Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಹಣಕಾಸಿನ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟೇಶ್‌ ಕಳೆದ 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ ಅಂತ ಹೇಳಲಾಗ್ತಿದೆ. ಹಣಕಾಸು ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಮೃತದೇಹವನ್ನ ಬೌರಿಂಗ್‌ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Read More

ನವದೆಹಲಿ : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ತಿರುವ ಸಿಕ್ಕಿದ್ದು, ದೆಹಲಿ ಸ್ಫೋಟಕ್ಕೆ ಬಳಕೆ ಮಾಡಿದ್ದು ಎರಡು ಕಾರು ಅಲ್ಲ ಮೂರು ಕಾರು ಎಂದು ತನಿಖೆಯಲ್ಲಿ ಬಯಲಾಗಿದೆ. ಹೌದು ದೆಹಲಿ ಸ್ಫೋಟಕ್ಕೆ ಬಳಕೆ ಮಾಡಿದ್ದು ಮೂರು ಕಾರು ಎಂದು ತನಿಖೆಯಲ್ಲಿ ಬಯಲಾಗಿದೆ. ಕುಮಾರ್ ಗೆ ಸಂಬಂಧಿಸಿದ ಮೂರು ಕಾರುಗಳ ಜಾಲ ಈಗ ಬೆಳಕಿಗೆ ಬಂದಿದ್ದು, ಇಕೋ ಸ್ಪೋರ್ಟ್ಸ್ ಕಾರು ಸಿಕ್ಕ ಬಳಿಕ ಮತ್ತೊಂದು ಕಾರಿಗೆ ಶೋಧ ಕಾರ್ಯ ಮುಂದುವರಿದಿದೆ. ಸದ್ಯ ಇಕೋ ಸ್ಪೋರ್ಟ್ಸ್ ಕಾರು ಫರಿದಾದಾಬಾದ್ ನಲ್ಲಿ ಸಿಕ್ಕಿದ್ದು ಬಿಳಿ ಬಣ್ಣದ ಬ್ರಿಜಾ ಕಾರಿಗಾಗಿ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ. ಉಗ್ರ ಚಟುವಟಿಕೆಗೆ ಬಳಸಿರುವ ಹಿನ್ನೆಲೆ ಬಿಳಿ ಕಾರಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟಗೊಂಡು ಕುರಿಗಾಹಿ ಮಹಿಳೆಯ ಕೈ ಬೆರಳು ಛಿದ್ರಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಿಡಿಮದ್ದು ಸ್ಫೋಟಗೊಂಡು ಗುಮ್ಮನಹಳ್ಳಿ ಗ್ರಾಮದ ರಂಗಮ್ಮ (50) ಗೆ ಗಾಯವಾಗಿದೆ. ಕಾಡು ಹಂದಿ, ಇತರೆ ಪ್ರಾಣಿಗಳು ಹೊಲಕ್ಕೆ ಬರದಂತೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಈ ವೇಳೆ ಸಿಡಿಮದ್ದಿನ ವೈರ್ ಮೇಕೆಗೆ ಸುದ್ದಿಕೊಂಡಿದೆ. ಅದನ್ನು ತೆಗೆದು ಮೇಕೆ ಬಿಡಿಸಲು ಹೋದಾಗ ದುರ್ಘಟನೆ ಸಂಭವಿಸಿದೆ. ಸದ್ಯ ರಂಗಮ್ಮಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಗಾಯಳು ರಂಗಮ್ಮ ರವಾನಿಸಲಾಗಿದೆ.

Read More

ಬೆಂಗಳೂರು : ‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಅಂಜನಾಪುರದಲ್ಲಿರುವ ಅಕೌಂಟೆಂಟ್ ಜಗದೀಶ್ ಮನೆ ದಾಳಿ ಮಾಡಲಾಗಿದೆ. ಜಗದೀಶ್ ಮನೆ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಹಲವು ದಾಖಲೆಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ ಹಲವಾರು ಖಾಸಗಿ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸುಮಾರು 20ಕ್ಕೂ ಹೆಚ್ಚು ಚೆಕ್ ಬುಕ್ 15ಕ್ಕೂ ಹೆಚ್ಚು ಎಟಿಎಂ ಕಾರ್ಡ್ ಗಳು ಪತ್ತೆಯಾಗಿದೆ. ಅಲ್ಲದೇ 10 ಎಕರೆಗೂ ಹೆಚ್ಚಿನ ಜಮೀನು ಪತ್ರ ಕೂಡ ಪತ್ತೆಯಾಗಿದೆ. ಜಗದೀಶ್ ಮತ್ತು ಪತ್ನಿ ಹೆಸರಲ್ಲಿ ಇರುವ ಜಮೀನು ಪತ್ರ ದೊರೆತಿದೆ. ದಾಳಿಯ ವೇಳೆ 4 BMW ಸೇರಿ 12 ಕಾರು 7 ಬೈಕ್ ಗಳನ್ನ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣವನ್ನು ಡಿಜಿ & ಐಜಿಪಿ CID ಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕೇಸ್ ಫೈಲ್ CID ಅಧಿಕಾರಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಇದುವರೆಗೂ ನಡೆದಿರುವ…

Read More

ನವದೆಹಲಿ : ದೆಹಲಿಯಲ್ಲಿ ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಮಾಹಿತಿ ಬಯಲಾಗಿದ್ದು, ಭಾರತದಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟ(Blast)ಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಯೋತ್ಪಾದಕರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು, ಅವರು ತಮ್ಮೊಂದಿಗೆ ಬಹು ಐಇಡಿಗಳನ್ನು ಸಾಗಿಸಬೇಕಿತ್ತು. ಸುಮಾರು 8 ಶಂಕಿತರು ನಾಲ್ಕು ಸ್ಥಳಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು. ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು ಎಂದು ತಿಳಿದುಬಂದಿದೆ. ಡಾ. ಮುಜಮ್ಮಿಲ್, ಡಾ. ಅದೀಲ್, ಉಮರ್ ಮತ್ತು ಶಾಹೀನ್ ಜಂಟಿಯಾಗಿ ಸುಮಾರು 20 ಲಕ್ಷ ರೂ. ನಗದನ್ನು ಸಂಗ್ರಹಿಸಿದ್ದು, ದೆಹಲಿ ಸ್ಫೋಟದ ಮೊದಲು ಅದನ್ನು ಉಮರ್‌ಗೆ ಹಸ್ತಾಂತರಿಸಲಾಗಿತ್ತು. ನಂತರ ಅವರು ಗುರುಗ್ರಾಮ, ನೂಹ್ ಮತ್ತು ಹತ್ತಿರದ ಪ್ರದೇಶಗಳಿಂದ ಐಇಡಿ ತಯಾರಿಕೆಗಾಗಿ…

Read More

ತುಮಕೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೆ.ಎನ್ ರಾಜಣ್ಣ ಮಂಕಾಗಿದ್ದಾರೆ.ಅಲ್ಲದೇ ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ವಿರುದ್ಧವೆ ಬೇಸರ ಆಗಿದ್ದಾರೆ. ಇದೀಗ ರಾಜಣ್ಣ ಹೇಳೋಕೆಯೊಂದು ಭಾರಿ ವೈರಲ್ ಆಗಿದ್ದು, ಯಾವ ಪಕ್ಷದ ಬಾವುಟ ಹಿಡಿಬೇಕು ಎನ್ನುವುದನ್ನು ನಾನು ಮುಂದಿನ ದಿನದಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಕೆ.ಎನ್ ರಾಜಣ್ಣ ಸಾರ್ವಜನಿಕ ಭಾಷಣದಲ್ಲಿ ಹೇಳಿರೋದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಮಧುಗಿರಿ ತಾಲೂಕಿನ ದೊಡ್ಡೆರಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ನಾನು ಮಧುಗಿರಿ ಕ್ಷೇತ್ರಕ್ಕೆ ಬಂದಾಗ ಕಾರ್ಯಕರ್ತರು ಕಾಂಗ್ರೆಸ್ (Congress0 ಬಾವುಟ ಹಿಡಿದು ರ‍್ಯಾಲಿ ಮಾಡುತಿದ್ದರು. ಇವತ್ತಿನ ರ‍್ಯಾಲಿಯಲ್ಲಿ ಯಾರೂ ಕಾಂಗ್ರೆಸ್ ಬಾವುಟ ಹಿಡಿಯಲೇ ಇಲ್ಲ. ಅವರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ತರಿಸಿದಂತಿದೆ. ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದರು. 2004 ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್…

Read More

ತುಮಕೂರು : ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ. ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ ತುಮಕೂರಿನ ಪಿ ಎಚ್ ಕಾಲೋನಿ ನಿವಾಸಿಯ ವಿಚಾರಣೆ ನಡೆಸಲಾಗುತ್ತಿದೆ.ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ ASI ಪುರುಷೋತ್ತಮ್ ವ್ಯಕ್ತಿಯ ವಿಚಾರಣೆ ನಡೆಸಿದ್ದರೆ. ಸುಮಾರು 2 ಗಂಟೆ ವಿಚಾರಣೆ ನಡೆಸಿ ನಂತರ ವ್ಯಕ್ತಿಯನ್ನು ಬಿಟ್ಟು ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಚಿತ್ರದುರ್ಗ : ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜೀನಾಮೆ ಕೇಳುತ್ತಿದ್ದಾರೆ. ಈ ವಿಚಾರವಾಗಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಉಗ್ರ ಮೇಲೆ ಪ್ರೀತಿ ಇರುವುದಕ್ಕೆ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದರು. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಪ್ರಜೆಗಳು ವಿರುದ್ಧ ಕಾಂಗ್ರೆಸ್ ನಾಯಕರು ಮಾತಾಡಲ್ಲ ಉಗ್ರರ ಮೇಲೆ ಪ್ರೀತಿ ಇರುವ ಕಾರಣಕ್ಕೆ ಕಾಂಗ್ರೆಸ್ಸಿಗರು ಮಾತನಾಡಲ್ಲ. ನಿಮ್ಮ ಬೆಂಬಲ ಉಗ್ರರಿಗೋ ಪಾಕಿಸ್ತಾನಕ್ಕೂ ಎಂಬುದು ಸ್ಪಷ್ಟಪಡಿಸಿ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Read More

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ…

Read More

ಬೆಂಗಳೂರು : ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಯಡಿ ನೋಂದಣಿಯಾಗಿರುವ ಸರ್ಕಾರಿ ಹಾಗೂ ಖಾಸಗಿ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ವೇಳೆ ಮಾಸಿಕ ವೇತನಸಹಿತ ಒಂದು ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕರ ಕಾಯ್ದೆ-1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ-1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲ ಖಾಯಂ ಆಥವಾ ಗುತ್ತಿಗೆ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಸೂಚನೆ ನೀಡಲಾಗಿದೆ. ಕಾರ್ಮಿಕರು, ಕಾರ್ಮಿಕ ಸಂಘಗಳು,…

Read More