Author: kannadanewsnow05

ಕಲಬುರ್ಗಿ : ನಿಧಿಯಾಸೆಗೆ ದುಷ್ಕರ್ಮಿಗಳು ಪುರಾತನ ದೇಗುಲ ಧ್ವಂಸ ಮಾಡಿದ್ದಾರೆ. ಈ ಒಂದು ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬಡದಾಳ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ನಿಧಿಗಾಗಿ ದುಷ್ಕರ್ಮಿಗಳು ಶೋಧ ನಡೆಸಿದ್ದು ರಾತ್ರಿ ವೇಳೆ ಗ್ರಾಮದ ಬಸವಣ್ಣ ದೇಗುಲಕ್ಕೆ ನುಗ್ಗಿದ್ದಾರೆ ಶಿವಲಿಂಗ ವರಮಾನ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಗೂಗಲ್ ಮ್ಯಾಪ್ ನಿಂದ ದೊಡ್ಡ ಅನಾಹುತವೇ ನಡೆದಿದೆ. ಗೋಡೌನ್ ಗೆ ಟ್ರಕ್ ಡಿಕ್ಕಿ ಆಗಿ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನಪ್ಪಿದ್ದಾನೆ. ಕುರುಬರಹಳ್ಳಿ ಬಳಿ ರಾಜಕಾಲುವೆಗೆ ಟ್ರಕ್ ನುಗ್ಗಿ ಈ ಒಂದು ಘಟನೆ ನಡೆದಿದೆ. ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಲಾರಿ ಬಂದಿದೆ. ಸುಂಕದ ಕಟ್ಟಿದ ಕಡೆಗೆ ಲಾರಿ ಸಾಗುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ ಓಡಿಸುತ್ತಿದ್ದ ಕುರುಬರಹಳ್ಳಿ ಮೂಲಕ ದಾರಿ ತೋರಿಸುತ್ತಿತ್ತು. ಆದರೆ ಕುರುಬರಹಳ್ಳಿ ಬಳಿ ಬಹುತೇಕ ಇಳಿಜಾರು ಪ್ರದೇಶ ಇದೆ ಹಾಗಾಗಿ ಲಾರಿ ನಿಯಂತ್ರಣಕ್ಕೆ ಸಿಕ್ಕಿಲ್ಲ ರಾಜಕಾಲುವೆಗೆ ಲಾರಿ ಗುದ್ದಿದೆ ಡಿಕ್ಕಿ ಆದ ರಭಸಕ್ಕೆ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಲಾರಿ ಡಿಕ್ಕಿಯಾದ ಪರಿಣಾಮ ಕಾರೊಳಗೆ ಮಲಗಿದ್ದ ಯುವಕ ಅಂಬದಾಸ್ (22) ಸಾವನ್ನಪ್ಪಿದ್ದಾನೆ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕುರುಬರಹಳ್ಳಿ ಬಳಿ ರಸ್ತೆ ಬಹುತೇಕವಾಗಿ ಇಳಿಜಾರಾಗಿತ್ತು. ಲಾರಿ ಓವರ್ ಲೋಡ್ ಆಗಿದ್ದರಿಂದ…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಹಂಚಿಕೆಯಾಗದೆಯೇ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತಂತೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ. ಆದರೆ, ಈಗಾಗಲೇ ದಲಿತ ಸಂಘಟನೆಗಳು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆಗಳು ನಡೆಸಿದ್ದು, ಮೂರ್ನಾಲ್ಕು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿವೆ. ಈ ಹಂತದಲ್ಲಿ ವಿಶೇಷ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಉಪಚುನಾವಣೆ ಮುಗಿಯುವವರೆಗೆ ಸಮಾಧಾನದಿಂದ ಇರುವುದು ಅನಿವಾರ್ಯವಾಗಿದೆ.

Read More

ವಿಜಯಪುರ : ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪುಟ್ಟ ಪುಟ್ಟ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮತ್ತು ಅವರ ಆರು, ಮೂರು ಹೆಣ್ಣುಮಕ್ಕಳು ಮತ್ತು ವರ್ಷದ ಗಂಡು ಮಗುವಿನೊಂದಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿದ್ದು, ಪತಿ ಊರಲ್ಲಿ‌ ಇಲ್ಲದ ವೇಳೆ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲಿಸಿದರು. ಪತಿ ಹಾಗೂ ರಾಜಶ್ರೀ ತವರು ಮನೆಯವರು ಬಂದ ಬಳಿಕ ಮುಂದಿನ‌ ಪ್ರಕ್ರಿಯೆ ನಡೆಸುವುದಾಗಿ ಪೊಲೀಸರು ತಿಳಿಸಿದರು. ಪೊಲೀಸರ ತನಿಖೆ ಬಳಿಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ. ಇತ್ತ ಮಾವ ಹಾಗು ತಾಯಿಯ ಕೊಲೆ ಸುದ್ದಿ ಕೇಳಿ ಪುತ್ರಿ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ . ಹೌದು ಯಮುನಾ…

Read More

ದಾವಣಗೆರೆ : ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದೀಕ್ ಪೈಲ್ವಾನ್ ಮನವೊಲಿಕೆಗೆ ಬಗ್ಗದೆ ನಾಮಪತ್ರ ವಾಪಸ್ ಪಡೆಯದ ಸಾಧಿಕ್, ನಾನು ಹಿಂದೆ ಸರಿದರೆ ಸಮಾಜ ಹಿಂದೆ ಸರಿದಂತೆ ಹೇಳಿಕೆ ನೀಡಿದ್ದಾರೆ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ಚುನಾವಣೆ ಯಲ್ಲಿ ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ನಾನು ಹಿಂದೆ ಸರಿದರೆ ಸಮಾಜ ಹಿಂದೆ ಸರಿದಂತೆ. ನಾನು ಸೋತರೆ ಸಮಾಜ ಸೋತಂತೆ ಸಮಾಜ ಸೋತ್ರೆ ನಾನು ಸೋತಂತೆ ಯಾವ ಕಾರಣಕ್ಕೂ ನಾನು ಚುನಾವಣೆಯಿಂದ ಹಿಂದೆ ಸರಿಯಲ್ಲ. ಅಖಾಡದಲ್ಲಿ ಇರುತ್ತೇನೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಮಾಡುತ್ತೇನೆ ನನಗೆ ಜನ ಆಶ್ವಾಸನೆ ಕೊಟ್ಟಿದ್ದಾರೆ ಆ ನಿಟ್ಟಿನಲ್ಲಿ ನಾನು ಜನಗಳ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

Read More

ನವದೆಹಲಿ : ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಮೂಲಗಳನ್ನು ಆಧಾರಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ದಾಳಿಯ ಬಗ್ಗೆ ಇರಾನ್ ಅಥವಾ ಇಸ್ರೇಲಿ ಮಿಲಿಟರಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಹೌದು ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಹಲವು ಮಂದಿ ನಾಯಕರು ಹತ್ಯೆಯಾಗಿದ್ದರೂ ಅಲಿರೆಜಾ ತಂಗ್‌ಸಿರಿ ಬದುಕಿಳಿದಿದ್ದರು. 2018 ರಿಂದ ನೌಕಾ ಕಮಾಂಡರ್ ಸ್ಥಾನದಲ್ಲಿದ್ದ ಇವರು ಹಾರ್ಮುಜ್ ಜಲಸಂಧಿಯನ್ನು ಮುಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಈ ಜಲಸಂಧಿಯಲ್ಲಿ ಸಾಮಾನ್ಯವಾಗಿ ಪ್ರತಿದಿನ…

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಇದೀಗ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.

Read More

ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿನ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಾರಿ ಉದ್ಘಾಟನಾ ಸಮಾರಂಭ ರದ್ದುಗೊಳಿಸಿದೆ. ಮೃತರಿಗೆ ಗೌರವಾರ್ಥವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ 2026 ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ,…

Read More