Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಕೆಡಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕೋಟಿ ಆಫರ್ ನೀಡಿದ್ದರು ಎಂದು ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದರು. ಈಗ ಇವರ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. 1) ಡಿಸಿಎಂ ಡಿ.ಕೆ.ಶಿವಕುಮಾರ್ 2) ಕೃಷಿ ಸಚಿವ ಚೆಲುವರಾಯಸ್ವಾಮಿ 3) ಕಂದಾಯ ಸಚಿವ ಕೃಷ್ಣಭೈರೇಗೌಡ 4) IT BT ಸಚಿವ ಪ್ರಿಯಾಂಕ್ ಖರ್ಗೆ 5) ಇನ್ನೂ ಒಬ್ಬ ಸಚಿವ + ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CDಶಿವಕುಮಾರ್ ಸಾಹೇಬರು ವಕೀಲರಾದ ಶ್ರೀ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ ₹100 ಕೋಟಿ! ಎಂದು…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ನಾನು ಜೈಲಿಂದ ಹೊರಗಡೆ ಬಂದ ತಕ್ಷಣ ಸರ್ಕಾರ ಪತನವಾಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ನಾಳೆ ಸಂಜೆಯವರೆಗೆ ಎಸ್ ಐ ಟಿ ಕಸ್ಟಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ. ನನ್ನ ವಿರುದ್ಧ ಲೈಂಗಿಕ ಕಿರುಕುಳ ಕೆಸ್ ಹಾಕಿಸಿದ್ರು ಸಾಕ್ಷಿ ಸಿಗಲಿಲ್ಲ.ನಂತರ ಅತ್ಯಾಚಾರಕ್ಕೆ ಸಾಕಿದರು ಅದರಲ್ಲೂ ಸಾಕ್ಷಿ ಸಿಗಲಿಲ್ಲ ಎಂದು ಹಾಸನದಲ್ಲಿ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಹೇಳಿಕೆ ನೀಡಿದರು. ನನ್ನ ಮಟ್ಟ ಹಾಕಲು ಪೆನ್ ಡ್ರೈವ್ ಕೆಸ್ ನಲ್ಲಿ ಲಾಕ್ ಮಾಡಿಸಿದ್ದಾರೆ. ಇವರೆಲ್ಲರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ ನಾನು ಕೂಡ ಕಾನೂನು ಹೋರಾಟ ಮಾಡುತ್ತೇನೆ. ನಾನು ಜೈಲಿಂದ ಬಂದ ತಕ್ಷಣ…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಮೋದಿ ಬಿಜೆಪಿ ಹಾಗೂ ಹೆಚ್ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಡಿಕೆ ಶಿವಕುಮಾರ್ ನನಗೆ 100 ಕೋಟಿ ಅವರ ನೀಡಿದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ನಾಳೆ ಸಂಜೆ ಅವರಿಗೆ ಎಸ್ ಐ ಟಿ ಕಸ್ಟರ್ಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ. ಹಾಸನದಲ್ಲಿ ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ನನ್ನ ವಿರುದ್ಧ ಲೈಂಗಿಕ ಕಿರುಕುಳ ಕೆಸ್ ಹಾಕಿಸಿದ್ರು ಸಾಕ್ಷಿ ಸಿಗಲಿಲ್ಲ.ನಂತರ ಅತ್ಯಾಚಾರಕ್ಕೆ ಸಾಕಿದರು ಅದರಲ್ಲೂ ಸಾಕ್ಷಿ ಸಿಗಲಿಲ್ಲ ಎಂದು ಹಾಸನದಲ್ಲಿ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಹೇಳಿಕೆ ನೀಡಿದರು. ನನ್ನ ಮಟ್ಟ ಹಾಕಲು ಪೆನ್ಡ್ರಾವ್ ಕೆಸ್ ನಲ್ಲಿ ಲಾಕ್ ಮಾಡಿಸಿದ್ದಾರೆ. ಇವರೆಲ್ಲರ…
ಉತ್ತರಕನ್ನಡ : ಇಂದು ರಾಜ್ಯದಲ್ಲಿ ಅತ್ಯಂತ ಘೋರವಾದ ಘಟನೆಗಳು ನಡೆದಿದ್ದು, ರಾಮನಗರ ಜಿಲ್ಲೆಯಲ್ಲಿ ಈಜಲು ತೆರಳಿದ್ದ ಮೂರು ಬಾಲಕರು ಸಾವನ್ನಪ್ಪಿದ್ದು, ಇದೀಗ ಹೊಳೆಯಲ್ಲಿ ಸ್ಥಾನಕ್ಕೆಂದು ಹೋಗಿದ್ದ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ನಡೆದಿದೆ. ಹೌದು ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನನಪಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಈ ಘಟನೆ ಸಂಭವಿಸಿದೆ. ಸೂರಜ ನಾಯಕ (15) ಪಾರ್ವತಿ ಶಂಕರ ನಾಯಕ್ (35) ಎನ್ನುವವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇವರು ಭಟ್ಕಳ ತಾಲೂಕಿನ ಕೊಂಡಕೋಡ್ಲು ಗ್ರಾಮದವರು ಎಂದು ತಿಳಿದುಬಂದಿದೆ. ಅಲ್ಲದೆ ಇವರ ಜೊತೆಗೆ ಸುಮಾರು ಹದಿನೈದು ಜನರು ಹೊಳೆಯಲ್ಲಿ ಸ್ಥಾನಕ್ಕೆಂದು ತೆರಳಿದ್ದರು ಎಂದು ಹೇಳಲಾಗುತ್ತಿದೆ. ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 8ನೇ ಆರೋಪಿ ಆಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡನನ್ನು ನಾಳೆ ಸಂಜೆ 5:00 ವರೆಗೆ ಎಸ್ಐಟಿಗೆ ನೀಡಿ ಹಾಸನದ ಐದನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಹೌದು ಕಳೆದ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ವಕೀಲ ದೇವರಾಜ ಗೌಡನನ್ನು ಇಂದು ಎಸ್ಐಟಿ ಅಧಿಕಾರಿಗಳು ಅಕಿರದೇವರಾಜೇಗೌಡರನ್ನು ಹಾಸನಾದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ನಾಳೆ ಸಂಜೆ 5:00 ಗಂಟೆವರೆಗೆ ದೇವರಾಜೇಗೌಡ ಎಸ್ ಐ ಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಈ ಆದೇಶ ನೀಡಿದೆ. ಹಾಗಾಗೀ ಇದೀಗ ವಿಚಾರಣೆ ನಡೆಸಲು ಎಸ್ ಐ ಟಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.
ಬೆಂಗಳೂರು : ಬಹಿರ್ದೆಸೆಗೆ ಎಂದು ತೆರಳಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ತಲೆ ಹಾಗೂ ಹೊಟ್ಟೆ ಭಾಗಕ್ಕೆ ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗಾ ಗ್ರಾಮದಲ್ಲಿ ನಡೆದಿದೆ. ನರಿಗಾ ಗ್ರಾಮದಲ್ಲಿ ದೊಣ್ಣೆಯಿಂದ ಹೊಡೆದು ಬಾಲಕನ ಭೀಕರ ಹತ್ಯೆ ಮಾಡಲಾಗಿದೆ.ಮೃತ ಬಾಲಕನನ್ನು ಪ್ರಾಣೇಶ್ (15) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೇ 15ರಂದು ನಡೆದ ಈ ಒಂದು ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಬಹಿರ್ದೆಸೆಗೆ ಎಂದು ಬಾಲಕ ಪ್ರಾಣೇಶ್ ತೆರಳಿದ್ದ. ಈ ವೇಳೆ ಆತನ ಮೇಲೆ ದುಷ್ಕರ್ಮಿಗಳು ದೊಣ್ಣೆಯಿಂದ ಹಲ್ಲಿ ಮಾಡಿದ್ದಾರೆ. ಇದೀಗ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಬಾಲಕ ಪ್ರಾಣೇಶನ ತಲೆಗೆ ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಲಾಗಿದೆ. ಶಾಲೆಗೆ ರಜೆ ಹಿನ್ನೆಲೆಗೆ ತಂದೆ ತಾಯಿ ಬಳಿಗೆ ಪ್ರಾಣೇಶ್ ಬಂದಿದ್ದ.ಮೂಲತಃ ಮಂತ್ರಾಲಯದ ಕೂಲಿಕಾರ್ಮಿಕ ದಂಪತಿಯ…
ಬೆಂಗಳೂರು : ನಾಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಅತ್ಯಂತ ರೋಚಕವಾದಂತಹ ಪಂದ್ಯ ನಡೆಯಲಿದೆ. ಹೀಗಾಗಿ ಇಂದೇ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸಿ ಮುಂಗಡವಾಗಿ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದವರೇ ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಇದೀಗ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಗಾಗಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಾಳೆ ಆರ್ಸಿಬಿ ಹಾಗೂ ಸಿಎಸ್ಕೆ ಮ್ಯಾಚ್ ನಡೆಯಲಿದೆ. ಹಾಗಾಗಿ ಈಗಾಗಲೇ ಸ್ಟೇಡಿಯಂ ಬಳಿ ಸಾವಿರಾರು ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ. ಆರ್ಸಿಬಿ ಮ್ಯಾಚ್ ನೋಡಲೇಬೇಕೆಂದು ಸ್ಟೇಡಿಯಂ ಬಳಿಗೆ ಬಂದಿದ್ದೇವೆ. ಆದರೆ ಹೆಚ್ಚಿನದರಕ್ಕೆ ಬ್ಲಾಕ್ ನಲ್ಲಿ ಟಿಕೆಟ್ ಮಾರುತ್ತಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು. Online ಅಲ್ಲಿ ಐಪಿಎಲ್ ಟಿಕೆಟ್ ಸೋಲ್ಡ್ ಔಟ್ ಎಂದು ಪ್ರಕಟಿಸಿದ್ದಾರೆ.ಚಿನ್ನಸ್ವಾಮಿ ಕ್ರೀಡಾಂಗಣದವರೇ ಬ್ಲಾಕ್ ನಲ್ಲಿ ಟಿಕೆಟ್ ಮಾರುತ್ತಿದ್ದಾರೆ. 1500 ರೂ. ಟಿಕೆಟ್ಗೆ ರೂ.10,000 ಹೇಳುತ್ತಿದ್ದಾರೆ…
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಮೇ 20ಕ್ಕೆ ಜಾಮೀನು ಅರ್ಜಿ ತೀರ್ಪಿನ ಆದೇಶವನ್ನು ಕಾಯ್ದಿರಿಸಿದೆ. ಎಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೇ 20ಕ್ಕೆ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ ಎಂದು ಹೇಳಲಾಗಿದೆ. ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರಿಯಲಿದೆ. ಜಾಮೀನು ಅರ್ಜಿ ಸ್ವೀಕಾರರ್ಹತೆ ಬಗ್ಗೆ ಇದೀಗ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ ಎಂದು ತಿಳಿದುಬಂದಿದೆ. ಈ ವೇಳೆ ಕೋರ್ಟಿಂದ ತೆರಳಲು ಎಚ್ ಡಿ ರೇವಣ್ಣಗೆ ಅನುಮತಿ ನೀಡಲಾಯಿತು. ಕೋರ್ಟಿಂದ ಅನುಮತಿ ಪಡೆದು ಎಚ್ಡಿ ರೇವಣ್ಣ ನ್ಯಾಯಾಲಯದಿಂದ ತೆರಳಿದರು. ಹೌದು ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಖುದ್ದು ಹಾಜರಾದ ಶಾಸಕ ಎಚ್ಡಿ ರೇವಣ್ಣ. ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ…
ಬೆಂಗಳೂರು : ಇತ್ತೀಚಿಗೆ ಅಮಾಯಕರನ್ನು ಮೋಸ ಮಾಡಿ ಅವರಿಂದ ಹಣ ಸುಲಿಗೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಬೆಸ್ಕಾಂ ಅಧಿಕಾರಿಯೊಬ್ಬ ತಾನೊಬ್ಬ ಪೊಲೀಸ್ ಅಧಿಕಾರಿ ಎಂದು ರೈತರು ಸೇರಿದಂತೆ ಹಲವರಿಗೆ ಲಕ್ಷಾಂತರ ರೂಪಾಯಿಯನ್ನು ವಂಚನೆ ಮಾಡಿದ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಇದೀಗ ಆರೋಪಿಯನ್ನು ಕೂಡ ಬಂಧಿಸಲಾಗಿದೆ. ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬುವವರನ್ನು ಬೆಂಗಳೂರಿನ(Bengaluru) ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿದ್ದ ಎಂದು ಆರೋಪ ಕೇಳಿಬಂದಿದೆ. ಪೊಲೀಸ್ ಜಾಗೃತದಳದ ಫಲಕ ಅಳವಡಿಸಿದ್ದ ಹಿನ್ನಲೆ ಹೆದ್ದಾರಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಹೀಗಾಗಿ ಆತನನ್ನು ಯಾರೇ ಏನೇ ಪ್ರಯಾಣಿಸಿದರು ಪೊಲೀಸ್ ಐಡಿ ಕಾರ್ಡ್ ತೋರಿಸುತ್ತಿದ್ದ ಇದನ್ನೇ ದುರ್ಬಳಕೆ ಮಾಡಿಕೊಂಡ ಆತ,ಹಲವು ವರ್ಷಗಳಿಂದ ಇದೇ…
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 42ನೇ ಎಸಿಎಂ ಎಂ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ ಹಾಗಾಗಿ ಇದೀಗ ಹೆಚ್ ಡಿ ರೇವಣ್ಣ ಅವರು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದ ಎಚ್ಡಿ ರೇವಣ್ಣ. ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ ಇದೀಗ ಅವರು ಕೋರ್ಟ್ ಗೆ ಆಗಮಿಸಿದ್ದಾರೆ. ನಿನ್ನೆ ಎಚ್ ಡಿ ರೇವಣ್ಣಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದು ಮಧ್ಯಾಹ್ನದವರೆಗೆ ನ್ಯಾಯಾಲಯ ಜಾಮೀನು ನೀಡಿತ್ತು.ಇದೀಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ನ್ಯಾಯಾಲಯಕ್ಕೆ ಎಚ್ ಡಿ ರೇವಣ್ಣ ಹಾಜರಾಗಿದ್ದಾರೆ.ಹಾಗಾಗಿ ಕೆಲ ಹೊತ್ತಿನಲ್ಲಿ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ










