Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಪವಿತ್ರ ಗೌಡಗೆ ಮೆಸೇಜ್ ಮಾಡಿರುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಜೂನ್ 9ರಂದು ನಟ ದರ್ಶನ ಆರ್ ಆರ್ ನಗರದ ಪಟ್ಟಣಗೆರೆ ಷಡ್ ಗೆ ಎಂಟ್ರಿ ಆಗಿರುವ ದೃಶ್ಯ ಇದೀಗ ವೈರಲ್ ಆಗಿದೆ. ಹೌದು ಜೂನ್ 9ರಂದು ಷಡ್ ಗೆ ಎಂಟ್ರಿಯಾಗಿರುವ ದರ್ಶನ್ ದರ್ಶನ್ ಶೆಡ್ಗೆ ಎಂಟ್ರಿ ಆಗಿರುವ ದೃಶ್ಯ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ದರ್ಶನ್ ಶೆಡ್ಡಿಗೆ ಎಂಟ್ರಿ ಆಗಿರುವ ದೃಶ್ಯ ಆರ್ ಆರ್ ನಗರ ಪಟ್ಟಣಗೆರೆಯ ಒಂದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಮೊದಲು ಸ್ಕಾರ್ಪಿಯೋದಲ್ಲಿ ವಿನಯ್ ಶಡ್ಡಿಗೆ ಎಂಟ್ರಿ ಕೊಟ್ಟಿದ್ದಾನೆ. ಸ್ಕಾರ್ಪಿಯೋ ಬೆನ್ನಲ್ಲೇ ನಟ ದರ್ಶನ್ ಅವರು ಥಾರ್ ಕಾರಲ್ಲಿ ಮಧ್ಯರಾತ್ರಿ 3.30ಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ದಕ್ಷಿಣಕನ್ನಡ : ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನದಂದು ಮಂಗಳೂರಿನ ಬೋಳಿಯಾರು ನಲ್ಲಿ ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಎಸ್ಪಿ ಅನುಪಮ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ 20 ಜನರನ್ನು ವಶಕ್ಕೆ ಪಡೆದಿದ್ದವು. ಚಾಕು ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದರು. ಮೆರವಣಿಗೆಯ ಬಳಿಕ ಮಸೀದಿಯ ಮುಂದೆ ಮೂವರು ಘೋಷಣೆ ಕೂಗಿದ್ದಾರೆ. ನಂತರ ಘೋಷಣೆ ಕೂಗಿದ್ದವರ ಮೇಲೆ ಹಲ್ಲೆ ನಡೆದಿದೆ. ಆರೋಪಿಯಲ್ಲಿ ಒಬ್ಬ ರೌಡಿಶೀಟರ್ ಇದ್ದ ಆತ ಚೂರಿ ಇಟ್ಟುಕೊಂಡಿದ್ದ. ಭಾರತ್ ಮಾತಾ ಕೀ ಜಯ್ ಎನ್ನುವ ಮುನ್ನ ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದ ಮೊದಲು ಬೇರೆ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳಿಗೆ ರಾಜಕಾರಣಿಗಳಿಂದ ಹಾಗೂ ಸ್ಯಾಂಡಲ್ ವುಡ್ ಹಿರಿಯರಿಂದ ದರ್ಶನನ್ನು ಬಂಧಿಸಬೇಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ರಾತ್ರಿಯಿಂದಲೇ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಜಾಸ್ತಿಯಾಗಿದೆಯಂತೆ, ಪೊಲೀಸ್ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಸ್ಯಾಂಡಲ್ ವುಡ್ ನ ಹಿರಿಯರಿಂದಲೂ ಬಂಧಿಸಿದಂತೆ ಒತ್ತಡ ಕೇಳಿಬಂದಿದೆ. ದರ್ಶನ್ ರನ್ನು ಆರೋಪಿ ಬದಲು ಸಾಕ್ಷಿಯನ್ನಾಗಿ ಮಾಡಿ ಎಂದು ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಪೊಲೀಸ್ ಫೈಲ್ ನಲ್ಲಿ ದರ್ಶನ್ ಪ್ರಮುಖ ಪಾತ್ರ ಎಂದು ಉಲ್ಲೇಖಿಸಿಲ್ಲಾಗಿದ್ದು, ದರ್ಶನ್ ಬಂಧಿಸಿದಂತೆ ಇದೀಗ ರಾಜಕಾರಣಿಗಳಿಂದ ಒತ್ತಡ ಕೇಳಿಬಂದಿದೆ.
ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನ ಕೆಲವೇ ಹೊತ್ತಲ್ಲಿ ಬೆಂಗಳೂರಿನ 24ನೆ ACMM ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಮೊದಲು ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇನ್ನೇನು ಕೆಲವೇ ಹೊತ್ತಲ್ಲಿ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಆರೋಪಿಗಳಿಗೆ ವೈದ್ಯರು ವೈದ್ಯಕೀಯ ತಪಾಸಣೆ ಮಾಡಿ ತೆರಳಿದ್ದಾರೆ. ದರ್ಶನ್, ಪವಿತ್ರ ಗೌಡ ಸೇರಿ 13 ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪೊಲೀಸರು ವೈದ್ಯರನ್ನು ಕರೆಸಿಕೊಂಡಿದ್ದರು. ಈ ವೇಳೆ ಠಾಣೆಗೆ ಬಂದಿದ್ದ ವೈದ್ಯರು ಎಲ್ಲಾ ಆರೋಪಿಗಳ ವೇದಿಕೆ ಪರೀಕ್ಷೆ ಮಾಡಿ ವಾಪಸ್ ತೆರಳಿದ್ದಾರೆ. ಕೆಲವೇ…
ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು ಪವಿತ್ರ ಗೌಡರ ನೋ ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇಂದು ಸಂಜೆ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು…
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ರೇಣುಕಾ ಸ್ವಾಮಿಯ ಕೊಲೆಯ ನಂತರ ಆತನ ಮೃತ ದೇಹವನ್ನು ಶಿಫ್ಟ್ ಮಾಡಿದ್ದೆ ರೋಚಕವಾಗಿದೆ. ವಿನಯ್ ಶೆಡ್ ನಲ್ಲಿ ರೇಣುಕಾ ಸ್ವಾಮಿಯ ಮರ್ಡರ್ ಮಾಡಲಾಗಿತ್ತು. ನಂತರ ಶೆಡ್ ನಿಂದ ಆಟೋದಲ್ಲಿ ರೇಣುಕಾ ಸ್ವಾಮಿ ಮೃತ ದೇಹವನ್ನು ಗ್ಯಾಂಗ್ ಸಾಗಿಸಿತ್ತು. ಬಡ್ಡಿ ಕಟ್ಟದೇ ಇದ್ದಿದ್ದಕ್ಕೆ ವಿನಯ್ ಆಟೋ ಒಂದನ್ನು ವಶಕ್ಕೆ ಪಡೆದಿದ್ದ ಎನ್ನಲಾಗಿದೆ. ಅದೇ ಆಟೋದಲ್ಲಿ ರೇಣುಕಾ ಸ್ವಾಮಿಯ ಮೃತದೇಹವನ್ನು ಈ ಗ್ಯಾಂಗ್ ಸಾಗಿಸಿತ್ತು. ಬಳಿಕ ರೇಣುಕಾ ಸ್ವಾಮಿ ಶವವನ್ನು ಸ್ಕಾರ್ಪಿಯೋ ಕಾರಿಗೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಅಲ್ಲಿಂದ ರೇಣುಕಾ ಸ್ವಾಮಿ ಶವವನ್ನು ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಮೃತದೇಹವನ್ನು ಮೊದಲಿಗೆ…
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ಬೆಲ್ಟ್ ನಿಂದ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನನ್ನ ಗೆಳತಿಗೆ ಕೆಟ್ಟದಾಗಿ ಮೆಸೇಜ್ ಮಾಡ್ತೀಯಾ ಅಂದ್ರು ಪಟ್ಟಿ ಮಾದರಿಯ ವಸ್ತುವಿನಿಂದ ಹಲ್ಲೆ ನಡೆಸಿದ್ದರು. ಎಂದು ವಿಚಾರಣೆಯ ವೇಳೆ ಮಾಹಿತಿ ಸಿಕ್ಕಿದೆ. ಹತ್ಯೆಯ ಬಳಿಕ ದರ್ಶನಗೆ ಆಪ್ತರು ಮಾಹಿತಿ ನೀಡಿದ್ದು, ರೇಣುಕಾಸ್ವಾಮಿಯನ್ನ ಗೋಡೆಗೆ ಎತ್ತಿ ಎತ್ತಿ ಬಿಸಾಕಿದ್ದಾರಂತೆ ಎಂದು ತನಿಖೆಯ ವೇಳೆ ಬಹಿರಂವಾಗಿದೆ. ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು…
ತುಮಕೂರು : ಬೇಲಿಯೇ ಎದ್ದು ಹೊಲ ಮೆಯ್ದಂತೆ ಎಂಬ ಗಾದೆಯಂತೆ, ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿ ಒದ್ದು ಒಳಗೆ ಹಾಕಬೇಕಿರುವ ಪೊಲೀಸರೇ ಇದೀಗ ಪೊಲೀಸ್ ಇಲಾಖೆಯ ಮಾಹಿತಿಯನ್ನು ಕ್ರಿಮಿನಲ್ ಗಳಿಗೆ ರವಾನಿಸಿದ ಆರೋಪದ ಮೇರೆಗೆ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೌದು ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್ಪಿ ಕಚೇರಿಯ ಸುರೇಶ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತುಮಕೂರು ಎಸ್ಪಿ ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇವರು ಕ್ರಿಮಿನಲ್ಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹಮೂರ್ತಿ ಎಂಬವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್…
ಚಾಮರಾಜನಗರ : ಕಳೆದ ಜೂ.8 ರಂದು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯಕ್ತಿಯೊಬ್ಬನಿಂದ ಈ ಕುಟುಂಬದ ಅಪ್ರಾಪ್ತೆಯೊಬ್ಬಳು ಲೈಂಗಿಕ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಳು. ಆದರೆ, ಆ ಕುಟುಂಬ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಅದನ್ನು ನಿರ್ಲಕ್ಷಿಸಿದ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ಅದೇ ಕಾರಣಕ್ಕೆ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಮುಂದಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕರ್ತವ್ಯ ಲೋಪ ವಹಿಸಿದ ಆರೋಪ ಮೇರೆಗೆ ಕೆಆರ್ ನಗರ ಠಾಣೆಯ ಇನ್ಸ್ಪೆಕ್ಟರ್ ಪಿ ಪಿ ಸಂತೋಷ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಅಮಾನತು ಶಿಕ್ಷೆ ವಿಧಿಸಿದೆ. ಜಿಲ್ಲಾ ಹೆಚ್ಚುವರಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಬಿ.ನಾಗೇಂದ್ರ A2, ನಿಗಮದ ಅಧ್ಯಕ್ಷ A3 ಆರೋಪಿಗಳಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರವಾದ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಕಸದ…













