Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ಓದಿಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಒಬ್ಬರು ಮನಸೋ ಇಚ್ಚೆ ಥಳಿಸಿರುವ ಘಟನೆ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಹರ್ಷಿಯ ತಸ್ಕಿನ್ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. 3ನೇ ತರಗತಿ ಬಾಲಕ ಓದದೆ ಶಾಲೆಗೆ ಬಂದಿದ್ದ ಇದರಿಂದ ಕೋಪದಲ್ಲಿ ಹರ್ಷಿಯಾ ತಸ್ಕಿನ್ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಮೈತುಂಬ ಬಾಸುಂಡೆ ಬರುವ ರೀತಿ ಮೂರನೇ ತರಗತಿ ವಿದ್ಯಾರ್ಥಿಗೆ ಹಲ್ಲೆ ಮಾಡಿದ್ದಾರೆ. ಶಿಕ್ಷಕಿ ಹರ್ಷಿಯ ತಸ್ಕಿನ್ ವಿರುದ್ಧ ಪೋಷಕರು ಕ್ರಮಕ್ಕೆ ಒತ್ತಾಯಿಸಿದ್ದು ಗಾಯಗೊಂಡ ಬಾಲಕನಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅಂತೂ ಪುಂಡರಿಗೆ ಗಿಡಿ ಗಿಡಿಗಳಿಗೆ ಹಾಗೂ ಅರುಡಿಶೀಟರ್ ಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ ಆದರೆ ಬೆಂಗಳೂರಿನಲ್ಲಿ ಅಚ್ಚರಿಗೊಳಿಸುವ ಒಂದು ಘಟನೆ ನಡೆದಿದ್ದು ಪತ್ನಿಗೆ ಹೆದರಿದ ರೌಡಿಶೀಟರ್ ಒಬ್ಬ ಠಾಣೆಯ ಮೆಟ್ಟಿಲೇರಿ ಪೊಲೀಸರ ಸಹಾಯ ಕೋರಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಅಚ್ಚರಿ ಅನಿಸಿದರು ಇದು ಸತ್ಯ. ರೌಡಿಶೀಟರ್ ಸೈಯದ್ ಅಸ್ಗರ್ ಹೆಂಡತಿ ಅಂದ್ರೆ ಬೆಚ್ಚಿ ಬೀಳ್ತಾನೆ. ಗಾಂಜಾ ಪೆಡ್ಲಿಂಗ್, ಕಳ್ಳತನ, ಕೊಲೆ ಯತ್ನದಂತಹ ಗಂಭೀರ ಆರೋಪ ಹೊಂದಿರೋ ಈತ ಕೇಸ್ಗಳಾದ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗ್ತಿದ್ದ. ಹೀಗಿರುವಾಗ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿರೋ ಈತ ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ. ವಿಶೇಷ ಅಂದ್ರೆ ಪ್ರತಿಬಾರಿ ಆರೋಪಿಯಾಗಿ ಬರ್ತಿದ್ದ ಈತ ಈ ಬಾರಿ ಸಂತ್ರಸ್ತನಾಗಿ ಬಂದಿದ್ದಾನೆ. ಇದಕ್ಕೆ ಕಾರಣ ಕೇಳಿದ್ರೆ ಒಂದು ಕಡೆ ನಗು ಬರೋದು ಸಹಜ ಏಕೆಂದರೆ 2ನೇ ಪತ್ನಿಯನ್ನ ಬಿಡು ಎಂದು ಮೊದಲ ಹೆಂಡತಿ ರೌಡಿಶೀಟರ್ ಶೀಟರ್ ಕೈ ಮುರಿದಿದ್ದಲ್ಲದೆ, ಕಣ್ಣಿಗೆ…
ಬೆಂಗಳೂರು : ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿಡ್ದುಜ್ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ನೆರವಿಗೆ ಇದೀಗ ರಾಜ್ಯ ಸರ್ಕಾರ ಧಾವಿಸಿದೆ. ಪ್ರತಿ ಕ್ವಿಂಟಲ್ಗೆ ಗರಿಷ್ಠ 250 ರು. ಸಹಾಯಧನ ಸೇರಿಸಿ 2,150 2. ‘ ಕಟ್ಟೆ ಮಧ್ಯಪ್ರವೇಶ ದರ(ಎಂಐಪಿ)ದಂತೆ’ 40 ಲಕ್ಷ ಟನ್ ಮೆಕ್ಕೆಜೋಳ ಖರೀದಿಗೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಪ್ರತಿ ಕ್ವಿಂಟಲ್ಗೆ 2,400 ರು. ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯದಲ್ಲಿ ಪ್ರತಿ ಕ್ವಿಂಟಲ್ಗೆ ಸರಾಸರಿ 1,900 ರು.ಗಳಂತೆ ದರ ಚಾಲ್ತಿಯಲ್ಲಿದೆ. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಬೆಲೆ ವ್ಯತ್ಯಾಸ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2,150 ರು. ಪ್ರತಿ ಕ್ವಿಂಟಲ್ಗೆ ಮಾರುಕಟ್ಟೆ ಮಧ್ಯಪ್ರವೇಶ ದರ ನಿಗದಿ ಮಾಡಿದೆ. 2025-26ನೇ ಸಾಲಿನ ಮುಂಗಾರು ಹಂಗಾ ಮಿನ ಮೆಕ್ಕೆಜೋಳಕ್ಕೆ ‘ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ’ಯಡಿ ಬೆಲೆ ವ್ಯತಾ ವ್ಯತ್ಯಾಸದ…
ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ ಮೆಂಟ್ನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ ಮೆಂಟ್ನಲ್ಲಿ ಸ್ನೇಹಿತೆ ಜತೆ ವಾಸವಾ ಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿ ದ್ದರು. ರಜೆ…
ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದರು ಇದೀಗ ರಾಜಶೇಖರ ಪೋಸ್ಟ್ ಮಾರ್ಟಂ ಹಾಗೂ ವೈದ್ಯರ ನಡೆ ತೀವ್ರ ಅನುಮಾನ ಗುಡಿಸಿದ್ದು ರಾಜಕೀಯ ಒತ್ತಡಕ್ಕೆ ಮಾಡಿದ ವೈದ್ಯರು ಈ ಒಂದು ರಾಜಶೇಖರ್ ಸಾವಿನ ಸಾಕ್ಷಿ ನಾಶ ಮಾಡಲು ಬಂದಾಗಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಹೌದು ಫೈರಿಂಗ್ ಪ್ರಕರಣವನ್ನು ಮುಚ್ಚಿಹಾಕಲು ಷಡ್ಯಂತರ ನಡೆದಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಭರತ್ ರೆಡ್ಡಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಗುಂಡು ಹಾರಿದ್ದನ್ನೇ ಮುಚ್ಚಿ ಹಾಕಲು ಇದೀಗ ರಾಜಕೀಯ ಒತ್ತಡ ಹೇರಲಾಗಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ರಾಜಶೇಖರ್ ದೇಹವನ್ನು ಡಬಲ್ ಪೋಸ್ಟ್ ಮಾರ್ಟಂ ಮಾಡಲಾಗಿತ್ತು. ಎರಡೆರಡು ಬಾರಿ ರಾಜಶೇಖರ ಪೋಸ್ಟ್ ಮಾರ್ಟಂ ನಡೆದಿತ್ತು ರಾಜಶೇಖರ್ ದೇಹದಲ್ಲಿಯೇ ವೈದ್ಯರು ಬುಲೆಟ್ ಬಿಟ್ಟಿದ್ದರು. ರಾಜಕೀಯ ಒತ್ತಡಕ್ಕೆ ಸಿಲುಕಿ ವೈದ್ಯರು ಗುಂಡು ಹೊರಗಡೆ ತೆಗೆದಿರಲಿಲ್ಲ. ಭರತ ರೆಡ್ಡಿ ತಂದೆ ನಾರಾಯಣ ರೆಡ್ಡಿ ಇಂದ…
ಇರಾನ್, ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವುದಾದರೆ, ನೀವೇನು ದನ ಕಾಯೋದಿಕ್ಕೆ ಇದ್ದೀರಾ : HD ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿದ್ದು ಇರಾನ್ ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವ ಹಾಗಿದ್ದರೆ ನೀವೇನು ದನ ಕಾಯೋಕೆ ಇದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಳ್ಳಾರಿ ಘರ್ಷಣೆಗೆ ಕ್ಷುಲ್ಲಕ ಕಾರಣ ಅಂತಾರೆ. ಇದು ಕಾಕತಾಳಿಯ ಎಂದು ಗೃಹ ಸಚಿವ ಹಿಮ್ಮೆಳ ಬಾರಿಸುತ್ತಾರೆ. ಈ ಸರ್ಟಿಫಿಕೇಟ್ ಕೊಟ್ಟ ಮೇಲೆ ಯಾವ ತನಿಖೆ ನಡೆಸುತ್ತೀರಾ? ಇವರ ತೆವಲಿಗೆ ಅಧಿಕಾರಕ್ಕೆ ಯಾರನ್ನು ಬೇಕಾದರೂ ಬಲಿಕೊಡುತ್ತಾರೆ. ಭದ್ರತೆ ಕೇಳಿದರೆ ಇರಾಕ್ ಅಮೇರಿಕಾದಿಂದ ತರಿಸಿಕೊಳ್ಳಿ ಅಂತಾರೆ ನೀವು ಏನು ದನ ಕಾಯೋಕ್ಕೆ ಇದ್ದೀರಾ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ಬ್ಯಾನರ್ ಕಟ್ಟುವ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಕಾಂಗ್ರೆಸ್ ಕಾರ್ಯಕರ್ತನ ಹತ್ತೆಯಾಗಿದೆ…
ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರುಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಗೆ ಕೇಳದ ಹಿನ್ನೆಲೆ, ಎಲ್ಲಾ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ವಿಚಾರಣೆಯ ವೇಳೆ ತನಿಖಾಧಿಕಾರಿ ವಿರುದ್ಧ ಜಡ್ಜ್ ಗರಂ ಆಗಿದ್ದಾರೆ. ಅರೆಸ್ಟ್ ಮೆಮೋ ಬಗ್ಗೆ ತನಿಖಾಧಿಕಾರಿಗೆ ಪ್ರಶ್ನೆ ಮಾಡಿದ್ದು ಎಲ್ಲಾ ಆರೋಪಿಗಳದ್ದು ಒಂದೇ ಅರೆಸ್ಟ್ ಮೆಮೋ ಇದೆಯಲ್ಲ ಯಾಕೆ? ಎಂದು ತನಿಖಾಧಿಕಾರಿಗಳಿಗೆ ಪ್ರಶ್ನೆ ಕೇಳಿ…
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್, ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಶಾಸಕ ಜನಾರ್ದನ ರೆಡ್ಡಿ ಮನೆಗೆ ಹುಬ್ಬಳ್ಳಿಯಿಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು, ಇದೀಗ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಹೌದು ಶಾಸಕ ಜನಾರ್ಧನರೆಡ್ಡಿ ಮನೆ ಮುಂಭಾಗದಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬುಲೆಟ್ ಪತ್ತೆಯನ್ನು ಬಾಂಬ್ ನಿಷ್ಕ್ರಿಯ ದಳ ಇದೀಗ ಪತ್ತೆ ಮಾಡಿದೆ. ಬುಲೆಟ್ ಪತ್ತೆ ಹಚ್ಚುವ ಮಷೀನ್ ನಿಂದ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಪತ್ತೆಯಾದ ಬುಲೆಟ್ 9 MM ಇದ್ದು, ಫೋಟೋ ಚಿತ್ರೀಕರಣ ಕೂಡ ಮಾಡಲಾಗಿದೆ. ಸ್ಥಳದಲ್ಲಿ ಎಫ್ ಎಸ ಎಲ್ ತಂಡ ಇರುವುದರಿಂದ ಫೋಟೋ ಚಿತ್ರೀಕರಣ ಮಾಡಲಿದ್ದಾರೆ. ಚಿತ್ರೀಕರಣದ ಬಳಿಕ ಅಧಿಕಾರಿಗಳು ಬುಲೆಟ್ ರವಾನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. FSL ಅಧಿಕಾರಿಗಳಿಂದ ಬುಲೆಟ್ ಪತ್ತೆಯಾದ ಸ್ಥಳ ಅಳತೆ ಮಾಡಲಾಗುತ್ತಿದೆ ಬುಲೆಟ್ ಪತ್ತೆಯಾದ ಸ್ಥಳ ಮತ್ತು ಬ್ಯಾರಿಕೆ ಇರುವಂತಹ ಅಂತರ ಬುಲೆಟ್ ಎಷ್ಟು ದೂರದಿಂದ ಹಾರಿದೆ ಎಂಬುದರ ಕುರಿತು…
ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜಶೇಖರ್ ಸಾವನ್ನಪ್ಪಿದ್ದು, ನಮ್ಮ ಪಕ್ಷದ ಕಾರ್ಯಕರ್ತರನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಈ ಗಲಾಟೆ ಆಗಿದೆ. ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚಿಕೊಂಡು ಇರಬೇಕು. ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತದೆ. ಮಾಜಿ ಸಚಿವ ಶ್ರೀ ರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದರು. ನಮ್ಮ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಈಡಾಗಲು ಬಿಜೆಪಿನೇ ಕಾರಣ. ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನು ಕೆಣಕಬೇಡಿ. ವಿನಾಕಾರಣ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸರಿ ಇರಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ ಕೆಲವರನ್ನು ಅರೆಸ್ಟ್ ಸಹ ಮಾಡಿದ್ದಾರೆ…
ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ ಬಿಜಿಯಾಗಿದ್ದಾನೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. 60 ವರ್ಷದ ಮಂಜುನಾಥ್ ಇದೀಗ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.














