Author: kannadanewsnow05

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆಯಿಂದ ಈ ಒಂದು ಸಮೀಕ್ಷೆ ಆರಂಭವಾಗಿದೆ. ಈ ಒಂದು ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿದ್ದು, ಆದರೆ ಇದೀಗ ಮೈಸೂರಿನಲ್ಲಿ ನೇಮಕಗೊಂಡ ಸಿಬ್ಬಂದಿಗಳು ಸಮೀಕ್ಷೆಗೆ ತಾವು ಬರದೇ ವಿದ್ಯಾರ್ಥಿಗಳನ್ನು ಕಳುಹಿಸಿರುವ ಘಟನೆ ವರದಿಯಾಗಿದೆ. ಮೈಸೂರಿನಲ್ಲಿ ಜಾತಿಗಣತಿಯ ವೇಳೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಸರ್ವೆ ವೇಳೆ ವಿದ್ಯಾರ್ಥಿಗಳಿಗೆ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ ಪ್ರಶ್ನೆಗಳಿಗೆ ಯುವಕರು ಸೂಕ್ತವಾದ ಉತ್ತರ ನೀಡಲು ತಡಬಡಿಸಿದ್ದಾರೆ. ಹಾಗಾಯಗಿ ಯುವಕರಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.ವಿದ್ಯಾರ್ಥಿಗೆ ಕಾಲೇಜು ಎಂದು ತಡೆಯರು ಪ್ರಶ್ನೆ ಮಾಡಿದ್ದಾರೆ. ಆಗ ವಿದ್ಯಾರ್ಥಿಗಳು ನಮ್ದು ಮಹಾರಾಜ ಕಾಲೇಜು ಅಂತ ಹೇಳಿದ್ದಾರೆ. ಈ ವೇಳೆ ಗಣತಿಗೆ ನಿಯೋಜಿಸಿದ ಸಿಬ್ಬಂದಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳೀಯರು ಈ ಕುರಿತು ವಿಡಿಯೋ ಮಾಡಿದ್ದು ವೈರಲ್ ಆಗಿದೆ. ಇತರ ನೀವು ವಿದ್ಯಾರ್ಥಿಗಳನ್ನು ಸರ್ವೆಗೆ ಕಳುಹಿಸೋಕೆ ಅವಕಾಶ…

Read More

ಬೆಂಗಳೂರು : ಮಧ್ಯಪ್ರದೇಶ ರಾಜಸ್ಥಾನದಲ್ಲಿ ಕಿಲ್ಲರ್ ಸಿರಪ್ ಗೆ 12 ಮಕ್ಕಳು ಬಲಿಯಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ, ಇದೀಗ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ರಾಜ್ಯದಲ್ಲಿ ಎಲ್ಲಾ ಬ್ರಾಂಡ್ ಸಿರಪ್ ಗಳ ಸ್ಯಾಂಪಲ್ ಗಳ ಸಂಗ್ರಹಕ್ಕೆ ಮುಂದಾಗಿದ್ದು, ಸ್ಯಾಂಪಲ್ ಗಳನ್ನು ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್ ಗೆ ರವಾನಿಸಲಾಗಿದೆ. ಸದ್ಯ ರಾಜ್ಯದಲ್ಲಿ ಕೋಲ್ಡ್ರಿಫ್ ಸಿರಪ್ ಸರಬರಾಜು ಆಗುತ್ತಿಲ್ಲ. ತಮಿಳುನಾಡಿನಲ್ಲಿ ಸರಬರಾಜು ಆಗಿರುವ ಕೊಲ್ಡ್ರಿಫ್ ಔಷಧಿ ಹೀಗಾಗಿ ಉಳಿದ ಕಂಪನಿಗಳ ಮೇಲು ಹದ್ದಿನ ಕಣ್ಣು ಇಡಲಾಗಿದೆ. ಪೋಷಕರಿಗೆ ಕೋಲ್ಡ್ರಿಫ್ ಸಿರಪ್ ಖರೀದಿ ಮಾಡದಂತೆ ಸೂಚನೆ ನೀಡಲಾಗಿದೆ. ವೈದ್ಯರ ಸಲಹೆ ಪಡೆದು ಮಕ್ಕಳಿಗೆ ಸಿರಪ್ ನೀಡುವಂತೆ ಸೂಚನೆ ಕೊಡಲಾಗಿದೆ.

Read More

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಹಾಗು ಬೈಕ್ ಮಧ್ಯ ಅಪಘಾತ ಸಂಭವಿಸಿ ಅಕ್ಕ ಹಾಗು ತಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಪೊತ್ನಾಳ ಗ್ರಾಮದ ಬಳಿ ನಿನ್ನೆ ನಡೆದಿದೆ. ಮೃತರನ್ನ ಮರಿಯಮ್ಮ(28) ಶೇಖರಪ್ಪ(25) ಎಂದು ಗುರುತಿಸಲಾಗಿದೆ. ಎರಡು ವರ್ಷದ ಮಗಳು ಗೌತಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರಪ್ಪ ತಮ್ಮ ಅಕ್ಕನನ್ನು ಮರಿಯಮ್ಮನ ಜಾತ್ರೆಗೆ ಕರೆದುಕೊಂಡಲು ಬರಲು ವಲ್ಕಂದಿನ್ನಿ ಗ್ರಾಮಕ್ಕೆ ತೆರಳಿದ್ದರು. ಅಲ್ಲಿಂದ ​ಅಕ್ಕ ಹಾಗೂ ಅವರ ಎರಡು ವರ್ಷದ ಮಗಳನ್ನು ಬೈಕ್​ನಲ್ಲಿ ಕೂರಿಸಿಕೊಂಡು ಕರೆಗುಡ್ಡ ಗ್ರಾಮಕ್ಕೆ ಬರುತ್ತಿರುವಾಗ ಕೊಪ್ಪಳದ ದೇಸಾಯಿ ಕ್ಯಾಂಪ್​ಗೆ ತೆರಳುತ್ತಿದ್ದ ಕಾರೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಇನ್ನೊಂದು ಕಾರ್ ಡಿಕ್ಕಿ ಹೊಡೆದಿದ್ದು, ಆ ಕಾರು ಪಲ್ಟಿಯಾಗಿದೆ. ಬೈಕ್ ಮೇಲಿಂದ ಸವಾರರು ಕೆಳಗೆ ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾ ಗಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾನವಿ ಪೊಲೀಸರು ಪರಿಶೀಲನೆ ನಡೆಸಿ ಮೃತ…

Read More

ಬೆಂಗಳೂರು : ಇಂಧನ ಸಚಿವ ಕೆಜೆ ಜಾರ್ಜ್ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗು ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಧಿಕಾರಿ 50 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ‍ಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿರುವ ಜ್ಯೋತಿ ಪ್ರಕಾಶ್‌ ಅವರು, ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಅನುಮತಿ (ಎನ್​ಒಸಿ) ನೀಡಲು ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು‌ ಬಂಧಿಸಿದ್ದಾರೆ. 50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಜ್ಯೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್‌ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಡರಹಳ್ಳಿಯ ನಿವಾಸಿಯಾದ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಎನ್‌ಒಸಿ ನೀಡಲು ಜ್ಯೋತಿ ಪ್ರಕಾಶ್ ಅವರು 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಅನಂತರಾಜು ಅವರು ಲೋಕಾಯುಕ್ತಕ್ಕೆ ದೂರು…

Read More

ಕಲಬುರ್ಗಿ : ಕ್ಷುಲ್ಲಕ ವಿಚಾರಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ. ನಗರದ ಆಳಂದ್ ರಸ್ತೆಯಲ್ಲಿರುವ ವಿಶ್ವರಾಧ್ಯ ದೇವಸ್ಥಾನದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಸಿಬ್ಬಂದಿಯ ಮೇಲೆ ಐದಾರು ಜನರ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಐದಾರು ಜನರ ಗುಂಪಿನಿಂದ ಯುವಕ ತ್ರಿಶೂಲ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಹಾಗೂ ಚಾಕುವಿನಿಂದ ಈ ಒಂದು ಗ್ಯಾಂಗ್ ಇರಿದಿದೆ. ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಲ್ಬುರ್ಗಿಯ ಸಬ್ ಅರ್ಬನ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋದ ಕಾರಣ ಚಾಕು ಇರಿದು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ರಾಯಚೂರು ಮೂಲದ ಮಹದೇವ(65) ಎಂದು ತಿಳಿದುಬಂದಿದ್ದು, ಇನ್ನು ಆರೋಪಿಯಾಗಿರೋ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಇಬ್ಬರೂ ಮಾರತಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಘಟನಾ ಸ್ಥಳಕ್ಕೆ ವೈಟ್​ ಫೀಲ್ಡ್​ ಡಿಸಿಪಿ ಪರಶುರಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರತ್​​ಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು ಕೂಡ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಮುಂದುವರೆದಿದೆ. ಹೌದು ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ. ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆ್ಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಈತ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟೋರಿಯಸ್ ರೌಡಿಶೀಟರ್. ಮೊಬೈಲ್‌ನಲ್ಲಿ ಬರ್ತ್ಡೇ ಪಾರ್ಟಿಯ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಜೈಲಿನಿಂದಲೇ ವಿಡಿಯೋ, ಪೋಟೋ ಪೋಸ್ಟ್ ಆಗಿದೆ. ಗುಬ್ಬಚ್ಚಿ ಸೀನನ ಶಿಷ್ಯಂದಿರಿಂದ ಪೋಸ್ಟ್ ಆಗಿದೆ. ಜೈಲಧಿಕಾರಿಗಳು,…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಿದೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಸೇಷನ್ಸ್ ನ್ಯಾಯಾಲಯದಲ್ಲಿ ಈ ಒಂದು ಪ್ರಕರಣದ ಕುರಿತು ವಿಚಾರಣೆ ನಡೆಯಿತು.ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಿತಿ. ಈ ವೇಳೆ ವಾದ ಪ್ರತಿವಾದ ಆಲಿಸಿ ನ್ಯಾಯಾಧೀಶರು ಆದೇಶ ಕಾಯ್ದಿಸಿದ್ದಾರೆ. ಅಕ್ಟೋಬರ್ 9ಕ್ಕೆ ಆದೇಶ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು ನಮ್ಮ ಮೆಟ್ರೋ ರೈಲುಗಳಿಗೆ ಹಾರಿ ಪ್ರಯಾಣಿಕನ್ನೊಬ್ಬ ಆತ್ಮಹತ್ಯೆಗೆ ಎಪಿಸಿರುವ ಘಟನೆ ವರದಿಯಾಗಿದೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ಇರುವ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ನಮ್ಮ ಮೆಟ್ರೋಲ್ ರೈಲುಗಳಿಗೆ ಹಾರಿ ಪ್ರಯಾಣಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಮಾದಾವರ ಮತ್ತು ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ಪ್ರಯಾಣಿಕ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ನಮ್ಮ ಮೆಟ್ರೋ ರೈಲಿನ ಅಡಿ ಪ್ರಯಾಣಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಯಾಣಿಕನ ರಕ್ಷಣೆಯಲ್ಲಿ ತೊಡಗಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಚಾಮರಾಜನಗರ : ಕೌಟುಂಬಿಕ ಕಲಹದಿಂದ ಬೇಸತ್ತ ಪತಿ, ಪತ್ನಿಯ ಎದುರೇ ನದಿಗೆ ಹಾರಿದ ಘಟನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಎಂಬ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ ಎದುರುಗಡೆ ಪತಿ ಮಂಜುನಾಥ್ ನದಿಗೆ ಹಾರಿದ್ದಾರೆ.  ಬೈಕ್ ನಲ್ಲಿ ತೆರಳುತ್ತಿರುವಾಗಲೇ ಪದೇಪದೇ ದಂಪತಿಗಳ ನಡುವೆ ಜಗಳ ಆಗಿದೆ. ಇಬ್ಬರೂ ಬೈಕ್ ನಲ್ಲಿ ತೆರಳುವಾಗ ಕಲಹ ನಡೆದಿದೆ. ನಾ ಸತ್ತರೆ ನಿಮಗೆ ನೆಮ್ಮದಿ ಎಂದು ಪತಿ ಮಂಜುನಾಥ್ ಬೈಕ್ ನಿಲ್ಲಿಸಿ ಪತ್ನಿಯ ಎದುರಲ್ಲೇ ನದಿಗೆ ಹಾರಿದ್ದಾರೆ. ಮಂಜುನಾಥ್ ನದಿಯಲ್ಲಿ ಕಣ್ಮರೆಯಾಗಿದ್ದು, ಸದ್ಯ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಡಿಮೆ ಸ್ಥಳಕ್ಕೆ ಕೊಳ್ಳೇಗಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More