Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹೆಚ್ಚು ಕಲಾವಿದರು ಭಾಗವಹಿಸದಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ಹೊರಹಾಕಿ ಯಾರಿಗೆ ಎಲ್ಲಿ ನಟ್ಟು ಬೋಲ್ಟ್ ಸರಿ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿಕೆ ನೀಡಿದರು. ಇದೀಗ ಈ ಹೇಳಿಕೆಗೆ ನಿರ್ದೇಶಕ ಟಿಎಸ್ ನಾಗಾಭರಣ ಆಕ್ರೋಶ ಅವರ ಹಾಕಿದ್ದು ಡಿಕೆ ಶಿವಕುಮಾರ್ ಅವರು ಅಂತಹ ಸಂಸ್ಕಾರಕ್ಕೆ ಒಗ್ಗಿ ಹೋಗಿದ್ದಾರೆ ಎಂದು ಕಿಡಿ ಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿತ್ರರಂಗದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿದ ವಿಚಾರವಾಗಿ ನಿರ್ದೇಶಕ ಟಿ.ಎಸ್ ನಾಗಾಭರಣ ಆಕ್ರೋಶ ಅವರ ಹಾಕಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಅವರ ಸಂಸ್ಕಾರ ತೋರಿಸುತ್ತದೆ. ಡಿಕೆ ಶಿವಕುಮಾರ್ ಆ ಸಂಸ್ಕಾರಕ್ಕೆ ಒಗ್ಗಿ ಹೋಗಿದ್ದಾರೆ.ಅಷ್ಟು ದೊಡ್ಡ ವೇದಿಕೆಯಲ್ಲಿ ಹಾಗೆ ಮಾತನಾಡಿದ್ದು ತಪ್ಪು ಡಿಸಿಎಂ ಡಿಕೆ ಹೇಳಿಕೆಯಿಂದ ಯಾರಿಗೂ ಏನು ಆಗಿಲ್ಲ. ಕನ್ನಡ ಚಿತ್ರರಂಗದಲ್ಲಿರುವ ಪ್ರತಿಯೊಬ್ಬನು ನಾಯಕನೇ ರಾಜಕೀಯಕ್ಕೆ ಸಿನಿಮಾ ತರಬೇಡಿ ಸಿನಿಮಾಗೆ ರಾಜಕೀಯ ತರಬೇಡಿ ಎಂದು ನಿರ್ದೇಶಕ…

Read More

ಬೆಂಗಳೂರು : ಇಂದು ರಾಜ್ಯ ಗುತ್ತಿಗೆದಾರರ ಸಂಘವು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಬಿಲ್ ಪಾವತಿಸುವಂತೆ ಮನವಿ ಮಾಡಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಿಷನ್ ಕೊಡೋದು ಅಪರಾಧ ತೆಗೆದುಕೊಳ್ಳುವುದು ಕೂಡ ಅಪರಾಧ. ಹಾಗಾಗಿ ಗುತ್ತಿಗೆದಾರರು ಕಮಿಷನ್ ಕೊಡೋದೇ ಬೇಡ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಹೇಳಿದ ರೀತಿ ಆಗಲ್ಲ 30,000 ಕೋಟಿ ಬಾಕಿ ಇದೆ ಅದನ್ನು ಕೊಡಿ ಎಂದು ಕೇಳಿದ್ದಾರೆ. ಏಪ್ರಿಲ್ ನಲ್ಲಿ ಕೊಡೋಣ ಎಂದು ಹೇಳಿದ್ದೇನೆ. ಗುತ್ತಿಗೆದಾರ ನಿಯೋಗದಿಂದ ಕಮಿಷನ್ ಪಡೆಯುತ್ತಿರುವ ಆರೋಪ ವಿಚಾರವಾಗಿ ನಾನು ಕಮಿಷನ್ ಪಡೆದಿಲ್ಲ. ಯಾರಿಂದಲೂ ನಾನು ಹಣ ಕೇಳಿಲ್ಲ. ಬಾಕಿ ಬಿಲ್ ಉಳಿಸಿಕೊಂಡಿದ್ದು ಯಾರಿಂದ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಪ್ರಶ್ನಿಸಿದರು. ಈ ಹಿಂದೆ ಬಜೆಟ್ ನಲ್ಲಿ ಹಣ ಇಡದೆ ಟೆಂಡರ್ ಕರೆದಿದ್ದಾರೆ. ಅದಕ್ಕೆ ನಾವು ಹೊಣೆನಾ? ಎಂದು ಪ್ರಶ್ನಿಸಿದರು.ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಕೊಡಬೇಕು ಅಲ್ಲವೇ? ಗುತ್ತಿಗೆದಾರರು ಕಮಿಷನ್ ಕೊಡೋದೇ ಬೇಡ. ಲಂಚ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸಿಎಂ ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೊಯ್ಲಿ ಹೇಳೋದು ಇನ್ನೊಬ್ರು ಹೇಳೋದು ಮುಖ್ಯವಲ್ಲ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನು ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು. ಮೊಯ್ಲಿ ಹೇಳಿದ್ದೇನು? ನಿನ್ನೆ ಕಾರ್ಕಳದಲ್ಲಿ ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್‌ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ.ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ,ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ.…

Read More

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉದ್ಯಮಿ ಬಸವರಾಜ್ ಅಂಬಿ ನನ್ನ ಅಪಹರಣಕ್ಕೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ. ಅಂದು ಕಾರು ರಿಪೇರಿ ಮಾಡಿಸಲು ನಾನು ಸಾಂಗ್ಲಿಗೆ ತೆರಳಿದ್ದೆ. ಚಿಕ್ಕೋಡಿಗೆ ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ನನ್ನನ್ನು ಅಪಹರಿಸಿದರು. ಗೋವಾ ಘಾಟ್ ನಲ್ಲಿ ಕಾರನು ಪ್ರಪಾತಕ್ಕೆ ತಳ್ಳುವ ಬೆದರಿಕೆ ಹಾಕಿದರು.ಬಳಿಕ ಮನೆಗೆ ಕರೆ ಮಾಡಿ 5 ಕೋಟಿ ಹಣ ಕೇಳುವಂತೆ ಹೇಳಿದರು. ದಿನಕ್ಕೆ ಮೂರರಿಂದ ನಾಲ್ಕು ಕಾರುಗಳನ್ನು ಬದಲಾಯಿಸಿ ಸುತ್ತಿಸಿದರು. ಕರ್ನಾಟಕ ಮಹಾರಾಷ್ಟ್ರ ಗೋವಾ ರಾಜ್ಯಗಳಲ್ಲಿ ನನ್ನನ್ನು ಸುತ್ತಾಡಿಸಿದರು. ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಣ ಕೂಡ ರೆಡಿ ಮಾಡಿಕೊಳ್ಳಲು ಪತ್ನಿಗೆ ನಾನು ಹೇಳಿದ್ದೆ ಪೊಲೀಸರು…

Read More

ಮಂಗಳೂರು : CISF ಮಹಿಳಾ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ಹೇಳಿ ಯುವಕನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಆಮೇಲೆ ವಂಚನೆ ಈಸಾಗ್ರಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ನೊಂದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ (40) ಎಂದು ತಿಳಿದುಬಂದಿದ್ದು, ಮಂಗಳೂರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಅಭಿಷೇಕ್ ಸಿಂಗ್ CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೊಂದಿಗೆ ಸಂಬಂಧ ಹೊಂದಿದ್ದ.ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಅಭಿಷೇಕ್ ಸಿಂಗ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ…

Read More

ಉತ್ತರಪ್ರದೇಶ : ಪ್ರೀತಿಯ ಸಾಕುಪ್ರಾಣಿಗಳ ಹೆಸರಿಗೆ ಆಸ್ತಿ ಬರೆದವರ ಬಗ್ಗೆ ಜನ ಓದಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರು ತಮ್ಮ ಪ್ರೀತಿಯ ಬೆಕ್ಕು ಮೃತಪಟ್ಟ ನಂತರ ದುಃಖ ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು ಈ ಶಾಕಿಂಗ್ ಘಟನೆ ಉತ್ತರಪ್ರದೇಶ ರಾಜ್ಯದ ಅಮರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪೂಜಾ (32) ಎಂದು ಗುರುತಿಸಲಾಗಿದೆ. ಈಕೆ ಸುಮಾರು 8 ವರ್ಷಗಳ ಹಿಂದೆ ದೆಹಲಿ ನಿವಾಸಿ ಯುವಕನನ್ನು ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದಳು. ಇದಾದ ನಂತರ ಪೂಜಾ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದಳು. ಈ ವೇಳೆ ಒಂಟಿತನವನ್ನು ಹೋಗಲಾಡಿಸಲು ಪೂಜಾ ಒಂದು ಸಾಕು ಬೆಕ್ಕನ್ನು ಸಾಕಿದ್ದಳು. ಆದರೆ ಅದು ನಾಲ್ಕು ದಿನಗಳ ಹಿಂದೆ ಸತ್ತಿದೆ. ಆ ಬೆಕ್ಕಿನ ಜೊತೆ ಪೂಜಾ ಅವರು ಅದೆಷ್ಟು ಗಾಢವಾದ ಸಂಬಂಧವನ್ನು ಬೆಳೆಸಿಕೊಂಡಿದ್ದರು ಎಂದರೆ, ಬೆಕ್ಕು ಸತ್ತ ನಂತರ ಅದನ್ನು ಹೂಳಲೂ ಇಲ್ಲ. ಬೆಕ್ಕಿಗೆ ಬಹಳ ಬೇಗ ಜೀವ ಬರುತ್ತದೆ. ಹಾಗಾಗಿ ಅದನ್ನು…

Read More

ಬೆಂಗಳೂರು : ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಾಕಷ್ಟು ಸ್ಟಾರ್ ಕಲಾವಿದರು ಗೈರಾಗಿದ್ದರು. ಇದು ಡಿಕೆ ಶಿವಕುಮಾರ್ ಸಿಟ್ಟಿಗೆ ಕಾರಣವಾಗಿತ್ತು. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಹೋರಾಟ, ಕನ್ನಡ ಪರ ಹೋರಾಟದಲ್ಲೂ ಕಲಾವಿದರು ಪಾಲ್ಗೊಳ್ಳಲ್ಲ ಎಂದು ಗರಂ ಆಗಿ ಹೇಳಿದ್ದರು. ಅಲ್ಲದೆ ಎಲ್ಲರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದರು. ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ನಟಿ ರಮ್ಯಾ ಅವರು ಇದೀಗ ಸಮರ್ಥನೆ ಮಾಡಿಕೊಂಡಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು.ನನಗನಿಸುವ ಪ್ರಕಾರ ಸಾಹೇಬ್ರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ನೀವು ಡಾ. ರಾಜ್ ಕುಮಾರ್ ಅವರನ್ನೇ ನೋಡಿ. ಕನ್ನಡ ಪರ ಹೋರಾಟ ಅಂದಾಗ ಮುಂಚೂಣಿಯಲ್ಲಿರುತ್ತಿದ್ದರು. ಅದೇ ರೀತಿ ಈಗಿನ ನಟರು ಇರಬೇಕು ಎಂದು ಹೇಳಿರಬಹುದು ಅದು ನಮ್ಮ ಕರ್ತವ್ಯ ಎಂದು ತಿಳಿಸಿದರು. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ…

Read More

ವಿಜಯನಗರ : ವಿಜಯನಗರದಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ವೀರೇಶ್ (12) ಹಾಗು ವಿನಯ್ (12) ಎಂದು ತಿಳಿದುಬಂದಿದೆ. ಇಂದು ಅವರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆಗೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಒಡಿಶಾ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಬ್ಯಾಟರಾಯನ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದು ಇದೀಗ ಆರೋಪಿನ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಕಲಬುರ್ಗಿ : ಇತ್ತೀಚಿಗೆ ಹೆಂಡತಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಸುದ್ದಿಯಾಗಿತ್ತು.ಇದೀಗ ಕಲ್ಬುರ್ಗಿಯಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ಮಹದೇವನಗರದಲ್ಲಿ ನಡೆದಿದೆ. ಹೌದು ಮನೇಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತೆತ್ತಿದರೆ ಪತ್ನಿ ಕಂಪ್ಲೇಂಟ್ ಕೊಡುತ್ತೇನೆ ಎಂದು ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಲಬುರ್ಗಿ ಮಹದೇವನಗರದಲ್ಲಿ ಈ ಒಂದು ಘಟನೆ ನಡೆದಿದೆ. 6 ತಿಂಗಳ ಹಿಂದೆ ರಾಕೇಶ್ ಹಾಗೂ ಮೇಘನಾ ಮದುವೆಯಾಗಿತ್ತು. ಮನೆ ಕೆಲಸ ಸೇರಿ ಸಣ್ಣ ಸಣ್ಣ ವಿಚಾರಕ್ಕೆ ಮೇಘನಾ ಕಿರಿಕ್ ಮಾಡುತ್ತಿದ್ದಳು. ಮನೆ ಒರೆಸುವ, ಮನೆ ಕೆಲಸ ಮಾಡಲು ಕಾಟ ನೀಡಲಾಗುತ್ತಿತ್ತು.ಮನೆ ಕೆಲಸ ಮಾಡದಿದ್ದರೆ ಪೊಲೀಸರಿಗೆ ಕಂಪ್ಲೇಂಟ್ ಕೊಡುತ್ತೇನೆ ಎಂದು ಪತ್ನಿ ಹೆದರಿಸುತ್ತಿದ್ದಳು. ಒಂದು ವೇಳೆ ಮಾತು ಕೇಳದಿದ್ದರೆ ಪೊಲೀಸರಿಗೆ ದೂರು…

Read More