Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಕೊಪ್ಪಳ : ನಾವು ಕಾಂಗ್ರೆಸ್ ಗೆ ಮತ ಹಾಕುವುದಿಲ್ಲ ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು. ದ್ಯಾಮಣ್ಣ ಮನೆಗೆ ಬಂದ ಕಾರ್ಯಕರ್ತರು ಕಾಂಗ್ರೆಸ್ಗೆ ಓಟ ಹಾಕುವಂತೆ ಮನವಿ ಮಾಡಿದ್ದಾರೆ. ಈ ವೇಳೆ ದ್ಯಾಮಣ್ಣ ನಾನು ಕಾಂಗ್ರೆಸ್ಗೆ ಮತ ಹಾಕಲ್ಲ. ನಾವು ಬಿಜೆಪಿಗೆ ಮತ ಹಾಕುತ್ತೇವೆ ಅಂತ ಹೇಳಿದ್ದಾರೆ. ಇದೇ ಕಾರಣಕ್ಕೆ ಜಗಳ ಮಾಡಲಾಗಿದ್ದು, ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ ಎಂಟಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾರವಾರ : ಪತಿ ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳದ ಮಧ್ಯದಲ್ಲಿ ಮಾತು ಬಾರದ ತಮ್ಮ ಮಗುವನ್ನೇ ಮೊಸಳೆಗಳು ಇರುವ ನಾಲೆಗೆ ಎಸೆದು ನಂತರ ಪಶ್ಚಾತಾಪ ಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ಎಂಬ ಮಹಿಳೆ ದುಷ್ಕೃತ್ಯವೆಸಗಿದ್ದಾರೆ. ಮೃತ 6 ವರ್ಷದ ವಿನೋದ್ ಮಾತು ಬಾರದ ಮಗು. ಇದನ್ನೇ ನೆಪಮಾಡಿಕೊಂಡಿದ್ದ ಗಂಡ ಕುಡಿದು ಹೆಂಡತಿ ಜತೆ ಜಗಳವಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಅಂತಾ ಗಂಡ ರವಿಕುಮಾರ್ ಬೈಯ್ಯುತ್ತಿದ್ದ. ಹೀಗಾಗಿ ಗಂಡನ ಜತೆ ಗಲಾಟೆಯ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋದ ತಾಯಿ ಸಾವಿತ್ರಿ ನಾಲೆಗೆ ಎಸೆದಿದ್ದಾರೆ. ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ್ಷದ ಮಗು ವಿನೋದ್ ಸಾವಿಗೀಡಾಗಿದೆ. ನಿನ್ನೆ ರಾತ್ರಿಯಿಂದ ಶವವನ್ನು ತೆಗೆಯಲು ಮುಳುಗು ತಜ್ಞರಿಂದ…
ದೊಡ್ಡಬಳ್ಳಾಪುರ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಹೆಂಡತಿಯನ್ನು ಪತಿಯೇ ಕೊಲೆ ಮಾಡಿ ಪತ್ನಿ ಕಾಣೆಯಾಗಿದ್ದಾಳೆ ಎಂದು ಠಾಣೆಗೆ ಬಂದು ದೂರು ನೀಡಿದ್ದ ಪತಿಯೇ ಈಗ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ 19 ವರ್ಷದ ವೀಣಾ, ಏಪ್ರಿಲ್ 22ರಂದು ಸೋಮವಾರ ನಾಪತ್ತೆಯಾಗಿದ್ದರು. ಗಾಬರಿಗೊಂಡ ಆಕೆಯ ಗಂಡ ರವಿ ಹೆಂಡತಿ ಕಾಣೆಯಾದ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದ. ಅದಾದ ಒಂದು ವಾರಕ್ಕೆ ತೂಬಗೆರೆಯ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶದಲ್ಲಿ ಫಾರೆಸ್ಟ್ ಗಾರ್ಡ್ಗೆ ಸುಟ್ಟು ಕರಕಲಾಗಿರುವ ಅಪರಿಚಿತ ಶವ ಕಣ್ಣಿಗೆ ಬಿದ್ದಿತ್ತು. ಈಕೆಯನ್ನು ಕೊಂದವರ ತನಿಖೆ ಕೈಗೆತ್ತಿಕೊಂಡ ಪೊಲೀಸರು, ವೀಣಾಳ ಅತ್ತೆ, ಮಾವ, ಆಕೆಯ ಗಂಡ ಮತ್ತು ಸಂಬಂಧಿಕರ ವಿಚಾರಣೆ ನಡೆಸಿದಾಗ ಆಕೆಯ ಗಂಡನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿ ರವಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಹೆಂಡತಿಯನ್ನು ಕೊಂದಿದ್ದು ನಾನೇ ಎಂದು ಆತ ಬಾಯಿ ಬಿಟ್ಟಿರುವುದಾಗಿ ಪೊಲೀಸ್ ಮೂಲಗಳು…
ಬೆಂಗಳೂರು : ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನಾಪ್ ಆರೋಪ ಪ್ರಕರಣದಲ್ಲಿ A2 ಆರೋಪಿಯಾಗಿರುವ ಸತೀಶ್ ಬಾಬು ಕಿಡ್ನಾಪ್ ಮಾಡಿಸಿದ್ದು ರೇವಣ್ಣನೇ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ರೇವಣ್ಣ ಹೇಳಿದ್ದಕ್ಕೆ ಮಹಿಳೆ ಕರೆದೊಯ್ದು ಬಿಟ್ಟು ಬಂದಿದ್ದೆ ಎಂದು ಎಸ್ಐಟಿ ಮುಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನನ್ನ ತಾಯಿ ಕಾಣೆಯಾಗಿದ್ದಾರೆ ಹುಡುಕಿಕೊಡಿ ಎಂದು ಅಪಹರಣಕ್ಕೆ ಒಳಗಾದ ಮಹಿಳೆಯ ಆ ಮಗ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದೂರು ನೀಡಿದ್ದ ಈ ಹಿನ್ನೆಲೆಯಲ್ಲಿ ಪೊಲೀಸರು A1 ಆರೋಪಿ HD ರೇವಣ್ಣ ಹಾಗೂ A 2 ಆರೋಪಿಯಾಗಿ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ನೆಲೆಯಲ್ಲಿ ನಿನ್ನೆ ಎಸ್ಐಟಿ ಅಧಿಕಾರಿಗಳು ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆಯ ವೇಳೆ ಎಚ್ ಡಿ ರೇವಣ್ಣ ಅವರು ಕಿಡ್ನ್ಯಾಪು ನನಗೂ ಯಾವುದೇ ರೀತಿಯಾದ ಸಂಬಂಧ ಇಲ್ಲ ಎಂದು ಹೇಳಿಕೆನು ನೀಡಿದರು ಇದೀಗ ಸತೀಶ್…
ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ ನಾವು ಭರವಸೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದು, ಈ ವೇಳೆ ಸಿದ್ದರಾಮಯ್ಯ ಮಾತನಾಡಿ,ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.ಆದರೆ ರೈತರ ಸಾಲ ಮನ್ನಾ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಷೀನ್ ಇಲ್ಲ ಅಂದಿದ್ದರು. ವಿಧಾನಮಂಡಲದಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿದ್ದರು. ಇದು ರೈತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು. ದೇಶದ ಪ್ರಧಾನಿಯಾಗಿ ಮೋದಿ ಈ ರೀತಿ ಹೇಳಿಕೆ ನೀಡಬಾರದು. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವಾಗಲೂ…
ಬೆಳಗಾವಿ : ಈಗಾಗಲೇ ಕಳೆದ ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನ ನಡೆದು ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಮೇ ಏಳರಂದು ಮತದಾನ ನಡೆಯಲಿದೆ. ಹೀಗಾಗಿ ಈ ಬಾರಿ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ 8 ರಿಂದ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎರಡನೇ ಹಂತದಲ್ಲಿ ಹತ್ತಕ್ಕೂ ಹೆಚ್ಚು ಕ್ಷೆತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಒಟ್ಟಿನಲ್ಲಿ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಮೇ 7ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿ ಹಲವು ನಾಯಕರು ಉಪಸ್ಥಿತಿ ಇರಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದರು.
ತುಮಕೂರು : ಕೆಎಸ್ಆರ್ಟಿಸಿ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್ ಬಳಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಅನಿಲ್ (24) ಮೃತರು. ಗಂಭೀರವಾಗಿ ಗಾಯಗೊಂಡಿದ್ದ ಚರಣ್ (22) ಮತ್ತು ಮಹೇಂದ್ರ (25) ಎಂಬ ಯುವಕರನ್ನು ಮಧುಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಡಿಗೇನಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಮಧುಗಿರಿ ತಾಲೂಕಿನ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಹಾಸನ : ಮನೆಯ ಕೆಲಸದಾಕೆ ಹೆಣ್ಣು ಅಪಹರಣ ಮಾಡಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅರೆಸ್ಟ್ ಆಗಿದ್ದು ಇದೀಗ ಕಿಡ್ನ್ಯಾಪ್ ಆಗಿರುವಂತಹ ಮಹಿಳೆಯ ಕುರಿತಂತೆ ಸ್ಪೋಟಕ ವಾದಂತಹ ಮಾಹಿತಿ ಬಹಿರಂಗವಾಗಿದ್ದು ಸಂತ್ರಸ್ತ ಮಹಿಳೆ ತಂಗಿದ್ದ ತೋಟದ ಮನೆಯಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸ್ವಾಮಿ ಎನ್ನುವ ವ್ಯಕ್ತಿ ಹೇಳಿಕೆ ನೀಡಿದ್ದಾನೆ. ಮೈಸೂರಿನ ಹುಣಸರಿನ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಕಾಳೆಹಳ್ಳಿಯಲ್ಲಿರುವ ಫಾರ್ಮ ಹೌಸ್ ನಲ್ಲಿ ಅಪಹರಣಕ್ಕೆ ಒಳಗಾದ ಸಂತ್ರಸ್ತೆಯನ್ನು ಕೂಡಿ ಹಾಕಲಾಗಿತ್ತು ಎಂದು ಹೇಳಲಾಗುತ್ತಿದೆ.ಈ ಒಂದು ಫಾರ್ಮ್ ಹೌಸ್ ಶಾಸಕ ಎಚ್ ಡಿ ರೇವಣ್ಣ ಅವರ ಆಪ್ತ ರಾಜಗೋಪಾಲ್ ಎನ್ನುವವರಿಗೆ ಸೇರಿದ್ದು, ಸುಮಾರು 25 ಎಕರೆ ಪ್ರದೇಶ ಹೊಂದಿರುವ ಫಾರ್ಮ ಹೌಸ್ ಆಗಿದೆ. ಇದು ಮಹಿಳೆಯ ರಕ್ಷಣೆಯಾದ ತೋಟದ ಸಿಬ್ಬಂದಿ ಸ್ವಾಮಿ ಹೇಳಿಕೆ ನೀಡಿದ್ದು, ಆ ಮಹಿಳೆ ಸಂಘಕ್ಕೆ ದುಡ್ಡು ಕಟ್ಟಬೇಕು ಅದಕ್ಕೆ ಕೆಲಸಕ್ಕೆ ಬಂದಿದ್ದೇನೆ ಎಂದು ನಮಗೆ ತಿಳಿಸಿದ್ದಳು. ಆದರೆ ನಿನ್ನೆ ಪೊಲೀಸರು ಬಂದಾಗ ಆ ಮಹಿಳೆಯೇ ತಪ್ಪಿಸಿಕೊಂಡು ಹೋಗಲು…
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಆರ್ಸಿ ರಸ್ತೆಯಲ್ಲಿರುವ ಸಂಸದರ ಕಚೇರಿಯಲ್ಲಿ ನಿನ್ನೆ ಎಸ್ಐಟಿ ಸ್ಥಳ ಮಹಜರು ನಡೆಸಿತು. ಸಂತ್ರಸ್ತೆಯ ಸಮ್ಮುಖದಲ್ಲಿ ನಿನ್ನೆ ರಾತ್ರಿ ಎಸ್ಐಟಿ ಸ್ಥಳ ಮಹಜರು ನಡೆಸಿದೆ, ಮಹಜರು ಪ್ರಕ್ರಿಯೆ ಬಳಿಕ ನಿವಾಸದ ಕೀ ವಶಕ್ಕೆ ಪಡೆದಿದೆ.ಪರಿಶೀಲನೆ ನಡೆಸಿದ ಬಳಿಕ ಸಂಸದರ ನಿವಾಸಕ್ಕೆ SIT ಇದೀಗ ಬೀಗ ಹಾಕಿದೆ. ನಿನ್ನೆ SIT ಅಧಿಕಾರಿಗಳು ಸಂಸದರ ನಿವಾಸವನ್ನ ಸಂಪೂರ್ಣವಾಗಿ ಸೀಜ್ ಮಾಡಲಾಗಿದ್ದು, ನಿನ್ನೆ ರಾತ್ರಿ 5 ಗಂಟೆ ಕಾಲ ಮಹಜರು, ಪರಿಶೀಲನೆ ನಡೆಸಲಾಗಿದೆ. ಸಂಸದರ ನಿವಾಸದ ಮೊದಲ ಮಹಡಿಯ ಕೊಠಡಿಯಲ್ಲಿ ಅತ್ಯಾಚಾರ ಆಗಿದೆ ಎನ್ನುವ ಆರೋಪ ಕೇಳಿಬಂದಿದೆ. ಸಂಸದರ ಸರ್ಕಾರಿ ನಿವಾಸದಲ್ಲೇ ಅಶ್ಲೀಲ ವಿಡಿಯೋ ರೆಕಾರ್ಡ್ ಶಂಕೆ ವ್ಯಕ್ತವಾಗಿದೆ. ಅಶ್ಲೀಲ ವಿಡಿಯೋ ರೆಕಾರ್ಡ್ ಸಂಬಂಧವೂ ಎಸ್ಐಟಿ ತನಿಖೆ ನಡೆಸಲಿದೆ. ಸಂಸದರ ನಿವಾಸದಿಂದ ಬೆಂಗಳೂರಿಗೆ ಹೋಗಿ ವಿದೇಶಕ್ಕೆ ಪ್ರಜ್ವಲ್ ತೆರಳಿದ್ದಾರೆ ಎನ್ನಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ದುಬಾಯಿ ನಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ್ಯ ಹೊಡೆದು ತಂದೆಯ ಬಂಧನದ…
ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…












