Author: kannadanewsnow05

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು ಎಂದು ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿಯ ಜನ ಸಂಪರ್ಕ ಸಭೆಯಲ್ಲಿ ಕೆ ಎನ್ ರಾಜಣ್ಣ ಈ ಒಂದು ಹೇಳಿಕೆ ನೀಡಿದ್ದಾರೆ. 2004ರಲ್ಲಿ ನಾನು ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿದ್ದೆ ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್, ವಾಷ್ ಆಗಿತ್ತು. ಈಗ ಜಿಲ್ಲೆಯಲ್ಲಿ ಮತ್ತೆ ಅದೇ ಸ್ಥಿತಿ ಬರುತ್ತೇನೋ ಗೊತ್ತಿಲ್ಲ. ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರು ಅಲ್ಲ ಶತ್ರುಗಳು ಇರಲ್ಲ ಎಂದು ಶಾಸಕ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ. 2004ರಲ್ಲಿ ಕಾಂಗ್ರೆಸ್ ಪಕ್ಷದ ನನಗೆ ಸರಿಯಾದ ಗೌರವ ನೀಡಲಿಲ್ಲ. ಆಗ ನಾನು ಜೆಡಿಎಸ್ ಪಕ್ಷ ಸೇರಿಕೊಂಡು ಜಿಲ್ಲೆಯಲ್ಲಿ ಪ್ರವಾಸ ಮಾಡಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ವೈಟ್ ವಾಶ್ ಮಾಡಿದ್ವಿ. ಕಾಂಗ್ರೆಸ್ ಗೆ ಮತ್ತೆ ಅಂತಹ ಸ್ಥಿತಿ ಬರುತ್ತೇನೋ ಗೊತ್ತಿಲ್ಲ ನೋಡೋಣ ಮುಂದೆ ಏನಾಗುತ್ತೋ ಅಂತ…

Read More

ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣ ನಡೆದ ಬೆನ್ನಲ್ಲೆ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ ಮಹಿಪಾಲಪುರ ರಾಡಿಸನ್ ಹೋಟೆಲ್ ಬಳಿ ಸ್ಪೋಟ ಸಂಭವಿಸಿದೆ. ಬೆಳಿಗ್ಗೆ 9.18ರ ಸುಮಾರಿಗೆ ಸ್ಫೋಟದ ಸದ್ದು ಕೇಳಿಸಿದೆ. ಸ್ಪೋಟದ ಸದ್ದಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈಗಾಗಲೇ ಮೊದಲು ಸ್ಪೋಟದ ಪರಿಣಾಮ 12 ಜನರು ಸಾವನ್ನಪ್ಪಿದ್ದು 17 ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಇಂದು ಬೆಳಿಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು ದೆಹಲಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವತಿ ಒಬ್ಬಳು ಯುವಕನನ್ನು ಪರಿಚಯಿಸಿಕೊಂಡಿದ್ದಾಳೆ. ಬಳಿಕ ಯುವಕನನ್ನು ಲಾಡ್ಜ್ ಗೆ ಕರೆದು ಇದು ಯುವಕನ 58 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದ ಯುವಕ. ಪೀಣ್ಯದ ನಾಗಸಂದ್ರದ ಪಿಜಿ ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್​ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್​ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್​ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದಾರೆ. ಮದ್ಯ…

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಎಚ್ ಡಿ ಕೋಟೆ ತಾಲೂಕಿನ ಬೆಳ್ತೂರು ಬಳಿ ಹುಲಿ ದಾಳಿಗೆ ಮಗ್ಗೆ ಮರಳಿ ದೇವಸ್ಥಾನದ ಎತ್ತು ಬಲಿಯಾಗಿದೆ. ಗ್ರಾಮದ ಜನರು ಪೂರಿಸುತ್ತಿದ್ದ ಊರ ಬಸವ ಹುಲಿ ದಾಳಿಗೆ ಬಲಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ದಾಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಆಗಲಿದೆ ಎಂದು ಕೆಲವು ವಿಪಕ್ಷ ನಾಯಕರು ಹಾಗೂ ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ನಾಯಕರೇ ಹೇಳಿಕೆ ನೀಡಿದ್ದಾರೆ. ಇನ್ನು ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ರಾಜ್ಯದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನವೆಂಬರ್ ಕ್ರಾಂತಿಯ ಬಗ್ಗೆ ನಾವು ಮಾತನಾಡಲ್ಲ. ನಾನು ಈ ಬಗ್ಗೆ ಮಾತನಾಡುವುದಿಲ್ಲ ಆದರೆ ಕಾದು ನೋಡೋಣ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುತ್ತಾರೆ. ಕಾರ್ಯಕರ್ತರು ಕೂಡ ಅವರೇ ಮುಂದುವರಿಯಬೇಕೆಂದು ಬಯಸಿದ್ದಾರೆ. ಬಿ.ವೈ ವಿಜಯೇಂದ್ರ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು. ಇನ್ನು ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ…

Read More

ಗದಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ‌ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಈಶಪ್ಪ ಕುರಿ ಎಂಬುವರ ಜಮೀನಿನ ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ವ್ಯಕ್ತಿಯನ್ನು ಒಳ ಉಡುಪುನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಿನಲ್ಲಿ ಎಸೆದಿದ್ದಾರೆ. ಮುಖ, ಕುತ್ತಿಗೆ ಹಾಗೂ ತಲೆಗೆ ಗಾಯವಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆತ್ತಲೆಗೊಳಿಸಿ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಎಸ್.ಪಿ ರೋಹನ್‌ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ಸಿಪಿಐ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ದೀಪಕ್ ಸಾವನನಪ್ಪಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬಳಿ ರಾತ್ರಿ ಒಂದು ದುರ್ಘಟನೆ ಸಂಭವಿಸಿದೆ. ಮೃತ ದೀಪಕ್ ಖಾಸಗಿ ಕಂಪನಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆ ರೋಷಣಿ ಜೊತೆಗೆ ಕೋರಮಂಗಲಕ್ಕೆ ದೀಪಕ್ ಹೋಗಿದ್ದರು. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ಮರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ದೀಪಕ್ ತೆರಳುತ್ತಿದ್ದರು ಈ ವೇಳೆ ವಿಂಡ್ಸರ್ ಮ್ಯಾನರ್ ಬಳಿ ಸ್ಟೆಪ್ಸ್ ಮೇಲೆ ದೀಪಕ್ ಬೈಕ್ ಇಳಿಸಿದ್ದಾರೆ. ಆಯತಪ್ಪಿ ಬುಲೆಟ್ ಬೈಕ್ ನಿಂದ ದೀಪಕ್ ಬಿದ್ದು ತಲೆಗೆ ಪೆಟ್ಟಾಗಿತ್ತು. ದೀಪಕ್ ಗೆಳತಿ ರೋಷಣಿಗೆ ಕಾಲು ಮುರಿದು ಬಿದ್ದು ಒದಾಡುತ್ತಿದ್ದರು. ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡೆಹರಾಡೂನ್ ಮೂಲಕ ದೀಪಕ್ ಸಾವನಪ್ಪಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸತತ 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು. ಬಳಿಕ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಗೊಂಡು 11 ಜನರು ಸಾವನ್ನಪ್ಪಿದ್ದು, ದುಃಖದ ಸಂಗತಿಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಆರ್‌ಸಿಬಿ ಅಭಿವಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು. ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಅಷ್ಟೆ ಅಲ್ಲದೇ ಕಾಲ್ತುಳಿತ ದುರಂತ ಪ್ರಕರಣ ಈಗ ಆರ್‌ಸಿಬಿ ತವರು ನೆಲವನ್ನ ತೊರೆಯುವಂತೆ ಮಾಡಿದೆ. ವರದಿಗಳ ಪ್ರಕಾರ, ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (MCA) ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು MCA ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿ RCB ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು…

Read More

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್‌ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್‌ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ…

Read More

ಮೈಸೂರು : ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದು, ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ ಇದು ಬಹಳ ಅಪಾಯಕಾರಿ ಮುಸ್ಲಿಮರ ಸಮಸ್ಯೆ ಬಡತನ ಅಲ್ಲ ಅವರ ಒಳಗಿನ ಧರ್ಮಂದತೆ ಹಾಗೂ ಅವರ ಮನಸ್ಥಿತಿಯ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು. ಮೈಸೂರಲ್ಲಿ ಮಾತನಾಡಿದ ಅವರು, ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸವಾಗಿದೆ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನು ಹೇಗೆ ಪತ್ತೆಹಚ್ಚುವುದು? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರ? ಇಂತಹ ನಾಯಕರು ಇರುವವರೆಗೂ ಈ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಮೈಸೂರಿನಲ್ಲಿ ಬಿಜೆಪಿಯ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ

Read More