Author: kannadanewsnow05

ಬೆಂಗಳೂರು : ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿವೇಕ್ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ನೇಣು ಬಿಗಿದುಕೊಂಡು ವಿವೇಕ್ ಆತ್ಮಹತ್ಯೆಗೆ ಯತ್ನಿಸಿದ್ದರು. ಐಸಿಐಸಿಐ ಬ್ಯಾಂಕ್ ನಲ್ಲಿ ವಿವೇಕ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತ ವಿವೇಕ್ ಪತ್ನಿಯಿಂದ ಇದೀಗ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಎರಡು ಮೂರು ದಿನದಿಂದ ವಿವೇಕ್ ಡಲ್ ಆಗಿದ್ದರು. ಆದರೆ ಇದಕ್ಕೆ ಕಾರಣ ತಿಳಿದು ಬಂದಿಲ್ಲ ಸಾವಿರ ನಿಖರ ಕಾರಣ ಪತ್ತೆ ಮಾಡುವಂತೆ ವಿವೇಕ್ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್ ಸಹ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ವಿವೇಕ್ ಮೃತದೇಹ ಹಸ್ತಾಂತರಿಸಲಾಗಿದೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ ಕಳೆದ 12 ದಿನಗಳಿಂದ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇಂದು ಬಂಟ್ವಾಳ ತಾಲೂಕಿನ ಸುತ್ತಮುತ್ತಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದೀಗ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಡಿ ಮಾರ್ಟ್ ನಲ್ಲಿ ಕೊನೆಗೂ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಹೌದು ದಿಗಂತ್ ಗಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು.ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ದಿಗಂತ್​ಗಾಗಿ ಪೊಲೀಸರು ಕಳೆದ 12 ದಿನಗಳಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಂಟ್ವಾಳ ಸಬ್ ಡಿವಿಜನ್​ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್​ಗಳು. ಎಸ್.ಐ.ಗಳು ಹಾಗೂ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ ಕಳೆದ 12 ದಿನಗಳಿಂದ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇಂದು ಬಂಟ್ವಾಳ ತಾಲೂಕಿನ ಸುತ್ತಮುತ್ತಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದೀಗ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಹೌದು ದಿಗಂತ್ ಗಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು.ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ದಿಗಂತ್​ಗಾಗಿ ಪೊಲೀಸರು ಕಳೆದ 12 ದಿನಗಳಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಂಟ್ವಾಳ ಸಬ್ ಡಿವಿಜನ್​ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್​ಗಳು. ಎಸ್.ಐ.ಗಳು ಹಾಗೂ ಸುಮಾರು 100 ಕ್ಕೂ ಅಧಿಕ…

Read More

ಕಲಬುರ್ಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದೇ ದಿಕ್ಕಿನಲ್ಲಿ ಸಾಗಿದರೆ ರಾಜ್ಯದಲ್ಲಿ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ. ಅಕಸ್ಮಾತ್ ವಿರುದ್ಧ ದಿಕ್ಕಿನಲ್ಲಿ ಹೋದರೆ ತುಂಬಾ ಕಷ್ಟವಾಗುತ್ತದೆ ಎಂದು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಕಲ್ಯಾಣಪಥ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ 16 ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಮಲ್ಲಿಕಾರ್ಜುನ ಖರ್ಗೆ ಹಾಡಿ ಹೊಗಳಿದರು. ಸಿದ್ದರಾಮಯ್ಯ ಇಷ್ಟು ಬಜೆಟ್ ಮಂಡಿಸಲು ಕಾಂಗ್ರೆಸ್ ಪಕ್ಷ ಕಾರಣ. ಒಬ್ಬ ವ್ಯಕ್ತಿ ಒಳ್ಳೆಯ ಕೆಲಸ ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಅದೇ ರೀತಿ ಡಿಕೆ ಶಿವಕುಮಾರ್ ಕೂಡ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಡಿಸೆಮ್ ಡಿಕೆ ಶಿವಕುಮಾರ್ ಇಬ್ಬರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು…

Read More

ಕಲಬುರ್ಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಕಲಬುರ್ಗಿಯಲ್ಲಿ ಒಂದೇ ಹಗ್ಗಕ್ಕೆ ಬಾಲಕ ಮತ್ತು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ. ಹೌದು ಯಡ್ರಾಮಿ ತಾಲೂಕಿನ ಮಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತರಿಬ್ಬರು ಬಳ್ಳಿ ಗ್ರಾಮದ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ತಮ್ಮ ಪ್ರೀತಿ ವಿಚಾರ ಮನೆಯವರಿಗೆ ತಿಳಿಯಬಹುದು ಎಂಬ ಅತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅಪ್ರಾಪ್ತರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಯಾವದೇ ಡೆತ್‌ ನೋಟ್‌ ಪತ್ತೆಯಾಗಿಲ್ಲವಾದ್ದರಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತಿಯೊಬ್ಬ ತನ್ನ ಪತ್ನಿ ಹಾಗು ಮಾವನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಪತ್ನಿ ಮಾವನಿಗೆ ಖಾರದಪುಡಿ ಎರಚಿ ಸಾಯಿ ಕುಮಾರ್ ಹಲ್ಲೆ ನಡೆಸಿದ್ದಾನೆ. ವರದಕ್ಷಿಣೆ ವಿಚಾರಕ್ಕೆ ಮನೆಯಲ್ಲಿ ಪತಿ ಮತ್ತು ಪತ್ನಿಯ ಮಧ್ಯೆ ಗಲಾಟೆ ನಡೆಯುತ್ತಿತ್ತು. ಇದೆ ವೇಳೆ ಮಾವನ ಜೊತೆಗೂ ಸಾಯಿ ಕುಮಾರ್ ಜಗಳ ಮಾಡಿದ್ದಾನೆ. ಈ ವೇಳೆ ಖಾರದ ಪುಡಿ ಎರಚಿ ಪತ್ನಿ ಮತ್ತು ಮಾವನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸದ್ಯ ಪತಿ ವಿರುದ್ಧ ಪತ್ನಿ ರಮ್ಯಾ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಅವರನ್ನು ನಿನ್ನೆ DRI ಅಧಿಕಾರಿಗಳು 3 ದಿನಗಳ ಕಾಲ ತಮ್ಮ ಕಸ್ಟಡಿಗೆ ತೆಗೆದುಕೊಂಡು ಇಂದಿನಿಂದ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಡಿ ಆರ್ ಐ ಹಿರಿಯ ಅಧಿಕಾರಿಗಳು ನಟಿ ರನ್ಯಾರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟದ ಕುರಿತು ವಿಚಾರಣೆ ನಡೆಸಲಿದ್ದಾರೆ. ಹೌದು DRI ಹಿರಿಯ ಅಧಿಕಾರಿಗಳಿಂದ ರನ್ಯಾಗೆ ಇಂದಿನಿಂದ ಡ್ರಿಲ್ ನಡೆಯಲಿದೆ. ರನ್ಯಾ ಹಿಂದಿನ ಸಿಂಡಿಕೇಟ್ ಪತ್ತೆ ಹಚ್ಚಲಿರುವ ಅಧಿಕಾರಿಗಳು, ದುಬೈ ನಿಂದ ಇದುವರೆಗೂ ಎಷ್ಟು ಬಾರಿ ಅಕ್ರಮವಾಗಿ ಚಿನ್ನ ಸಾಗಿಸಿದ್ದಾಳೆ? ಹಾಗೂ ಬೆಂಗಳೂರಿಗೆ ತಂದು ಯಾರಿಗೆ ಕೊಟ್ಟಿದ್ದಾಳೆ? ಎಂದು ಡಿಆರ್ಐ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ರನ್ಯಾ ಮೊಬೈಲ್ ಮತ್ತು ಲ್ಯಾಪ್ಟಾಪ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಮೊಬೈಲ್ ಮತ್ತು ಲ್ಯಾಪ್ಟಾಪ್ ಪಡೆದು ಮಾಹಿತಿ ಮೇಲೆ ವಿಚಾರ ನಡೆಸಲಿದ್ದು ಮನೆಯಲ್ಲಿ ಸಿಕ್ಕ ಹಣ ಚಿನ್ನದ ಮೂಲದ ಬಗ್ಗೆಯೂ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಬೆಂಗಳೂರಿನಲ್ಲಿ ಯುವಕನೊಬ್ಬ ಯುವತಿಯನ್ನು ಟ್ಯಾಂಕ್ ಮೇಲೆ ಕೂರಿಸಿಕೊಂಡು ರೋಮ್ಯಾನ್ಸ್ ಮಾಡುತ್ತಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಲ್ಲಿ ಇದೀಗ ಮತ್ತೊಂದು ಘಟನೆ ನಡೆದಿದ್ದು ಯುವಕರಿಬ್ಬರ ಜೊತೆಗೆ ಯುವತಿ ತ್ರಿಬಲ್ ರೈಡಿಂಗ್ ಮಾಡಿದ್ದು ಅಲ್ಲದೆ ಯುವಕನಿಗೆ ಬೈಕ್ ನಲ್ಲಿಯೇ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ರಸ್ತೆಯಲ್ಲಿ ಯುವಕ, ಯುವತಿಯರ ಹುಚ್ಚಾಟದಿಂದ ರಸ್ತೆಯಲ್ಲಿನ ವಾಹನ ಸವಾರರು ಪರದಾಡಿದ್ದಾರೆ. ಒಂದೇ ಬೈಕನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಹೆಲ್ಮೆಟ್​ ಹಾಕದೆ, ತ್ರಿಬಿಲ್​ ರೈಡಿಂಗ್​ ಹೋಗಿದ್ದಾರೆ. ಅಲದೇ ಬೈಕ್​ನಲ್ಲಿ ಹೋಗುತ್ತಲೇ ಯುವತಿ ಯುವಕನಿಗೆ ಕಿಸ್​ ಕೊಟ್ಟಿದ್ದಾಳೆ. ಪ್ರಶ್ನಿಸಿದ ಇತರೆ ಬೈಕ್ ಸವಾರರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಮಾರ್ಚ್ 7 ರಂದು ರಾತ್ರಿ ರಾಗಿಗುಡ್ಡ ರಸ್ತೆಯಲ್ಲಿ ಘಟನೆ ನಡೆದಿದೆ. ಓರ್ವ ಯುವಕ ಬೈಕ್ ಚಾಲನೆ ಮಾಡುತ್ತಿದ್ದನು. ಸವಾರನ ಹಿಂದೆ ಕುಳಿತಿದ್ದ ಯುವಕನಿಗೆ ಯುವತಿ ಮುತ್ತುಕೊಟ್ಟಿದ್ದಾಳೆ. ಯುವಕ‌ ಯುವತಿಯರ ಹುಚ್ಚಾಟವನ್ನು ಬೈಕ್…

Read More

ತುಮಕೂರು : ತುಮಕೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ, ಸುಮಾರು 10ಕ್ಕೂ ಅಧಿಕ ಅಂತರಾಜ್ಯ ಕಳ್ಳರ ಬಂಧನ ಮಾಡಲಾಗಿದೆ ಎಂದು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ವೆಂಕಟ್ ಹೇಳಿಕೆ ನೀಡಿದ್ದಾರೆ. ಕಳೆದ ಎರಡು ತಿಂಗಳಿಂದ ಕಳ್ಳತನ ಮಾಡಿದ್ದ ಅಂತರಾಜ್ಯ 10 ಜನ ಕಳ್ಳರನ್ನು ಅರೆಸ್ಟ್ ಮಾಡಲಾಗಿದೆ. ತುಮಕೂರು ಜಿಲ್ಲೆಯ ವಿವಿಧಡೆ ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದವು. 11 ಪ್ರಕರಣದಲ್ಲಿ 23 ಲಕ್ಷ ಮೌಲ್ಯದ ಚಿನ್ನದ ಸರ ಕಳ್ಳತನ ಆಗಿತ್ತು ಎಂದು ತಿಳಿಸಿದರು. ತುಮಕೂರು ನಗರ, ಮಧುಗಿರಿ, ಶೀರಾ, ಹುಲಿಯೂರುದುರ್ಗ, ಹೊಸ ಬಡಾವಣೆ, ಕೊಡಿಗೆನಹಳ್ಳಿ, ಅಮೃತೂರು, ತಿಪಟೂರು, ಜಯನಗರ ಸೇರಿದಂತೆ ವಿವಿಧಡೆ ಕಳ್ಳತನ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಗಳ ಹಿನ್ನೆಲೆಯಲ್ಲಿ 10 ಜನ ಅಂತರಾಜ್ಯ ಕಳ್ಳರನ್ನು ಅರೆಸ್ಟ್ ಮಾಡಲಾಗಿದೆ ಎಂದು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ವೆಂಕಟ್ ಅವರು ಮಾಹಿತಿ ನೀಡಿದರು.

Read More

ಬೆಂಗಳೂರು : ಡಿಸಿಪಿ ಕಚೇರಿಯ ಬಳಿಯೇ ರೌಡಿಶೀಟರ್ ಒಬ್ಬ ಅಪಾಯಕಾರಿ ವ್ಹಿಲಿಂಗ್ ಮಾಡಿದ್ದು ಅಲ್ಲದೆ ಲಾಂಗ್ ಮಚ್ಚುಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಸಿದ್ದಿಕಿ ಅಲಿಯಾಸ್ ಬರ್ನಲ್ ನನ್ನು ಇದೀಗ ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ತಾಳಿ ಪೊಲೀಸರಿಂದ ರೌಡಿಶೀಟರ್ ಸಿದ್ದುಕಿ ಬಂಧನವಾಗಿದೆ ವೀಲಿಂಗ್ ನಡೆಸಿ ಲಾಂಗ್ ಪ್ರದರ್ಶನ ಮಾಡುತ್ತಿದ್ದ ಆರೋಪದ ಅಡಿ ಇದೀಗ ಆತನನ್ನು ಅರೆಸ್ಟ್ ಮಾಡಲಾಗಿದೆ ಸಾರ್ವಜನಿಕರಲ್ಲಿ ರೌಡಿಶೀಟರ್ ಸಿದ್ದಿಕೆ ಆತಂಕ ಸೃಷ್ಟಿ ಮಾಡುತ್ತಿದ್ದ ಆರೋಪಿಸಿದ್ದಕ್ಕೆ ವಿರುದ್ಧ ವಿವಿಧಡೆ 17 ಪ್ರಕರಣಗಳು ದಾಖಲಾಗಿದ್ದವು ಪೂರ್ವ ವಿಭಾಗ ಡಿಸಿಪಿ ಕಚೇರಿಯ ಬಳಿಯೇ ಆಸಾಮಿ ವೀಲಿಂಗ್ ಮಾಡಿದ್ದ ಎನ್ನಲಾಗಿದೆ ಹಾಗಾಗಿ ಇದೀಗ ಆತನನ್ನು ಶಿವಾಜಿನಗರ ಠಾಣೆಪಡಿಸಲು ಅರೆಸ್ಟ್ ಮಾಡಿದ್ದಾರೆ.

Read More