Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಶಿವಮೊಗ್ಗ : ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪಿಸಿ ಹಾಗು ವ್ಯಾಪಾರಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸಂಚಾರಿ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ರಮೇಶ್ ಬೀದಿ ಬದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ಹಲ್ಲೆಗೆ ಒಳಗಾದ ವ್ಯಾಪಾರಿಯನ್ನು ಮೆಗಾನ್ ಆಸ್ಪತ್ರೆಗೆ ದಾಖಲೆ ಸಿಹಿ ಚಿಕಿತ್ಸೆ ನೀಡಲಾಗುತ್ತಿದೆ. ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದವನ ಜೊತೆ ಪಿಸಿ ವಾಗ್ವಾದ ನಡೆಸಿದ್ದಾರೆ. ಬಸವರಾಜ ಎನ್ನುವ ವ್ಯಾಪಾರಿ ಮೇಲೆ ಪಿಸಿ ರಮೇಶ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ಬೀದಿ ಬದಿ ವ್ಯಾಪಾರಿ ಬಸವರಾಜ್ ತಲೆಯಿಂದ ರಕ್ತ ಸೋರುತ್ತಿದೆ. ಗಾಯಾಳು ಬಸವರಾಜ ನಾನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪಿ ಸಿ ರಮೇಶ್ ವರ್ತನೆಯನ್ನು ಖಂಡಿಸಿ, ಇದೀಗ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹಲ್ಲೆ ನಡೆಸಿದ ಕಾನ್ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಎಸ್ ಪಿ ಭರವಸೆಯ…
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ ಮಳೆ ಮುಂದುವರೆದರೆ ಇನ್ನೂ ಕೆಲವು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಉಡುಪಿಯಲ್ಲಿ ಜನ ಜೀವನ ಅಸ್ತವ್ಯಸ್ಥ ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಪುಂಡು ಪೋಕರಿಗಳ ಜೊತೆಗೆ ಕಾಮುಕರ ಅಟ್ಟಹಾಸ ಕೂಡ ಮಿತಿ ಮೀರಿದೆ. ಇದೀಗ ಕಾಲೇಜು ಹುಡಿಗಿಯರು ಪಾದಚಾರಿ ರಸ್ತೆಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ವಿಕೃತಿ ಮೆರೆದ ಪಾಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಂಗಳೂರಿನ ವಿ.ವಿ.ಪುರಂ ಕಾಲೇಜಿನ ಬಳಿ ಸ್ಕೂಟರ್ನಲ್ಲಿ ಹೋಗುವಾಗ ಕಾಲೇಜು ಹುಡುಗಿಯರು ಪಾದಾಚಾರಿ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಅಯೂಬ್ ಉರ್ ರೆಹೆಮಾನ್ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ವಿವಿಪುರಂ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮರ್ಮಾಂಗ ತೋರಿಸುತ್ತಿದ್ದ ವ್ಯಕ್ತಿ ಯುವಕನಲ್ಲ, ಈತ ಅಯೂಬ್ ಉರ್ ರೆಹಮಾನ್ ಎಂಬ 48 ವರ್ಷದ ಅಂಕಲ್. ತನಗೆ ಮಕ್ಕಳ ವಯಸ್ಸಿನ ವಿದ್ಯಾರ್ಥಿನಿಯರ ಮುಂದೆ ಹೀಓಗೆ ಅಶ್ಲೀಲವಾಗು ನಡೆದುಕೊಂಡಿದ್ದಾರೆ. ಸ್ಕೂಟರ್ನಲ್ಲಿ ಹೋಗುವಾಗ ಕಾಲೇಜು ವಿದ್ಯಾರ್ಥಿನಿಯರಿಗೆ…
ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ (41) ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಹೋಗಿದ್ದ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದಾರೆ. ಅಸಲಿಗೆ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ಇಲ್ಲಿದೆ ಸಂಪೂರ್ಣ ವಿವರ. ಮಕ್ಕಳಾಗದಿದ್ದಕ್ಕೆ ಕುಗ್ಗಿ ಮಾನಸಿಕವಾಗಿ ಹೋಗಿದ್ದರು ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ. ಇನ್ನು ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ…
ಉಡುಪಿ : ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಂತೂ ರಣ ಮಳೆಯಿಂದಾಗಿ ನೆರೆ ಉಂಟಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ರಕ್ಷಣಾ ತಂಡ ಸಹ ಬೀಡು ಬಿಟ್ಟಿದೆ. ಹೀಗಿರುವಾಗ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಕೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ…
ದಾವಣಗೆರೆ : ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರ ಸಭೆ ಆಯುಕ್ತ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹೌದು ಹರಿಹರ ನಗರಸಭೆ ಆಯುಕ್ತ ಬಸವರಾಜ್ ಐಗುರು ಎನ್ನುವವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ ಆಯುಕ್ತ ಬಸವರಾಜ ಐಗೂರು ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ಹರಿಹರದ ವಿದ್ಯಾನಗರದಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಸಾಮಗ್ರಿ ಸರಬರಾಜು ಮಾಡುತ್ತಿದ್ದ ಕರಿಬಸಪ್ಪ ಎಂಬುವವರಿಂದ ಎರಡು ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕಮಲಾಪುರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಇದೀಗ ಆರೋಪಿಯನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು : ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಸೂರಜ್ ರೇವಣ್ಣ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಅವರು ತಮ್ಮ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 10ಕ್ಕೆ ವಿಚಾರಣೆ ಮುಂದೂಡಿದೆ. ಹೌದು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರು ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸಿಐಡಿ ತನಿಖಾಧಿಕಾರಿ ಎಂ ಹೆಚ್ ಉಮೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲೂ ಕೂಡ ಸಿಐಡಿ ಪೋಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ನೀಡುವಂತೆ ಸೂರಜ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ಕೋರಿದರು. ಇದೆ ಸಂದರ್ಭದಲ್ಲಿ ನ್ಯಾಯಾಲಯವು ಆಕ್ಷೇಪಣಿ…
ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಾಗಾಗಿ ಕೊಲೆಗೆ ಏನು ಕಾರಣ ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ. ಇದೀಗ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ರಸ್ತೆ ಬದಿಯಲ್ಲಿ ಕಾರು ನಿಂತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಈ ವೇಳೆ ಪೊಲೀಸರು ಆಗಮಿಸಿ ಕೂಡಲೇ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಾರೆ ಆದರೆ ಅಲ್ಲಿಂದ ನಂತರ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಎಂದು ಹೇಳಲಾಗುತ್ತಿದೆ.ಮೃತ ಪ್ರತಾಪ್ ಕುಮಾರ್ ಅವರು ಬಿಸಿ ಪಾಟೀಲ್ ಅವರ ಮೊದಲನೇ ಮಗಳ ಪತಿಯಾಗಿದ್ದು,ಸದ್ಯ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಪೊಲೀಸರು ತನಿಖೆ ನಡೆಸುತ್ತಿದ್ದು, ಹೊನ್ನಾಳಿ ಪೊಲೀಸ್…












