Author: kannadanewsnow05

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಈ ಮೊದಲು ದರ್ಶನ್ ಗೆ ಈ ರಾಜ್ಯಾತಿಥ್ಯ ನೀಡಿರುವ ವಿಚಾರವಾಗಿ ಭಾರಿ ಸದ್ದು ಆಗಿತ್ತು. ಇದೀಗ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಬಿಂದಾಸ್ ಲೈಫ್ ಸ್ಟೈಲ್ ನಡೆಸುತ್ತಾ ಇದ್ದಾನೆ. ಹೌದು ಜೈಲಿನಲ್ಲಿ ಅಪರಾಧಿ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕೊಲೆ ಆರೋಪಿ ದರ್ಶನ್ ಇರೋ ಜೈಲಲ್ಲಿ ನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಪರಪ್ಪನ ಅಗ್ರಹಾರ ಜೇಲಿನಲ್ಲಿ ಉಮೇಶ್ ರೆಡ್ಡಿಗೆ ಫುಲ್ ರಾಜಾತಿಥ್ಯ ನೀಡಲಾಗುತ್ತಿದೆ. ಉಮೇಶ್ ರೆಡ್ಡಿ ಬಿಂದಾಸ್ ಲೈಫ್ ಲೀಡ್ ಮಾಡುತ್ತಿದ್ದಾನೆ. ಅಲ್ಲದೆ ನಟಿ ರನ್ಯಾರಾವ್ ಗೋಲ್ಡ್ ಪ್ರಕರಣದ ಆರೋಪಿ ಬಳಿಯೂ ಮೊಬೈಲ್ ಪತ್ತೆಯಾಗಿದೆ ನ್ಯಾಯಾಂಗ ಬಂದನದಲ್ಲಿರುವ ತರುಣ್ ಕೊಂಡೂರು ಬಿಂದಾಸ್ ಆಗಿ ಮೊಬೈಲ್ ಬಳಕೆ ಮಾಡುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ. ಅಲ್ಲದೆ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಸ್ಫೋಟಕ ದೃಶ್ಯ ವೈರಲ್ ಆಗಿದ್ದವು…

Read More

ಮಂಗಳೂರು : ಶ್ರೀಮಂತರು ಹಾಗೂ ಉದ್ಯಮಿಗಳಿಗೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಇಂದ ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ. ಸಲ್ಡಾನ ಮನೆ ಬ್ಯಾಂಕ್ ಖಾತೆ ಸೇರಿ ಒಟ್ಟು 2.5 ಕೋಟಿ ರೂಪಾಯಿ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳಿಂದ ಮಾಡಲಾಗಿದ್ದು, ಪ್ರಮುಖ ಆರೋಪಿ ರೋಷನ್ ಸಲ್ದಾನ ಆತನ ಪತ್ನಿ ಡಬ್ನೀನೀತು ಹಾಗೂ ಇತರರ ವಿರುದ್ಧ ದಾಖಲಾದ ಎಫ್ಐಆರ್ ಆಧಾರದ ಮೇಲೆ ಇಡೀ ತನಿಖೆ ನಡೆಸುತ್ತಿದ್ದು, ಶ್ರೀಮಂತರು ಉದ್ಯಮಿಗಳಿಗೆ ಸಾಲ ಕೊಡಿಸುವ ಆಮಿಷ ಒಡ್ಡಿ ವಂಚನೆ ಎಸಗಲಾಗಿತ್ತು. ಆರೋಪಿ ರೋಷನ್ ಸಲ್ಡಾನ ಸುಮಾರು 200 ಕೋಟಿಗೂ ಅಧಿಕ ವಂಚನೆ ಎಸಗಿದ್ದ.

Read More

ಚಾಮರಾಜನಗರ : ಹುಲಿ ಸೆರೆ ಕೂಂಬಿಂಗ್ ಸಲುವಾಗಿ ಬಂದಿದ್ದ ಸಾಕಾನೆ ಪಾರ್ಥ ಸಾರಥಿಗೆ ಜೇನು ಕಚ್ಚಿದ ಪರಿಣಾಮ ದಿಕ್ಕಾಪಾಲಾಗಿ ಓಡಿ ಗುಂಡ್ಲುಪೇಟೆ ಪಟ್ಟಣದೊಳಗೆ ನುಗ್ಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಬಳಿ ಹುಲಿ ಸೆರೆ ಕೂಂಬಿಂಗ್ ಸಲುವಾಗಿ ರಾಂಪುರ ಸಾಕಾನೆ ಶಿಬಿರದ ಪಾರ್ಥಸಾರಥಿಯನ್ನು ಕರೆತರಕಾಗಿತ್ತು. ಕಾರ್ಯಾಚರಣೆ ಬಳಿಕ ನೀರು ಕುಡಿಸಲು ತೆರಳಿದಾಗ ಹೆಜ್ಜೇನು ದಾಳಿ ನಡೆಸಿವೆ. ನಂತರ ಮಾವುತ ಚೇತನ್ ಮಾತು ಕೇಳದೇ ಆನೆ ಪಟ್ಟಣಕ್ಕೆ ಬಂದಿದೆ. ದಾರಿ ತಪ್ಪಿ ಬಂದ ಸಾಕಾನೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣದೊಳಗೆ ನುಗ್ಗಿದೆ. ಈ ವೇಳೆ ಬೈಕ್ ಸವಾರರು, ಪ್ರಯಾಣಿಕರು ಇತರೆ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿದ್ದಾರೆ. ನಂತರ ನಿಲ್ದಾಣದಿಂದ ಹೊರಬಂದ ಆನೆ ಮಡಹಳ್ಳಿ ರಸ್ತೆ ಮೂಲಕ ಅಶ್ವಿನಿ ಬಡಾವಣೆ, ಜೆಎಸ್‍ಎಸ್ ನಗರದ ಕಡೆಯಲ್ಲೆಲ್ಲಾ ಓಡಾಡಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ತಡೆಯಲು ಅರಣ್ಯ ಇಲಾಖೆಯವರು ಸಾಕಾನೆಯನ್ನು ಹಿಂಬಾಲಿಸುವ ಜೊತೆಗೆ ಮಡಹಳ್ಳಿ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಪೊಲೀಸರ ಸಹಕಾರದಲ್ಲಿ ನಿರ್ಬಂಧ ಹಾಕಿಸಿದ್ದರು.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರಿಗೆ ಟ್ಯಾಂಕರೊಂದು ಢಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್(ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್(32), ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದ್ರಕಲಾ(70) ಹಾಗೂ ದತ್ತಾತ್ರೇಯ(48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಉತ್ತಮ(36) ಹಾಗೂ ಸುದೇಶ್ನಾ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹುಮನಾಬಾದ್ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಕಾರಿಗೆ ಹುಮನಾಬಾದ್ ಕಡೆಯಿಂದ ಕಲಬುರಗಿಯತ್ತ ಹೋಗುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ ನಲ್ಲಿದ್ದ ಇಬ್ಬರು ಸವಾರರು ಮತ್ತು ಕಾರಿನಲ್ಲಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ MLCಸಿಟಿ ರವಿ ಅವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಫೋನ್ ನಲ್ಲಿ ಮಾತನಾಡುವಾಗ ಕಾರ್ಯಕ್ರಮ ಒಂದಕ್ಕೆ ಬರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತಿನ ಭರದಲ್ಲಿ ಸವಿತಾ ಸಮಾಜದ ಕುರಿತು ಅವಹೇಳನಕಾರಿ ಪದ ಬಳಸಿದ್ದರು. ಬಳಿಕ ಸವಿತಾ ಸಮಾಜದವರ ಕ್ಷಮೆ ಕೂಡ ಸಿಟಿ ರವಿ ಕೇಳಿದರು. ಆದರೆ ಇದೀಗ ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಿ ಟಿ ರವಿ ವಿರುದ್ಧ FIR ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಮುರುಗೇಶ್ ಮೊದಲಿಯಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 27 ರಂದು ಎಂಎಲ್‌ಸಿ ಸಿಟಿ ರವಿ ಅಕ್ಷೇಪಾರ್ಹ ಪದ…

Read More

ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ರಾಜಧಾನಿ ಬೆಂಗಳೂರು ಸೇರಿದಂತೆ ಹೈದರಾಬಾದ್, ದೆಹಲಿ ಹಾಗೂ ಗುಜರಾತ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದ ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗುಜರಾತ್ ಮೂಲದ ಮಹಿಳಾ ಟೆಕ್ಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ವಿಚಾರಣೆಯ ವೇಳೆ ಮಹಿಳಾ ಟೆಕ್ಕಿ ಬಾಯಿಬಿಟ್ಟಿದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ರೆನೆ ಜೋಶಿಲ್ದಾನ ವಿಚಾರಣೆ ನಡೆಸಿದ ಉತ್ತರ ಸೆನ್ ವಿಭಾಗದ ಪೊಲೀಸರು ವಾಪಸ್ ಗುಜರಾತ್​ಗೆ ಬಿಟ್ಟು ಬಂದಿದ್ದಾರೆ. ಈ ನಡುವೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ನೇಮಗೌಡ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ಅಸ್ಪಷ್ಟ ಹಾಗೂ ವಿಚಿತ್ರ ಹೇಳಿಕೆಗಳನ್ನು ನೀಡಿದ್ದಾಳೆ. ಹೀಗಾಗಿ ರೆನೆ ಜೋಶಿಲ್ದಾ ಪ್ರಿಯಕರ ಪ್ರಭಾಕರ್‌ಗೂ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬಿದ್ದ ಪೊಲೀಸರು ಮೂಲತಃ ಗುಜರಾತ್​ನವಳಾಗಿರುವ ರೆನೆ ಜೋಶಿಲ್ದಾ ಚೆನ್ನೈ ಏರ್ಪೋರ್ಟ್ ರಸ್ತೆಯ…

Read More

ಗದಗ : ಈ ಒಂದು ಘಟನೆ ವಿಚಿತ್ರವೊ, ದೇವರ ಪವಾಡವೊ ಗೊತ್ತಿಲ್ಲ. ಆದರೆ ಸತತ ಆರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ಬಳಿಕ ಸಾವನ್ನಪ್ಪಿದ್ದ ವ್ಯಕ್ತಿ ಆತನ ಶವ ಮನೆಗೆ ತಂದ ಕೂಡಲೇ ಉಸಿರಾಡಿ ಕಣ್ಣು ತೆರೆದು ಮತ್ತೆ ಜೀವಂತವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಹೌದು 6 ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕಿಯೆ ವೇಳೆ ಉಸಿರಾಟಿ ಕಣ್ತೆರೆದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.ವ್ಯಕ್ತಿಯನ್ನು ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಎಂದು ಗುರುತಿಸಲಾಗಿದೆ. ಇದನ್ನು ಕಂಡ ಸ್ಥಳೀಯರು ಇದು ದೇವರ ಪವಾಡವೇ ಅಂತಿದ್ದಾರೆ. ಬೇಗ ಗುಣಮುಖರಾಗಿ ಬರಲಿ ಎಂದು ಕುಟುಂಬಸ್ಥರು, ಸ್ನೇಹಿತರು, ಬಂದು ಬಾಂಧವರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ನಾರಾಯಣ ಅವರು ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೇ ನಾರಾಯಣ ಸಾವನ್ನಪ್ಪಿದ್ದರು. ಬಳಿಕ ಕುಟುಂಬಸ್ಥರು ಗದಗ ಜಿಲ್ಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ…

Read More

ದಕ್ಷಿಣಕನ್ನಡ : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕ ಜನರು ಸೈಬರ್ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರಿಗೆ ವಾಟ್ಸ್​​ಆ್ಯಪ್ ವಿಡಿಯೋ ಕರೆ ಮೂಲಕ ಬೆದರಿಸಿ, ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 1.16 ಕೋಟಿ ರೂ. ಲಪಟಾಯಿಸಿರುವ ಬಗ್ಗೆ ಮಂಗಳೂರಿನ ಸಿಇಎನ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮನೆಯಲ್ಲಿದ್ದ ವೇಳೆ ವಾಟ್ಸ್​​ಆ್ಯಪ್ ನಂಬರ್ ಒಂದರಿಂದ ವಿಡಿಯೋ ಕರೆ ಬಂದಿದೆ. ಅದನ್ನು ಸ್ವೀಕರಿಸಿದಾಗ, ದೆಹಲಿಯ ಟೆಲಿಕಮ್ಯೂನಿಕೇಶನ್ ಡಿಪಾರ್ಟ್​​ಮೆಂಟ್ ಕಡೆಯಿಂದ ಮಾತನಾಡುವುದಾಗಿ ಹೇಳಿದ್ದಾರೆ. ಬಳಿಕ, ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್​​ ಕಾರ್ಡ್ ಬಳಸಿ ಮೊಬೈಲ್ ನಂಬರ್​​​ ಖರೀದಿಸಿದ್ದು, ದೆಹಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿರುತ್ತೀರಿ ಎಂದಿದ್ದಾರೆ. ಆಗ ಮಹಿಳೆಯು, ತಾನು ಯಾವುದೇ ರೀತಿಯ ಸಂದೇಶಗಳನ್ನು ಹಾಗೂ ಜಾಹೀರಾತುಗಳನ್ನು ಕಳುಹಿಸಿಲ್ಲ. ಹಾಗೂ ನಂಬರ್ ನನ್ನದಲ್ಲ ಎಂದು ಉತ್ತರಿಸಿದಾಗ, ಆ ವ್ಯಕ್ತಿಯು ಹಾಗಿದ್ದಲ್ಲಿ ನಾನು ದೆಹಲಿ ಪೊಲೀಸರಿಗೆ ಕರೆ ವರ್ಗಾಯಿಸುತ್ತಿದ್ದೇನೆ.…

Read More

ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‍ನಲ್ಲಿ ಕಬ್ಬು ಬೆಳೆಗಾರರು, ರಾಜ್ಯ ರೈತ ಸಂಘ, ಹಸಿರು ಸೇನೆ ಶಾಂತಿಯುತ ಹೋರಾಟ ನಡೆಸಿದ್ದರು. ಇದು ಕಬ್ಬು ಬೆಳೆಗಾರರು, ರೈತ ಸಂಘದ ಹೋರಾಟಕ್ಕೆ ಸಂದ ಜಯ. ಮುಖ್ಯಮಂತ್ರಿಗಳು ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಭೆ ನಡೆಸಬೇಕಿತ್ತು. ರೈತರು ಬೀದಿಗಿಳಿದು ಹೋರಾಟ ಮಾಡಿ, ಆ ಹೋರಾಟವು ರಾಜ್ಯದ ಇತರ ಜಿಲ್ಲೆಗಳಿಗೆ ಹಬ್ಬುವ ಸಂದರ್ಭದಲ್ಲಿ ನಾವು ಕೂಡ ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾವಣಿಯ ಸಿಮೆಂಟ್ ಕುಸಿದು ಬಾಣಂತಿ ಅಬ್ಜ ಕೌಸರ್ (36) ಎನ್ನುವ ಬಾಣಂತಿಗೆ ಗಾಯಗಳಾಗಿದ್ದು, ಹಿರಿಯೂರಿನ ಸರಕಾರಿ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಾರ್ಡ್ ನಲ್ಲಿ ಘಟನೆ ನಡೆದಿದೆ. ಹಿರಿಯೂರು ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿನಿಧಿಸುವ ಹಿರಿಯೂರಲ್ಲೇ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಕಿಡಿ ಕಾರಿದ್ದಾರೆ.

Read More