Author: kannadanewsnow05

ಕೊಪ್ಪಳ : ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶ ಹೊರಡಿಸಿದ್ದಾರೆ. ಎಂ.ಎನ್ ಖಾಜಾ ಹುಸೇನ್, ರಾಘವೇಂದ್ರ ಬೇವಿನಾಳ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಸಭೆ ಮತ್ತು ವಾಣಿಜ್ಯ ಮಳಿಗೆ ಹರಾಜು ವೇಳೆ ಇಬ್ಬರು ಅಧಿಕಾರಿಗಳು ಆಗಿದ್ದರು ಕಂದಾಯ ವಸುಲಿಗೆ ಟಾರ್ಗೆಟ್ ನೀಡಿದ್ದರೂ ಕೂಡ ವಿಳಂಬ ಮಾಡಿದ್ದಾರೆ ಈ ಹಿನ್ನಲೆಯಲ್ಲಿ ಇಬ್ಬರನ್ನು ಇದೀಗ ಅಮಾನತು ಮಾಡಲಾಗಿದೆ.

Read More

ಕೊಪ್ಪಳ : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ನಿನ್ನೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿ ಕೆಲಕಾಲ ವಾಹನ ಸವಾರರು ಪರದಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಘೋರ ಘಟನೆ ಒಂದು ನಡೆದಿದ್ದು ಮಳೆಯಿಂದಾಗಿ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕೋಷ್ಟಗಿ ತಾಲೂಕಿನ ನಂದಿಹಾಳ ಗ್ರಾಮದಲ್ಲಿ ನಡೆದಿದೆ. ನಂದಿಹಾಳದಲ್ಲಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ನಂದಿಹಾಳ ಗ್ರಾಮದ ಶರಣಪ್ಪ ಭಾವಿಕಟ್ಟಿ (38) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಷ್ಟಗಿ ತಹಸೀಲ್ದಾರ್ ಮತ್ತು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಹಿಂದಿನ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದ್ದು, ಹಲವು ಸಚಿವರು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಳಿಕ ಏಪ್ರಿಲ್ 17ರಂದು ಅಂದರೆ ಇಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿತ್ತು. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ.ಹಾಗಾಗಿ ಇಡೀ ರಾಜ್ಯದ ಜನತೆಯ ಚಿತ್ತ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವುದರ ಮೇಲಿದೆ. ಈಗಾಗಲೇ ಈ ಒಂದು ಜಾತಿ ಗಣತಿ ವರದಿ ಜಾರಿ ಸಂಬಂಧ ಸ್ವಪಕ್ಷ ಕಾಂಗ್ರೆಸ್ ನಲ್ಲಿಯೇ ಹಲವು ಸಚಿವರು ಶಾಸಕರು ಬೆಂಬಲ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾತಿ ಗಣತಿ ಅಂಕಿ ಅಂಶ ಕೂಡ ಕೆಲವು ದಿನಗಳ ಹಿಂದೆ ಬಹಿರಂಗವಾಗಿದ್ದು, ಮುಸ್ಲಿಮರು ಅತ್ಯಧಿಕ ಜನಸಂಖ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಜಾತಿಗಣತಿ ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಸಚಿವರಿಂದ ಒತ್ತಾಯ…

Read More

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಪುಂಡರ ವ್ಹಿಲಿಂಗ್ ಹಾವಳಿ ಹೆಚ್ಚಾಗಿದ್ದು,ಇದೀಗ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿಯ ತಂದೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಈ ಒಂದು ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದ್ದು. ಚನ್ನಪಟ್ಟಣದ ಸಂಚಾರಿ ಠಾಣೆ ಪೊಲೀಸರಾದ ಜಯಕುಮಾರ್ ಹಾಗೂ ಬಸವರಾಜ್ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋದ ಆರೋಪ ಕೇಳಿ ಬಂದಿದೆ. ಸೈಫ್ ಖಾನ್ ಮತ್ತು ಆತನ ಗ್ಯಾಂಗ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ರಾಮನಗರದ ಬೀಡಿ ಕಾಲೋನಿ ನಿವಾಸಿಯಾಗಿರುವ ಸೈಫ್ ಖಾನ್ ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಚನ್ನಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸೈಫ್ ಖಾನ್…

Read More

ಹಾವೇರಿ : ಹಾವೇರಿಯಲ್ಲಿ ಮಹಿಳೆಯೊಬ್ಬಳು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಡ್ರಾಮಾ ಮಾಡಿದ್ದು ಆದರೆ ಪೊಲೀಸರು ವಾಕ್ಯವನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಸತ್ಯ ಹೊರ ಬಂದಿದೆ. ಹೌದು ಗ್ಯಾಂಗ್ ರೇಪ್ ಕಥೆ ಕಟ್ಟಿ ಮಹಿಳೆ ಒಬ್ಬಳು ಪೊಲೀಸರಿಗೆ ಟೆನ್ಶನ್ ಕೊಟ್ಟಿದ್ದಾಳೆ. ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಫೀರಾಂಬಿ ಎನ್ನುವ ಮಹಿಳೆ ಅತ್ಯಾಚಾರದ ಕಥೆ ಕಟ್ಟಿದ್ದಾಳೆ. ಐದು ಜನರಿಂದ ಗ್ಯಾಂಗ್ ರೇಪ್ ನಡೆದಿರುವುದಾಗಿ ಮಹಿಳೆಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರ ಬಳಿ ತನ್ನ ಮೇಲೆ ಅತ್ಯಾಚಾರ ನಡೆದಿಲ್ಲ, ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಒಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಯಾರೋ ಕೆಲವರು ತನ್ನ ಬೆನ್ನಿಗೆ ಪ್ರಜ್ಞೆ ತಪ್ಪಿಸುವ ಇಂಜೆಕ್ಷನ್ ಕೊಟ್ಟು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ದೈಹಿಕವಾಗಿ ಹಲ್ಲೆ ಮಾಡಿದ್ದರು, ನಾನು ಅವರಿಂದ ತಪ್ಪಿಸಿಕೊಂಡು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ ಎಂದು ಮಹಿಳೆ ಮಾಧ್ಯಮಗಳ ಬಳಿ ಹೇಳಿಕೆ ನೀಡಿದ್ದಳು. ಮಹಿಳೆಯ…

Read More

ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದ್ದು, ಬಳಿಕ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಜತ್ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ ನಿಗದಿಪಡಿಸಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಜೈಲು ಸೇರಿ ಜಾಮೀನು ಮೇಲೆ ರಿಲೀಸ್ ಆಗಿದ್ದ ರಜತ್ ಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ…

Read More

ಬೆಳಗಾವಿ : ಕಳೆದ ಜನವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ‌ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.‌ ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿ ಹಲವು ಸಾಕ್ಷ್ಯಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ‌ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗಳಾಗಿದ್ದರಿಂದ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 13…

Read More

ಕಲಬುರ್ಗಿ : ಕೋಮು ದ್ವೇಷ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.15ರಂದು ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀ ರಾಮೋತ್ಸವ ಸಮಿತಿ ಆಯೋಜಿಸಿದ್ದ ಶ್ರೀ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಆಂದೋಲಾ ಶ್ರೀ, ಹಿಂದೂ -ಮುಸ್ಲಿಮರ ಮಧ್ಯೆ ಕೋಮು ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈಗಾಗಲೇ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು ಇದೀಗ ಮತ್ತೊಂದು ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆಯಾಗಿದ್ದು, ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕ ಸೇವಾ ಆಯೋಗ ತಿದ್ದುಪಡಿ -2025ನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಈ ಹಿಂದೆ ಕೆಪಿಎಸ್ಸಿಯಲ್ಲಿ ಬದಲಾವಣೆ ತರಬೇಕಾದರೂ ರಾಜ್ಯ ಸರ್ಕಾರ ಮೊದಲು ಕೆಪಿಎಸ್ಸಿಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಕೆಪಿಎಸ್ಸಿಯನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂಬ ಅಂಶ ಸೇರಿಸಿತಿದ್ದು ಪಡಿ ತರಲಾಗಿತ್ತು. ಕಾನೂನು ಸಲಹೆ ಪಡೆದು ಮರುಸಲ್ಲಿಕೆ ಮಾಡುವಂತೆ ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. 3 ವಿಧೇಯಕಕ್ಕೆ ಅಂಕಿತ ಇನ್ನು 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆ ಮತ್ತು ಪರಿಹಾರ ನೀಡುವುದಕ್ಕೆ ಸಂಬಂಧಿಸಿದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕ ಗಳಿಗೆ ರಾಜ್ಯಪಾಲರು…

Read More

ಬೆಂಗಳೂರು : ಇಂದಿನಿಂದ ಬೆಂಗಳೂರಿನಲ್ಲಿ ಮುಂದಿನ 5 ದಿನ ಸಂಜೆ, ರಾತ್ರಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಗುಡುಗು ಸಹಿತ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವಡೆ ಹಗುರ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಂಜೆ ಮತ್ತು ರಾತ್ರಿಯ ವೇಳೆ ಮಳೆ ಆಗುವ ಸಾಧ್ಯತೆ ಇದೆ ಏಪ್ರಿಲ್ 20ರವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಧಾರಾಕಾರ ಮಳೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯಿತು ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಜೆಪಿ ನಗರ,ಜಯನಗರ, ವಿಜಯನಗರ, ರಾಜಾಜಿನಗರ ಮಹದೇವಪುರ ಕೆ ಆರ್…

Read More