Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಗೊಳಿಸಿದೆ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಎಸ್ ಟಿ ಸೋಮಶೇಖರ್ ಗೆ ಬಿಜೆಪಿಗೆ ಹೋಗಬೇಡಿ ಅಂತ ನಾನು ಹೇಳಿದ್ದೆ. ಈಗ ಬಿಜೆಪಿಗೆ ಹೋದವರು ಕೆಲವರು ನಮ್ಮನ್ನು ಸಾಯಿಸುತ್ತಿದ್ದಾರೆ ಅಂತ ಹೇಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹೋಗಬೇಡಿ ಎಂದು ಎಸ್ ಟಿ ಸೋಮಶೇಖರ್ ಗೆ ಹೇಳಿದ್ದೆ. ಸಿಪಿ ಯೋಗೇಶ್ವರ್ ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಮ್ ಟಿ ಬಿ ನಾಗರಾಜ್ ಹಾಗೂ ಶ್ರೀಮಂತ್ ಪಾಟೀಲ್ ಕಥೆ ಏನಾಯ್ತು? ಮಹೇಶ್ ಕುಮ್ಟಳ್ಳಿ ಪರಿಸ್ಥಿತಿ ಹೇಗಿದೆ? ಅಯ್ಯೋ ನಮ್ಮನ್ನು ಸಾಯಿಸ್ತಾರೆ ಅಂತ ಯಾರು ಹೇಳುತ್ತಿದ್ದರು ಎಂದರು. ಮಾಡಬಾರದನ್ನು ಮಾಡಿ ಬಾಯಿ ಬಡೆದುಕೊಳ್ಳುತ್ತಿದ್ದಾರೆ. ಜೆಡಿಎಸ್ ಪಕ್ಷದ ನಾಯಕರು ನಂಬಿದರೆ…
ಬೆಂಗಳೂರು : ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಹಲವು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ ಅಲ್ಲದೆ ಮಹಾಬಳೆಗೆ ಈಗಾಗಲೇ ಹಲವರು ಬಲಿಯಾಗಿದ್ದಾರೆ. ಇದೀಗ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹೌದು ರಾಜ್ಯದ ಹಲವೆಡೆ ಇನ್ನು ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಕೊಡಗು, ಶಿವಮೊಗ್ಗ ಹಾಗು ಚಿಕ್ಕಮಂಗಳೂರು ಸೇರಿದಂತೆ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ ಮತ್ತು ಹಾಸನ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ಬೆಳಗಾವಿ ಕಲಬುರ್ಗಿ, ವಿಜಯಪುರ ಮತ್ತು ಬೀದರ್ ಆರೇಂಜ್ ಅಲರ್ಟ್ ಘೋಷಿಸಿದೆ ಇನ್ನು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ…
ಬೆಳಗಾವಿ : ರಾಜ್ಯಕ್ಕೆ ಕೊರೋನ ರೂಪಾಂತರೀಯ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಒಂದೇ ಕಡೆ ಕರೋನ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಅಲ್ಲದೆ ಬೆಂಗಳೂರಿನಲ್ಲಿ 85 ವರ್ಷದ ವರದರೊಬ್ಬರು ಬಲಿಯಾಗಿದ್ದು, ಇದೀಗ ಬೆಳಗಾವಿಯಲ್ಲಿ ಕೂಡ ಕೊರೋನಾ ಸೋಂಕಿಗೆ ಮತ್ತೋರ್ವ ವೃದ್ಧರು ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಚಿಕಿತ್ಸೆ ಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ನಿನ್ನೆ ರಾತ್ರಿ ಕೋವಿಡ್ ಪಾಸಿಟಿವ್ ಎಂದು ತಪಾಸಣೆಯಲ್ಲಿ ಕಂಡು ಬಂದಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಿಸದ ಕಾರಣ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ.
ಚಿಕ್ಕಮಗಳೂರು : ಕೆಲವು ಬಾರಿ ಪ್ರಪಂಚದಲ್ಲಿ ಇಂತಹ ತಂದೆ ತಾಯಂದಿರು ಇರುತ್ತಾರಾ ಅಂತ ಬೇಸರವಾಗುತ್ತೆ. ಕೇವಲ ಎರಡು ದಿನದ ಹೆಣ್ಣು ಮಗುವನ್ನು 1 ಲಕ್ಷಕ್ಕೆ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ. ರತ್ನ ಸದಾನಂದ ಎಂಬ ದಂಪತಿಗಳೇ ಮಗು ಮಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ರತ್ನ ಮತ್ತು ಸದಾನಂದ ದಂಪತಿಗಳೇ ಹಣಕ್ಕಾಗಿ ಇಂತಹ ದುಷ್ಕೃತ್ಯ ಎಸಗಿದ್ದಾರೆ. ತಮ್ಮ 2 ದಿನದ ಮಗುವನ್ನು ಕಾರ್ಕಳದ ರಾಘವೇಂದ್ರ ಎಂಬ ವ್ಯಕ್ತಿಗೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿತ್ತು. 45 ವರ್ಷದ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ, ಕೇವಲ ಎರಡು ದಿನಗಳಲ್ಲಿ ಅದನ್ನು ಹಣಕ್ಕೆ ಬದಲಾಯಿಸುವ ಮನಸ್ಥಿತಿಯು ಆಘಾತಕಾರಿಯಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ರತ್ನ ಮತ್ತು ಸದಾನಂದ ದಂಪತಿಗೆ ಈಗಾಗಲೇ ಮೂವರು ಮಕ್ಕಳಿದ್ದು, ಆಶ್ಚರ್ಯಕರವಾಗಿ ಇಬ್ಬರನ್ನು ಈ ಹಿಂದೆಯೇ ಮಾರಾಟ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ…
ಬೆಂಗಳೂರು : ಕಲ್ಬುರ್ಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತಂತೆ ಬಿಜೆಪಿಯ ಎಮ್ಎಲ್ಸಿ ಎನ್ ರವಿಕುಮಾರ್ ಅವರ ವಿರುದ್ಧ, ಕಲ್ಬುರ್ಗಿ ಠಾಣೆಯಲ್ಲಿ FIR ದಾಖಲಾಗಿತ್ತು. ಈಗ ನೆಲೆಯಲ್ಲಿ ಏನ ರವಿಕುಮಾರ್ ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು ಇದೀಗ ಹೈಕೋರ್ಟ್ ಬರವಿಕುಮಾರ್ ವಿರುದ್ಧ ಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಅಲ್ಲದೆ ಡಿಸಿ ವಿರುದ್ಧದ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಸಹಕರಿಸಲು ಎನ್ ರವಿಕುಮಾರ್ ಗೆ ಹೈಕೋರ್ಟ್ ಇದೀಗ ಸೂಚನೆ ನೀಡಿದೆ. ಕೇಸ್ ರದ್ದು ಕೋರಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ರವಿಕುಮಾರ್ ಅವರಿಗೆ ಕೂಡ ವಿಚಾರಣೆಗೆ ಸಹಕರಿಸಿ ಎಂದು ಸೂಚನೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರೈಲ್ವೆ ವೀಲ್ ಫ್ಯಾಕ್ಟರಿಯ ಉದ್ಯೋಗಿಗೆ ಜಾತಿನಿಂದನೆ ಮತ್ತು ಕೊಲೆಗೆ ಸಂಚು ಆರೋಪದ ಹಿನ್ನಲೆಯಲ್ಲಿ ಇದೀಗ ಕೋರ್ಟ್ ಸೂಚನೆಯ ಮೇರೆಗೆ ಕಂಪನಿಯ 16 ಉದ್ಯೋಗಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ರೈಲ್ವೇ ವೀಲ್ ಫ್ಯಾಕ್ಟರಿ ಹಿರಿಯ ಮೆಕ್ಯಾನಿಕ್ ಬಸವಲಿಂಗಪ್ಪ ಅವರಿಂದ ದೂರು ಸಲ್ಲಿಕೆಯಾಗಿದ್ದು, ಯಲಹಂಕ ರೈಲ್ವೆ ವೀಲ್ ಫ್ಯಾಕ್ಟರಿ ಹಿರಿಯ ಮೆಕ್ಯಾನಿಕ್ ಬಸವಲಿಂಗಪ್ಪ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಪದೋನ್ನತಿ ಮತ್ತು ವೇತನ ಮುಂಬಡ್ತಿ ನೀಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಶರ್ಟ್ ಕಾಲರ್ ಹಿಡಿದು ಬಸವಲಿಂಗಪ್ಪಗೆ ಜಾತಿ ನಿಂದನೆ ಮಾಡಲಾಗಿದೆ. ನಿಂಗೇಗೌಡ ಅಬ್ದುಲ್ ಸೇರಿದಂತೆ ಹದಿನಾರು ಉದ್ಯೋಗಿಗಳ ವಿರುದ್ಧ ಕೆಎಸ್ ದಾಖಲಾಗಿದೆ. ರೈಲ್ವೆ ಕಾಯಿದೆ,-1989 ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಬೆಂಗಳೂರಿನ 71ನೇ ಸಿಸಿಎಚ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಇದೀಗ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಬಿಜೆಪಿ ಹೇಳಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎನ್.ರವಿಕುಮಾರ್ ಅವರಿಗೆ ಈ ಒಂದು ಹೇಳಿಕೆಯಿಂದಾಗಿ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದೆ. ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ರವಿಕುಮಾರ್, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಲಾಗಿತ್ತು. ಈ ಸಂಬಂಧ ಎಫ್ಐಆರ್ ಸಹ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ರವಿಕುಮಾರ್ ಹೇಳಿದ್ದೇನು? ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್…
ಬೆಂಗಳೂರು : ಕಾರ್ಖಾನೆಯ ಮೇಲ್ಛಾವಣಿ ಶೀಟ್ ರಿಪೇರಿ ಮಾಡುವಾಗ ಆಯತಪ್ಪಿ, ಸುಮಾರು 45 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ತಾಲೂಕು ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದ ಟಿ.ಡಿ ಪವರ್ ಸಿಸ್ಟಮ್ ಫ್ಯಾಕ್ಟರಿಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಪರಶುರಾಮ್ (27) ಎಂದು ತಿಳಿದುಬಂದಿದೆ. ಮೂಲತಃ ರಾಯಚೂರಿನ ನಿವಾಸಿಯಾಗಿದ್ದು, ನಿರಂತರ ಮಳೆಯಿಂದಾಗಿ ಮೇಲ್ಛಾವಣಿಯಲ್ಲಿ ನೀರು ಸೋರುತ್ತಿತ್ತು. ಕಟ್ಟಡದ ಮೇಲೆ ತೆರಳಿ ಶೀಟು ಸರಿಪಡಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಪರಶುರಾಮ್ ಗುತ್ತಿಗೆ ಆಧಾರದ ಮೇಲೆ ಇಂದು ಕೆಲಸಕ್ಕೆ ಸೇರಿದ್ದರು ಎಂದು ತಿಳಿದು ಬಂದಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪದಡಿ ಇದೀಗ ಬೆಂಗಳೂರಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ವಂಶಿ (23) ಎಂದು ತಿಳಿದುಬಂದಿದೆ. ಆರೋಪಿ ವಂಶಿಗೆ ಒಳ್ಳೆಯ ಸಂಬಳವಿತ್ತು. ಆದರೆ, ಕಾಳಸಂತೆಯಲ್ಲಿ ಐಪಿಎಲ್ ಪಂದ್ಯಗಳ ಟಿಕೆಟ್ ಖರೀದಿಸುತ್ತಿದ್ದ ಆರೋಪಿ, ಅದನ್ನ ದುಪ್ಪಟ್ಟು ಬೆಲೆಗಿಂತಲೂ ಅಧಿಕ ಬೆಲೆಗೆ ಬ್ಲ್ಯಾಕ್ನಲ್ಲಿಯೇ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಮೇ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) V/s ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯದ ಟಿಕೆಟ್ಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಳಿ ಖರೀದಿದಾರರ ಸೋಗಿನಲ್ಲಿ ತೆರಳಿದ್ದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಡೆವಿಲ್ ಸಿನಿಮಾ ಶೂಟಿಂಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ನೀಡುವಂತೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ ಜೂನ್ 25 ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಸಿಆರ್ಪಿಸಿ ಸೆಕ್ಷನ್ 439(1) (b) ರಡಿ ದರ್ಶನವರು ಅರ್ಜಿ ಸಲ್ಲಿಸಿದ್ದಾರೆ. ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಬಳಿಕ ಹೊರ ರಾಜ್ಯಗಳಿಗೆ ಹೋಗಲು ಹೈಕೋರ್ಟ್ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ದರ್ಶನ್ ಷರತ್ತು ಸಡಿಲಿಸಿಕೊಂಡಿದ್ದರು. ಇದೀಗ ಡೆವಿಲ್ ಸಿನೆಮಾ ಚಿತ್ರೀಕರಣದ ಕಾರಣ…