Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹುಬ್ಬಳ್ಳಿ : ರಾಜ್ಯದಲ್ಲಿ ನಡೆದಿರುವ ಅರಾಜಕತೆ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ನಮಗೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಬಗ್ಗೆ ಯಾವುದೇ ಭಯವಿಲ್ಲ. ಸರ್ಕಾರದ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಅಂಜಲಿ ನಿವಾಸಕ್ಕೆ ಭೇಟಿ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜಾ ರೋಷವಾಗಿ ಡ್ರಗ್ಸ್ ಮಾರಾಟದಿಂದ ಕೊಲೆಗಳು ನಡೆಯುತ್ತಿವೆ.ಗೃಹ ಮಂತ್ರಿಗಳು ಗುರು-ನಾಲ್ಕು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ ಎಂದರು. ತರಾತುರಿಯಲ್ಲಿ ಹುಬ್ಬಳ್ಳಿಗೆ ಬಂದು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ತಮ್ಮ ವೈಫಲ್ಯ ಮರೆ ಮಾಚುವ ಉದ್ದೇಶದಿಂದ ಅಮಾನತು ಮಾಡುತ್ತಿದ್ದಾರೆ. ಸರ್ಕಾರದ ವೈಫಲ್ಯ ಪೊಲೀಸ ಅಧಿಕಾರಿಗಳ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಒತ್ತಡದಿಂದಾಗಿ ಮುಕ್ತವಾಗಿ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಗಾಂಜಾ ಅಫೀಮು ಮಾರಾಟ ಮಾಡಲಾಗುತ್ತಿದೆ.ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅನ್ನೋದು ಡೈಲಾಗ್ ಆಗಿಬಿಟ್ಟಿದೆ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಲಿ ಗೃಹ ಸಚಿವರು ರಾಜೀನಾಮೆ…
ಹಾಸನ: ಲೈಂಗಿಕ ದೌರ್ಜನ್ಯ, ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು, ಬೇಲ್ ನಲ್ಲೇ ಅಲೆದಾಡಿ, ಜಾಮೀನು ಪಡೆದ ಬಳಿಕ 20 ದಿನಗಳ ನಂತರ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಇಂದು ಹಾಸನದಕ್ಕೆ ಭೇಟಿ ನೀಡಿದರು. ಆದರೆ ಈ ವೇಳೆ ಸ್ವಕ್ಷೇತ್ರ ಹೊಳೆನರಸೀಪುರಕ್ಕೆ ಭೇಟಿ ನೀಡುವ ಬದಲು ದಿಢೀರ್ ಆಗಿ ಮೈಸೂರಿನತ್ತ ಪಯಣ ಬೆಳೆಸಿದ್ದಾರೆ. ಹೌದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಹಿಳೆ ಅಪಹರಣ ಕೇಸಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಬಳಿಕ ಟೆಂಪಲ್ ರನ್ ಕೂಡ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಡೆಸಿದ್ದರು. ಇಂದು 20 ದಿನಗಳ ಬಳಿಕ ಅವರು ಹಾಸನ ಜಿಲ್ಲೆಗೆ ಎಂಟ್ರಿಕೊಟ್ಟಿದ್ದಾರೆ. ಹಾಸನದ ಹೊಳೆನರಸೀಪುರಕ್ಕೆ ಬರೋ ದಾರಿಯುದ್ಧಕ್ಕೂ ಅವರನ್ನು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಕಿರಿಸಾವೆಯಲ್ಲಿ ಕಾರ್ಯಕರ್ತರ ಸ್ವಾಗತಕ್ಕೆ ಹೆಚ್.ಡಿ ರೇವಣ್ಣ ಭಾವುಕರಾದರು. ಜೊತೆಗೆ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕಾರಿನಿಂದ ಕೆಳಗೆ ಇಳಿದು, ನಮಸ್ಕರಿಸಿ ತೆರಳಿದ್ದಾರೆ ತಿಳಿದು ಬಂದಿದೆ. ಈ…
ಬೆಂಗಳೂರು : ವಿಧಾನ ಪರಿಷತ್ತಿನ ಚುನಾವಣೆ ಕುರಿತಂತೆ ಬಿಜೆಪಿ ಇಂದು ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಕಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣಾ ತಯಾರಿ ಬಗ್ಗೆ ಸಭೆ ನಡೆಸಿದ್ದೇವೆ. ಎರಡು ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಪರಿಷತ್ತಿನ 11 ಸ್ಥಾನಗಳಲ್ಲಿ ಸೋತವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚಿಸಿಲ್ಲ. ಈಗಲೇ ಸೋತವರಿಗೆ ಟಿಕೆಟ್ ಕೊಡಬೇಕು ಅಂತ ಚರ್ಚೆ ಆಗಿಲ್ಲ ಎಂದರು. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಆದ್ಯತೆಯ ವಿಚಾರವಾಗಿ ಮಾತನಾಡಿದ ಅಶೋಕ್ ಟಿಕೇಟ್ ವಂಚಿತರಿಗೂ ಆದ್ಯತೆ ನೀಡಬೇಕೆಂಬ ಬಗ್ಗೆಯೂ ಚರ್ಚೆಯಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.
ಚಿಕ್ಕಮಗಳೂರು : ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುತ್ತಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಆಟೋ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲನೊಬ್ಬ ಸಾವನ್ನಪ್ಪಿರುವ ಘಟನೆ ಬಣಕಲ್- ಕೊಟ್ಟಿಗೆಹಾರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಮೃತ ಪಟ್ಟ ಚಾಲಕನನ್ನು ರವಿ ಎಂದು ಹೇಳಲಗುತ್ತಿದ್ದೂ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೈಲಿಮನೆ ನಿವಾಸಿ ಎಂದು ಹೇಳಲಾಗುತ್ತಿದೆ. ತಕ್ಷಣ ಆಟೋ ಪಲ್ಟಿಯಾಗಿದ್ದರಿಂದ ಗಂಭೀರ ಗಾಯಗೊಂಡಿದ್ದ ರವಿನನ್ನು ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನನಪ್ಪಿದ್ದಾನೆ. ಘಟನೆ ಕುರಿತಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ವರ್ಷ ಬಿರು ಬೇಸಿಗೆಯಲ್ಲೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿತ್ತು. ಇದೀಗ ಮತ್ತೆ 2.5 ಟಿಎಂಸಿ ನೀರು ಹರಿಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಹೌದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಕುರಿತಂತೆ ಸೂಚನೆ ನೀಡಿದ್ದು, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಇದೀಗ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಹ 2.5 ಟಿಎಂಸಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಇಂದು ಸಭೆ ನಡೆಸಿದ CWMA ನೀರುಹರಿಸಲು ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ. ಕನ್ನಡಪರ ಸಂಘಟನೆಗಳ ಹೋರಾಟ ಕಳೆದ ಬಾರಿ ನಮ್ಮ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ಹಲವಾರು ಬಾರಿ ನೀರು ಬಿಟ್ಟಿತು. ಈ ಕುರಿತಾಗಿ ಅನೇಕ…
ಚಿಕ್ಕಮಗಳೂರು : ಇಂದು ರಾಜ್ಯದಲ್ಲಿ ದುರಂತಗಳ ಸರಮಾಲೆಯ ನಡೆದಿದೆ. ಈಗ ಚಿಕ್ಕಮಂಗಳೂರಿನಲ್ಲಿ ಒಂದು ಅನಾಹುತ ನಡೆದಿದ್ದು ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಗಾಂಜಾಲಗೋಡು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.ನಿನ್ನೆ ಸುರಿದ ಗಾಳಿ ಮಳೆಯಿಂದ ವೈರು ಒಂದು ನೇತಾಡುತ್ತಿತ್ತು.ಈ ವಳೆ ಯುವಕ ಲೈನ್ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಯುವಕ ಜೀವಿತ್ (23) ಸಾವನ್ನಪ್ಪಿದ್ದಾನೆ. ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡಲೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದರು. ಈ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಾಪ ಕುಮಾರಸ್ವಾಮಿ ಅವರ ಅಸೂಯೆಗೂ ಮದ್ದಿಲ್ಲ ಹೊಟ್ಟೆಕಿಚ್ಚಿಗೂ ಮದ್ದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ರಾಜೀನಾಮೆ ನೀಡಬೇಕಂಬ ಎಚ್ ಡಿ ಕುಮಾರಸ್ವಾಮಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪಾಪ ಕುಮಾರಸ್ವಾಮಿ ಕಿಂಗ್ ಮೇಕರ್ ಆಗಲು ಹೊರಟಿದ್ದರು. ಈಗ ನನ್ನ ಅಧ್ಯಕ್ಷತೆಯಲ್ಲಿ ನಮ್ಮ 136 ಶಾಸಕರು ಗೆದ್ದಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ 19 ಸ್ಥಾನ ಬಂದಿವೆ. ಪಾಪ ಈಗ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು. ಅಸೂಯೆಗೂ ಮದ್ದಿಲ್ಲ ಹೊಟ್ಟೆಕಿಚ್ಚಿಗೂ ಮದ್ದಿಲ್ಲ. ಕುಮಾರಸ್ವಾಮಿ ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಅಂತ ಅವನ ಆಸೆ. ಆ ತರ ಆಸೆ ಪಡುವವರನ್ನು ತಪ್ಪು ಅನ್ನೋಕೆ ಆಗುತ್ತದಾ? ಪಾಪ ಅವನ ಆಸೆ ಅದು ಎಂದು ವ್ಯಂಗ್ಯವಾಡಿದರು.
ಹುಬ್ಬಳ್ಳಿ : ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಕೊಲೆಯಾಗಿತ್ತು.ಈ ಘಟನೆ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಮಹಿಳೆಯೊಂದಿಗೆ ಕಾನ್ಸ್ಟೇಬಲ್ ಮಹೇಶ್ ಹೆಸರೂರು ಎಂಬ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮಹೇಶ್ ಹೆಸರೂರು ಎಂದು ತಿಳಿದುಬಂದಿದೆ. ಎರಡು ಮೂರು ದಿನದ ಹಿಂದೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಕೂಡಲೇ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದಂತಹ ಪೊಲೀಸರು ಬಾಗಿಲು ಒಡೆದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಮಾಹಿತಿಯನ್ನು ಇದೀಗ ಪೊಲೀಸರು ಕಲೆ ಹಾಕುತ್ತಿದ್ದಾರೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಇತ್ತೀಚಿಗೆ ತಂದೆಯಾದ ಕಾರ್ ಪಡೆಯುತ್ತಿದ್ದಾಗ ಎಕ್ಸೆಲೆಟರ್ ತುಳಿದು, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾ ಸೋಮಣ್ಣವೆ ಮತ್ತೊಂದು ಘಟನೆ ನಡೆದಿದ್ದು ನೀರಿನ ಸಂಪ್ ನಲ್ಲಿ ಐದು ವರ್ಷದ ಮಗು ಬಿದ್ದು ಸಾವನಪ್ಪಿರುವ ಘಟನೆ ಇದೀಗ ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಸಂಪಿಗೆ ಬಿದ್ದು 5 ವರ್ಷದ ಮಗು ಸಾವನನಪ್ಪಿರುವ ಘಟನೆ ನಡೆದಿದೆ. ನೇಪಾಳ ಮೂಲದ ದಂಪತಿಯ ಪುತ್ರ ಸಬೀನ್ (5) ಸಾವನ್ನಪ್ಪಿರುವ ಮಗು ಎಂದು ತಿಳಿಬಂದಿದೆ. ಬೆಂಗಳೂರಿನಲ್ಲಿ ನೇಪಾಳ ಮೂಲದ ದಂಪತಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಲ್ಲೆಯ ಯತ್ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆ…
ವಿಜಯಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೂಡ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ರಾಠೋಡ್ (12) ಸುದೀಪ ರಾಠೋಡ್ (10) ಸಾವನ್ನುಪ್ಪಿರುವ ಮೃತ ಬಾಲಕರು. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.













