Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಪ್ರತಿ ಪ್ಯಾಕೆಟ್ನ ಬೆಲೆ ರೂ.2 ಏರಿಕೆಯಾಗಲಿದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಹೌದು ಹೊಸ ಹಾಲಿನ ಪ್ಯಾಕೆಟ್ ನಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಗುಲಿದೆ. ಆದರೆ ರಾತ್ರಿ ಬಂದಿರುವಂತಹ ಸ್ಟಾಕ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಸದ್ಯ ಹಳೆಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮಧ್ಯಾಹ್ನದ ನಂತರ ಹೊಸ ದರದಲ್ಲಿ ಹಾಲು ಮಾರಾಟ ಮಾಡಲಾಗುತ್ತದೆ. ಮಧ್ಯಾಹ್ನದಿಂದ ನಂದಿನಿ ಹಾಲಿನ ದರ ಹೆಚ್ಚಾಗಲಿದೆ ಹಾಗಾಗಿ ಸದ್ಯ ಸಾಮಾನ್ಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇವಾಗ ಇರುವುದು ರಾತ್ರಿ ಬಂದಿರುವ ಸ್ಟಾಕ್ ಒಂದು ಲೀಟರ್ ಒಂದು ಪ್ಯಾಕೆಟ್ ತಗೊಂಡ್ರೆ 2 ರೂಪಾಯಿ ಜಾಸ್ತಿ ಆಗುತ್ತದೆ ಅರ್ಧ ಲೀಟರ್ 2 ಪ್ಯಾಕೆಟ್ ತಗೊಂಡ್ರೆ 4 ರೂಪಾಯಿ ಜಾಸ್ತಿ ಆಗುತ್ತದೆ. ಪ್ಯಾಕೆಟ್ ಮೇಲೆ 2 ರೂಪಾಯಿ ಜಾಸ್ತಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ…

Read More

ಮೈಸೂರು : ಸಿಎಂ ಬೆಂಗಾವಲು ವಾಹನಕ್ಕೆ ಬೈಕ್ ಸವಾರನಿಂದ ಅಡಚಣೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಬರಳ್ಳಿ ನಿವಾಸಿ ಶಿವು ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೂನ್. 23 ರಂದು ಏರ್ಪೋರ್ಟ್ನಿಂದ ನಜರಾಬಾದ್ಗೆ ಸಿಎಂ ಸಿದ್ದರಾಮಯ್ಯನವರು ಹೊರಟಿದ್ದರು. ಮೈಸೂರು ನಂಜನಗೂಡು ಹೆದ್ದಾರಿಯಲ್ಲಿ ಈ ವೇಳೆ ಬ್ಯಾರಿಕೆಡ್ ಅಳವಡಿಕೆ ಮಾಡಲಾಗಿತ್ತು. ಪೊಲೀಸರು ಸೂಚಿಸಿದ್ದರು ಕೂಡ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ. ಸಿಎಂ ಬರುತ್ತಿದ್ದ ಮಾರ್ಗದಲ್ಲಿ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ. ಈ ವೇಳೆ ಬೈಕ್ ಸವಾರ ಶಿವುನನ್ನು ತಡೆಯಲು ಮುಂದಾದ ಪೊಲೀಸರಿಗೆ ಆರೋಪಿ ಶಿವು ಡಿಕ್ಕಿ ಹೊಡೆದಿದ್ದಾನೆ. ನಂತರ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಶಿವುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇದೀಗ ಶಿವು ವಿರುದ್ಧ FIR ದಾಖಲಾಗಿದೆ.

Read More

ಬೆಂಗಳೂರು : ಪೆಟ್ರೋಲ್ ಡೀಸೆಲ್ ಹಾಗೂ ಹಾಲಿನ ದರ ಏರಿಕೆಯಾದ ಬಳಿಕ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಾಳವಾಗಿದ್ದರಿಂದ ಆಟೋ ಪ್ರಯಾಣ ದರ ಪರಿಷ್ಕರಣೆಗೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದು, ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ. ಹೌದು ಈ ಕುರಿತು ಪ್ರತಿಕ್ರಿಯಿಸಿರುವ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜು ನಾಥ್, 2021ರ ಡಿಸೆಂಬರ್20ರಿಂದ ಆಟೋ ಪ್ರಯಾಣ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಈ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸು ವಂತೆ ಒತ್ತಾಯಿಸಿವೆ. ಸದ್ಯ ಕನಿಷ್ಠ ಆರಂಭದ 2 ಕಿ.ಮೀ. ಪ್ರಯಾಣ ರೂ.30 ಇದ್ದು, ಅದನ್ನು ರೂ.40ಕ್ಕೆ ಹೆಚ್ಚಿಸಬೇಕು. ಪ್ರತಿ 2 ಕಿ. ಮೀ. ನಂತರದ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಂಡಿಲ್ಲ. ಬಿಡಿ ಭಾಗಗಳು,…

Read More

ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲುವಾಸ ಅನುಭವಿಸುತ್ತಿರುವ ಎಂಎಲ್ಸಿ ಸೂರಜ್ ರೆಮಣೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮ ದೌರ್ಜನ್ಯಕ್ಕೆ ಸಂಬಂಧಿಸಿ ದಂತೆ ಈಗ 2ನೇ ದೂರು ದಾಖಲಾಗಿದೆ. ಅವರ ಆಪ್ತನೇ ತನ್ನ ಮೇಲೆ ಮೂರು ವರ್ಷದಿಂದ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಸಲಿಂಗಕಾಮ ಪ್ರಕರಣದಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಪರವಾಗಿ ಜೂ.21 ರಂದು ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾ‌ರ್ ಈಗ ಉಲ್ಟಾ ಹೊಡೆದಿದ್ದಾರೆ. ಸೂರಜ್‌ರಿಂದ ತನ್ನ ಮೇಲೂ 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ದೂರುದಾರನ ವಿರುದ್ಧ ದೂರು ನೀಡಲು ನನಗೆ ಒತ್ತಡ ವಿತ್ತು. ಸೂರಜ್ ಒತ್ತಡಕ್ಕೆ ಮಣಿದು ಅಂದು ದೂರು ನೀಡಿದ್ದೆ. ನನಗೆ ಬೆದರಿಕೆ ಹಾಕಿ ದೂರು ಕೊಡಿಸಿದ್ದರು. 3 ವರ್ಷಗಳ ಹಿಂದೆ ಗನ್ನಿಕಡ ತೋಟದ ಮನೆಯಲ್ಲಿ…

Read More

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ರಾಹುಲ್ ಗಾಂಧಿಯವರಿಗೆ ಅಭಿನಂದಿಸಿದ್ದಾರೆ. ಟ್ವೀಟ್ ನಲ್ಲಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ. ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. https://twitter.com/siddaramaiah/status/1805651630773485714?t=VWc9puT90BE5SGmX4QXrNg&s=19

Read More

ಬೆಂಗಳೂರು : ಜ್ಯುವೆಲರಿ ಶಾಪ್ ಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ. ಹೌದು ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ. ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕುತ್ತಿದ್ದ, ಮತ್ತೊಬ್ಬ ಚಿನ್ನಭಾರಣವನ್ನು ಚೀಲಕ್ಕೆ ತುಂಬಿಕೊಳ್ಳುತ್ತಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್ ನಲ್ಲಿ ಕಾಯುತ್ತಿದ್ದ. ಹಾಗಾಗಿ ಇದು ಮೊದಲೇ ಪ್ಲಾನ್ ಮಾಡಿ ದರೋಡೆ ಮಾಡಿದಂತಿದೆ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂ ಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಒಂದು ಕಳ್ಳರ ಕೃತ್ಯ ಸಿಸಿ…

Read More

ಉತ್ತರಕನ್ನಡ : ತನ್ನ ಮದುವೆಯಾಗಿಲ್ಲ ಎಂದು ಮಾನಸಿಕವಾಗಿ ಮನನೊಂದಿದ್ದ ಯುವಕನೊಬ್ಬ ತಾನು ಮಲಗುವ ಕೋಣೆಯಲ್ಲಿ ನೇಣು ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಸ್ತೂರಬಾ ನಗರದಲ್ಲಿ ನಡೆದಿದೆ. ಕಸ್ತೂರಬಾನಗರದ ಇಬ್ರಾಹಿಂ ಬಾಷಾಸಾಬ ಮಲ್ಲಕ್ಕನವರ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು, ಈತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದ ಆದರೆ ಆಕೆಗೆ ತನ್ನ ಗಂಡನಿಂದ ವಿಚ್ಛೇದನ ದೊರೆಯಲು ವಿಳಂಬವಾಗಿದ್ದರಿಂದ, ಮಹಿಳೆ ಜೊತೆ ತನ್ನ ವಿವಾಹ ಆಗುವುದಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ತಕ್ಷಣ ಕುಟುಂಬಸ್ಥರು ಆತನನ್ನು ಚಿಕಿತ್ಸೆಗೆ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತಂತೆ ತಾಯಿ ಸಾಹೀರಬಾನು ಬಾಷಾಸಾಬ ಮಲ್ಲಕ್ಕನವರ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಬೆಂಗಳೂರು : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಆಹಾರ ನಿಗಮದಲ್ಲಿ ಸಚಿವ ಕೆಹೆಚ್. ಮುನಿಯಪ್ಪ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ಸಭೆಯಲ್ಲಿ ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಇಲಾಖೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಕಳೆದ ಐದು ವರ್ಷಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿ ಪಡಿತರ ದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಇತ್ಯಾದಿ ಧಾನ್ಯಗಳ ಗುಣಮಟ್ಟ ಇರುವಂತೆ ಎಚ್ಚರವಿರಬೇಕು.ಗೌಡನ್ ಗಳಲ್ಲಿ ಸುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು ಈ ಸಂದರ್ಭದಲ್ಲಿ ಸರ್ಕಾರದ…

Read More

ಕಲಬುರ್ಗಿ : ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಇಒ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕ ಪಂಚಾಯತ್ ನಲ್ಲಿ ನಡೆದಿದೆ. ಹೌದು ತಾಲೂಕು ಪಂಚಾಯತಿ ಇಒ ಮಹಾಂತೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, 20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗಿಬಿದ್ದಿದ್ದಾನೆ. 20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಒ, ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು ತಾಲೂಕಿನ ಬಳ್ಳಿ ಗ್ರಾಮದ ನಬಿ ಲಾಲನಿಂದ ಲಂಚ ಸ್ವೀಕರಿಸುತ್ತಿದ್ದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ ಪಿ ಜಾನ್ ಆಂಟನಿ ನೇತ್ರತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.

Read More

ಬೆಂಗಳೂರು : ನಿಗಮ-ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ತಿಂಗಳೊಳಗೆ ಪಟ್ಟಿ ಸಿದ್ದಪಡಿಸಿ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟೂವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು. ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡ ಬೇಕು ಎಂಬ ಒತ್ತಾಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಬಗ್ಗೆ ನಾನು ಏನೂ ಹೇಳಲು ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಎಲ್ಲವು ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

Read More