Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ

Read More

ಬೆಂಗಳೂರು : 1ನೇ ತರಗತಿಗೆ ಆರು ವರ್ಷ ತುಂಬಿರಬೇಕು ಎಂಬ ನಿಯಮದ ವಿಚಾರವಾಗಿ ರಾಜ್ಯ ಸರ್ಕಾರ ಇದೀಗ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. 6 ವರ್ಷ ತುಂಬಿರಲೇ ಬೇಕೆಂಬ ನಿಯಮದಲ್ಲಿ ಈ ವರ್ಷವೂ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ರಾಜ್ಯ ಸರ್ಕಾರ ಇದೀಗ 60 ದಿನಗಳ ಸಡಿಲಿಕೆ ನೀಡಿದೆ. ಈ ಕುರಿತು ವಿಧಾನಸಭೆಯಲ್ಲಿ ಸಚಿವ ಮಧುರ ಬಂಗಾರಪ್ಪ ಘೋಷಣೆ ಮಾಡಿದ್ದು ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅಧ್ಯಾಯ ಮೂರು ಸೆಕ್ಷನ್ 20ರ ಪ್ರಕಾರ ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡುವ ಸಂಬಂಧ 60 ದಿನಗಳ ವಿನಾಯಿತಿಯನ್ನು ನೀಡಲಾಗಿರುತ್ತದೆ ಅದರಂತೆ 2026 27ನೇ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾತಿ ನೀಡುವ ಸಂಬಂಧ ಅರವತ್ತು ದಿನಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಹಾಗೂ ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಕೂಡ ಸಹ ಬದಲಾವಣೆ ಮಾಡಲಾಗುವುದು ಎಂಬ ಮಾಹಿತಿಯನ್ನು ಸದನ ಗಮನಕ್ಕೆ ತರಲು ಬಯಸುತ್ತೇನೆ ಎಂದು ಮಧು ಬಂಗಾರಪ್ಪ ಘೋಷಣೆ ಮಾಡಿದರು.

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಬಸ್ ಹತ್ತುವ ವೇಳೆ ಮಗು ಒಂದು ಕೆಳಗೆ ಜಾರಿ ಬಿದ್ದಿದೆ.ಈ ವೇಳೆ ಮಗುವಿನ ಮೇಲೆ ಬಸ್ಸಿನ ಮುಂಬದಿ ಚಕ್ರ ಹರಿದು ಮಗುವಿನ ಕಾಲು ಕಟ್ ಆಗಿರುವ ಘಟನೆ ಬೆಳಗಾವಿಯ ಸೌದತ್ತಿ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಸೀಟು ಹಿಡಿಯುವ ಭರದಲ್ಲಿ ಮಹಿಳೆ ಓಡೋಡಿ ಬಂದಿದ್ದಾಳೆ, ಬಸ್ ಹತ್ತುವಾಗ ಮಹಿಳೆಯ ಕೈಯಿಂದ ಮಗು ಜಾರಿ ಕೆಳಗೆ ಬಿದ್ದಿದೆ. ಬಸ್ಸಿನ ಮುಂದಿನ ಚಕ್ರದ ಅಡಿ ಮಗು ಸಿಲುಕಿದ್ದು, ಈ ವೇಳೆ ಮಗುವಿನ ಕಾಲಿನ ಮೇಲೆ ಬಸ್ ಹರಿದಿದೆ ತಕ್ಷಣ ಮಗುವನ್ನು ರಕ್ಷಿಸಿ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸೌದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ನಡೆದಿದ್ದು, ಗಂಡನಿಂದಲೇ ಹೆಂಡತಿಯನ್ನು ಪರವಾಗಿ ಕೊಲೆ ಮಾಡಲಾಗಿದೆ ಭಯಾನಕ ಮರ್ಡರ್ ಆಗಿದ್ದು ಕಲ್ಬುರ್ಗಿಯಲಪುರದಲ್ಲಿ ಈ5 ಒಂದು ಮಹಿಳೆಯ ಬರಹತ್ಯೆಯಾಗಿದೆ. ಕೊಲೆಯಾದ ಮಹಿಳೆಯನ್ನು ಶೈಲಾ (28) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಪತಿ ಅಕ್ಷಯ ಎಂದು ತಿಳಿದುಬಂದಿದೆ. ಇನ್ನು ಕೊಲೆ ಮಾಡುತ್ತಿರುವ ಭಯಾನಕ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು ಲೈವ್ ತೋರಿಸಿದ್ದಾನೆ ಲೈವ್ ಮರ್ಡರ್ ದೃಶ್ಯ ಇದೀಗ ಬೆಚ್ಚಿ ಬೀಳಿಸುವಂತಿದೆ. ಅಫ್ಜಲ್ಪುರ ತಾಲೂಕಿನ ಬಳೂರಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಪತ್ನಿ ಕತ್ತು ಸೀಳಿ ದೇಹದ ಮೇಲೆ ಕಾರು ಹತ್ತಿಸಿ, ಪತಿ ಅಟ್ಟಹಾಸ ಮೆರೆದಿದ್ದಾನೆ. ಬಳ್ಳೂರಗಿ ಗ್ರಾಮಕ್ಕೆ ಹೆಂಡತಿಯನ್ನು ಕರೆತಂದು ಕೊಲೆ ಮಾಡಿದ್ದಾನೆ. ನಡು ರಸ್ತೆಯಲ್ಲಿಯೇ ಬರಬರವಾಗಿ ಪಾಪಿ ಪತಿ ಕೊಲೆ ಮಾಡಿದ್ದಾನೆ ಮಹಿಳೆಯ ದೇಹದ ಮೇಲೆ ಕಾರು ಹತ್ತಿಸಿದ್ದಾನೆ. ಮೂಲತಃ ಅಕ್ಷಯ ಮತ್ತು ಶೈಲ ಮಹಾರಾಷ್ಟ್ರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದು ಆಫ್ಜಲ್ಪುರ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟೀಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸ್ ಹಾಗೂ ಜಾರಿ ನಿರ್ದೇಶನಲಯಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಹೈಕೋರ್ಟ್ ವಿಚಾರಣೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಅಲ್ಲದೇ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಬೀ ರಿಪೋರ್ಟ್ ವಿಚಾರಣಾ ಸಮಿತಿ ವರದಿಯಂತಿದೆ ಎಂದು ವಾದ ಮಡಿಸಲಾಯಿತು. ದೂರುದಾರ ಪರವಾಗಿ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.

Read More

ಬೆಂಗಳೂರು : ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಕೇಳಿ ಬಂದಿದ್ದು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಮಂತ್ ಕುಮಾರ್ ಸಿಂಗ್ ಆದೇಶ ನೀಡಿದ್ದಾರೆ. ಮಹಿಳಾ ರೌಡಿಶೀಟರ್ ಗೆ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದ ಪಾಪಣ್ಣ ಕರೆ ಮಾಡಿ, ವಾಟ್ಸಪ್ ಸಂದೇಶ ಕಳುಹಿಸಿದ್ದ ಆರೋಪ ಕೇಳಿ ಬಂದಿದೆ. ಪಾಪಣ್ಣ ಮೇಲಿನ ಆರೋಪಗಳ ಕುರಿತು ತನಿಖೆಗೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಪಾಪಣ್ಣ ಮಹಿಳಾ ರೌಡಿ ಶೀಟರ್ ಗೆ ಕರೆ ಮಾಡಿರುವ ಹಾಗೂ ವಾಟ್ಸಪ್ ನಲ್ಲಿ ಸ್ಟೀಲ್ ಮೆಸೇಜ್ ಮಾಡಿರುವ ಕೆಲವು ವಿಡಿಯೋಗಳು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ.

Read More

ಬೆಂಗಳೂರು : ಬೆಂಗಳೂರಲ್ಲಿ ತರಗತಿಯಲ್ಲೇ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ. ಇದರಿಂದ ರೊಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಪೂಜೆ ಮಾಡಿದ್ದಾಳೆ. ಬೆಂಗಳೂರಿನ ನೆಲಮಂಗಲದ ಟಿಬಿ ಬೇಗೂರು ಖಾಸಗಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಾಧ್ಯಾಪಕ ಅಬ್ದುಲ್ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಪ್ರೊಫೆಸರ್ ಕ್ಲಾಸ್ ರೂಂ ನಲ್ಲಿ ಪಾಠ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ.ಅಲ್ಲದೇ ಚಾಕ್ಲೆಟ್ ಕೊಡಿಸುತ್ತೇನೆ ಅಂತ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಅಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ನಾನು ಅಟ್ಟಾಡಿಸಿ ತಿಳಿಸಿದ್ದಾರೆ ಕಾಲೇಜ್ ನಲ್ಲಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಮಾರತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದ್ದು, ಮಾರ್ಗ ಬದಲಾವಣೆ ಆಗಲಿದೆ. ರಾತ್ರಿ 12 ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಆಗಲಿದೆ. ಎಚ್ ಎ ಎಲ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು ವೈಟ್ ಫೀಲ್ಡ್ ಕಡೆಗೆ ಹೋಗುವ ವಾಹನಗಳಿಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ ಮಾರತಹಳ್ಳಿ ಬ್ರಿಡ್ಜ್ ಮೂಲಕ ಎಚ್ ಎ ಎಲ್ ಕಡೆಗೂ ಸಂಚಾರ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.

Read More

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ತೈಲ ಪೂರೈಕೆಯಲ್ಲಿ ಏರುಪೇರಾಗುವ ಆತಂಕ ಎದುರಾಗಿದೆ. ಒಂದು ವೇಳೆ ಪೆಟ್ರೋಲ್ ಮತ್ತು ಡಿಸೇಲ್ ದರ ಗಗನಕ್ಕೇರಿ ಅಥವಾ ಪೂರೈಕೆ ಸಂಪೂರ್ಣ ಸ್ಥಗಿತಗೊಂಡರೆ, ಸಾಮಾನ್ಯ ಜನರು ಅನಿವಾರ್ಯವಾಗಿ ಮತ್ತೆ ಹಳೆಯ ಕಾಲದಂತೆ ಎತ್ತಿನ ಗಾಡಿ (ಚಕ್ಕಡಿ) ಮತ್ತು ಕುದುರೆ ಗಾಡಿ (ಟಾಂಗಾ) ಮೊರೆ ಹೋಗಬೇಕಾದ ಪರಿಸ್ಥಿತಿ ಬರಬಹುದು ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿವೆ. ಹೌದು ಇರಾನ್ ಇಸ್ರೇಲ್ ಪರಿಣಾಮದಿಂದಾಗಿ ಈಗಾಗಲೇ ಸಿಲಿಂಡರ್ ಹಾಗೂ ಪೆಟ್ರೋಲ್ ಡಿಸೇಲ್ ನಲ್ಲಿ ಕೊರತೆ ಕಂಡು ಬಂದಿದೆ ಈ ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಾದ್ಯಂತ ಪೆಟ್ರೋಲ್ ಡೀಸೆಲ್ ಅಭಾವದಿಂದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಪೆಟ್ರೋಲ್ ಡೀಸೆಲ್ ಕೊರತೆಯಿಂದ ಜನರು ಮತ್ತೆ ಹಳೆ ಕಾಲದ ಎತ್ತಿನ ಗಾಡಿ ಕುದುರೆ ಟಾಂಗಾ ಗಳಲ್ಲಿ ಸಂಚಾರ ಆರಂಭಿಸಿದರು ಅಚ್ಚರಿ ಪಡಬೇಕಿಲ್ಲ. ಇದರಿಂದ ಕುದುರೆ ಟಾಂಗಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಜಗತ್ತಿನ ಯಾವುದೋ ಮೂಲೆಯಲ್ಲಿ ನಡೆಯುವ ಯುದ್ಧದ ಕಿಡಿ ಇಂದು ಪ್ರತಿಯೊಬ್ಬ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಾಮನಗರದ ಬಿಡದಿಯಲ್ಲಿ ಲಾರಿ ಹರಿದು ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು ವಿಜಯ್ (13) ಎಂಬ ಶಾಲಾ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಬಿಲ್ಲೆಕೆಂಪನಹಳ್ಳಿ ಬಳಿ ಹಾವೇರಿ ಮೂಲದ ಕುಟುಂಬ ವಾಸವಿತ್ತು.ಇಂದು ವಿಜಯ್ ರಸ್ತೆ ಬದಿ ಹೋಗುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾನೆ ಘಟನಾ ಸ್ಥಳಕ್ಕೆ ಪೊಲೀಸರು ಬಿಟ್ಟು ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More