Author: kannadanewsnow05

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಗುಂಪೊಂದು ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಹೊಡೆದು ಕ್ರೂರವಾಗಿ ಕೊಂದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಒಟ್ಟು ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪ್ರಮೋದ್, ನಾಗರಾಜ್, ಪ್ರದೀಪ್, ರವಿ, ಗೌತಮ್ ಮಂಜುನಾಥ್ ಹಾಗು ಇನ್ನೊರ್ವ ಆರೋಪಿ ಸೇರಿದಂತೆ ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಯಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಮೃತನನ್ನು ಚೆನ್ನಪ್ಪ ನಾರಿನಾಳ್ ಎಂದು ಗುರುತಿಸಲಾಗಿದ್ದು, ಆಸ್ತಿಯ ವಿಚಾರವಾಗಿ ಚೆನ್ನಪ್ಪ ನಾರಿನಾಳ್ ನನ್ನು ಬೇಕರಿಯಲ್ಲಿ ನುಗ್ಗಿ ಮಚ್ಚು ಲಾಂಗುಗಳಿಂದ ಅಟ್ಟಾಡಿಸಿ ಕೊಂದಿದ್ದಾರೆ. ದಾಳಿಕೋರರಲ್ಲಿ ಇಬ್ಬರು ಮಚ್ಚಿನಿಂದ ಆತನನ್ನು ಹೊಡೆದಿದ್ದು, ಮತ್ತೊಬ್ಬ ವ್ಯಕ್ತಿ ಮರದ ದಿಮ್ಮಿಯಿಂದ ಆತನ ತಲೆಯ ಮೇಲೆ ಹಲ್ಲೆ ನಡೆಸಿರುವುದು ಕಂಡುಬಂದಿದೆ. ದಾಳಿಕೋರರು ಆತನನ್ನು ಬೆನ್ನಟ್ಟುತ್ತಿದ್ದಂತೆ ಅಂಗಡಿಯಲ್ಲಿ ಆ ವ್ಯಕ್ತಿ ಓಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ನಂತರ ಚೆನ್ನಪ್ಪ ನಾರಿನಾಳ್ ಬೇಕರಿಯಿಂದ ಹೊರಗೆ ಓಡಿಹೋದನು, ನಂತರ ಆತನನ್ನು ಇಬ್ಬರು ಮೂರು ದಾಳಿಕೋರರು ಇರಿದಿದ್ದಾರೆ. ಕೊಲೆಯ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ, ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ…

Read More

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಕ್ಷಮೆ ಯಾಕೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಇವರ ಈ ಒಂದು ದುರ್ನಡತೆಗೆ ಕರ್ನಾಟಕದಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮೂಲಕ ಅಕ್ರೋಶ ಹೊರಹಾಕುತ್ತಿವೆ. ಇದರ ಮಧ್ಯ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಕಮಲ್ ಹಾಸನ್ ಹೈಕೋರ್ಟ್ ಮೆಟಿಲೇರಿದ್ದಾರೆ. ಹೌದು ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರೀ ವಿವಾದ ಸೃಷ್ಟಿಯಾಗಿದೆ. ತಮಿಳು ಕನ್ನಡ ಭಾಷೆಗಳು ದ್ರಾವಿಡಿಯನ್ ಭಾಷೆಗಳಾಗಿದ್ದರೂ ಎರಡೂ ವಿಭಿನ್ನ ಶೈಲಿಗಳನ್ನು ಹೊಂದಿದ್ದು, ಸಂಪೂರ್ಣ ಬೇರೆ ಬೇರೆಯಾಗಿವೆ. ಆದರೆ, ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದಾಗ್ಯೂ ಕ್ಷಮೆ ಕೇಳದೇ ಮೊಂಡು ವಾದವನ್ನು ನಿಜವೆಂದು ಹೇಳುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲಲ್ಲಿ ರಾಜ್ಯದಾದ್ಯಂತ ಕಮಲ್ ಹಾಸನ್…

Read More

ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ನಾನಾ ರೀತಿಯ ಯೋಜನೆಗಳು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತದೆ. ಆದರೆ ಇಂದಿನ ಆಧುನಿಕ ಯುಗದಲ್ಲೂ ಕೂಡ ಹಳ್ಳಿ ಭಾಗಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವುದು ಕಷ್ಟಕರವಾಗಿದೆ. ಇದೀಗ ರಾಜ್ಯದಲ್ಲಿ ಕಳೆದ 2024 ಮತ್ತು 25ನೇ ಸಾಲಿನಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಹೌದು 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಒಟ್ಟು 3,049 ಬಾಲ್ಯ ವಿವಾಹ ದೂರುಗಳು ಸ್ವೀಕೃತವಾಗಿವೆ. ಈ ಪೈಕಿ 2,349 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಿನ ವಿಚಾರವಾಗಿದೆ. ಎರಡು ದಿನ ಸಿಎಂ ನೇತೃತ್ವದಲ್ಲಿ ನಡೆದ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 2024-25ರಲ್ಲಿ 700 ಬಾಲ್ಯ ವಿವಾಹಗಳು ನಡೆದಿವೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಮಾಣ ಅಧಿಕ…

Read More

ಬೆಂಗಳೂರು : ರಾಜ್ಯದಲ್ಲಿ ಕೋರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪ್ರಕಟಿಸಿದೆ. ಹೌದು ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಕೋವಿಡ್ ಗೈಡ್ಲೈನ್ಸ್ ಪ್ರಕಟಿಸಲಾಗಿದ್ದು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಇದೀಗ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ರೋಗ ಲಕ್ಷಣಗಳಿದ್ದರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಬೇಕು. ಸಂಪೂರ್ಣ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಗುಣಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ವಾಪಸ್ ಕಳುಹಿಸಬೇಕು ಹಾಗು ಪೋಷಕರಿಗೆ ತಿಳಿಸಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

Read More

ಬೆಂಗಳೂರು : ರಾಜ್ಯಕ್ಕೆ ಕೊರೋನಾ ರೂಪಾಂತರಿ ಎಂಟ್ರಿ ಆಗಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಇಂದು 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇನ್ನು ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದ್ದು, ಅಲ್ಲದೇ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 253 ಇವೆ. ಕೊರೋನಾ ಸಂಪಿಗೆ ರಾಜ್ಯದಲ್ಲಿ ಇದುವರೆಗೂ ಒಟ್ಟು ಮೂವರು ಬಲಿಯಾಗಿದ್ದಾರೆ.

Read More

ಚಿಕ್ಕಮಗಳೂರು : ಚಾಲಕನ ನಿಯಂತ್ರಣದ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ನಡೆದಿದೆ. ಅಪಘಾತದಲ್ಲಿ ಪಿಕಪ್ ವಾಹನದ ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಚಿಕ್ಕಮಗಳೂರು ನಿಂದ ಪಿಕಪ್ ವಾಹನದಲ್ಲಿ ಉಡುಪಿಗೆ ತರಕಾರಿ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿದೆ. ಅಪಘಾತದ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸವಟೂರು ಗ್ರಾಮದಲ್ಲಿರುವ ಹರೀಶ್ ರೆಡ್ಡಿ ಎಂಬವರ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸವಟೂರು ಗ್ರಾಮದಲ್ಲಿ ಹರೀಶ್ ರೆಡ್ಡಿ ತಿರುಮಲ ಹಾಲಿನ ಡೇರಿಗೆ ಹಾಲು ಪೂರೈಸುತ್ತಿದ್ದ. ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಮಿಕಲ್ ಸೇರಿದಂತೆ ಸಿಬ್ಬಂದಿಗಳು ಉಪಕರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಲಿನ ಮಾದರಿ ಸಂಗ್ರಹಿಸಿ ಅಧಿಕಾರಿಗಳು ಟೆಸ್ಟ್ ಗೆ ಕಳುಹಿಸಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ ಹೊರಹಾಕಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕಮಲ್ ಹಾಸನ್ ಒಬ್ಬ ಅಯೋಗ್ಯ, ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ದುರಹಂಕಾರಿ.ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ……

Read More

ಕೇರಳ : ಕೇರಳದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು ಮಗಳ ಮದುವೆ ಒಂದು ದಿನ ಇರುವಾಗಲೇ, ಮಹಿಳೆಯೊಬ್ಬರಿಗೆ ಗಂಟಲಲ್ಲಿ ಕೇಕ್ ಸಿಲುಕಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಹೌದು ಮಲಪ್ಪುರಂ ಜಿಲ್ಲೆಯ ತನಲೂರು ನಿವಾಸಿ ಜೈನಬಾ (44) ಗಂಟಲಲ್ಲಿ ಕೇಕ್ ಸಿಲುಕಿ ಸವನತ್ತಿದ್ದಾರೆ. ಜೈನಬಾ ಅವರ ಮನೆಯಲ್ಲಿ ಮಗಳ ಮದುವೆ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ಸಂತಸದಿಂದ ಕೇಕ್‌ ಕಟ್‌ ಮಾಡಲಾಗಿದೆ. ರಾತ್ರಿ ಕೇಕ್‌ ತಿಂದು ಉಳಿದಿದ್ದ ಕಪ್‌ ಕೇಕ್‌ ಮನೆಯಲ್ಲಿ ಇಡಲಾಗಿತ್ತು. ಗುರುವಾರ (ಮೇ29) ಸಂಜೆ ಜೈನಬಾ ಅವರು ಚಹಾ ಕುಡಿಯುತ್ತಿದ್ದ ವೇಳೆ ಬಾಕಿ ಉಳಿದಿದ್ದ ಕಪ್‌ ಕೇಕ್‌ ಸೇವಿಸಿದ್ದಾರೆ. ಕಪ್‌ ಕೇಕ್‌ ತಿನ್ನುತ್ತಿದ್ದಂತೆ, ಅದು ಜೈನಬಾ ಅವರ ಗಂಟಲಲ್ಲಿ ಸಿಲುಕಿಕೊಂಡಿದ್ದ, ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಉಂಟಾಗಿದೆ. ಕೂಡಲೇ ಅವರನ್ನು ಕೊಟ್ಟಕ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆ ಬಳಿಕ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರು…

Read More