Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಪ್ರಜ್ವಲ್ ಗೆ ರೆಡ್ ಕಾರ್ನರ್ ನೋಟಿಸ್ ನೀಡಿದ್ದು ಇದೀಗ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ನೀಡಲು ಎಸ್ಐಟಿ ಸಿಬಿಐಗೆ ಮನವಿ ಮಾಡಿದೆ. ನ್ಯೂ ಕಾರ್ನರ್ ನೋಟೀಸಿಗೆ ಎಸ್ಐಟಿ ಇದೀಗ ಸಿಬಿಐಗೆ ಮನವಿ ಮಾಡಿದ್ದು ಇಂಟರ್ಫೋಲ್ ಮೂಲಕ ಮನವಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು ಅಲ್ಲಿ ಅವರ ಚಲನವಲನ ಅವರ ಚಟುವಟಿಕೆ ಹಾಗೂ ಅಲ್ಲಿ ಏನು ಮಾಡುತ್ತಿದ್ದಾನೆ ಎಂಬುದರ ಕುರಿತಂತೆ ಮಾಹಿತಿ ಕಲೆ ಹಾಕಲು ಎಸ್ಐಟಿ ನ್ಯೂ ಕಾರ್ನರ್ ನೋಟಿಸ್ ಗೆ ಜಾರಿ ಮಾಡಲು ಎಸ್ಐಟಿ ಸಿಬಿಐ ಮೊರೆ ಹೋಗಿದೆ. ಇಂಟರ್ಫೋಲ್ ನಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲು ತಯಾರಿ ನಡೆಸಿದ್ದು ಬ್ಲೂ ಕಾರ್ನರ್ ನೋಟಿಸ್ ಮೂಲಕ ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಏನಿದು ‘ಬ್ಲೂ ಕಾರ್ನರ್’ ನೋಟಿಸ್? ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಅವರ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ರದ್ದು ಆಗದೆ ಇರುವ ಕಾರಣ…
ರಾಯಚೂರು : ಜೈ ಶ್ರೀರಾಮ್ ಘೋಷಣೆ ಕೂಗುವವರನ್ನ ಪೊಲೀಸರು ಬೂಟುಗಾಲಲ್ಲಿ ಒದ್ದು ಒಳಗೆಹಾಕಬೇಕು ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಬಿಜೆಪಿ ಮುಖಂಡರ ಆಕ್ರೋಶ ಗುರಿಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಹೇಳಿಕೆಯನ್ನು ಖಂಡಿಸಿ ಈಗಾಗ್ಲೇ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿಯಿಂದ ಧರಣಿ ನಡೆಸಲಾಗುತ್ತಿದೆ. ಲೋಕಸಭ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ನೇತೃತ್ವದಲ್ಲಿ ದೂರು ನೀಡಲು ಇದೀಗ ಬಿಜೆಪಿ ಮುಂದಾಗಿದೆ. ಕೆಲವೇ ಕ್ಷಣಗಳಲ್ಲಿ ಅಣ್ಣಾಮಲೈ ಅವರು ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿದ್ದಾರೆ.ಡಿಸಿ ಕಚರಿಗೆ ಆಗಮಿಸಿ ಬಿಜೆಪಿ ದೂರು ನೀಡಲಿದೆ. ಇದೆ ವೇಳೆ ರಾಯಚೂರು ಶಾಸಕ ಶಿವರಾಜ ಪಾಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರು ಈಗಾಗಲೇ ಆಗಮಿಸಿದ್ದಾರೆ. ಕೆಲದಿನಗಳ ಹಿಂದೆ ನಗರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಬಷಿರುದ್ಧೀನ್ ಉದ್ದಟತನದ ಹೇಳಿಕೆ ನೀಡಿದ್ದರು. ಜೈ ಶ್ರೀರಾಮ ಅಂದವರನ್ನ ಪೊಲೀಸರು ಬೂಟುಗಾಲಲ್ಲಿ ಒದ್ದು ಒಳಗೆ ಹಾಕಬೇಕು ಅಂತಾ. ಬಷಿರುದ್ಧೀನ್ ವಿಡಿಯೋ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಿಂದೂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದಂತೆ ನಿನ್ನೆ ಪೊಲೀಸರು ರೇವಣ್ಣ ಸಂಬಂಧಿ A2 ಆರೋಪಿ ಸತೀಶ್ ಬಾಪುನನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸತೀಶ್ ಬಾಬುನನ್ನು ಕಸ್ಟಡಿಗೆ ನೀಡಿ ಎಂದು ಅರ್ಜಿ ಸಲ್ಲಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸತೀಶ್ ಬಾಬು ಕಸ್ಟಡಿ ಅಗತ್ಯವಿದೆ.ಹೆಚ್ಚಿನ ವಿಚಾರಣೆ ನಡೆಸಲು ಸತೀಶ್ ಬಾಬು ಕಸ್ಟಡಿ ಅಗತ್ಯವಿದೆ. ಹಾಗಾಗಿ ಕಸ್ಟಡಿಗೆ ನೀಡಲು ಇದೀಗ SIT ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಎಸ್ಐಟಿ ಪರ ಎಸ್ ಪಿ ಪಿ ಜಗದೀಶ್ ರಿಂದ ಮನವಿ ಸಲ್ಲಿಕೆಯಾಗಿದೆ. ಸದ್ಯ ಆರೋಪಿ ಸತೀಶ್ ಬಾಬು ಈಗಾಗಲೇ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇವಣ್ಣ ಸತೀಶ್ ಬಾಬು ವಿರುದ್ಧ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾರಣಕ್ಕೆ ಒಳಗಾದ ಮಹಿಳೆಯ ಮಗ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ…
ಬೆಂಗಳೂರು : ಭೂ ಸ್ವಾದಿನಕ್ಕೆ ಒಳಪಟ್ಟ ಜಮೀನಿಗೆ ಪರಿಹಾರದ ರೂಪದಲ್ಲಿ ಎರಡು ಕೋಟಿಗೂ ಅಧಿಕ ಹಣ ಬಂದಿತ್ತು. ಈ ಹಣವನ್ನು ತವರಿಗೆ ಕಳುಹಿಸಿದ್ದಾಳೆಂದು ಕೋಪಗೊಂಡ ಪತಿ ಕುಡಿದ ಮತ್ತಿನಲ್ಲಿ ಮಚ್ಚಿನಿಂದ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಗೊಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ. ಹತ್ಯೆಗೆ ಒಳಗದ ಮಹಿಳೆಯನ್ನ ಜಯಲಕ್ಷ್ಮಿ(36) ಎಂದು ಹೇಳಲಾಗುತ್ತಿದ್ದು, ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯನ್ನ ಪತಿ ಶ್ರೀನಿವಾಸ್ ಎಂದು ತಿಳಿಬಂದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ದಾಬಸ್ ಪೇಟೆ ಪೊಲೀಸರು ಶ್ರೀನಿವಾಸ್ ನನ್ನ ಬಂಧಿಸಿದ್ದಾರೆ. ದಾಬಸ್ ಪೇಟೆ ಕೈಗಾರಿಕಾ ಪ್ರದೇಶಕ್ಕಾಗಿ ಶ್ರೀನಿವಾಸ್ ಅವರ 1 ಎಕರೆ ಜಮೀನು ಭೂ ಸ್ವಾಧೀನಕ್ಕೆ ಒಳಗಾಗಿತ್ತು, ಪರಿಹಾರವಾಗಿ 2 ಕೋಟಿಗೂ ಹೆಚ್ಚು ಹಣ ಶ್ರೀನಿವಾಸ್ ಕುಟುಂಬಕ್ಕೆ ಬಂದಿತ್ತು. ಇದರಲ್ಲಿ ಬಹುಪಾಲು ಹಣವನ್ನ ಹೆಂಡತಿ ತವರು ಮನೆಗೆ ಕಳುಹಿಸಿದ್ದಾಳೆ ಎಂಬುದು ಗಂಡ ಶ್ರೀನಿವಾಸನ ಆರೋಪವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ನಿತ್ಯ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಕುಡಿದ ನಶೆಯಲ್ಲಿದ್ದ ಗಂಡ ಜಗಳದ…
ಬೆಂಗಳೂರು : ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ಕೃಪೆ ತೋರಿದ್ದು ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಮಳೆರಾಯ ಆರ್ಭಟಿಸಿದ್ದಾನೇ. ಅದೇ ರೀತಿಯಾಗಿ ಮೇ 8 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿಯಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರೆಯಲಿದ್ದು ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಯಾದಗಿರಿ ಸೇರಿದಂತೆ ಈ ಭಾಗದಲ್ಲಿ ಅತ್ಯಧಿಕ 46 ಡಿಗ್ರಿ ಸೆಲ್ಸಿ ಎಸ್ ತಾಪಮಾನ ದಾಖಲಾಗಿದೆ. ಅದೇ ರೀತಿಯಾಗಿ ಇನ್ನೂ ನಾಲ್ಕು ದಿನ ಕೊಪ್ಪಳ, ಬೀದರ್, ವಿಜಯಪುರ,ಬೆಳಗಾವಿ, ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾವೇರಿ,ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮುಂತಾದ ಜಿಲ್ಲೆಗಳಲ್ಲಿ ನಾಲ್ಕು ಜನಗಳ ಕಾಲ ಬಿಸಿ ಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮೇ 8 ರಿಂದ 10ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…
ಹುಬ್ಬಳ್ಳಿ : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತ ಹೇಳುತ್ತಿದ್ದಾರೆ ಆದರೆ ನನಗಂತೂ ಇದುವರೆಗೂ ಯಾವುದೇ ರೀತಿಯಾದಂತಹ ಪತ್ರ ಬಂದಿಲ್ಲ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕೇರಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಶುರುವಾಗಿದೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಭೀಮ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಚೌಡೇಶ್ವರಿ ದೇವಿಯ ಈ ಮಂತ್ರವನ್ನು ಹೇಳಿಕೊಳ್ಳುವುದರಿಂದ ಸಕಲ ಕಷ್ಟಗಳು ನಿವಾರಣೆಯಾಗುತ್ತದೆ. ಪ್ರತಿನಿತ್ಯ ಕನಿಷ್ಠ ಪಕ್ಷ 9 ಬಾರಿ ಈ ಮಂತ್ರವನ್ನು ಹೇಳಿದರೆ ಸಾಕು ಇದರಿಂದ ಅನೇಕ ರೀತಿಯ ಲಾಭಗಳನ್ನು ನೀವು ಪಡೆದುಕೊಳ್ಳಬಹುದು. ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಚೌಡೇಶ್ವರಿ ಮಂತ್ರವನ್ನು ಜಪಿಸುವುದರಿಂದ ಸಕಲ ರೋಗಗಳಿಂದ ಮುಕ್ತಿಯನ್ನು ಹೊಂದಬಹುದು. ಇದರ ಜೊತೆಗೆ ಗ್ರಹ ಭೂತಗಳ ಚೇಷ್ಟೆಗಳು ದೂರವಾಗುತ್ತದೆ. ಇಷ್ಟೇ ಅಲ್ಲದೆ ಗ್ರಹಗಳಿಂದ ಬಂದಿರುವ ತೊಂದರೆಗಳು ಕೂಡ ದೂರವಾಗುತ್ತದೆ.ಈ ಮಂತ್ರದಿಂದ ಪ್ರೇತಗಳ ಉಚ್ಚಾಟನೆಯನ್ನು ಕೂಡ…
ಹುಬ್ಬಳ್ಳಿ : ಸರ್ಕಾರ ನೇಹಾ ಹತ್ಯೆ ಪ್ರಕರಣವನ್ನು ವೈಯಕ್ತಿಕ ವಿಚಾರ ಅಂತ ಹೇಳಿತ್ತು. ಆದರೆ ಇದೀಗ ಹುಬ್ಬಳ್ಳಿಯಲ್ಲಿ ನಿನ್ನೆ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿದೆ. ಇದನ್ನು ವೈಯಕ್ತಿಕ ಎಂದು ಹೇಳಬಾರದು.ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಬೇಕು ಎಂದು ಬಿಜೆಪಿಯ ಮಾಜಿ ಸಚಿವ ಸಿ ಟಿ ರವಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಿನ್ನೆ ಮತ್ತೊಂದು ಲವ್ ಜಿಹಾದ್ ಕೇಸ್ ನಡೆದಿದೆ. ಧಾರವಾಡದಲ್ಲಿ ಒಂದುವರೆ ತಿಂಗಳಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ನೇಹ ಹಿರೇಮಠ ಹತ್ಯೆಯಾದಾಗ ಅದು ವೈಯಕ್ತಿಕ ಹತ್ಯೆ ಎಂದರು. ಈ ಪ್ರಕರಣ ವೈಯಕ್ತಿಕ ಎಂದು ಹೇಳಬಾರದು ಎಂದು ತಿಳಿಸಿದರು. ಲವ್ ಜಿಹಾದ್ ಕೇಸ್ ತನಿಖೆಗೆ ವಿಶೇಷ ತಂಡ ರಚನೆ ಮಾಡಿ.ಕೇರಳ ಕೋರ್ಟ್ ಲವ್ ಜಿಹಾದ್ ಬಗ್ಗೆ ಆತಂಕ ವ್ಯಕ್ತಪಡಿಸಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಲಾಗಿದೆ ಲವ್ ಜಾಬ್ ಕೇಸ್ ತನಿಖೆ ಮಾಡಲು ಎಸ್ಐಟಿ ರಚನೆ ಮಾಡಿ ಅದು ಹುಬ್ಬಳ್ಳಿಯಲ್ಲಿ ಬಿಜೆಪಿ ಮಾರಿ…
ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿ ಈ ಒಂದು ಪ್ರಕರಣ ಇಟ್ಟುಕೊಂಡು ಒಕ್ಕಲಿಗ ನಾಯಕರು ಆಗಲು ಯತ್ನಿಸುತ್ತಿದ್ದಾರೆ ಆದರೆ ಇದರಿಂದ ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಟಾಂಗ ನೀಡಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ಮಾತನಾಡುತ್ತಿದ್ದಾರೆ. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ಈ ವಿಚಾರವನ್ನು ಇಟ್ಟುಕೊಂಡು ಒಕ್ಕಲಿಗ ನಾಯಕತ್ವ ಪಡೆಯಲು ಯತ್ನಿಸಲಾಗುತ್ತಿದೆ ಇಂತಹ ವಿಷಯ ಇಟ್ಟುಕೊಂಡು ಒಕ್ಕಲಿಗ ನಾಯಕ ಆಗುವುದಕ್ಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಂದು ಹಾಸನದ ಹೊಳೆನರಸೀಪುರದಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಈಗ ಸ್ಥಳೀಯ ಪೊಲೀಸ್ರು ಅವರ ಮನೆಗೆ ಭೇಟಿ ನೀಡಿದ್ದಾರೆ. ಸಂತ್ರಸ್ಥರು ನೀಡಿದ ದೂರಿನ ಮೇರೆಗೆ ಇಂದು ಅವರ ಸಮ್ಮುಖದಲ್ಲಿಯೇ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಲ್ಲಿದ್ದಾರೆ. ಹೀಗಾಗಿ ಸ್ಥಳೀಯ ಪಿಎಸ್ಐ ಅಜಯ್ ನೇತೃತ್ವದ ಪೊಲೀಸ್ ತಂಡ ಇದೀಗ ಅವರ ಮನೆಗೆ ಭೇಟಿ ನೀಡಿ ಭವಾನಿ ರೇವಣ್ಣ ಅವರ ಜೊತೆಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಸದರ ನಿವಾಸದ ಕೊಠಡಿಯಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳಾ ಸಂತ್ರಸ್ಥೆ ಒಬ್ಬಳು ದೂರು ನೀಡಿದ್ದಾಳೆ. ಹೀಗಾಗಿ ಎಸ್ಐಟಿ ಅಧಿಕಾರಿಗಳು ಇಂದು ಹಾಸನ ಜಿಲ್ಲೆಯ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಕೂಡ ಇಂದು ದೂರು ನೀಡಿದ ಸಂತ್ರಾಸ್ತೆಯ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದೆ ಆದರೆ ಅದಕ್ಕೂ ಮುನ್ನ…












