Author: kannadanewsnow05

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ ಪ್ರಕರಣದ ಕುರಿತು ಮಾರ್ಚ್ 14ರಂದು ಆದೇಶ ಪ್ರಕಟಿಸಲಿದ್ದಾರೆ. ಇಂದು ಆರ್ಥಿಕ ವಿಶೇಷ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, DRI ಪರವಾಗಿ ವಕೀಲ ಮಧು ರಾವ್ ವಾದ ಮಂಡನೆ ಮಾಡಿದರು. 135 (1) A & B ಅಡಿ ಕೇಸ್ ದಾಖಲಿಸಿದ್ದಾರೆ. 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಅಕ್ರಮ ಸಾಗಾಣೆ ನಿಷಿದ್ಧವಾಗಿದೆ. ಕಸ್ಟಂ ಕಾಯ್ದೆ 104ರ ಅಡಿ ಬಂಧನದ ಅಧಿಕಾರವಿದೆ. ಬಂಧನದ ನಂತರ ಅದಕ್ಕೆ ಕಾರಣಗಳನ್ನು ನೀಡಬೇಕು. ದುಬೈ ನಿಂದ ವಿಮಾನ ಬಂದು ಏರ್ಪೋರ್ಟ್ ನಲ್ಲಿ ನಿಂತಿತ್ತು. ರಾಜ್ಯದ ಪ್ರೊಟೊಕಾಲ್ ಆಫೀಸರ್…

Read More

ತುಮಕೂರು : ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದ ಪರಿಣಾಮ 1 ಕರು ಸೇರಿದಂತೆ 4 ಹಸುಗಳು ಸಜೀವವಾಗಿ ದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ನಡೆದಿದೆ. ಕಳೆದ ಮಾರ್ಚ್ 10 ರಂದು ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದ ರೈತ ಕೊಂಡಪ್ಪನ ಜಮೀನಿನ ತೋಟದಲ್ಲಿದ್ದ ದನದ ಹಟ್ಟಿಯಲ್ಲಿ ದುರ್ಘಟನೆ ಸಂಭವಿಸಿದೆ.ತೋವಿನಕೆರೆ ಗ್ರಾಮದ ರೈತ ಕೊಂಡಪ್ಪ ಎಂಬಾತನ ಜಮೀನಿನ ಶೆಡ್ಡಿನಲ್ಲಿ ಹಸುಗಳನ್ನು ಕಟ್ಟಿ ಹೋದ ನಂತರ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಶೆಡ್ಡಿಗೆ ವಿದ್ಯುತ್ ಸಂಪರ್ಕವು ಇಲ್ಲ, ಮತ್ತು ದೀಪದ ಬೆಳಕು ಇರದಿದ್ದರೂ ಹೇಗೆ ಬೆಂಕಿ ಆವರಿಸಿದೆ ಎಂದು ರೈತ ಅನುಮಾನ ವ್ಯಕ್ತಪಡಿಸಿದ್ದಾನೆ. ಸ್ಥಳಕ್ಕೆ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ನಾಗಭೂಷನ್, ಕಂದಾಯ ಇಲಾಖೆ ಪ್ರತಾಪ್, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : 2013ರಲ್ಲಿ ಹಲ್ಲೆ ಅಟ್ರಾಸಿಟಿ ಪ್ರಕರಣದಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಸಂತೋಷ ಗಜಾನನ ಭಟ್ ಅವರು ಕೆ.ಎಚ್ ಮುನಿಯಪ್ಪಗೆ ಜಾಮೀನು ನೀಡಿ ಆದೇಶಿಸಿದ್ದಾರೆ. 2013ರ ಹಲ್ಲೆ ಅಟ್ರಾಸಿಟಿ ಕೇಸ್ ನಲ್ಲಿ ಸಚಿವ ಕೇಸ್ ಮುನಿಯಪ್ಪ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕನ್ನಡಕ್ಕೆ ಸಂಬಂಧಪಟ್ಟಂತೆ ಮುನಿಯಪ್ಪ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅವರು ಕೋರ್ಟಿಗೆ ಗೈರು ಹಾಜರಾಗಿದ್ದರು. ಹಾಗಾಗಿ ಜನಪ್ರತಿನಿಧಿ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಇಂದು ಕೋರ್ಟಿಗೆ ಸಚಿವ ಕುಂದು ಹಾಜರಾಗಬೇಕಿತ್ತು ರಾಬರ್ಟ್ ಸನ್ ಪೇಟೆ ಪೊಲೀಸರು ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಕೊರ್ಯೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಖುದ್ದು…

Read More

ಕಲಬುರ್ಗಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಇದುವರೆಗೂ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿದ್ದರು ಸಹ ಈ ಒಂದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮತ್ತೊಂದು ಜೀವ ಬಲಿಯಾಗಿದ್ದು ಕಲ್ಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಂದ್ರಕಾಂತ ಪೂಜಾರಿ (35) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಕಲಬುರಗಿ ನಗರದ ಸಿದ್ದಾರೂಢ ಕಾಲೋನಿ ನಿವಾಸಿಯಾಗಿದ್ದ ಚಂದ್ರಕಾಂತ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಚಂದ್ರಕಾಂತ ತಮ್ಮ ಸ್ನೇಹಿತರಿಗೆ ಆಡಿಯೋ ಸಂದೇಶವೊಂದನ್ನು ರೆಕಾರ್ಡ್ ಮಾಡಿದ್ದಾರೆ. ನಾನು ರೊಕ್ಕಕ್ಕಾಗಿ ಸಾಯುತ್ತಿಲ್ಲ, ಮಂದಾಕಿನಿ ಪಾಟೀಲ್ ಮತ್ತು ಅವರ ಮಗನ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಮೃತ ಚಂದ್ರಕಾಂತ ಪೂಜಾರಿ,…

Read More

ಕಲಬುರ್ಗಿ : ಕಲ್ಬುರ್ಗಿಯ ನಗರದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಿಢೀರ್ ಎಂದು ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಲಬುರಗಿ ಕಚೇರಿಯ ಮೇಲೆ ಲೋಕಾಯುಕ್ತರ ತಂಡ ದಾಳಿ ನಡೆಸಿದೆ.. ಲೋಕಾಯುಕ್ತ SP ಉಮೇಶ್ ನೇತ್ರತ್ವದ ತಂಡ ದಾಳಿ ಮಾಡಿದ್ದು ಇಲಾಖೆಯ ಕಡತಗಳನ್ನ ಪರಿಶೀಲನೆ ಮಾಡಿದೆ. ನಿಗಮದಲ್ಲಿನ ಯೋಜನೆ, ಅನುದಾನಗಳು ಪಟ್ಟಿ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದೆ.

Read More

ಬೆಳಗಾವಿ : ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಕುಟುಂಬಗಳ ನಡುವೆ ಕಲ್ಲು ತೂರಾಟ ಹಾಗೂ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆಸಲಾಗಿದ್ದು, ಈ ಒಂದು ಗಲಾಟೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಳೆ ವಂಟಮೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಮಾಹಿತಿ ತಿಳಿದ ಕಾಕತಿ ಪೊಲೀಸರು ಸ್ಥಳಕ್ಕೆ ದೌಡಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಗುಂಪುಗಳ ನಡುವೆ ಮಾರಮಾರಿ ಆಗಿದ್ದು ಪರಸ್ಪರ ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹಳೆ ವಂಟಮೂರಿಯಲ್ಲಿ ನಡೆದಿದೆ. ಗುಂಪು ಘರ್ಷಣೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಕುಡಗೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕುಟುಂಬದ ಮಧ್ಯ ಏರ್ಪಟ್ಟ ಜಾಗದ ವಿವಾದಕ್ಕೆ ಈ ಒಂದು ಕಲ್ಲುತೂರಾಟ ನಡೆದಿದೆ. ಮಾರುತಿ ಹೊನ್ನುರೆ ಹಾಗು ಪರಸಪ್ಪ ಹೋಳಿಕಾರ್ ಕುಟುಂಬದ ಮಧ್ಯ ಈ ಒಂದು ಗಲಾಟೆ ನಡೆದಿದೆ. ಗಲಾಟೆ ಮಾಡುತ್ತಲೇ ವಾಗ್ವಾದ ತಾರಕಕ್ಕೆ ಏರಿ ಮನೆಯ ಮೇಲ್ಚಾವಣಿ ಏರಿದ ಕೆಲವು ಉದ್ರಿಕ್ತರು ಪಕ್ಕದ ಮನೆಯ ಮೇಲೆ ಕಲ್ಲು ತೂರಾಟ…

Read More

ಬೆಂಗಳೂರು : ಐದು ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಾವು ಮತ್ತೆ ಗೆದ್ದು ಬರುತ್ತೇವೆ 5 ವರ್ಷ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಆಗಿ ನೀವೇ ಇರುತ್ತೀರಾ ಎಂದು ಬಿಜೆಪಿ ಪ್ರಶ್ನೆ ಮಾಡಿದಾಗ ಹೌದು ಸಿಎಂ ಆಗಿ ನಾನೇ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮತ್ತೆ ನಾವೇ ಇದು ವರ್ಷಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಒಂದು ಹೇಳಿಕೆ ನೀಡಿದರು. ವಿಪಕ್ಷ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಇರಲಿ ಎಂದು ನಾವು ಬಯಸುತ್ತೇವೆ. ಆದರೆ ಇದೀಗ ರಾಜ್ಯದಲ್ಲಿ ಪವರ್ ಶೇರಿಂಗ್ ವಿಚಾರವಾಗಿ ಅನೇಕ ಕಾಂಗ್ರೆಸ್ ನಾಯಕರೇ ಅಧಿಕಾರ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿಕೆ ನೀಡಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ ಹೌದಪ್ಪ ನಾನೇ ಮುಂದಿನ ಐದು ವರ್ಷ…

Read More

ಕೊಡಗು : ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ ಎಂದು ತಿಳಿದುಬಂದಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಹೌದು ಈ ಕುರಿತು ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಸದ್ಯ ಈ ಬಗ್ಗೆ ಅಧಿಕಾರಿಗಳು ಭೂವಿಜ್ಞಾನಿಗಳಿಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೌದು 8 ಕುರಿತು ಯೂಟ್ಯೂಬರ್ ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.ಸಮೀರ್ ಪರ ವಕೀಲರು, ”ಎಫ್‌ಐಆರ್ ದಾಖಲಿಸಿರುವುದು ಕಾನೂನು ಬಾಹಿರ. ಇದು ನಾಗರಿಕರಿಗೆ ಸಾಂವಿಧಾನಿಕವಾಗಿ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು 19(1) ಮತ್ತು 21ನೇ ವಿಧಿಗೆ ವಿರುದ್ಧ ಎಂದು ಪೀಠಕ್ಕೆ ತಿಳಿಸಿದರು. ಧಾರ್ಮಿಕ ವ್ಯಕ್ತಿಯ ಹೇಳಿಕೆ ಧರ್ಮದ ವಿರುದ್ಧ ಹೇಳಿಕೆ ಆಗುವುದಿಲ್ಲ. ಅದರ ವ್ಯಾಪ್ತಿ ಸೀಮಿತವಾದುದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆರೋಪಗಳು ಈ ಪ್ರಕರಣದಲ್ಲಿ ಅನ್ವಯ ಆಗುವುದಿಲ್ಲ. ಹಾಗೇನಾದರೂ ಇದ್ದರೆ ನಿತ್ಯಾನಂದ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೇ ಸಾಧ್ಯವಿರುತ್ತಿರಲಿಲ್ಲ ಎಂದು ಪೀಠಕ್ಕೆ ತಿಳಿಸಿದರು.

Read More

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ಬೆಳವಣಿಗೆ ಆಗಿದ್ದು, ಮೂರು ಪಕ್ಷಗಳ ಶಾಸಕರ ಮಹತ್ವದ ಸಭೆ ನಡೆದಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಒಂದೇ ಕಡೆ ಸೇರಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಒಂದು ಸಭೆಯಲ್ಲಿ 56ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು. ಅದರಲ್ಲೂ ಮೊದಲ ಬಾರಿಗೆ ಆಯ್ಕೆಯಾದ ಶರಣಗೌಡ ಕಂದಕೂರು, ಶಿವಗಂಗಾ ಬಸವರಾಜ್ ಈ ಒಂದು ಸಭೆ ಆಯೋಜನೆ ಮಾಡಿದ್ದು ಹೊಸದಾಗಿ ಆಯ್ಕೆಯಾದ ಶಾಸಕರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಹೌದು ಜೆಡಿಎಸ್ ಕಾಂಗ್ರೆಸ್ ಹಾಗು ಬಿಜೆಪಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.ಅಲ್ಲದೇ ಜೆಡಿಎಸ್ ಶಾಸಕರಿಗೆ ಔತಣಕೂಟಕ್ಕೆ ವಿಶೇಷ ಅಹ್ವಾನ ನೀಡಲಾಗಿದೆ. ಅಲ್ಲದೇ ಹಿರಿಯ ಮತ್ತು ಕಿರಿಯ ಶಾಸಕರಿಗೂ ಆ ಅಹ್ವಾನ ನೀಡಲಾಗಿದೆ. ಇದೀಗ ಮೂರು ಪಕ್ಷದ ಶಾಸಕರ ಸಭೆ ತೀವ್ರ ಕುತೂಹಲ ಮೂಡಿಸಿದೆ. ಮೊದಲ ಬಾರಿಗೆ ಆಯ್ಕೆಯಾದ ಶಾಸಕರೇ ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ಶೇಕಡಾ 70ಕ್ಕಿಂತ ಹೆಚ್ಚು ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆಅಹ್ವಾನ ನೀಡಲಾಗಿದೆ. ಪಕ್ಷಾತೀತವಾಗಿ ಮೊದಲ ಬಾರಿಯ…

Read More