Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಬಳಿ ಇಂದು ಮುಂಜಾನೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ನಗರದ ಚಾಮರಾಜಪೇಟೆ ಕಾಲೊನಿಯ ಶ್ರೀಕಾಂತ್ (29) ಎಂದು ತಿಳಿದುಬಂದಿದೆ. ಮೃತ ಶ್ರೀಕಾಂತ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ವಿವಾಹಿತರಾದ ಶ್ರೀಕಾಂತ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಶವದ ಬಳಿ ರಕ್ತಸಿಕ್ತವಾದ ಕಲ್ಲು ದೊರೆತಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ‌ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೋಟ್ಯಾನು ಕೋಟಿ ಅಭಿಮಾನಿಗಳ ಕನಸು ಕಳೆದ 17 ವರ್ಷಗಳಿಂದ ವನವಾಸ. ಡಿಕೆ ಅವಮಾನ ಟ್ರೋಲ್ ಇದೆಲ್ಲವನ್ನು ಸಹಿಸಿ ಇದೀಗ ಐಪಿಎಲ್ ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿದೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ. ಹೌದು ಟ್ರೊಫಿ ಸಮೇತ ಬೆಂಗಳೂರಿಗೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಲಿದೆ. ಈ ಕುರಿತು ವಿರಾಟ್ ಕೊಹ್ಲಿ ಅವರು ನಿನ್ನೆನೇ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನ 1:30 ಕ್ಕೆ ಆರ್ಸಿಬಿ ತಂಡ ಎಚ್ ಎ ಎಲ್ ಗೆ ಬಂದು ಇಳಿಯಲಿದೆ. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ನಿಂದ ಆರ್ಸಿಬಿ ತಂಡ ಹೊರಡಲಿದೆ. ಅಹಮದಾಬಾದ್ ನಿಂದ ನೇರವಾಗಿ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ. ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ…

Read More

ಕೊಪ್ಪಳ : ಕಳೆದ 17 ವರ್ಷಗಳಿಂದ ನಿರಂತರವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ನಿರಾಸೆ ಅನುಭವಿಸುತ್ತಾ ಬಂದಿದ್ದಾರೆ. ಆದರೂ ಸಹ ತಂಡದ ಮೇಲಿನ ಪ್ರೀತಿ, ಗೌರವ ಹಾಗು ಅಭಿಮಾನ ಯಾವತ್ತಿಗೂ ಕಡಿಮೆಯಾಗಿಲ್ಲ. ನಿನ್ನೆ ನಡೆದ ಪಂಜಾಬಿ ವಿರುದ್ಧ ಪಂದ್ಯದಲ್ಲಿ ಆರ್‌ಸಿಬಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿದೆ. ನಿನ್ನೆ ಆರ್‌ಸಿಬಿ ಗೆದ್ದಿದ್ದೇ ತಡ ಇಡೀ ರಾಜ್ಯಾದ್ಯಂತ ಹಬ್ಬಗಳಂತೆ ಆರ್‌ಸಿಬಿ ಗೆಲುವನ್ನು ಸಂಭ್ರಮಿಸುತಿದ್ದಾರೆ. ಇದೀಗ ಮದುವೆ ಮಂಟಪದಲ್ಲಿ ಕೂಡ ನವ ಜೋಡಿ RCB ಗೆಲುವನ್ನು ಸಂಭ್ರಮಿಸಿದ್ದಾರೆ. ಹೌದು ಕೊಪ್ಪಳದ ಕಾರಟಗಿ ಮರ್ಲಾನಹಳ್ಳಿಯಲ್ಲಿ ಆರ್‌ಸಿಬಿ ಗೆಲುವು ಸಂಭ್ರಮಾಚರಣೆ ಮಾಡಿದ್ದಾರೆ.ವೇದಿಕೆ ಮೇಲೆನೆ ಆರ್‌ಸಿಬಿ ಮತ್ತು ಪಂಜಾಬ್ ಪಂದ್ಯದ ಸ್ಕ್ರೀನ್ ವ್ಯವಸ್ಥೆ ಸಹ ಮಾಡಿಕೊಂಡಿದ್ದು, ಸ್ಕ್ರೀನ್ ಪಕ್ಕದಲ್ಲಿ ನಿಂತು ನವಜೋಡಿಗಳು ಟೀ ಶರ್ಟ್ ಹಿಡಿದು ಆರ್ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ. ಇದೀಗ ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗುತ್ತಿದೆ.

Read More

ಬೆಂಗಳೂರು : ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಚಾಂಪಿಯನ್‌ಶಿಪ್ ಗೆದ್ದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಯೋಜಿತವಾಗಿರುವ ವಿಜಯೋತ್ಸವದ ಪರೇಡ್‌ಗೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆತಿದ್ದು, ಸಂಜೆ 5 ಗಂಟೆಗೆ ವಿಧಾನಸೌಧದಿಂದ ವಿಕ್ಟರಿ ಪರೇಡ್ ಆರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೆ ನಡೆಯಲಿದೆ. ವಿಧಾನಸೌಧದಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಪರೇಡ್ ನಡೆಸಲು ಆರ್‌ಸಿಬಿ ತಂಡವು ಅನುಮತಿ ಕೋರಿದೆ. ವರದಿಗಳ ಪ್ರಕಾರ, ಈ ವಿಜಯೋತ್ಸವದ ಪರೇಡ್ ಜೂನ್ 4, ಅಂದರೆ ಇಂದು 2025ರಂದು ಮಧ್ಯಾಹ್ನ 5 ಗಂಟೆಗೆ ವಿಧಾನಸೌಧದಿಂದ ಆರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಗೆ ಅಹಮದಾಬಾದ್ ನಿಂದ ಆರ್‌ಸಿಬಿ ತಂಡ ಮಧ್ಯಾಹ್ನ 1:30ಕ್ಕೆ ಬೆಂಗಳೂರಿನ ಎಚ್ ಎ ಎಲ್ ಗೆ ಬಂದು ಇಳಿಯಲಿದೆ. ಬಳಿಕ ತಾಜ್ ವೆಸ್ಟ್ ಅಂಡ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಂಡ ಭೇಟಿಯಾಗಲಿದೆ ತದನಂತರ ಸಂಜೆ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ವಿಕ್ಟರಿ ಪರೇಡ್…

Read More

ಬೆಂಗಳೂರು : ಕೋಟ್ಯಾನು ಕೋಟಿ ಅಭಿಮಾನಿಗಳ ಕನಸು ಕಳೆದ 17 ವರ್ಷಗಳಿಂದ ವನವಾಸ. ಡಿಕೆ ಅವಮಾನ ಟ್ರೋಲ್ ಇದೆಲ್ಲವನ್ನು ಸಹಿಸಿ ಇದೀಗ ಐಪಿಎಲ್ ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿದೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ. ಹೌದು ಟ್ರೊಫಿ ಸಮೇತ ಬೆಂಗಳೂರಿಗೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಲಿದೆ. ಮಧ್ಯಾಹ್ನ 1:30 ಕ್ಕೆ ಆರ್ಸಿಬಿ ತಂಡ ಎಚ್ ಎ ಎಲ್ ಗೆ ಬಂದು ಇಳಿಯಲಿದೆ. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ನಿಂದ ಆರ್ಸಿಬಿ ತಂಡ ಹೊರಡಲಿದೆ. ಅಹಮದಾಬಾದ್ ನಿಂದ ನೇರವಾಗಿ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದೆ. ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ…

Read More

ಮೈಸೂರು : ಕಳೆದ 17 ವರ್ಷಗಳಿಂದ ವನವಾಸ ಅನುಭವಿಸಿ ಕೊನೆಗೂ 18ನೇ ಬಾರಿಗೆ ಚೊಚ್ಚಲ ಐಪಿಎಲ್ ಟ್ರೊಫಿಯನ್ನು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎತ್ತಿ ಹಿಡಿದಿದೆ. ಕೋಟ್ಯಾನುಕೋಟಿ ಅಭಿಮಾನಿಗಳ ಕನಸು ಇದೀಗ ಇಂದು ನನಸಾಗಿದೆ. ಮೊಟ್ಟಮೊದಲ ಬಾರಿಗೆ ಆರ್‌ಸಿಬಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ಇಂದು, ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಹೋಳಿಗೆ ಊಟ ನೀಡಲಾಗುತ್ತಿದೆ. ಹೌದು ನಿನ್ನೆ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಇಂದು ಹೋಳಿಗೆ ಊಟ ನೀಡಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಮಾಲು ಸಮೇತ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬುಕ್ಕಸಾಗರ ಕೆರೆ ಬಳಿ ಬಂಧಿಸಲಾಗಿದೆ. ಬಂಧಿತರನ್ನು ಒಡಿಶಾದ ಬದ್ರಕ್ ಜಿಲ್ಲೆ ಮೂಲದ ಮಾಸ್ತೇನಹಳ್ಳಿ ವಾಸಿ ಬಿಗ್ ಬಾಸ್ಕೆಟ್​ನಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ (24), ಅಸ್ಸಾಂನ ದೆಮಾಜಿ ಜಿಲ್ಲೆ ಮೂಲದ ವೀರಸಂದ್ರದ ಪ್ಲಿಪ್ಕಾರ್ಟ್ ಉದ್ಯೋಗಿ ಬಿಸ್ವಜಿತ್ ದಾವೊ(24), ಅಸ್ಸಾಂನ ಕರಿಮಾಗಂಜ್ ಜಿಲ್ಲೆ ಮೂಲದ ವೀರಸಂದ್ರ ಡೆಲಿವರಿ ಬಾಯ್ ಜಾಕಿರ್ ಹುಸೇನ್ (24), ಮಂಗಳೂರು ನಗರ ಮೂಲದ ತಿರುಪಾಳ್ಯ ವಾಸಿ ಚಾಲಕ ಸರ್ಪುದ್ದೀನ್ (28) ಬಂದಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 88 ಗ್ರಾಂ ಎಂಡಿಎಂಎ, 01.100 ಕಿಲೋ ಗಾಂಜಾ, 04.06 ಗ್ರಾಂ ಹೆರಾಯಿನ್, 4 ಸಿರೆಂಜ್, 4 ಮೊಬೈಲ್ ಸಮೇತ ಎರಡು ಬೈಕ್ ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಾದಕವಸ್ತು ಮಾರಾಟ ನಿಷೇಧ ಕಾಯಿದೆಯಂತೆ ಪ್ರಕರಣ ದಾಖಲಿಸಿರುವ ಜಿಗಣಿ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ…

Read More

ಅಹಮದಾಬಾದ್ : ಸತತ 17 ವರ್ಷಗಳ ಕಾಲ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಅಹಮದಾಬಾದ್ ನಲ್ಲಿ ನಿನ್ನೆ ರಾತ್ರಿ ನಡೆದ ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ 6 ಗೆಲುವು ಸಾಧಿಸಿದ ಆರ್ಸಿಬಿ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಪಂದ್ಯದ ಬಳಿಕ, ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮಾತನಾಡಿ, ತಮ್ಮ ಸೋಲಿಗೆ ಪ್ರಮುಖ ಕಾರಣ ವಿವರಿಸಿದರು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸೋಲು ದೊಡ್ಡ ನಿರಾಶೆ ತಂದಿದೆ. ನಾವು ಫೈನಲ್‌ನಲ್ಲಿ ಸೋತಿದ್ದರೂ, ನಮ್ಮ ಹುಡುಗರು ಅವಕಾಶಕ್ಕೆ ತಕ್ಕಂತೆ ಆಡಿದರು. ಈ ಪಂದ್ಯದಲ್ಲಿ ನಾವು ಸೋಲಬಾರದಿತ್ತು ಎಂದರು. ಕಳೆದ ಪಂದ್ಯದಲ್ಲಿ ನಾವು 200 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿದ್ದೇವೆ. ಆದರೆ, ಈ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಅದ್ಭುತ ಬೌಲಿಂಗ್ ಮಾಡಿದರು. ವಿಶೇಷವಾಗಿ ಕೃನಾಲ್ ಪಾಂಡ್ಯ ಅಸಾಧಾರಣ ಪ್ರದರ್ಶನದೊಂದಿಗೆ ಪಂದ್ಯದ ದಿಕ್ಕನ್ನೇ ತಿರುಗಿಸಿದರು. ಅವರು ತಮ್ಮ ಅನುಭವವನ್ನು ಬಳಸಿಕೊಂಡು…

Read More

ಬೆಂಗಳೂರು : ಸತತ 17 ವರ್ಷಗಳ ಕಾಲ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ನಿನ್ನೆ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಅಹಮದಾಬಾದ್ ನಲ್ಲಿ ನಿನ್ನೆ ರಾತ್ರಿ ನಡೆದ ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ 6 ಗೆಲುವು ಸಾಧಿಸಿದ ಆರ್ಸಿಬಿ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಆರ್ಸಿಬಿ ಕಪ್ ಗೆಲ್ಲಲು ಪ್ರತಿಯೊಬ್ಬ ಆಟಗಾರನ ಸಾಕಷ್ಟು ಶ್ರಮವಿದೆ. ಅದರಲ್ಲೂ ಅಭಿಮಾನಿಗಳ ಪ್ರೀತಿಗೆ ತಲೆಬಾಗಿ ರನ್ ಮಷೀನ್ ವಿರಾಟ್ ಕೊಹ್ಲಿ ಅವರು ಒಂದೇ ಒಂದು ತಂಡಕ್ಕೆ ಸುಧೀರ್ಘವಾಗಿ 18 ವರ್ಷಗಳ ಕಾಲ ಆಡಿರುವುದು ದೊಡ್ಡ ದಾಖಲೆ. ಇದೀಗ ಆರ್‌ಸಿಬಿ ಈ ಒಂದು 2025ನೇ ಐಪಿಎಲ್ ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ತವರಿನ ಪಂದ್ಯಗಳನ್ನು ಹೊರತುಪಡಿಸಿ ಹೊರಗಿನ ಮೈದಾನದಲ್ಲಿ ಸತತವಾಗಿ ಗೆಲುವು ಸಾಧಿಸಿದ್ದು ಮತ್ತೊಂದು ದಾಖಲೆ ನಿರ್ಮಿಸಿದೆ. ಹೌದು ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು…

Read More

ಬೆಂಗಳೂರು : ನಿನ್ನೆ ರಾತ್ರಿ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್‌ಸಿಬಿ ಇದೀಗ ಚೊಚ್ಚಲ ಕಪ್ ಗೆದ್ದು ಬೀಗಿದೆ. ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ. ಹೌದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್ ಬಸ್ ನಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಆರ್‌ಸಿಬಿ ರ‍್ಯಾಲಿ ನಡೆಸಲಾಗುತ್ತೆ. ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ಅವರಿಗೆ ಆರ್‌ಸಿಬಿ ಬಾಯ್ಸ್ ರ‍್ಯಾಲಿ ನಡೆಸಲಿದ್ದಾರೆ. ಇಂದು ಸಂಜೆ 3.30ಕ್ಕೆ ವಿಜಯಯಾತ್ರೆಗೆ ಪ್ಲಾನ್ ಕೂಡ ಮಾಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Read More