Author: kannadanewsnow05

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಈ ವೇಳೆ ಕಮಲ್ ಹಾಸನರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದೀಗ ಹೈ ಕೋರ್ಟ್ ನಲ್ಲಿ ಕಮಲ್ ಹಾಸನ ಸಲ್ಲಿಸಿರುವ ಅರ್ಜಿ ಮತ್ತೆ ಆರಂಭವಾಯಿತು. ನ್ಯಾ. ಎಂ.ನಾಗಪ್ರಸನ್ನ ಅವರಿಂದ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಉದಾಹರಣೆಯ ವೇಳೆ ನಿರ್ಮಾಪಕರ ಪರ ವಕೀಲರಾದ ಧ್ಯಾನ್ ಚಿನ್ನಪ್ಪ ಕರ್ನಾಟಕದಲ್ಲಿ ನಾವು ಕಮಲ್ ಹಾಸನವರ ಚಿತ್ರ ಬಿಡುಗಡೆ ಮಾಡಲ ಎಂದು ಸ್ಪಷ್ಟನೆ ನೀಡಿದರು ಈ ವೇಳೆ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಬಹುಶಹ ಅವರಿಗೆ ಆತ್ಮಪ್ರತಿಷ್ಠೆ ಅಡ್ಡ ಬರುತ್ತಿರಬಹುದು ಎಂದು ಚಾಟಿ ಬೀಸಿದೆ. ನ್ಯಾಯಮೂರ್ತಿಗಳು ಹೇಳಿದ್ದನ್ನು ಕಮಲ್ ಹಾಸನ್ ಗೆ ತಿಳಿಸಿದ್ದೇವೆ. ಕಮಲ್ ಹಾಸನ್ ಬರೆದ ಪತ್ರವನ್ನು ಒಮ್ಮೆ ದಯವಿಟ್ಟು ಓದಿ ಕಮಲ್ ಹಾಸನ್ ನಟನೆಯ ರಿಲೀಸ್…

Read More

ಮಂಗಳೂರು : ಕಳೆದ ಹಲವು ದಿನಗಳಿಂದ ಹೃದಯಘಾತದಿಂದ ಅನೇಕರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿ ಆಟೋ ಚಲಿಸುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕೊಕ್ಕಡದಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಶರತ್ ಕುಮಾರ್ ಕೆ (36) ಎಂದು ತಿಳಿದುಬಂದಿದೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು. ಸ್ಥಳೀಯರು ಕೂಡಲೇ ವಿಷಯ ಗಮನಿಸಿ ಶರತ್‌ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು.

Read More

ಬೆಂಗಳೂರು : ಇಂದು ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಐಪಿಎಲ್ ಫೈನಲ್ ಮ್ಯಾಚ್ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮ ಆಚರಣೆಯ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಹೌದು ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ. ಪೊಲೀಸರಿಗೆ ಮಾಹಿತಿ ಇಲ್ಲದೇ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ. 18 ವರ್ಷಗಳ ಕನಸನ್ನು ಹೊತ್ತುಕೊಂಡು ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಇಂದು ಪಂಜಾಬ್ ವಿರುದ್ಧ ಕೊನೆಯ…

Read More

ಬೆಂಗಳೂರು : ಕಮಲ್ ಹಾಸನ್ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲ. ಭಾಷೆಗೆ ಜಾತಿಗೆ ರಾಜ್ಯಗಳಿಗೆ ಜಗಳ ಮಾಡಿಸಲು ಆಗುತ್ತಾ? ಯಾವುದೋ ಒಂದು ರೂಪಕ್ಕೆ ತಿರುಗಿದರೆ ಯಾರು ಹೊಣೆ? ಸಣ್ಣ ಸಣ್ಣ ವಿಚಾರದಲ್ಲಿ ಅವರು ತಪ್ಪು ಮಾಡಿದ್ದಾರೆ ಕ್ಷಮೆ ಕೇಳುತ್ತಾರೆ. ನಮ್ಮವರು ಮಿತಿಯಲ್ಲಿ ಇರಬೇಕು ನಮ್ಮ ರಾಜ್ಯದ ಹಿತಕ್ಕಾಗಿ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಅವರು ಕೋರ್ಟ್ ಗೆ ಸಿನೆಮಾ ಬಿಡುಗಡೆ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಅಭಿಪ್ರಾಯಪಟ್ಟಿದೆ. ನಾವೆಲ್ಲ ದ್ರಾವಿಡ ಭಾಗಕ್ಕೆ ಸೇರಿದವರು. ನಾವು ಮಾತಾಡಬೇಕಾದರೆ ಕೆಲವು ತೆಲುಗು ತಮಿಳು ಅಕ್ಷರ ಬರುತ್ತದೆ. ಆದರೆ ಕಮಲ್ ಹಾಸನ್ ಪರವಾಗಿ ಯಾವುದೇ ಮೃದು ಧೋರಣೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಬೆಂಗಳೂರಿನಿಂದ ಹೊಸೂರಿಗೆ ನಿದ್ದೆ 50 ಸಾವಿರ ಜನ ಹೋಗುತ್ತಾರೆ. ಹೊಸೂರಿನಿಂದಲೂ ಬೆಂಗಳೂರಿಗೆ ಸಾವಿರಾರು ಜನರು ಬರುತ್ತಾರೆ. ನಾವು ಸೂಜಿ…

Read More

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಪಠ್ಯಕ್ರಮಕ್ಕೆ ಕೆಂಪೇಗೌಡರ ಬಗ್ಗೆ ಪಾಠ ಸೇರ್ಪಡೆ, ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ, ಮತ್ತು ವಿವಿಧ ಗೌರವಗಳನ್ನು ನೀಡುವ ಯೋಜನೆಗಳನ್ನು ತಿಳಿಸಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಕೆಂಪೇಗೌಡರ ಕುರಿತು ಒಂದು ಪಾಠ ಸೇರಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ಸಂಸ್ಥೆಗಳು ಮತ್ತು ಎಲ್ಲ ವರ್ಗದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಸಂಬಂಧ ಸಮಿತಿ ರಚಿಸಲಾಗುತ್ತದೆ. ಕೆಂಪೇಗೌಡ ಪ್ರಾಧಿಕಾರದ ವತಿಯಿಂದ ಮೈಸೂರು ದಸರಾಕ್ಕೆ ಸ್ತಬ್ಧಚಿತ್ರ ಕಳುಹಿಸಲಾಗುತ್ತದೆ. ಕೆಂಪೇಗೌಡರ ಜಯಂತಿ ಆಚರಿಸಲು ಒಂದು ಲಕ್ಷ ಹಣ…

Read More

ಹಾಸನ : ಹಾಸನದಲ್ಲಿ ಇಂದು ಭೀಕರವಾದ ಅಪಘಾತ ಒಂದು ಸಂಭವಿಸಿದ್ದು, ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ಯುವಕರನ್ನು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿ ಹುಸೈಫ್ (23) ಹಾಗೂ ಹೊಳೆನರಸೀಪುರದ ಗಾಂಧಿನಗರದ ನಿವಾಸಿ ಸಮೀರ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕರು ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಮತ್ತೋರ್ವ ಸೂಫಿಯಾನ್ ನನ್ನು ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಅಪಘಾತದ ಕುರಿತು ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಾಳೆ ಇಂಡಿಯನ್ ಪ್ರೀಮಿಯರ್ ಲೀಗ್​​ ಫೈನಲ್​ ಪಂದ್ಯ ನಡೆಯಲಿದೆ. ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್​​ ನ ಫೈನಲಿಸ್ಟ್​ಗಳು ಕನ್​ಫರ್ಮ್ ಆಗಿದ್ದಾರೆ. ಈ ಬಾರಿಯ ಐಪಿಎಲ್​ ಬಿಗ್ ಫೈಟ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಒಂದು ವೇಳೆ ನಾಳೆ ಬೆಂಗಳೂರು ಏನಾದರೂ ಪಂಜಾಬ್ ವಿರುದ್ಧ ಪಂದ್ಯ ಗೆದ್ದು ಚೊಚ್ಚಲ ಕಪ್ ಗೆದ್ದಿದ್ದೆ ಆದಲ್ಲಿ, RCB ಅಭಿಮಾನಿಯಿಂದ ಉಚಿತ ಚಾಟ್ಸ್ ವಿತರಣೆ ಹಮ್ಮಿಕೊಳ್ಳಲಾಗಿದೆ. ಈ ಸಲ ಕಪ್​​ ನಮ್ದು ಆದರೆ ಒನ್ ಡೇ ಪಾನಿಪುರಿ ನಿಮ್ದು ಎಂದು ಬೋರ್ಡ್​​ ಹಾಕಿದ್ದಾರೆ. ಹೌದು ಈ ಸಲ ಆರ್​​ಸಿಬಿ ಕಪ್ ಗೆದ್ದಿದ್ದೇ ಆದರೆ ಎಲ್ಲರಿಗೂ ಪಾನಿಪೂರಿ, ಮಸಾಲಪೂರಿ, ಭೇಲ್ ಪುರಿ ಫುಲ್ ಫ್ರೀ ಎಂದು ಅಂಗಡಿ ಮುಂದೆ ಬೋರ್ಡ್ ಹಾಕಿದ್ದಾರೆ. ಅಂಗಡಿ ಮಾಲೀಕ ಕೂಡ ಆರ್​​ಸಿಬಿ ದೊಡ್ಡ ಅಭಿಮಾನಿಯಾಗಿದ್ದು, ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಈ ಉಚಿತ ಚಾಟ್ಸ್​​ ವಿತರಣೆ ಎಂದಿದ್ದಾರೆ.

Read More

ದಕ್ಷಿಣಕನ್ನಡ : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ್ ಹೇಳಿಕೆ ನೀಡಿದ್ದು, ಗೃಹ ಇಲಾಖೆಯಿಂದ ನನಗೆ ಗಡಿಪಾರು ಆದೇಶ ಮಾಡಿದ್ದಾರೆ. ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಾನು 30 ರಿಂದ 35 ವರ್ಷಗಳಿಂದ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ. ಆರ್ ಎಸ್ ಎಸ್ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ. ನಾನು ಯಾವುದೇ ದರೋಡೆ ಕೊಲೆ ಕೇಸ್ ಗಳಲ್ಲಿ ಶಾಮೀಲಾಗಿಲ್ಲ. ನನ್ನ ಮೇಲಿನ…

Read More

ಹಾವೇರಿ : ರಾಜ್ಯದಲ್ಲಿ ಕೊರೋನ ರೂಪಾಂತರಿಯ ಹೊಸ ತಳಿ ಸೋಂಕು ಹರಡುತ್ತಿದ್ದು, ಇದುವರೆಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೋನ ಪ್ರಕರಣಗಳು ಪತ್ತೆಯಾಗಿವೆ. ಇದೀಗ ಹಾವೇರಿ ಜಿಲ್ಲೆಯಲ್ಲೂ ಕೂಡ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಗರ್ಭಿಣಿ ಸೇರಿದಂತೆ ನಾಲ್ವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೇರೂರು, ಹಾನಗಲ್ ಹಾಗೂ ಬ್ಯಾಡಗಿ ತಾಲೂಕಿನಲ್ಲಿ ಒಟ್ಟು ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೌದು ಹಾವೇರಿಯಲ್ಲಿ ನಾಲ್ವರಿಗೆ ಕೊರೊನ ಸೋಂಕು ದೃಢಪಟ್ಟಿದ್ದು, ಗರ್ಭಿಣಿ ಸೇರಿದಂತೆ ಮೂವರು ಪುರುಷರಿಗೆ ಇದೀಗ ಕರೋನ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಇಬ್ಬರಿಗೆ ಕರೋನಾ ಪ್ರಕರಣಗಳು ಪತ್ತೆಯಾದರೆ, ಇನ್ನು ಹಾನಗಲ್ ಹಾಗೂ ಬ್ಯಾಡಗಿ ತಾಲೂಕಿನಲ್ಲಿ ಒಂದೊಂದು ಕೇಸ್ ಪತ್ತೆಯಾಗಿದೆ. ನಾಲ್ವರ ಪೈಕಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಓರ್ವ ವೃದ್ಧನಿಗೆ ಸದ್ಯ ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸೋಂಕು ತಗಲಿರುವ ಗರ್ಭಿಣಿಗೆ ಮನೆಯಲ್ಲಿಯೇ ಹೋಂ ಐಸೋಲೇಶನ್ ಮಾಡಲಾಗಿದೆ ಎಂದು ಹಾವೇರಿಯ ಜಿಲ್ಲಾ ಆರೋಗ್ಯ ಅಧಿಕಾರಿ…

Read More

ಬೆಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಈ ಒಂದು ‘FIR’ ರದ್ದುಗೊಳಿಸುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪ್ರಭಾಕರ್ ಭಟ್ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದ ಮಂಡಿಸಲಾಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯ ಪೀಠವು, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೆ ದೋಷಾರೋಪ ಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾ.ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

Read More