Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಕನ್ನಡದ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ನಿಧನರಾಗಿದ್ದಾರೆ. ನೋದೇಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಅಂತಾನೆ ಚನ್ನೇಗೌಡ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ನಿವಾಸಿಯಾಗಿರುವ ಗಡ್ಡಪ್ಪ ಅಸ್ತಮ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ತಿಥಿ, ತರಲೇ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಚೆನ್ನೇಗೌಡ ನಟನೆ ಮಾಡಿದ್ದರು. ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಗಡ್ಡಪ್ಪ ಬಳಲುತ್ತಿದ್ದರು. ತಿಂಗಳ ಹಿಂದೆ ಬಿದ್ದು ಸೊಂಟಕ್ಕೆ ಕೂಡ ಪೆಟ್ಟಾಗಿತ್ತು. ಸೊಂಟದ ಆಪರೇಷನ್ ಆಗಿತ್ತು ಇದೀಗ ಇಂದು ಗಡ್ಡಪ್ಪ ನಿಧನರಾಗಿದ್ದಾರೆ.
ಚಿಕ್ಕಬಳ್ಳಾಪುರ : ಹದಿಹರೆಯದ ವಯಸ್ಸಿನಲ್ಲಿ ಪೋಷಕರಾದವರು ತಮ್ಮ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸದೆ ಹೋದರೆ ಇಂತಹ ಘಟನೆಗಳು ಸಂಭವಿಸುತ್ತವೆ. ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಯುವಕನ ಕುಟುಂಬಸ್ಥರು ಶಾಕ್ ನೀಡಿದ್ದಾರೆ. ವರಸೆಯಲ್ಲಿ ನೀವು ಅಣ್ಣ-ತಂಗಿಯಾಗಬೇಕು ಎಂದು ತಿಳಿಸಿದ್ದಾರೆ. ಹೌದು ಪ್ರೀತಿಸಿ ಮದುವೆಯಾಗಿ ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್ ಕೊಟ್ಟಿದ್ದಾರೆ. ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ನಡೆದಿದೆ. ಮದುವೆಯಾಗಿ ಸಿಕ್ಕಿಬಿದ್ದ ಜೋಡಿ ಮನೆಗೆ ಬಂದಾಗ ಯುವಕನ ಮನೆಯವರು ʻನೀವಿಬ್ಬರು ವರಸೆಯಲ್ಲಿ ಅಣ್ಣ ತಂಗಿ ಆಗಬೇಕು. ಇದು ತಪ್ಪು ನಿಮ್ಮ ಮದುವೆ ಸರಿ ಅಲ್ಲʼ. ಸಂಬಂಧಿಕರೆಲ್ಲಾ ಬೈಕೊಳ್ತಾರೆ. ಅಂತ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಮನನೊಂದ ಸುಕನ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಂದಹಾಗೆ ಗೋಪಲ್ಲಿ ಗ್ರಾಮದ ನಿತಿನ್ (23) ಹಾಗೂ ಸುಕನ್ಯಾ…
BREAKING : ಬೆಂಗಳೂರಲ್ಲಿದೆ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ : ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ
ಬೆಂಗಳೂರು : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಶತ್ರು ರಾಷ್ಟ್ರದ ಪ್ರಜೆಗಳ ಆಸ್ತಿ ಪತ್ತೆಯಾಗಿದೆ. ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಇದೀಗ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎನಿಮಿ ಪ್ರಾಪರ್ಟಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದಿಂದ ಪಾಕಿಸ್ತಾನ ಹಾಗೂ ಚೀನಾ ಗೆ ಹೋಗಿ ಅಲ್ಲಿನ ನಾಗರಿಕತ್ವ ಪಡೆದವರ ಆಸ್ತಿ ಕಸ್ಟೋಡಿಯನ್ ಆಫ್ ಎನಿಮಿ ಪ್ರಾಪರ್ಟಿ ಫಾರ್ ಇಂಡಿಯಾ ದಿಂದ ಆಸ್ತಿ ಗುರುತಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾಡಳಿತದಿಂದ ಎನಿಮಿ ಪ್ರಾಪರ್ಟಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರಿ ದರ ಹಾಗೂ ಮಾರುಕಟ್ಟೆ ದರ ನಿಗದಿ ಮಾಡಿದ ಬೆಂಗಳೂರು ಜಿಲ್ಲಾಡಳಿತ. ಬೆಂಗಳೂರು ನಗರದಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ಪಾಕಿಸ್ತಾನ ಪ್ರಜೆಗಳ ಆಸ್ತಿ ಗುರುತು ಪತ್ತೆ ಮಾಡಿದೆ. ಇದೇ ತಿಂಗಳು ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಹರಾಜಿನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ…
ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಹೈಡ್ರಾಮಾ ಮಾಡಿದ್ದು, ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿಗೆನಲ್ಲಿ ಕೈದಿಗಳಿಗೆ ರಾಜಾತಿತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ ಬಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ ತಕ್ಷಣ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಠಾಣೆಗೆ ಕರೆದೋಯ್ದಿದ್ದಾರೆ.
ಬೆಂಗಳೂರು : ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ಜನವರಿ 8 ಕ್ಕೆ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು. ಮುಡಾ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು ಏಕ ಸದಸ್ಯ ಪೀಠ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಏಕ ಸದಸ್ಯ ಪೀಠದ ಆದೇಶವನ್ನು ರದ್ದು ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆದು ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿ ಆದೇಶ ಹೊರಡಿಸಿತು.
ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದೀಗ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದ್ದು ಎಂದಿನಂತೆ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿವೆ ಎಂದು ಬಿಎಂಆರ್ಸಿಎಲ್ ಟ್ವೀಟ್ ಮೂಲಕ ತಿಳಿಸಿದೆ. ತಾಂತ್ರಿಕ ಸಮಸ್ಯೆಯನ್ನು ಬೆಳಿಗ್ಗೆ 08:47 ಗಂಟೆಗೆ ಪರಿಹರಿಸಲಾಗಿದೆ ಮತ್ತು ಹಳದಿ ಮಾರ್ಗದ ಎಲ್ಲಾ ರೈಲುಗಳು ಈಗ ಎಂದಿನಂತೆ ಸೇವೆಯಲ್ಲಿ ಇವೆ. ರೈಲು ಸೇವೆಗಳು ಪುನರಾರಂಭಗೊಂಡಿದ್ದು, ಈಗ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಟ್ವೀಟ್ ನಲ್ಲಿ BMRCL ಮಾಹಿತಿ ಹಂಚಿಕೊಂಡಿದೆ. ಇಂದು ಬೆಳಿಗ್ಗೆ ಬಿಎಂಆರ್ ಸಿಎಲ್ ಈ ಕುರಿತು ಮಾಹಿತಿ ನೀಡಿದ್ದು, ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಇದೀಗ ತಾಂತ್ರಿಕ ಸಮಸ್ಯೆ ಪರಿಹಾರವಾಗಿದ್ದು ಎಂದಿನಂತೆ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. https://twitter.com/OfficialBMRCL/status/1988455624448110994?t=S5tXs6ySecVEz4XZwYj3Sg&s=19
ಚಿಕ್ಕಮಗಳೂರು : ಮದ್ಯ ಸೇವಿಸಿ ಮನೆಯವರು ಬೈಯ್ತಾರೆ ಎಂದು ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಬಾಲಕನಿಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು, ಎಣ್ಣೆ ಕುಡಿದಿರುವುದು ಮನೆಯಲ್ಲಿ ಗೊತ್ತಾದರೆ ಬಯ್ಯುತ್ತಾರೆ ಎಂಬ ಭಯಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು ಬಿಗಿದುಕೊಂಡು ಪ್ರವಚನ್ (13) ಎನ್ನುವ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾಲ್ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಶರಣಾದ ಪ್ರವಚನ್ ಮೇಲ್ಪಾಲ್ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ.ಕಳೆದ 4 ದಿನಗಳ ಹಿಂದೆ ಸಂಬಂಧಿಕರ ಮದುವೆಯಲ್ಲಿ ಬಾಲಕ ಪ್ರವಚನ್ ಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು ಮನೆಯಲ್ಲಿ ಎಣ್ಣೆ ಕುಡಿದಿರುವ ವಿಚಾರ ತಿಳಿದು ಬೈಯುತ್ತಾರೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಷ್ ಉಗ್ರ ಮುಜಾಮಿಲ್ ದೆಹಲಿ ನಂಟು ಬಯಲಾಗಿದ್ದು, ಮುಜಾಮಿಲ್ ಮೊಬೈಲ್ ನಿಂದ ಸ್ಫೋಟಕ ಮಾಹಿತಿ ಬಯಲಾಗಿದೆ. ಜೈ ಮೊಹಮ್ಮದ್ ಮಾಡೈಲಾಗ್ ಭಯೋತ್ಪಾದಕ ಮುಜಾಮಿಲ್ ನ ಮೊಬೈಲ್ ನಿಂದ ತನಿಖಾ ಸಂಸ್ಥೆಗಳಿಗೆ ಆಘಾತಕಾರಿ ರಹಸ್ಯ ಬಯಲಾಗಿದೆ. ರಾಜಧಾನಿ ದೆಹಲಿಯಲ್ಲಿ ದುಷ್ಕೃತ್ಯಕ್ಕೆ ಮುಜಮಿಲ್ ಸಂಚು ರೂಪಿಸಿದ್ದ. ಈ ವರ್ಷ ಹಲವು ಬಾರಿ ಆತ ದೆಹಲಿಗೆ ಭೇಟಿ ನೀಡಿದ್ದ. ಮುಜಾಮಿಲ್ ಮೊಬೈಲ್ ನಲ್ಲಿ ಕೆಲವು ಸೂಕ್ಷ್ಮ ಸ್ಥಳಗಳ ಚಿತ್ರಗಳು ಪತ್ತೆಯಾಗಿವೆ. ಮುಜಾಮಿಲ್ ಭೇಟಿ ಷಡ್ಯಂತರದ ಭಾಗ ಎಂದು ಏಜೆನ್ಸಿಗಳು ನಂಬಿವೆ. ದೆಹಲಿಯಲ್ಲಿ ಮುಜಾಮಿಲ್ ಯಾರನ್ನು ಬೇಟೆಯಾಗಿದ್ದ ಮತ್ತು ಆತನ ಸಂಪರ್ಕದಲ್ಲಿದ್ದವರು ಯಾರು ಎಂಬುದರ ಕುರಿತು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಮುಜಾಮಿಲ್ ಒಂಟಿಯಾಗಿ ದೆಹಲಿಗೆ ಬಂದಿದ್ದನಾ ಅಥವಾ ಪಿತೂರಿಯಲ್ಲಿ ಬೇರೆ ಯಾರಾದರೂ ಇದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರು : ಚಳಿಗಾಲದ ಅಧಿವೇಶನದಲ್ಲಿ ಭತ್ಯೆ ಸ್ವೀಕರಿಸದಿರಲು ಶಾಸಕ ಕಂದಕೂರು ಪತ್ರ ಬರೆದಿದ್ದು ಯಾವುದೇ ರೀತಿಯ ಬಟ್ಟೆ ಬೇಡ ಎಂದು ವಿಧಾನ ಸಭೆ ಸ್ಪೀಕರ್ಗೆ ಪತ್ರ ಬರೆದಿದ್ದಾರೆ ಜೆಡಿಎಸ್ ಶಾಸಕ ಶರಣಗೌಡ ಕಂದುಕುರ್ ಸ್ಪೀಕರ್ ಗೆ ಪತ್ರ ಬರೆದಿದ್ದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕರಾಗಿರುವ ಶರಣಗೌಡ ಕಂದಕೂರು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಪಡೆಯುವುದಿಲ್ಲ ಎಂದು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೊರಗಿನಿಂದ ಊಟ ವಸ್ತುಗಳನ್ನು ತಂದು ಬಳಕೆಗೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಕಳೆದ ಬಾರಿಯ ಅಧಿವೇಶನದಲ್ಲಿ ನಾನು ಭತ್ಯೆ ಪಡೆಯಲ್ಲ ಅಂತ ಶಾಸಕ ಶರಣಗೌಡ ಕಂದಕೂರು ಹೇಳಿದ್ದರು. ಉತ್ತರ ಕರ್ನಾಟಕ ಭಾಗದ ಸಮಸ್ಯೆಯ ಬಗ್ಗೆ ಚರ್ಚಿಸಲು 25 ರಿಂದ 30 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಇದುವರೆಗೂ ತಿಳಿಸಿಲ್ಲ. ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಸಿಕ್ಕಿಲ್ಲ. ಶಾಸಕರು ಅನುದಾನ ತಂದು ಹೊಸ…
ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ನಿನ್ನೆ ಕೋಲಾರದ ತೋಟಗಾರಿಕೆ ವಿ.ವಿ. ಕಟ್ಟಡದಲ್ಲಿ ಮತ್ತೆ ಮರು ಮತ ಎಣಿಕೆ ನಡೆಸಲಾಯಿತು ಬಳಿಕ ಶಾಸಕ ಕೆ.ವೈ ನಂಜೇಗೌಡ ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸುಳಿವನ್ನು ನೀಡಿದರು. ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತಗಳ ಎಣಿಕೆ ಪ್ರಕ್ರಿಯೆಯು ಸುಮಾರು 12 ತಾಸುಗಳ ಕಾಲ ಸತತವಾಗಿ ನಡೆಯಿತು. ಮಾಲೂರು ಕ್ಷೇತ್ರದ ಹಾಲಿ ಶಾಸಕ ಕೆ.ವೈ.ನಂಜೇಗೌಡ ಹಾಗೂ ಮರುಮತ ಎಣಿಕೆಗೆ ಆಗ್ರಹಿಸಿದ್ದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಕೆ. ಎಸ್. ಮಂಜುನಾಥಗೌಡ ಹಾಗೂ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಬೆಳಿಗ್ಗೆ ಮತ ಎಣಿಕೆ ಕೇಂದ್ರವನ್ನು ಪ್ರವೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಚುನಾವಣ ಆಯೋಗವು ಮಂಗಳವಾರ ಮತಗಳ ಮರು ಎಣಿಕೆ ಕಾರ್ಯವನ್ನು ಪೊಲೀಸ್ ಸರ್ಪಗಾವಲಿನಲ್ಲಿ ನಡೆಸಿತು.ಮಧ್ಯಾಹ್ನದ ವೇಳೆಗೆ ಮರುಮತ ಎಣಿಕೆ ಕಾರ್ಯ ಮುಕ್ತಾಯವಾಗಬಹುದೆಂಬ ನಿರೀಕ್ಷೆ ಇತ್ತಾದರೂ ರಾತ್ರಿ 8 ಗಂಟೆಯವರೆಗೂ ಮುಂದುವರಿಯಿತು. ಇದರಿಂದ ಅಭ್ಯರ್ಥಿಗಳ ಬೆಂಬಲಿಗರು ನಿರಾಸೆಗೊಳಗಾದರು.














