Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ. ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ. ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ದಾವಣಗೆರೆ : ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಉದ್ಘಾಟನೆ ಮಾಡಿ ಮಾತನಾಡಿದ ಸಚಿವರು 4 ಎಕರೆ ಜಮೀನಿನಲ್ಲಿ 8 ಕೋಟಿ ರೂ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ ಮತ್ತು ಬಸ್ಸುಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ ಬೇಡಿಕೆ ಈಡೇರಿದ್ದು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಮಾನ್ಯ ಶಾಸಕ ಶ್ರೀ.ಬಸವರಾಜ ವಿ. ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆ ಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ ಎಂದು ತಿಳಿಸಿದ ಶಾಸಕರು, ಸಾರಿಗೆ ಸಚಿವರು ಶೀಘ್ರದಲ್ಲಿಯೇ ಅನುಮತಿ ನೀಡುವುದಾಗಿ ತಿಳಿಸಿದರು. ಅದೇ ರೀತಿ…
ಮೈಸೂರು : ಮೈಸೂರಿನಲ್ಲಿ ಅತ್ಯಾಚಾರ ಎಸಗಿ 9 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಒಂದರ ಹಿಂದೆ ಒಂದು ಕೊಲೆಯಾಗುತ್ತಿದೆ ಮೈಸೂರಿನಲ್ಲಿ ಏನಾಗಿದೆ? ಮೈಲಾರಿ ದೋಸೆ ತಿನ್ನಲು ಅಷ್ಟೇ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರದ ಯಾರೊಬ್ಬರೂ ಸಹ ಯಾಕೆ ಧ್ವನಿ ಎತ್ತಿಲ್ಲ? ರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್ ರಷ್ಯಾ ಯುದ್ಧದ ಬಗ್ಗೆ ಕಮೆಂಟ್ ಮಾಡುತ್ತಾರೆ. ಕಾಂಗ್ರೆಸ್ ಅವರು ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೋಲೆ ಪ್ರಕರಣದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಪ್ರಿಯಾಂಕ್ ಖರ್ಗೆ ಸಂತೋಷ ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರ? ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತು ಏಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ನೀವು ಸಿಎಂ ಆಗಿದ್ದೀರಾ? ಪೊಲೀಸರಿಗೆ ದಕ್ಷತೆ ಇದೆ ಕೆಲಸ ಮಾಡಲು…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು 5 ಲಕ್ಷ ಹಣ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಖಾನಾಪುರ ತಾಲೂಕಿನ ನಂದಗಡದ ಅಶ್ವಿನಿ ಪಾಟೀಲ್ ಎನ್ನುವ ಅಂಗನವಾಡಿ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ನಿವಾಸಿ ಎಂದು ತಿಳಿದುಬಂದಿದೆ. ಅಂಗನವಾಡಿ ಶಿಕ್ಷಕಿ ಅಶ್ವಿನಿ ಜೊತೆಗೆ ಶಂಕರ್ ಪಾಟೀಲ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಆತನಿಗೆ 5 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅಶ್ವಿನಿ ಗೌಡ ಬಳಿ 5 ಲಕ್ಷ ರೂಪಾಯಿ ಶಂಕರಗೌಡ ಪಾಟೀಲ್ ಸಾಲ ಪಡೆದಿದ್ದ. ಆದರೆ ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಕೋಪಗೊಂಡಿದ್ದ ಶಂಕರ್ ಪಾಟೀಲ್ ಜಾತ್ರೆಗೆ ಅಂತ ಕರೆದುಕೊಂಡು ಹೋಗಿ ಅಶ್ವಿನಿ ಪಾಟೀಲ್ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಶಂಕರ್ ಪಾಟೀಲ್ ಅನ್ನು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 2 ರಂದು ಹತ್ಯೆಗೈದು ನಾಟಕ ಮಾಡಿದ್ದ. ಕಕ್ಕೇರಿ ಬಿಷ್ಟಾದೇವಿ ಜಾತ್ರೆಗೆ ಅಕ್ಟೋಬರ್ 2ರಂದು ಅಶ್ವಿನಿ ತೆರಳಿದ್ದರು. ಜಾತ್ರೆಗೆ ಹೋಗಿ ಮನೆಗೆ ಅಶ್ವಿನಿ…
ರೇಣುಕಾ ಸ್ವಾಮಿ ಕೊಲೆ ಕೇಸ್ : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ಸಿಗುತ್ತಾ? : ಕೋರ್ಟ್ ನಿಂದ ಇಂದು ಆದೇಶ ಪ್ರಕಟ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆದರೆ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಖುದ್ದು ಪರಿಶೀಲ ನಡೆಸುವಂತೆ ಮನವಿ ಮಾಡಿದ್ದರು.ವಾದ ಪ್ರತಿವಾದ ಆಲಿಸಿದ ಬಳಿಕ ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಕಾಯ್ದಿರಿಸಿತ್ತು ಇದೀಗ ಎಂದು ಆದೇಶ ಪ್ರಕಟಸಲಿದೆ ಈ ಅರ್ಜಿ ಕುರಿತು ನೆನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಸಿಕ್ಯೂಶನ್ ವಾದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಡ್ಜ್ ಕುರಿತು ಪರಿಶೀಲಿಸಿದರೆ ಪ್ರಾಜೆಕ್ಯೂಷನ್ಗೆ ಭಯ ಏಕೆ? ಸವಲತ್ತು ನೀಡಿದೆಯೋ ಇಲ್ಲವೋ ಎಂದು ಕೋರ್ಟ್ ಪರಿಶೀಲಿಸಬೇಕು ಎಂದು ದರ್ಶನ್ ಪರವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲೇಖಿಸಿ ವಾದಿಸಿದರು. ಅರ್ಜಿಗೆ ಎಸ್ ಪಿ ಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು ಅರ್ಜಿ ಊರ್ಜಿತವಲ್ಲ ಎಂದು ಪರಿಗಣಿಸಿ ವಜಾಗೊಳಿಸಲು ಪ್ರಸನ್ನ ಕುಮಾರ್ ಮನವಿ ಮಾಡಿದರು. ಅಪರಾಧ…
ಚಿಕ್ಕಮಗಳೂರು : ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದೆ. ದೇವಿರಮ್ಮ ಬೆಟ್ಟ ದಾರಿ ಸ್ವಚ್ಛ ವೇಳೇ ಈ ಒಂದು ಅಸ್ತಿ ಪಂಜರ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಇರುವ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದ್ದು, ವರ್ಷದಲ್ಲಿ ಒಮ್ಮೆ ಮಾತ್ರ ಗ್ರಾಮಸ್ಥರು ಮತ್ತು ಭಕ್ತರು ಈ ಒಂದು ದೇವಿರಮ್ಮ ಬೆಟ್ಟಕ್ಕೆ ತೆರಳುತ್ತಾರೆ. ದೇವಿರಮ್ಮ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಇದೀಗ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದೆ. ದೀಪಾವಳಿ ಹಬ್ಬದ ದಿನ ಬೆಟ್ಟ ಏರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ವರ್ಷ ಬೆಟ್ಟಕ್ಕೆ ತೆರಳಿ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಾರೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಪೊಲೀಸರು ಅಸ್ತಿಪಂಜರ ಪತ್ತೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಲಕ್ಕಿ ಪಾರಿಜಾತ ದೈವಿಕ ಶಕ್ತಿಯನ್ನು ಹೊರಹಾಕುವ ಪಾವಲ ಮಲ್ಲಿ ಎಂದು ಕರೆಯಲ್ಪಡುವ ಈ ಪಾರಿಜಾತ ಹೂವಿನಿಗಾಗಿ ಇಂದ್ರ ಮತ್ತು ಕೃಷ್ಣ ದೊಡ್ಡ ಯುದ್ಧ ನಡೆಸಿದರು. ನೀವು ಈ ಹೂವಿನೊಂದಿಗೆ ಪ್ರಾರ್ಥಿಸಿ ವರವನ್ನು ಕೇಳಿದರೆ, ನೀವು ಕೇಳಿದ ವರವು ನಿಮಗೆ ಸಿಗುತ್ತದೆ ಎಂದು ನಂಬಲಾಗಿದೆ. ಈ ಪೋಸ್ಟ್ನಲ್ಲಿ, ಪಾರಿಜಾತ ಹೂವಿನ ಪೌರಾಣಿಕ ಕಥೆ ಮತ್ತು ಈ ಹೂವು ತರಬಹುದಾದ ಪ್ರಯೋಜನಗಳ ಬಗ್ಗೆ ಆಧ್ಯಾತ್ಮಿಕ ಮಾಹಿತಿಯನ್ನು ನಾವು ಹಂಚಿಕೊಳ್ಳುತ್ತೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…
ಬೆಂಗಳೂರು : ಬೆಂಗಳೂರಿನ ಬನಶಂಕರಿ ಮೆಟ್ರೋ ಸ್ಟೇಷನ್ ಗೆ ಬೀಡಾಡಿ ದನ ನುಗ್ಗಿದೆ. ಮೆಟ್ರೋ ಸ್ಟೇಷನ್ ನಲ್ಲಿ ಹಸು ಕಂಡು ಪ್ರಯಾಣಿಕರು ಶಾಕ್ ಆಗಿದ್ದಾರೆ. ಹಸು ಏನಾದರೂ ಟ್ರ್ಯಾಕ್ಕೆ ನುಗ್ಗಿದ್ದರೆ, ದೊಡ್ಡ ಅನಾಹುತಾವೇ ನಡೆದು ಹೋಗುತ್ತಿತ್ತು. ಕಳೆದ ಬುಧುವಾರ ರಾತ್ರಿ 8:00ಗೆ ಆಗಿರುವಂತಹ ಘಟನೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಸು ಮೆಟ್ರೋ ಸ್ಟೇಷನ್ ಗೆ ನುಗ್ಗಿರೋ ವಿಡಿಯೋ ವೈರಲ್ ಆಗಿದೆ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷದಿಂದ ಈ ಒಂದು ಘಟನೆ ನಡೆದಿದೆ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಗಲಕುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ಒಂದು ದುರಂತ ಸಂಭವಿಸಿದೆ. ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಚೂರು ಮೂಲದ ವಿಜಯಲಕ್ಷ್ಮಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಜಯಲಕ್ಷ್ಮಿ ಸಹೋದರಿ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಮಾಲ್ ನಲ್ಲಿ ವಿಜಯಲಕ್ಷ್ಮಿ ಪತಿ ಕೆಲಸ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಇನ್ಸೂರೆನ್ಸ್ ಆಸ್ತಿ ಮನೆ ಮತ್ತು ಜಮೀನಿನಗಾಗಿ ಅಳಿಯನನ್ನೇ ಕೊಲೆ ಮಾಡಲಾಗಿದೆ. ಅಳಿಯನನ್ನು ಕೊಲೆ ಮಾಡಿಸಿದ್ದ ಮಾವ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಬಸವರಾಜ್ ಪುಟ್ಟಪ್ಪನವರ್ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಿ ಕಥೆ ಕಟ್ಟಿದರು ಅಪಘಾತದಲ್ಲಿ ಸಾವು ಎಂದು ಆರೋಪಿಗಳು ಬಿಂಬಿಸಿದ್ದಾರೆ. ಸೆಪ್ಟೆಂಬರ್ 27 ರಂದು ಬಸವರಾಜ್ ಮರ್ಡರ್ ನಡೆದಿದೆ. ಬಸವರಾಜ್ಗೆ ಕಂಠಪೂರ್ತಿ ಕುಡಿಸಿ ಕಾರಿನಿಂದ ಗುದ್ದಿಸಿದ್ದಾರೆ.ಬಳಿಕ ಅಪಘಾತದಲ್ಲಿ ಸಾವನಪ್ಪಿದ್ದಾನೆ ಎಂದು ಆರೋಪಿಗಳು ಬಿಂಬಿಸಿದ್ದಾರೆ ದೂರದಲ್ಲಿ ಈ ಒಂದು ಕೊಲೆ ಮಾಡಿದ್ದಾರೆ. ರಾಘವೇಂದ್ರ ಬಾಳಗುಂಡರ, ಪ್ರವೀಣ್, ಸಿದ್ದನಗೌಡ ಹಲಗೇರಿ ಲೋಕೇಶ್ ಎಂಬಾತರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಉದಾರಣೆ ವೇಳೆ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.














