗಮ್ಮ (78) ಎನ್ನುವ ವೃದ್ಧೆಯೊಬ್ಬರು ಸಾವನಪ್ಪಿದ್ದಾರೆ. ಚಾಮರಾಜನಗರ ತಾಲೂಕಿನ ರಾಮಯ್ಯನಪೋಡಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನ ಪರಿಷತ್ ಆಯ್ಕೆ ಮಾಡುವಂತ ಸದಸ್ಯರುಗಳ ವಿಚಾರಕ್ಕೆ ಸಂಬಂಧಪಟ್ಟಂತೆ ದಿನೇಶ್ ಅಮೀನ್ ಮಟ್ಟು ವಿರುದ್ಧ ಇದೀಗ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ವಿಧಾನ ಪರಿಷತ್ತಿಗೆ ನೇಮಕ ಮಾಡಬಾರದು ಎಂದು ದೂರು ಸಲ್ಲಿಸಿದ್ದು ಈಗಾಗಲೇ ಪರಿಷತ್ತಿಗೆ ನಾಮನಿರ್ದೇಶನದ ಕುರಿತಂತೆ ದಲಿತ ಹಿಂದುಳಿದ ಅಲ್ಪಸಂಖ್ಯಾತರ ವೇದಿಕೆಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ ವೇದಿಕೆ ರಾಜ್ಯ ಅಧ್ಯಕ್ಷ ಜಿಎಂ ಗಾಡ್ಕರ್ ಅವರು ದೂರು ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ಇವರು ಅಕ್ರಮವಾಗಿ ಸೈಟ್ ಪಡೆದಿದ್ದಾರೆ. ಸೈಟ್ ಪಡೆಯಬೇಕಾದರೆ15 ವರ್ಷಾ ಅಲ್ಲಿ ನೆಲೆಸಿರಬೇಕು ಎಂದು ನಿಯಮವಿದೆ. ಆದರೆ ಅವರು ತುಮಕೂರಿನಲ್ಲಿ ಇದ್ದದ್ದು ಮೂರ್ನಾಲ್ಕು ವರ್ಷಗಳು ಮಾತ್ರ. ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಇದ್ದು 15 ವರ್ಷಗಳ ಕಾಲ ಇದ್ದೇನೆ ಎಂದು ಸುಳ್ಳು ಪ್ರಮಾಣ ಪತ್ರ ನೀಡಿ ಸೈಟ್ ಪಡೆದಿದ್ದಾರೆ. ಅಲ್ದೆ ಬೇನಾಮಿ ಕಂಪನಿ ಕುರಿತು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ರಮವಾಗಿ ದಿನೇಶ್ ಅಮೀನ್ ಮಟ್ಟು ಸೈಟ್ ಪಡೆದುಕೊಂಡಿದ್ದಾರೆ. ಬೇನಾಮಿಯಾಗಿ ಸರ್ಕಾರದಿಂದ ಹಣ ಪಡೆದುಕೊಂಡಿದ್ದಾರೆ ಎಂದು ಎರಡು ಪ್ರಮುಖವಾದ ಆರೋಪಗಳನ್ನು ಜಿಎಂ…
ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (muda) ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೇ ವಿಚಾರವಾಗಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಡಿ ಅವರು ಆಸ್ತಿ ಮುಟ್ಟುಗೊಲು ಹಾಕಿಕೊಳ್ಳಲಿ. ಆಸ್ತಿ ಮುಟ್ಟುಗೋಲು ಹಾಕಿಕೊಂಡರೆ ತೊಂದರೆ ಇಲ್ಲ. ಸೈಟ್ ಗಳನ್ನು ಬೇರೆಯವರಿಗೆ ಕೊಟ್ಟಿದ್ದರ ಕುರಿತು ಕ್ರಮ ಕೈಗೊಂಡಿದ್ದಾರೆ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಸಂಚಿತ ಮುಟ್ಟುಗೋಲು ಹಾಕಿಕೊಂಡಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರಿನ ಇಡಿ, 9/06/2025 ರಂದು ರೂ. 100 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.
ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಸಾವು, ಸದಾ ಈ ಜಾತಿಗಣತಿ ಸಮೀಕ್ಷೆ ನಡೆಸುವ ಬಗ್ಗೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಇನ್ನು ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವರಿಷ್ಠರನ್ನು ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ರೀತಿಯಾದ ಚರ್ಚೆ ಸಭೆಯಲ್ಲಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇನ್ನು ಬೆಂಗಳೂರಿನ ಕಾಲ್ತುಳಿತದ ದುರಂತದ ಕುರಿತು, ಕಾಲ್ತುಳಿತದ ದುರಂತದಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ ನ್ಯಾ. ಕುನ್ಹಾ ನೇತೃತ್ವದ ತನಿಖೆಯ ಬಗ್ಗೆ ವರಿಷ್ಠ ರಿಗೆ ಮಾಹಿತಿ ನೀಡಿದ್ದೇವೆ.…
ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ ರವಿ ಎಂಬ ವ್ಯಕ್ತಿ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳು ರವಿ ಅವರನ್ನು ಚಾಮರಾಜನಗರ ಸರ್ಕಾರಿ ಬೋಧನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಡುಗುಳಿಯ ರಾಮಯ್ಯನ ಪೋಡಿನಲ್ಲಿ ನಡೆದ ಹುಲಿ ದಾಳಿಯಿಂದಾಗಿ ನಿವಾಸಿಗಳು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಹುಲಿ ಸೆರೆಯಾಗುವ ತನಕ ತಾತ್ಕಾಲಿಕವಾಗಿ ಬೇಡುಗುಳಿಯಲ್ಲಿನ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ನವದೆಹಲಿ : ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಸಂಪುಟದಲ್ಲಿ ಹಲವು ಬಾರಿ ಚರ್ಚೆಯಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಸಮೀಕ್ಷೆ ನಡೆಸಿ 9ರಿಂದ 10 ವರ್ಷಗಳಾಗಿದೆ. ಹಾಗಾಗಿ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಕೊಂಡಿದ್ದು, 90 ದಿನಗಳಲ್ಲಿ ಜಾತಿ ಗಣತಿ ಸಮೀಕ್ಷೆ ಮುಗಿಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ಜೊತೆಗೆ ರಾಹುಲ್ ಗಾಂಧಿ ಸಭೆ ಮಾಡಿದ ವಿಚಾರವಾಗಿ, ರಾಜ್ಯದಲ್ಲಿ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿ ಗಣತಿ ಸಮೀಕ್ಷೆ ಮುಗಿಯಲಿದೆ ಎಂದು ದೆಹಲಿ…
ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು ಬೆಳಗಾವಿ ಜಿಲ್ಲಾ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೇ 17 ರಂದು ಯುವ ಕ್ರಿಕೆಟಿಗ ರಾಕೇಶ್ ಯಾಡೋರೆಗೆ 23 ಲಕ್ಷ ಪಡೆದು ವಂಚನೆ ಎಸಗಿದ್ದರು. ರಾಕೇಶ್ ಹೈದರಾಬಾದ್ಗೆ ತೆರಳಿದಾಗ ಕ್ರಿಕೆಟ್ ಆಡುತ್ತಿದ್ದ ಯಾಡೋರೆ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಹಾಕಿದ್ದ. ಇದನ್ನು ಗಮನಿಸಿ ರಾಕೇಶ್ ಗೆ ವಂಚಕರು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದರು. ಬಳಿಕ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಮೆಸೇಜ್ ಮಾಡಿದ್ದಾರೆ. ರಾಕೇಶ್ ಯಾಡೋರೆಗೆ ಕೆಲವು ಸುಳ್ಳು ದಾಖಲೆಗಳನ್ನು ಕಳುಹಿಸಿದ್ದಾರೆ. ಆನ್ಲೈನ್ ಮೂಲಕ ರಾಕೇಶ್ 23 ಲಕ್ಷಕ್ಕೂ ಹೆಚ್ಚು ಹಣ ವರ್ಗಾಯಿಸಿದ್ದಾನೆ. ರಾಕೇಶ್ ಗೆ ತಾನು ವಂಚನೆಗೆ ಒಳಗಾಗಿದ್ದು ತಡವಾಗಿ ಅರಿವಿಗೆ ಬಂದಿತ್ತು. ಬಳಿಕ…
ಯಾದಗಿರಿ : ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಿದ್ದು, ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದೇ ವಿಚಾರವಾಗಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಯಾಕೆ ಕರೆದಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಆದರೆ 10ರಿಂದ 15 ಜನರ ಬದಲಾವಣೆಯಾದರೂ ಆಗಬಹುದು. ಜನರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆ ಆಗಲ್ಲ ಎಲ್ಲವನ್ನು ಪಕ್ಷದ ಹೈಕಮಾಂಡ ತೀರ್ಮಾನ ಮಾಡುತ್ತದೆ. ಸಚಿವ ಸ್ಥಾನ ನೀಡುವುದೇ ಆದರೆ 34 ಕ್ಕಿಂತ ಹೆಚ್ಚಿನ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗಲ್ಲ. ಸಚಿವ ಸ್ಥಾನ ಯಾರಿಗೆ ನೀಡಬೇಕು ಅನ್ನೋದರ ಕುರಿತು ಸಿಎಂ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಸಚಿವ ಸಂಪುಟ ಪುನರ್ ರಚನೆಯಾದರೆ ಸಚಿವರ ಬದಲಾವಣೆ…
ಬೆಂಗಳೂರು : ಆರ್ಸಿಬಿ ತಂಡವು ಅಹಮದಾಬಾದ್ನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್ನಲ್ಲಿ ಚಾಂಪಿಯನ್ ಆಗುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ನೂಕುನುಗ್ಗಲಿನಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಆರ್ಸಿಬಿ ಮಾರಾಟದ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಹೌದು 2025ರ ಟ್ರೋಫಿಯನ್ನ ಗೆದ್ದ ಕೇವಲ ಒಂದು ವಾರದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ಮಾಲೀಕರನ್ನ ಹುಡುಕುವ ಸಾಧ್ಯತೆಯಿದೆ. ಫ್ರಾಂಚೈಸಿಯ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಪಿಎಲ್ಸಿ ಮಾರುಕಟ್ಟೆಯಲ್ಲಿದ್ದು, ಫ್ರಾಂಚೈಸಿಯನ್ನ ಭಾಗಶಃ ಅಥವಾ ಸಂಪೂರ್ಣವಾಗಿ ಮಾರಾಟ ಮಾಡಲು ನೋಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಯಾಜಿಯೋ ತನ್ನ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮೂಲಕ ಆರ್ಸಿಬಿಯ ಮಾಲೀಕತ್ವವನ್ನು ಪಡೆದುಕೊಂಡಿದೆ. ಈ ತಂಡದ ಮೌಲ್ಯವನ್ನು ಸುಮಾರು 2 ಬಿಲಿಯನ್ ಡಾಲರ್ಗೆ (ಸುಮಾರು 16,700 ಕೋಟಿ ರೂ.)…