Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ನೆಲಮಂಗಲದ ರೌಡಿಶೀಟರ್ ಆಟೋ ನಾಗನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ರೌಡಿಶೀಟರ್ ಆಟೋ ನಾಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಲಗ್ಗೆರೆ ಮತ್ತು ಹುಲಿಯೂರು ದುರ್ಘಟ್ಟ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಆಟೋ ನಾಗ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಕರ್ನಾಟಕ ಮತ್ತು ಗೋವಾ ಗಡಿ ಭಾಗದಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ಆಡಿಯೋ ಲಭ್ಯವಾಗಿದೆ. ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಆರೋಪಿಗಳು ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆರೋಪಿಗಳಾದ ವಿರಾಟ್ ಮತ್ತು ಜಯೆಶ್ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್ ಆಗಿದೆ. ಇಬ್ಬರು ಮಾತನಾಡಿದ್ದಾರೆ ಆಶ್ರಮ ಒಂದರಲ್ಲಿ ಎರಡು ಸಾವಿರ ಹಣ ಬದಲಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಅಹಮದಾಬಾದ್ ನ ಆಶ್ರಮ ಒಂದರಲ್ಲಿ ಡೀಲ್ ಕುರಿತು ಮಾತು ಆಡಿದ್ದಾರೆ. ಉದ್ಯಮಿ ಕಿಶೋರ್ ಬಳಿ ಹಣ ಇರುವ ಕುರಿತು ಮಾತುಕತೆ ನಡೆದಿರುವ ಆಡಿಯೋ ವೈರಲ್ ಆಗಿದೆ. ಉದ್ಯಮಿ ಕಿಶೋರ್ ಮತ್ತು ಆರೋಪಿ ಜಯೇಶ್ ಆಡಿಯೋ ವೈರಲಾಗಿದೆ ಹಣ ಸಾಗಣೆ ಮತ್ತು ಹಣ ದರೋಡೆಯಾಗಿರುವ ಕುರಿತು ಚರ್ಚಿಸಿದ್ದು ಹಣ ಸಾಗಾಟದ ಜವಾಬ್ದಾರಿಯನ್ನು ಆರೋಪಿ ವಿರಾಟ್ ಹೊತ್ತುಕೊಂಡಿದ್ದ. ವಿರಾಟ್ ಹುಡುಗರ ಮೂಲಕ ಹಣ ಸಾಗಿಸಲು ಹೇಳಲಾಗಿತ್ತು ಈಗ ವಿರಾಟ್ ಗ್ಯಾಂಗಿನ…

Read More

ಬೆಂಗಳೂರು : ಜೆಡಿಎಸ್ ಅಧಿಕಾರಕ್ಕೆ ಬರಲ್ಲಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ವಿಚಾರವಾಗಿ 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಬೈರಮಂಗಲದಲ್ಲಿ ಮಾತನಾಡಿದ ಅವರು, 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? ಸಿದ್ದರಾಮಯ್ಯನವರೇ ನಮ್ಮ ಮನೆಗೆ ಹುಡುಕಿಕೊಂಡು ಬಂದಿದ್ದರು. 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತದೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಹಾಗೆ ತೆಗೆದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ…

Read More

ಬೆಂಗಳೂರು : ರಾಜ್ಯದಲ್ಲಿ ಎಂದಿಗೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಭೈರಮಂಗಲದಲ್ಲಿ ಮಾತನಾಡಿದ ಅವರು ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ ಆಗುವುದು ಮುಖ್ಯ ಅಲ್ಲ ರಾಜ್ಯದಲ್ಲಿ ಜನತಾ ಸರ್ಕಾರ ಬರಬೇಕು ಅನ್ನುವುದು ನನ್ನ ಹೋರಾಟ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. 2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ. 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು…

Read More

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಇದೀಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾನ್ಸ್ಟೇಬಲ್ ಅನ್ನು ಅರೆಸ್ಟ್ ಮಾಡಲಾಗಿದೆ. ಆರ್.ಟಿ.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಯಮುನಾ ನಾಯಕ್‌ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಫ್ರೀಡಂ ಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮುನಾ ನಾಯಕ್, ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಪಿಯುಸಿ ವಿದ್ಯಾರ್ಥಿಯೋರ್ವ ಆರೋಪಿಸಿದ್ದಾನೆ. ಈ ಸಂಬಂಧ ನೊಂದ ವಿದ್ಯಾರ್ಥಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಯಮುನಾ ನಾಯಕ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಮೈಸೂರು : ಫೆ. 2 ರಿಂದ ಬಜೆಟ್​ ತಯಾರಿ ಅಧಿಕೃತ ಸಭೆ ಆರಂಭ ಮಾಡುತ್ತೇನೆ. ಈಗಾಗಲೇ ತಯಾರಿ ಪ್ರಕ್ರಿಯೆ ನಡೆದಿದೆ. ಅಧಿಕೃತ ಸಭೆಗಳನ್ನು ಫೆ.2 ರಿಂದ ಶುರು ಮಾಡುತ್ತೇನೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಕ್ತ ವಾತಾವರಣ ಇದೆ. ಹೀಗಾಗಿ ಹೆಚ್ಚಿನ ಬಂಡವಾಳ ಹೂಡಿಕೆ ಆಗುತ್ತಿದೆ. ಡಾಲರ್ಸ್​ನ ಸಮಾವೇಶದಲ್ಲೂ ಕೂಡ ಈ ವಿಚಾರದಲ್ಲಿ ಮಹತ್ವದ ಚರ್ಚೆಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರ ವಿಚಾರವಾಗಿ ಮಾತನಾಡಿದ ಸಿಎಂ, ರಾಜ್ಯಪಾಲರು ರಾಷ್ಟ್ರಪತಿಗಳಿಗೆ ನಡೆದ ಘಟನೆ ಬಗ್ಗೆ ವಿವರಣೆ ಕೊಟ್ಟಿದ್ದಾರೆ, ಕೊಡಲಿ ಬಿಡಿ. ಅವತ್ತು ಏನೇನು ನಡೆಯಿತು ಎಂಬುದನ್ನು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ವಿವರಿಸಬಹುದು. ನಾವೇನೂ ವಿವರಣೆ ಕೊಡುವುದಿಲ್ಲ. ನಾಳೆ ಗಣರಾಜ್ಯೋತ್ಸವದಲ್ಲೂ ರಾಜ್ಯಪಾಲರು ಭಾಷಣ ಮಾಡಬೇಕಿದೆ. ನಾವು ಬರೆದು ಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವದ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ ಎಂದರು. ಹೆಚ್.ಡಿ. ರೇವಣ್ಣ ಬಂಧಿಸಿದ ಪ್ರಕರಣ ವಿಚಾರವಾಗಿ ಮಾತನಾಡಿ ಪ್ರತಿಕ್ರಿಯಿಸಿದ ಸಿಎಂ, ನಾವು ಯಾವತ್ತೂ ಯಾರ ಪ್ರಕರಣದಲ್ಲಿಯೂ ತಲೆ ಹಾಕುವುದಿಲ್ಲ. ಕಾನೂನಿನ ಪ್ರಕಾರ…

Read More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣದ ಆರೋಪಿ ರಾಜೀವ್ ಗೌಡ ಬಂಧನ ವಿಳಂಬಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಸಚಿವರು ಆರೋಪಿಯ ಶೀಘ್ರ ಬಂಧನದ ಭರವಸೆ ನೀಡಿದ್ದು, ಕಳೆದ ಕೆಲ ದಿನಗಳಿಂದ ರಾಜೀವ್​​ ಮಂಗಳೂರಿನಲ್ಲಿದ್ದ ಬಗ್ಗೆ ಮಾಹಿತಿ ದೊರೆತಿದೆ. ಆದರೆ ಆತ ಈಗ ಅಲ್ಲಿಂದಲೂ ಎಸ್ಕೇಪ್​​ ಆಗಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ರಾಜೀವ್​​ ಗೌಡ ಮಂಗಳೂರಿನಿಂದ ಬೆಂಗಳೂರಿನಲ್ಲಿರುವ ಸಹೋದರಿಗೆ ಕರೆ ಮಾಡಿದ್ದ. ಕಳೆದ 3 ದಿನಗಳಿಂದ ರಾಜೀವ್ ಗೌಡ ಮಂಗಳೂರಲ್ಲಿದ್ದ…

Read More

ರಾಮನಗರ : 2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ರಾಮನಗರದಲ್ಲಿ ಮಾತನಾಡಿದ ಅವರು, 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಾನು ಡಿಸಿಎಂ ಡಿಕೆ ಶಿವಕುಮಾರ್ ರೀತಿ ಕಲ್ಲು ಬಂಡೆ ಒಡೆದು ಬಂದಿಲ್ಲ. ನಾನು ಮನಸ್ಸು ಮಾಡಿದರೆ ಅವರಪ್ಪನ ರೀತಿ ಮಾಡುತ್ತಿದ್ದೆ ನಿಮ್ಮ ಒಂದಿಂಚು ಭೂಮಿ ತೆಗೆದುಕೊಳ್ಳಲು ನಾನು ಬಿಡಲ್ಲ ನನಗೆ ಬೇಕಿರುವುದು ಜನಗಳ ಪ್ರೀತಿ ಎಂದು ರಾಮನಗರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ನಡೆದಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ತಿಳಿದುಬಂದಿದೆ. ಪ್ರತಿಮಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರೋ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರತಿಮಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಗಲಾಟೆಯಾಗಿ ಪತಿ ಬಾಬು ಕೊಲೆ ಮಾಡಿದ್ದಾನೆ ಎಂದು ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರತಿಮಾ ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಸದನದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಆರೋಪದ ವಿಚಾರವಾಗಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಘಟನೆ ಯ ಬಗ್ಗೆ ವಿವರಣೆ ನೀಡಿದ್ದಾರೆ. ಕೊಡಲಿ ಬಿಡಿ ಅಂದು ಏನು ನಡೆಯಿತು ಎಂಬುದರ ಬಗ್ಗೆ ವಿವರಿಸಬಹುದು, ರಾಷ್ಟ್ರಪತಿಗಳಿಗೆ ರಾಜ್ಯಪಾಲರು ವಿವರಣೆ ನೀಡಬಹುದು ನಾವೇನು ಈ ಬಗ್ಗೆ ವಿವರಣೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾಳೆ ಗಣರಾಜ್ಯೋತ್ಸವದಲ್ಲೂ ರಾಜ್ಯಪಾಲರು ಭಾಷಣ ಮಾಡಬೇಕಿದೆ ನಾವು ಬರೆದುಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಬಹುದು. ರಾಜ್ಯಪಾಲರು ನಾಳೆ ಏನು ಮಾಡುತ್ತಾರೋ ನಮಗೆ ಗೊತ್ತಿಲ್ಲ. ಜಂಟಿ ಅಧಿವೇಶನದಲ್ಲಿ ಮಾತ್ರ ಸರ್ಕಾರದ ಭಾಷಣ ಓದುವ ನಿಯಮವಿದೆ. ಸರ್ಕಾರ ಬರೆದುಕೊಟ್ಟ ಭಾಷಣ ಓದಬೇಕು ಅನು ನಿಯಮ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವ ಎಚ್ ಡಿ ರೇವಣ್ಣ ಬಂಧನ ಪ್ರಕರಣದ ವಿಚಾರವಾಗಿ ನಾವು ಯಾವತ್ತೂ ಯಾರ ಪ್ರಕರಣದಲ್ಲೂ ತಲೆಹಾಕುವುದಿಲ್ಲ ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಸುಮ್ಮನೆ…

Read More