Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ವಾಚ್ ವಿಚಾರವಾಗಿ ಗಲಾಟೆ ನಡೆದು 5ನೇ ತರಗತಿ ಬಾಲಕನ ಮೇಲೆ ಹಲ್ಲೆ ನಡೆದಿದೆ. ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ವಿಜಯಪುರ ನಗರದ ಹೊರಭಾಗದ ಯೋಗಾಪುರದಲ್ಲಿ ನಡೆದಿದೆ. ಹೌದು ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ. ಪೋಷಕರು ಮಗ ಅನ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ…
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಗ್ಗನ ವಿರುದ್ಧ ಕ್ಲೋಸ್ ಆಗಿದ್ದ ರೌಡಿಶೀಟರ್ ಪೊಲೀಸರು ಮತ್ತೆ ರೀ ಓಪನ್ ಮಾಡಿದ್ದಾರೆ. ಹೌದು ಬೆಂಗಳೂರಿನ ಪೂರ್ವ ವಿಭಾಗ ಪೊಲೀಸರು ಆರೋಪಿ ಜಗ್ಗನ ವಿರುದ್ಧ ರೌಡಿಶೀಟರ್ ಓಪನ್ ಮಾಡಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಜಗ್ಗನ ವಿರುದ್ಧ ರೌಡಿ ಪಟ್ಟಿ ಭಾರತಿ ನಗರ ಠಾಣೆಯಲ್ಲಿ ಬಿ ರೌಡಿ ಪಟ್ಟಿ ತೆರೆಯಲಿದ್ದಾರೆ ಈ ಒಂದು ಕೊಲೆ ಪ್ರಕರಣದಲ್ಲಿ ಬಂಧನವಾದ ಎಲ್ಲಾ ಆರೋಪಿಗಳ ವಿರುದ್ಧ ಕೂಡ ರೌಡಿಶೀಟರ್ ಓಪನ್ ಆಗಲಿದೆ ಆರೋಪಿಗಳ ವಿರುದ್ಧ ಭಾರತೀಯ ನಗರ ಪೊಲೀಸ್ರಿಂದ ರೌಡಿ ಶೀಟ್ ಓಪನ್ ಆಗಲಿದೆ ಮುಂದಿನ ದಿನದಲ್ಲಿ ಪೊಲೀಸರು ಓಪನ್ ಮಾಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಆರೋಪಿ ಜಗ್ಗ ಎಲ್ಲಿ ಇದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ…
ಬೆಂಗಳೂರು : ರಾಜ್ಯದ ಹಲವಡೆ ರಸಗೊಬ್ಬರ ಅಭಾವ ವಿಚಾರವಾಗಿ ಕೇಂದ್ರ ಗೊಬ್ಬರ ಪೂರೈಕೆ ಮಾಡುವವರೆಗೂ ಈ ಸಮಸ್ಯೆ ಇರುತ್ತದೆ. ಒಂದುವರೆ ಲಕ್ಷ ಬ್ಯಾಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಆಗಬೇಕು ಏನು ಮಾಡಬೇಕು ಅಂತ ನನಗೂ ಗೊಂದಲ ಆಗಿದೆ ನನ್ನ ರಾಜೀನಾಮೆ ಯಾಕೆ ಕೇಳ್ತಾರೆ.? ಎಂದು ಎಸ್ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ರಸಗೊಬ್ಬರ ನೀಡದಿರುವ ಜೆಪಿ ನಡ್ದ ಅವರ ರಾಜೀನಾಮೆ ಕೇಳಲಿ. ವಿಧಾನಸಭೆ ವಿಪಕ್ಷ ನಾಯಕ ಅಶೋಕಗೆ ಆ ತಾಕತ್ ಇದೆಯಾ? ಒಂದುವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಬರಬೇಕು ಇದಕ್ಕೆ ಯಾರು ಹೊಣೆ? ಜೆಪಿ ನಡ್ಡಾಗೆ ರಾಜ್ಯದ ಸಮಸ್ಯೆ ಬಗ್ಗೆ ಹರಿಸಲು ಸಮಯ ಕೊಟ್ಟಿಲ್ಲ. ಖಾಸಗಿ ಕಾರ್ಯಕ್ರಮವಾದರೂ 2 ನಿಮಿಷ ಟೈಮ್ ಕೊಡಬಹುದಾಗಿತ್ತು ಅಲ್ವಾ? ಎಂದು ಪ್ರಶ್ನಿಸಿದರು ದೆಹಲಿಯಲ್ಲಿ ಅಧಿಕೃತ ಭೇಟಿಗೂ ಜೆಪಿ ನಡ್ದ ಅವಕಾಶ ಕೊಡುತ್ತಿಲ್ಲ. ನಾವು ಮೋದಿ ಅವರ ಬಳಿ ರಸಗೊಬ್ಬರ ಕೇಳುವುದು ಸೂಕ್ತವಲ್ಲ. ಬಿಜೆಪಿ ಅವರೇ ಪ್ರತಿ ಗೊಬ್ಬರ…
ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ ಕಾನೂನು ಎಲ್ಲರಿಗೂ ಒಂದೇ ಎಂದು ನಿನ್ನೆಯ ಧರ್ಮಸ್ಥಳ ಗಲಾಟೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು : ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿರುವ ಮಾಹಿತಿ ಬಂದಿದೆ. ಏಕೆ ಆಗಿದೆ? ಕಾರಣ ಏನು? ಉದ್ದೇಶ ಏನು? ಎಂಬ ವರದಿ ನೀಡಲು ಸೂಚನೆ ನೀಡಿದ್ದೇನೆ. ಈ ಒಂದು ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾಕೆ ಗಲಾಟೆ ಆಗುತ್ತಿದೆ ಅನ್ನುವುದು ನನಗೆ ಗೊತ್ತಿಲ್ಲ. ಜನರ ಆಗ್ರಹ ಹಿನ್ನೆಲೆಯಲ್ಲಿ ತನಿಖೆಗೆ ಎಸ್ ಐ ಟಿ ರಚನೆ ಮಾಡಿದ್ದೇವೆ. ವ್ಯಕ್ತಿಯೊಬ್ಬ ಅನೇಕ ಶವ ಹೂತಿದ್ದೇನೆ ಎಂಬ ಮಾಹಿತಿ ನೀಡಿದ್ದಾನೆ. ಸುಮಾರು 13 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆದಿದೆ 6ನೇ ಪಾಯಿಂಟ್ ನಲ್ಲಿ ಪುರುಷನ ಅಸ್ತಿ ಪಂಜರ ಸಿಕ್ಕಿದೆ ಎಂದಿದ್ದಾರೆ. ಬೇರೆ ಗುಡ್ಡದಲ್ಲಿ ಮೂಳೆಗಳು ಸಿಕ್ಕಿವೆ. ಈ ಕುರಿತು ಎಫ್ ಎಸ್ಎಲ್ಗೆ ಮೂಳೆಗಳನ್ನು ಕಳುಹಿಸಿದ್ದಾರೆ. ನಿನ್ನೆ ಗಲಾಟೆ ಸಂಬಂಧ ಎರಡು ಗುಂಪಿನವರು ದೂರ ಕೊಟ್ಟಿದ್ದಾರೆ. ತನಿಖೆ ಮಾಡಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಮುಖ ಆರೋಪಿ ಆಗಿರುವಂತಹ ಜಗ್ಗ ಕೊಲೆಯಾದ ದಿನವೇ ಭಾರತ ಬಿಟ್ಟು ದುಬೈಗೆ ಪರಾರಿಯಾಗಿದ್ದ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿ ಜಗ್ಗನಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈಗೆ ಪರಾರಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿಐಡಿ ಪೋಲೀಸರು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಇಂಟರ್ಫೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದ್ದು, ಸಿಐಡಿ ಪೊಲೀಸರು ಇದೀಗ ಆತನ ಕುರಿತು ಮಾಹಿತಿ ಕಲೆ ಹಾಕಲಿದ್ದಾರೆ ಎನ್ನುವುದರ ಕುರಿತು ಮಾಹಿತಿ ಸಿಗಲಿದೆ. ಆದರೆ ಇದೀಗ CID ಅಧಿಕಾರಿಗಳಿಗೆ ಬಂದಿರುವ ಮಾಹಿತಿ ಪ್ರಕಾರ ಆರೋಪಿ ಜಗ್ಗ ದುಬೈ ನಿಂದಲೂ ಪರಾರಿಯಾಗಿದ್ದಾನೆ ಎನ್ನಲಾಗಿದೆ. ದುಬೈ ಏರ್ಪೋರ್ಟ್ ಎಂಟ್ರಿ ಆಗಿದ್ದರ ಬಗ್ಗೆ ಸಿಐಡಿ ಗೆ ಮಾಹಿತಿ ತಿಳಿದು ಬಂದಿದೆ ಬ್ಲೂ ಕಾರ್ನರ್ ನೋಟಿಸ್…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ನಾಟಿ ಔಷಧಕ್ಕೆ ಮೂರನೇ ಬಲಿಯಾಗಿದ್ದು ಸೇಡಂ ತಾಲೂಕಿನ ಮಧುಕಲ್ ನಿವಾಸಿ ನಾಗೇಶ್ ಎನ್ನುವವರು ಇದೀಗ ಸಾವನಪ್ಪಿದ್ದಾರೆ. ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಗೇಶ್ ತಾಯಪ್ಪ ಮುತ್ಯಾನಂದ ಔಷಧಿ ತೆಗೆದುಕೊಂಡಿದ್ದ. ಮದ್ಯ ವ್ಯಸನಿ ಮೂಗಿಗೆ ತಾಯಪ್ಪ ಮುತ್ಯಾ ಔಷಧಿ ಹಾಕುತ್ತಿದ್ದ. ನಿನ್ನೆ ಸಹ ಇಬ್ಬರು ಸಾವನಪ್ಪಿದ್ದು, ಇದೀಗ ನಾಗೇಶ್ ಎನ್ನುವ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ. ತೆಲಂಗಾಣ ಗಡಿಯಲ್ಲಿ ಇದೀಗ ಔಷಧ ಹಾಕುತ್ತಿದ್ದ ತಾಯಪ್ಪ ಅಲಿಯಾಸ್ ಪಕೀರಪ್ಪ ಮುತ್ಯಾನನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ ಸೇಡಂ ತಾಲೂಕಿನ ಇಮ್ಮಡಾಪುರದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಕುಡಿತದ ಚಟಪಡಿಸಲು ಪಕೀರಪ್ಪ ಮಧ್ಯ ಔಷಧ ನೀಡಿದ್ದ ಔಷದ ಸೇವಿಸಿದ ಬಳಿಕ ಒದ್ದಾಡಿ ಮೂವರು ಮೃತಪಟ್ಟಿದ್ದರು ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸೇಡಂ ಪೊಲೀಸರು ತಾಯಪ್ಪನನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ : ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟು ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು ಜಿಲ್ಲಾ ಪಂಚಾಯತಿ ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉತ್ತರಕನ್ನಡ : ಈ ಬಡತನ, ಹಸಿವು ಅನ್ನೋದು ಬಹಳ ಕ್ರೂರಿ ಆಗಿರುತ್ತದೆ. ಕೆಲವೊಂದು ಬಾರಿ ನಮ್ಮ ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರಬಾರದು ಅಂದುಕೊಳ್ಳುತ್ತೇವೆ. ಇದೀಗ ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಮಹಿಳೆ ಒಬ್ಬರು ಒಂದೊತ್ತಿನ ಊಟಕ್ಕೂ ಗತಿಯಿಲ್ಲದೆ ಮನನೊಂದು ತಮಗೆ ತಾವೇ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಲಕ್ಷ್ಮೀ ಮಹಾದೇವ ನಾಗೇಶ ಸಿದ್ಧಿ (48) ಮೃತ ಮಹಿಳೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದಾರೆ. ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ.ಕೌಟುಂಬಿಕ ಕಾರಣಗಳಿಗಾಗಿ ಲಕ್ಷ್ಮೀ, ಗಂಡನಿಂದ ಬೇರ್ಪಟ್ಟ ಬಳಿಕ ಏಕಾಂಗಿಯಾಗಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ ಒಂದು…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸಿ ಎಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರು. ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ವೇತನ ಹೆಚ್ಚಳ ಹಿಂಬಾಕಿ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸೋಮವಾರ ಹೈಕೋರ್ಟ್ ನೌಕರರಿಗೆ ಸೂಚಿಸಿತ್ತು. ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಅದನ್ನು ನಿರ್ಲಕ್ಷಿಸಿದ್ದ ಜಂಟಿ ಕ್ರಿಯಾ ಸಮಿತಿ ನೀಡಿದ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ 1.14 ಲಕ್ಷ ನೌಕರರ ಪೈಕಿ…