Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ. ಬಿಜೆಪಿಯವರು ಬೇಕಾದರೆ ವಿಷ ಕುಡಿಯುತ್ತಾರೆ ಹೊರತು ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಅನ್ನೋ ವಿಚಾರವಾಗಿ ಎಲ್ಲರೂ ರಾತ್ರಿ ಕನಸು ಕಂಡರೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿದ್ದಾಗ ಎಷ್ಟು ಸ್ಥಾನ ಗೆದ್ದಿದೆ? ಕುಮಾರಸ್ವಾಮಿ ಬಂದಾಗ ಜೆಡಿಎಸ್ ಎಷ್ಟು ಸ್ಥಾನ ಗೆದ್ದಿದೆ? ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.
ಬೆಂಗಳೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೀರ್ತಿ ಶವ ಪತ್ತೆಯಾಗಿದೆ. 2023 ನವೆಂಬರ್ ನಲ್ಲಿ ಕೀರ್ತಿ ಗುರುಪ್ರಸಾದ್ ಮದುವೆಯಾಗಿತ್ತು. ಕೀರ್ತಿ ಪೋಷಕರು ಸುಮಾರು 30 ರಿಂದ 35 ಲಕ್ಷ ಹಣ ಖರ್ಚು ಮಾಡಿ ಮದುವೆ ಮಾಡಲಾಗಿತ್ತು. ಡಿಸೆಂಬರ್ 2025ರಲ್ಲಿ ಮತ್ತೆ 10 ಲಕ್ಷ ಹಣ ಗುರುಪ್ರಸಾದ್ ಕೇಳಿದ್ದ. ಮನೆ ಕಟ್ಟಿಸುವುದಾಗಿ ಹಣ ಕೊಡಿ ಎಂದು ಗುರುಪ್ರಸಾದ್ ಕೇಳಿದ್ದ. ಈ ವೇಳೆ ಗುರುಪ್ರಸಾದ್ ಗೆ ಕೀರ್ತಿ ಪೋಷಕರು 8 ಲಕ್ಷ ಹಣ ನೀಡಿದ್ದರು. ನಿನ್ನೆ ಬೆಳಿಗ್ಗೆ ಯಡಿಯೂರು ಕೆರೆ ಬಳಿ ಮನೆಯಲ್ಲಿ ಕೀರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪತಿ ಗುರುಪ್ರಸಾದ್ ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಗಿದ್ದು, ಪೋಷಕರು ಶವ ಗ್ರಾಮಕ್ಕೆ ಕೀರ್ತಿ ಮೃತದೇಹ ತೆಗೆದುಕೊಂಡು ಹೋಗಿದ್ದಾರೆ. ಪತಿ…
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಆಲ್ದೂರು ಬಳಿ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದೆ. ಇವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಯುವಕ ಸಾವು
ಬೆಂಗಳೂರು : ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ನಶೆಯಲ್ಲಿ ಅಪಘಾತ ಮಾಡಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಪ್ರಶಾಂತ್ (28) ಸಾವನ್ನಪ್ಪಿದ್ದು, ರೋಷನ್ ಹೆಗ್ಗಡಗೆ ಗಂಭೀರವಾದ ಗಾಯಗಳಾಗಿವೆ. ಕೊಲೆ ಮಾಡುತ್ತಿರುವ ದೃಶ್ಯ ಕಾರಿನ ಮುಂಭಾಗದ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಶಾಂತನ ಕೊಲೆ ಮಾಡಲಾಗಿದೆ ಅಂತ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೊಲೆ ಪ್ರಕರಣ ದಾಖಲಾಗಿದೆ
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ, ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಸಿಕ್ಕಿದೆ. ತನಿಖೆ ವೇಳೆ ಬೆಚ್ಚಿ ಬೆಳಿಸುವ ಮಾಹಿತಿಯನ್ನು ಆರೋಪಿ ಕರ್ನಲ್ ಕುರೈ ಬಿಚ್ಚಿಟ್ಟಿದ್ದಾನೆ. ಆರೋಪಿಗೆ ಪ್ರೀತಿಗಿಂತ ಆಕೆಯ ಮೇಲೆ ವಿಕೃತಿ ಮನಸ್ಸು ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಕರ್ನಲ್ ಶರ್ಮಿಳಾ ಮೇಲೆ ಲೈಂಗಿಕ ವಿಕೃತಿ ಹೊಂದಿದ್ದ ಅಲ್ಲದೇ ಶರ್ಮಿಳಾ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ವಿಚಾರಣೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ತನಿಖೆ ಬೆಳೆ ಈ ಒಂದು ಕೊಲೆಯ ರಹಸ್ಯ ಬಯಲಾಗಿದೆ. ಕೊಲೆಯ ದಿನ ಶರ್ಮಿಳಾ ಕೂಗುತ್ತಿದ್ದಂತೆ ಪಾಪಿ ಕರ್ನಲ್ ಬಾಯಿ ಹೊತ್ತಿ ಹಿಡಿದಿದ್ದಾನೆ. ನನ್ನ ಬಿಟ್ಟುಬಿಡು ಅಂತ ಶರ್ಮಳ ಆರೋಪಿಗೆ ಬೇಡಿಕೊಂಡಿದ್ದಾಳೆ. ಈ ವೇಳೆ ಆಕೆಯ ಕುತ್ತಿಗೆ ಒತ್ತಿದ್ದಾನೆ ಅಷ್ಟೆ ಶರ್ಮಿಳಾ ಉಸಿರು ಚೆಲ್ಲಿದ್ದಾಳೆ. ಬಳಿಕ ಟಿಶ್ಯೂ ಪೇಪರ್ ಹಾಸಿಗೆ ಮೇಲೆ ಇಟ್ಟು ಕಿರಾತಕ ಬೆಂಕಿ ಹಚ್ಚಿದ್ದಾನೆ. ಇದು ಆಕಸ್ಮಿಕ ಘಟನೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಇದೀಗ…
ಬೆಳಗಾವಿ : ಚೋರ್ಲಾ ಘಾಟ್ ಬಳಿಯ 400 ಕೋಟಿ ದರೋಡೆ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಹಣ ಪ್ರಭಾವಿ ರಾಜಕಾರಣಿಗೆ ಸೇರಿದ್ದಾಗಿರಬಹುದು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಎರಡು ಸಾವಿರ ರೂಪಾಯಿ ನೋಟುಗಳನ್ನು ಬದಲಾಯಿಸಲು ಸಾಗಿಸುವಾಗ ಕಂಟೇನರ್ ನಾಪತ್ತೆಯಾಗಿದೆ. ಹೌದು 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹಣ ತುಂಬಿದ್ದ ಕಂಟೇನರ್ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ, ನೋಟು ಬದಲಾವಣೆಗಾಗಿ ಗೋವಾದಿಂದ ಹಣ ಸಾಗಿಸಲಾಗುತ್ತಿತ್ತು. ಇದರ ಜವಾಬ್ದಾರಿ ಆರೋಪಿ ವಿರಾಟ್ಗೆ ಕಿಶೋರ್ ನೀಡಿದ್ದ. ವಿರಾಟ್ ಹುಡುಗರಿಂದ ಹಣ ಸಾಗಾಟದ ವೇಳೆ ಕಂಟೇನರ್ ಮಿಸ್ಸಿಂಗ್ ಆಗಿದೆ. ಹಣದ ಸಮೇತ…
ಬೆಂಗಳೂರು : 2028ಕ್ಕೆ ರಾಜ್ಯದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬರುತ್ತೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಎಲ್ಲರೂ ಕನಸು ಕಾಣುತ್ತಾರೆ ನಾವು 2028ಕ್ಕೆ ನಮ್ಮದೇ ಸರ್ಕಾರ ಅಂತೀವಿ ಅದೇ ರೀತಿ ಬಿಜೆಪಿ ಜೆಡಿಎಸ್ ನವರು ಕನಸು ಕಾಣುತ್ತಿದ್ದಾರೆ ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು. ಎಲ್ಲರಂತೆ ಬಿಜೆಪಿ ಮತ್ತು ಜೆಡಿಎಸ್ ನವರು 2028ಕ್ಕೆ ಸರ್ಕಾರ ಬರುತ್ತೆ ಅಂತ ಕನಸು ಕಾಣುತ್ತಿದ್ದಾರೆ ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ಅವರು ಅಧಿಕಾರಕ್ಕೆ ಬರುತ್ತಾರೆ. ನನ್ನ ಪ್ರಕಾರ 2028ಕ್ಕೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮಗೆ ಮತ ಕೊಡುತ್ತಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಯ್ತು ಜನರು ಇದೆಲ್ಲವನ್ನು ನೋಡಿದ್ದಾರೆ. ಬಿಜೆಪಿ ಆಡಳಿತವೇ ನೋಡಿ ಜನ ನಮಗೆ ಮೆಜಾರಿಟಿ ಕೊಟ್ಟರು. ಮುಂದೆಯೂ ಅದೇ ರೀತಿಯಲ್ಲಿ ನಮ್ಮದೇ ಸರ್ಕಾರ ಬರುತ್ತೆ ಎಂದು ಬೆಂಗಳೂರಿನ ಜಿಲ್ಲೆಯ ರಾಮನಗರದಲ್ಲಿ ರಾಮಲಿಂಗರೆಡ್ಡಿ ಹೇಳಿಕೆ…
ಬೆಳಗಾವಿ : ಬೆಳಗಾವಿ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು 400 ಕೋಟಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನಿಲ್ಲ ಎಲ್ಲರೂ ಇರುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಸಹಕರಿಸುತ್ತಿಲ್ಲ. ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ ಪತ್ರ ಬರೆದಿದ್ದಾರೆ. ಯಾರಾದರೂ ದೂರು ನೀಡಿದರೆ ನಮ್ಮವರು ತನಿಖೆ ಮಾಡುತ್ತಾರೆ. ಚೋರ್ಲ ಘಾಟ್ ಪ್ರದೇಶದ ವ್ಯಾಪ್ತಿ ದೊಡ್ಡದಿದೆ. ದರೋಡೆ ನಡೆದ ಸ್ಥಳ ಮಹಾರಾಷ್ಟ್ರ ಗೋವಾ ಅಥವಾ ಕರ್ನಾಟಕಕ್ಕೆ ಸೇರಿದೆಯೋ ಅನ್ನೋ ಬಗ್ಗೆ ಗೊಂದಲವಿದೆ ತನಿಖೆ ಮಾಡುತ್ತಾರೆ ಎಂದರು. 400 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪದ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಇದರಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನು ಇಲ್ಲ ಎಲ್ಲರೂ ಇರುತ್ತಾರೆ. ದರೋಡೆ ಪ್ರಕರಣದಲ್ಲಿ ಎಲ್ಲಿ ನಡೆದಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸ್ರಿಗೆ ಸಹಕಾರ…
ಬೆಂಗಳೂರು : ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ, ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ. ಕರ್ನಾಟಕ ಸರ್ಕಾರವು ಸಂವಿಧಾನ ಪ್ರಸ್ತಾಪಿಸಿರುವ ಭಾತೃತ್ವ, ಸ್ವಾತಂತ್ರ ಹಾಗೂ ಸಮಾನತೆಯನ್ನು ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ…
ಬೆಂಗಳೂರು : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್ ಮತ್ತು ಮನೋಹರ್ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ. ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್ಗಳನ್ನು ಅಂಟಿಸುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.














