Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜ್ಞಾನ ಎನ್ನುವುದು ಯಾರ ಅಪ್ಪನ ಮನೆಯ ಸ್ವತ್ತಲ್ಲ ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯ ಆಗುತ್ತಿತ್ತಾ? ಬೆಸ್ತರ ಜಾತಿಯಲ್ಲಿ ಹುಟ್ಟಿದವರು ಮಹಾಭಾರತ ಬರೆಯಲು ಆಗುತ್ತಿತ್ತ? ಎಂದು ಪ್ರಶ್ನಿಸಿದರು. ಎಲ್ಲರಿಗೂ ಸಮಾನವಾದ ಅವಕಾಶ ಸಿಕ್ಕರೆ ಸಮಾನವಾಗಿ ಬೆಳೆಯುತ್ತಾರೆ. ನಮ್ಮದು ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆ. ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಬಂದರೆ ಇದಕ್ಕೆ ಚಲನೆ ಬರುತ್ತದೆ. ಅದಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬೇಡಿಕೆ ಇಟ್ಟಿದ್ದೀರಿ ಅದನ್ನು ಮುಂದಿನ ವರ್ಷದಿಂದ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ನಾನು ರಾಜಕೀಯದಲ್ಲಿ ಏನು ಮಾತು ಕೊಡುತ್ತೇನೋ ಆ ಕೆಲಸ ಮಾಡುತ್ತೇನೆ. ಮೆಟ್ರೋ ಯೋಜನೆ ನಾವು ಮತ್ತು ಕೇಂದ್ರ ಸರ್ಕಾರ ಸೇರಿ ಮಾಡಿರುವುದು. ಮೆಟ್ರೋದಲ್ಲಿ ರಾಜ್ಯದ ಪಾಲು ಹೆಚ್ಚಿದೆ ಶೇ.87 ರಷ್ಟು ನಮ್ಮ…
ಹಾಸನ : ಹಾಸನದಲ್ಲಿ ಸಮೀಕ್ಷೆಗೆ ಹೋಗುತ್ತಿದ್ದ ಶಿಕ್ಷಕಿಗೆ ಅಪಘಾತವಾಗಿದ್ದು, ಗಂಭೀರವಾದ ಗಾಯಗಳಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಾಯಿ ಅಡ್ಡ ಬಂದಿದ್ದರಿಂದ ಅಪಘಾತವಾಗಿದ್ದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ವಡ್ಡರಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ವಡ್ಡರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ರಾಧಾಗೆ ಗಂಭೀರವಾಗಿ ಗಾಯವಾಗಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ರಾಧಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಶಿಕ್ಷಕಿ ರಾಧಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಕ್ಷಕಿ ಮೇಲೆ ನಾಯಿ ದಾಳಿ ಇನ್ನು ಹಾಸನದಲ್ಲಿ ಮತ್ತೊಂದು ಘಟನೆ ಸಂಭವಿಸಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದ ಅವರ ಪತಿ ಸೇರಿ 7 ಜನರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ. ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.…
ಹಾಸನ : ಹಾಸನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದವರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ. ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಶಿಕ್ಷಕಿ ಚಿಕ್ಕಮಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಶಿಕ್ಷಕಿ ಚಿಕ್ಕಮಗೆ ಗಂಭೀರವಾದ ಗಾಯಗಳಾಗಿವೆ. ಆಸ್ಪತ್ರೆಗೆ ಶಾಸಕ ಸುರೇಶ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.
ಬೆಂಗಳೂರು : ಬೆಂಗಳೂರಿನ ಬೇಗೂರಿನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸ್ಕ್ರಾಪ್ ಗೋ Lದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಗೋದಾಮಿನಲ್ಲಿ ಇದ್ದಂತಹ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ದಟ್ಟವಾದ ಹೊಗೆಯಿಂದ ಇಡೀ ಏರಿಯಾವನ್ನು ಆವರಿಸಿದೆ. ಬೇಗೂರಿನ ಅಕ್ಷಯ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೂರು ಅಗ್ನಿಶಾಮಕ ವಾಹನ ದೌಡಯಿಸಿವೆ. 20ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಂಕಿ ನಂದಿಸುವಲಿ ನಿರತರಾಗಿದ್ದಾರೆ. ಮೊದಲಿಗೆ ಸಿಲಿಂಡರ್ ಬ್ಲಾಸ್ಟ್ ನಿಂದ ಈ ಒಂದು ಅಗ್ನಿ ಅವಗಡ ಸಂಭವಿಸಿದೆ. ಪ್ಲಾಸ್ಟಿಕ್ ಗೋದಾಮು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸುಮಾರು 2 ಗಂಟೆಗಳ ಕಾಲ ಬೆಂಕಿ ನಂದಿಸುತ್ತಿದ್ದರು, ಬೆಂಕಿ ತಹ ಬದಿಗೆ ಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಮತ್ತಷ್ಟು ಮಾಹಿತಿಯನ್ನು…
ಕೊಪ್ಪಳ : ಡಿಕೆ ಸಿಎಂ ಆಗಬೇಕು ಅಂತ ಆಪ್ತರು ಹೇಳಿಕೆ ವಿಚಾರವಾಗಿ ನಾನು ಸಿಎಂ ಆಗಬೇಕು ಅಂತ ಕೆಲವರು ಹೇಳುತ್ತಾರೆ ನಾನೇನು ಕಮ್ಮಿ ಇದಿನ ಡಿಕೆ ಎಷ್ಟು ಸಲ ಗೆದ್ದಿದ್ದಾರೆ ನಾನು ಸಹ ಅಷ್ಟೇ ಸಲ ಗೆದ್ದಿದ್ದೇನೆ ನಾನು 1985 ರಿಂದ ಶಾಸಕನಾಗಿದ್ದೇನೆ ಅಭಿಮಾನಕ್ಕಾಗಿ ಕೆಲವರು ಆ ರೀತಿ ಹೇಳಿಕೆ ನೀಡುತ್ತಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಪ್ರಕ್ಷಣೆಗಳ ಬಗ್ಗೆ ಡಿಕೆ ಶಿವಕುಮಾರ್ ಅಸಮಾಧಾನ ವಿಚಾರವಾಗಿ ಡಿಕೆ ಶಿವಕುಮಾರ್ ಹೇಳಿಕೆಯಲ್ಲಿ ತಪ್ಪಿಲ್ಲ ಆದರೆ ಅದು ಅನಿವಾರ್ಯ ಜಾಸ್ತಿ ಪ್ರಶ್ನೆ ಕೇಳಿದರೆ ಮತ್ತೊಂದು ಸರ್ವೇ ಮಾಡುವುದು ತಪ್ಪುತ್ತದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕೊಕನೂರ ಕನಕಗಿರಿ ಕಾರಟಿಗಿಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಸರ್ವೆ ಆಗಿದೆ ಹಾಗಾಗಿ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಜಾತಿಗಣತಿಯಲ್ಲ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿ ನನಗೆ ಯಾವುದೇ ಜಾತಿ ಧರ್ಮ ಇಲ್ಲ…
ಕೊಪ್ಪಳ : ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಪಟ್ಟಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದು. ಸಿಎಂ ಸಿದ್ದರಾಮಯ್ಯಗೆ ವೋಟ್ ಹಾಕಿದ್ದು ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಮಧ್ಯ ಬಿಟ್ಟು ಹೋಗಲಿ ಅಂತ ಅಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯಕ್ಕೆ ಅಪಪ್ರಸ್ತುತ 5 ವರ್ಷ ಇರಲಿ ಅಂತ ಸಿದ್ದರಾಮಯ್ಯಗೆ ವೋಟ್ ಹಾಕಲಾಗಿದೆ. ಐದು ವರ್ಷ ಆಗಿರುತ್ತಾರೆ ಅಂತ ಅಂದುಕೊಂಡಿದ್ದೇನೆ ನವೆಂಬರ್ ಕ್ರಾಂತಿ ಇಲ್ಲ ನಮ್ಮದು ಏನಿದ್ದರೂ ಶಾಂತಿ ಬದಲಾವಣೆ ಮಾತನಾಡಬಾರದು ಅಂತ ಹೈಕಮಾಂಡ್ ಹೇಳಿದೆ ಯಾರು ಸಹ ಬದಲಾವಣೆ ಕುರಿತು ಮಾತನಾಡಬೇಡಿ ಅಂತ ಹೈ ಕಮಾಂಡ್ ಹೇಳಿದೆ ಸಿಎಂ ಆಯ್ಕೆ ಮಾಡುವುದು ಪಕ್ಷ ಮತ್ತು ಹೈಕಮಾಂಡ್ ಶಾಸಕರ ಅಭಿಪ್ರಾಯದಲ್ಲಿ ಸಿಎಂ ಹಾಕಿ ಆಗೋದು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಇದೀಗ ಪ್ಲಾನ್ ಮಾಡಿಕೊಂಡಿದ್ದು ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ. ಕರ್ನಾಟಕ ಗೃಹ ಮಂಡಳಿಗೆ ರೈತರ ಕೃಷಿ ಭೂಮಿ ಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಂಡಿದೆ. 2760 ಎಕರೆ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೊಡ್ಡ ಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ, ಸೇರಿದಂತೆ ಒಟ್ಟು 2760 ಎಕರೆ ಭೂಸ್ವಾಧೀನಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರು ಸಮಾವೇಶ ನಡೆಸುತ್ತಿದ್ದಾರೆ. ಚಿಕ್ಕ ಬೆಳವಂಗಲದಿಂದ ದೊಡ್ಡ ಬೆಳವಂಗದವರೆಗೆ ರೈತರು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಮಂಡಳಿ ನೋಟಿಸ್ ಗಳನ್ನು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ಹಿರಿಯ ಪತ್ರಕರ್ತ ದಿ.ಜಯಣ್ಣ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಮೂಲದವರಾದ ಜಯಣ್ಣ ಅವರು ಕೋವಿಡ್ ನಿಂದ ಮೃತಪಟ್ಟಿದ್ದರು. ಅವರ ಕುಟುಂಬ ಆರ್ಥಿಕವಾಗಿ ಸಂಷ್ಟದಲ್ಲಿದ್ದ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪತ್ರ ಬರೆದು ಸರ್ಕಾರದ ಗಮನಕ್ಕೆ ತಂದಿದ್ದರು. ಹಾಗಾಗಿ ಬಾಕಿ ಇದ್ದ ಕಡತ ವಿಲೇವಾರಿಗೆ ಸಿಎಂ ಸೂಚಿಸಿದ್ದರು. ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧನ್ಯವಾದಗಳನ್ನು ಸಲ್ಲಿಸಿದೆ.
ಬೆಂಗಳೂರು : ಬೆಂಗಳೂರಲ್ಲಿ ಜಾತಿ ಗಣತಿ ನಡೆಸಿದ ಸಿಬ್ಬಂದಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಕೇಂದ್ರ ಸರ್ಕಾರ ಮುಂದೆ ಗಣತಿ ಮಾಡಿಸುತ್ತದೆ ಅದನ್ನ ನೀವೇ ಮಾಡುವುದು ಹೇಗೆ ಮಾಡಿಸುತ್ತೆ ಅಂತ ನೀವೇ ನೋಡಿ. ಸರಕಾರಿ ನೌಕರರು ಸರ್ಕಾರದ ಏಜೆಂಟ್ ಆಗಬಾರದು. ಇಷ್ಟು ಜನ ಯಾಕೆ ಬಂದಿದ್ದೀರಿ? ಎಷ್ಟು ಪ್ರಶ್ನೆಗಳು ಬೇಕಾ ಇದೆಲ್ಲ ನೀವು ಸರ್ಕಾರಕ್ಕೆ ತಿಳಿಸಬೇಕಲ್ವಾ? ಅಂತ ವಿ ಸೋಮಣ್ಣ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಕೇಂದ್ರ ಸಚಿವ ವಿ ಸೋಮಣ್ಣ ಮನೆಯಲ್ಲಿ 9 ಸಿಬ್ಬಂದಿಯಿಂದ ಸಮೀಕ್ಷೆ ನಡೆಸಲಾಯಿತು. ಈ ವೇಳೆ ಉಪಜಾತಿ ಯಾವುದು ಅಂತ ಕೇಳಿದಾಗ ಅದೆಲ್ಲಾ ಯಾಕೆ ಬೇಕು ಅಂತ ಪ್ರಶ್ನಿಸಿದರು. ಬಳಿಕ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದರು. ಮದುವೆ ಆದಾಗ ನಿಮಗೆ ಎಷ್ಟು ವರ್ಷ ಅಂತ ಕೇಳಿದಾಗ, ದುರಂತ ನಮ್ಮ ಅಮ್ಮನ ಕೇಳಬೇಕು 26 ಅಂತ ಬರೆದುಕೊಳ್ಳಿ ಎಂದರು. ಇದು ಸಿದ್ದರಾಮಯ್ಯ ವೋಟ್…
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಭರ್ಜರಿ ಬರ್ತಡೇ ಪಾರ್ಟಿ ಘಟನೆಗೆ ಸಂಬಂಧಿಸಿದಂತೆ, ಇದೀಗ ಎಡಿಜಿಪಿ ಬಿ.ದಯಾನಂದ ಈ ಒಂದು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಸೀನ, ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು. ಕೇಕ್ ಕತ್ತರಿಸಿ ಸೇಬಿನ ಹಾರ ಹಾಕೊಂಡು ಭರ್ಜರಿಯಾಗಿ ಬರ್ತಡೆ ಆಚರಿಸಿಕೊಂಡಿದ್ದ. ಈ ಒಂದು ವಿಡಿಯೋ ಹೊರಗಡೆ ಬಂದಿದ್ದೆ ತಡ, ಜೈಲಾಧಿಕಾರಿ ಹಾಗೂ ಸಿಬ್ಬಂದಿಗೆ ಬಿ.ದಯಾನಂದ ಕ್ರಾಸ್ ತೆಗೆದುಕೊಂಡಿದ್ದು ಕೂಡಲೇ ಆಂತರಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಘಟನೆ ಹಿನ್ನೆಲೆ? ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ. ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆ್ಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಈತ ಕೊಲೆ ಕೇಸ್ನಲ್ಲಿ…