Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮನೆ ಕೆಲಸದವಳ ಮೇಲೆ ಅತ್ಯಾಚಾರ ಆರೋಪದಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ, ಸೂಕ್ತ ಆಧಾರಗಳು ಇಲ್ಲವಾಗಿವೆ ಎಂದು ತಿಳಿಸಿದರು. ವಿಚಾರಣೆ ವೇಳೆ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಸಾಕ್ಷಿಗಳು ನೀಡಿರುವ ಹೇಳಿಕೆಗಳು ಗೊಂದಲಮಯವಾಗಿದ್ದು, ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಿರುವ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ ಸೂಕ್ತ ಆಧಾರಗಳು ಇಲ್ಲವಾಗಿವೆ. ಹಾಲಿ ಪ್ರಕರಣದಲ್ಲಿ ಸಾಕ್ಷಿಗಳ ನಡುವೆ ಹೊಂದಾಣಿಕೆ ಇಲ್ಲ. ಅರ್ಜಿದಾರರ ವಿರುದ್ಧ ಆರೋಪ ಸಾಬೀತಾಗುವಂತಹ ಯಾವುದೇ ಪುರಾವೆಗಳಿಲ್ಲ. ವಿದ್ಯುನ್ಮಾನ, ವೈದ್ಯಕೀಯ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಆಕ್ಷೇಪಿತ ವಿಡಿಯೊಗಳು ವಿಶ್ವಾಸಾರ್ಹವಾಗಿಲ್ಲ ಎಂದು ಪೀಠಕ್ಕೆ ಹೇಳಿದರು. ಆಗಸ್ಟ್ 1ರಂದು ಪ್ರಜ್ವಲ್ರನ್ನು ದೋಷಿ ಎಂದು…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೇವಲ ಹಾರ್ನ್ ಮಾಡಿದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಹಣ ವ್ಯಾಪ್ತಿಯಲ್ಲಿ ನಡೆದಿದೆ. ಸಾಫ್ಟ್ವೇರ್ ಇಂಜಿನಿಯರ್ ನಿಂದ ಕೊಲೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬೈಕಿಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಸಾಫ್ಟ್ವೇರ್ ಇಂಜಿನಿಯರ್ ಸುಕೃತ್ ಕೇಶವನಿಂದ ಈ ಒಂದು ಕೃತ್ಯ ನಡೆದಿದೆ. ಸುಕೃತ್ ಬೈಕಿಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 26ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ : ಸೈಬರ್ ಅಪರಾಧ ಲೋಕದ ಅತಿ ದೊಡ್ಡ ಸ್ಟೋರಿಗೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ ಎರಡು ತಿಂಗಳಲ್ಲಿ ಸೈಬರ್ ವಂಚಕನ ಅಕೌಂಟ್ ನಲ್ಲಿ 150 ಕೋಟಿ ರೂಪಾಯಿ ವಹಿವಾಟ ಸಂಬಂಧ ಗುಜರಾತಿನ ಅಹಮದಾಬಾದ್ ಮೂಲದ ಸಂಜಯ್ ಕುಂಟ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ವಿಚಾರಣೆಯ ವೇಳೆ ಕರೆಂಟ್ ಅಕೌಂಟ್ ಗಳ ಮಾರಾಟ ದಂಧೆ ಬಯಲಾಗಿದೆ. ದಾವಣಗೆರೆಯ ಪ್ರಮೋದ್ ಎಂಬಾತ ಸೈಬರ್ ವಂಚಕರಿಂದ 52 ಲಕ್ಷ ರೂ. ಕಳೆದು ಕೊಂಡಿದ್ದೇನೆಂದು ಆ.29 ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದ ದಾವಣಗೆರೆ ಸೆನ್ ಪೊಲೀಸರಿಗೆ ಬಗೆದಷ್ಟು ಸ್ಪೋಟಕ ಮಾಹಿತಿ ಸಿಗುತ್ತಿದೆ. ಈಗ ದೂರು ಕೊಟ್ಟ ಪ್ರಮೋದ್ ಸಹ ಸೈಬರ್ ವಂಚನೆಯ ಗ್ಯಾಂಗ್ ಸದಸ್ಯ ಎಂಬುದು ಗೊತ್ತಾಗಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಅಲ್ಲದೇ ಸಂಜಯ್ ವಿಚಾರಣೆ ವೇಳೆ ಕರೆಂಟ್ ಅಕೌಂಟ್ ಗಳ ಮಾರಾಟ ದಂಧೆ ಬದಲಾಗಿದ್ದು, ಉದ್ಯಮ ಇಲ್ಲದಿದ್ದರೂ ಬ್ಯಾಂಕ್ ಸೊಸೈಟಿಗಳಲ್ಲಿ ಕರೆಂಟ್…
ಬೆಂಗಳೂರು : ಜಿಬಿಎ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆ ಏಳು ವರ್ಷದ ಅವಧಿಗೆ 46 ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಗಳು ಈ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಕಸಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲಾಗಿದೆ 613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಇನ್ನು ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ ಮುಂದಿನ ಹೆಜ್ಜೆ ಇಡುವುದಕ್ಕಾಗಿ ತೋರಿಸಿದಂತಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪುಟ ಅಭಿನಂದನೆ ಸಲ್ಲಿಸಿತು ಎಂದು ಸಚಿವ ಪಾಟೀಲ್ ತಿಳಿಸಿದರು. 3 ನಮ್ ಪುಟ್ಟ ಉಪ ಸಮಿತಿಗಳು ಆರು ತಿಂಗಳು ಆದರೂ ವರದಿ ಸಲ್ಲಿಸಲಿಲ್ಲ ಆದಷ್ಟು ಬೇಗ…
ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅಶೋಕಪುರಂ ನಿವಾಸಿ ಚಂದ್ರಿಕಾ (21) ಬಂಧಿತ ಯುವತಿ. ಅಶೋಕಪುರಂ ಠಾಣೆ ಇನ್ಸ್ಪೆಕ್ಟರ್ ಸಿ.ರೋಹಿತ್ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯೆ ನೀಡಿ, ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯ ನಿವಾಸ ಪತ್ತೆ ಹಚ್ಚಲು ಮತ್ತು ಬಂಧಿಸಲು ನಮ್ಮ ಸಹಕಾರ ಪಡೆದಿದ್ದಾರೆ ಎಂದು ತಿಳಿಸಿದರು. ಉದ್ಯೋಗಿಯನ್ನು ಸಂಪರ್ಕಿಸಿ ಮುಂಬೈ ಪೊಲೀಸ್ ಪ್ರಧಾನ ಕಚೇರಿಯ ನೆಹಶರ್ಮ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಮ್ಮ ಹೆಸರಿನಲ್ಲಿ ಹಲವು ನಕಲಿ ಬ್ಯಾಂಕ್ ಖಾತೆಗಳು ಹಾಗೂ ಮೊಬೈಲ್ ಸಂಖ್ಯೆಗಳನ್ನು ತೆರೆಯಲಾಗಿದೆ. ಅವುಗಳನ್ನು ಕೋಟ್ಯಂತರ ರೂ. ಅಪರಾಧಗಳಿಗೆ ಬಳಸಲಾಗುತ್ತಿದೆ. ನೀವು 25 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ ಎಂದು ದೂರುದಾರನಿಗೆ ಹೆದರಿಸಿದ್ದರು. ಅಲ್ಲದೆ ನಾವು ಹೇಳಿದಂತೆ ಕೇಳದಿದ್ದರೆ ಬಂಧಿಸುವುದಾಗಿ ಬೆದರಿಕೆ…
ಬೆಂಗಳೂರು ನಗರ ಜಿಲ್ಲೆ, ನವೆಂಬರ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ (ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳಿಗೆ ದಂಡ ವಿಧಿಸಿ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರು ಆದೇಶಿಸಿದ್ದಾರೆ.ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೆಪಿಎಂಇ ಮತ್ತು ಕುಂದು ಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಒಟ್ಟು 57 ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್ ಗಳು ಹಾಗೂ ಪುನರ್ವಸತಿ ಕೇಂದ್ರಗಳಲ್ಲಿ ಕೆಪಿಎಂಇ ಕಾಯ್ದೆ ಅನ್ವಯ ನಿಯಮವನ್ನು ಉಲ್ಲಂಘನೆ ಮಾಡಿರುವ ತಾವರೆಕೆರೆಯಲ್ಲಿರುವ ಸುಶ್ರತ ಕ್ಲಿನಿಕ್, ಶ್ರೀ ಸಾಯಿ ಕ್ಲಿನಿಕ್ , ಮಾತೃಶ್ರೀ ಕ್ಲಿನಿಕ್ ಮತ್ತು ಮಾತಾ ಕ್ಲಿನಿಕ್, ಕನಕಪುರ ಮುಖ್ಯ ರಸ್ತೆಯ ಕಗ್ಗಲೀಪುರದಲ್ಲಿರುವ ಸಪ್ತಗಿರಿ ಕ್ಲಿನಿಕ್ , ಕೆಂಗೇರಿ ಸ್ಯಾಟಲೈಟ್ ಟೌನ್ ನ ಶಿರ್ಕೆ ಅಪಾರ್ಟ್ಮೆಂಟ್ ಬಳಿ ಇರುವ ಶ್ರೀ ಫೌಂಡೇಶನ್,,…
ಬೆಂಗಳೂರು : ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಗೆ ಬಂಧನದ ಭೀತಿ ಹಿನ್ನೆಲೆಯಲ್ಲಿ, ಅನಾರೋಗ್ಯ ಕಾರಣಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸತೀಶ್ ಸೈಲ್ ಅವರ ಮಧ್ಯಂತರ ಜಮೀನು ಅನ್ನು ನವೆಂಬರ್ 20ರವರೆಗೆ ವಿಸ್ತರಿಸಿತು. ವಿಚಾರಣೆ ವೇಳೆ ಸತೀಶ್ ಸೈಲ್ ಆರೋಗ್ಯ ಸ್ಥಿತಿ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಸಲಾಗಿದ್ದು, ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯಲ್ಲಿ ಆರೋಗ್ಯ ಸ್ಥಿತಿ ಪರಿಶೀಲಿಸಲಾಗಿದೆ. ಎಂದು ಇಡಿ ಪರ ಎಎಸ್ಜಿ ಅರವಿಂದ್ ಕಾಮತ್ ಹೈಕೋರ್ಟ್ ಗೆ ಮಾಹಿತಿ ನೀಡಿದರು. ಸತೀಶ್ ಸೈಲ್ ರ ವೈದ್ಯಕೀಯ ದಾಖಲೆಗಳನ್ನು ಒದಗಿಸಲಾಗುವುದು. ಲಿವರ್ ಕಸಿಯ ಅಗತ್ಯವಿದೆ ಎಂಬ ವೈದ್ಯಕೀಯ ವರದಿ ಇದೆ. ಎಂದು ಹೈಕೋರ್ಟ್ ಗೆ ಸತೀಶ್ ಸೈಲ್ ಪರ ವಕೀಲರು ಮಾಹಿತಿ ನೀಡಿದರು. ನ.15 ರಂದು ಬೆಳಿಗ್ಗೆ 11.30ಕ್ಕೆ ಆಸ್ಪತ್ರೆಗೆ ಸತೀಶ್ ಸೈಲ್ ಗೆ ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿತು. ಬಳಿಕ ನವೆಂಬರ್…
ನವದೆಹಲಿ : ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ. ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಓರ್ವ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗಣಪತಿ ಬತ್ತಿ (32) ಹಾಗೂ ತಾಪಸ್ ಕುಮಾರ್ (46) ಎಂದು ತಿಳಿದುಬಂದಿದ್ದು ಪೊಲೀಸರು ಮೃತ ಪಾದಚಾರಿ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಕಾರು ಚಾಲಕ ಸುಭಾಷ್ ರಾಮತೀರ್ಥಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇತ್ತೀಚಿಗೆ AI ತಂತ್ರಜ್ಞಾನ ಬಳಸಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಹುಲಿ ಮನುಷರ ಮೇಲೆ ಅಟ್ಯಾಕ್ ಮಾಡುವ ವಿಡಿಯೋ ಸಹ ಹರಿದಾಡಿತ್ತು. ಇದೀಗ AI ತಂತ್ರಜ್ಞಾನ ಬಳಸಿ ಹುಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟರೆ, ಫೋಟೋ, ವಿಡಿಯೋ ಶೇರ್ ಮಾಡಿದ್ರೆ ಕಠಿಣ ಕ್ರಮ ಕೈಗೊಳಲಾಗುತ್ತೆ. ಹುಲಿ ಬಂತು ಎಂದು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹುಲಿ ಬಂತು ಎಂದು ಸುಳ್ಳು ಫೋಟೋ ಹಂಚುವುದರಿಂದ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. AI ಹಾವಳಿಯಿಂದ ಕೆಲಸ ನಿರ್ವಹಿಸಲು ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.














