Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಹಾಸ್ಟೆಲಲ್ಲಿ ವಿದ್ಯಾರ್ಥಿನಿಯೋರ್ವಳು ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸಿದ್ದಾರ್ಥ ಕಾಲೇಜಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಸಿದ್ದಾರ್ಥ್ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ವೇಲ್ ನಿಂದ ನೇಣು ಬಿಗಿದುಕೊಂಡು ದೀಪಿಕಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಹಾಸ್ಟೆಲ್ ಮಹಡಿಯ ಮೇಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ದೀಪಿಕಾ ಶಿರಾ ತಾಲೂಕಿನ ಗುಂಡೆಗೌಡನಪಾಳ್ಯ ನಿವಾಸಿ ಎಂದು ತಿಳಿದು ಬಂದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಾಮಾನ್ಯವಾಗಿ ಹಣ, ಚಿನ್ನ, ಬೆಳ್ಳಿ ಕಳ್ಳತನ ಮಾಡುವುದನ್ನು ನಾವು ನೋಡಿದ್ದೇವೆ. ಆದರೆ ಬೆಂಗಳೂರಿನಲ್ಲಿ ವಿಚಿತ್ರವಾದಂತಹ ಕಳ್ಳತನ ನಡೆದಿದ್ದು, ಸುಮಾರು ಕೋಟಿ ರೂಪಾಯಿ ಮೌಲ್ಯದ ಕೂದಲನ್ನು ಮೂಟೆ ಮೂಟೆ ಹೊತ್ತು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ಬರೋಬ್ಬರಿ 27 ಮೂಟೆಗ ಕೂದಲು ಕಳವಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಸಂಬಂದ ಗೋಡೌನ್ ಮಾಲೀಕ ವೆಂಕಟರಮಣ ಎಂಬವರು ದೂರು ನೀಡಿದ್ದಾರೆ. ಆರು ಜನ ಖದೀಮರು ವಾಹನದಲ್ಲಿ ಬಂದು ಕೂದಲು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ. ಖದೀಮರ ಕುಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದಲ್ಲ, ಎರಡಲ್ಲ ಮೂಟೆಗಟ್ಟಲೇ ಕೂದಲನ್ನು ಕಳ್ಳರು ಕದೊಯ್ದಿದ್ದಾರೆ. ಸೋಲದೇವನಹಳ್ಳಿ ಬಳಿಯ ಲಕ್ಷ್ಮೀ ಪುರ ಕ್ರಾಸ್ನಲ್ಲಿರುವ ಗೋಡೌನ್ನಲ್ಲಿ ಕೂದಲನ್ನು ಸಂಗ್ರಹಿಸಿಡಲಾಗಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಕೂದಲಿನ ಮೂಟೆಗಳನ್ನು ಎರಡು ದಿನಗಳ ಹಿಂದೆ ಕಳ್ಳತನ ಮಾಡಲಾಗಿದೆ. ಕಳೆದ ವಾರ ಚೀನಾದ ವ್ಯಕ್ತಿಗಳು ಬಂದು ವಿಗ್ ತಯಾರಿಕೆಗೆ ಕೂದಲು ಕಳುಹಿಸುವಂತೆ ಮಾತುಕತೆ ನಡೆಸಿದ್ದರು.…
ಬೆಂಗಳೂರು : 60 ಎಕರೆ ಅರಣ್ಯ ಪ್ರದೇಶವನ್ನು ಹೊತ್ತುವರಿ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು,ಅರಣ್ಯ ಸಂರಕ್ಷಣಾಧಿಕಾರಿ ನೋಟಿಸ್ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೈ ಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ರಮೇಶ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಮಾರ್ಚ್ 10 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಇದೆ ವೇಳೆ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿತು. ಹೈಕೋರ್ಟ್ ನ್ಯಾ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ವೇಳೆ 60ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪವಿದೆ. ಜಮೀನಿನ ಸ್ವರೂಪ ಬದಲಿಸಿ ಪೋಡಿ ಮಾಡಿಸುತ್ತಿದ್ದಾರೆ ಎಂದು ಸರ್ಕಾರದ ವಾದವಾಗಿದ್ದು, ಇಂದಿನ ಎರಡು ಸರ್ವೆಗಳ ವರದಿ ಅರಣ್ಯ ಅಧಿಕಾರಿಗಳ ವಿರುದ್ಧವಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 10ಕ್ಕೆ ನಿಗದಿಪಡಿಸಿ ಆದೇಶಿಸಿತು.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೋಳಿಸಿದ್ದು, ಇದೀಗ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಸಂಸ್ಥೆಗಳು ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನು ಬಡ್ಡಿಯೊಂದಿಗೆ ನಗದು ಅಥವಾ ವಸ್ತು ರೂಪದಲ್ಲಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುಬಾರಿ ಬಡ್ಡಿದರಗಳು, ಅನುಚಿತ ತೊಂದರೆ, ಬಲವಂತ ಮತ್ತು ಅಮಾನವೀಯ ವಸೂಲಾತಿ ಮಾಡುವುದು ಕಂಡುಬಂದಿದೆ. ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು…
ಬೆಂಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮಂಡಿ ನೋವು ಸಮಸ್ಯೆ ಕಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಅವರು ಸರ್ಕಾರದ ಯಾವುದೇ ಕಾರ್ಯಕ್ರಮಕ್ಕೆ ಬರುವಾಗಲೂ ಕೂಡ ಚೇರ್ ನಲ್ಲಿಯೇ ಆಗಮಿಸುತ್ತಿದ್ದಾರೆ ಇದೇ ವಿಚಾರವಾಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಮಂಡಿ ನೋವಿನ ಕುರಿತು ಲೇವಡಿ ಮಾಡಿದ್ದು, ನಮ್ಮ ಜನಕ್ಕೆ ಅನ್ಯಾಯ ಮಾಡಿದ್ದಕ್ಕೆ ಇಂದು ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. ಎಸಿಪಿ ಹಾಗೂ ಟಿಎಸ್ಪಿ ಹಣವನ್ನು ಗ್ಯಾರೆಂಟಿಗಳಿಗೆ ಬಳಸುವದನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಭಾಷಣದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿ ನೋವಿನ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ. ಸಿಎಂ ಮಂಡಿ ನೋವು ಉಲ್ಲೇಖಿಸಿದ ಛಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಭಾಷಣದ ಆರಂಭದಲ್ಲಿ ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ. ನಮ್ಮವರ ಹಣ ದುರುಪಯೋಗ ಮಾಡಿದ್ದಕ್ಕೆ ನೀವು ಈಗ ವೀಲ್ ಚೇರ್ ನಲ್ಲಿ ಬರುತ್ತಿರುವುದು…
ಬೆಂಗಳೂರು : ಯುವಕನೊಬ್ಬ ತಿಂಡಿ ಸೇವಿಸಲು ಕೆಫೆಗೆ ತೆರಳಿದ್ದಾ. ಈ ಬೆಳೆ ಇಡ್ಲಿ ಸಾಂಬಾರ್ ನಲ್ಲಿ ಜಿರಳೆ ಪತ್ತೆಯಾಗಿದ್ದು ಯುವಕ ಬಿಚ್ಚಿ ಬಿದ್ದಿದ್ದಾನೆ. ಈ ಕುರಿತು ಹೋಟೆಲ್ ಸಿಬ್ಬಂದಿಗಳಿಗೆ ಪ್ರಶ್ನಿಸಿದರೆ ಸಿಬ್ಬಂದಿಗಳು ಉಡಾಫೆ ಉತ್ತರ ನೀಡಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಬಳಿ ನಡೆದಿದೆ. ಹೌದು ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ದಲ್ಲಿ ನಾರಾಯಣ ಹೃದಯಾಲಯದ ಆಸ್ಪತ್ರೆಯ ಬಳಿ ಕೆಫೆಯಲ್ಲಿ ಇಡ್ಲಿ ಸಾಂಬಾರ್ ಸೇವಿಸುವ ವೇಳೆ ಜಿರಳೆ ಪತ್ತೆಯಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಯುವಕ ದೂರು ನೀಡಿದ್ದಾನೆ. ಬೊಮ್ಮಸಂದ್ರ ಬಳಿ ಈ ಘಟನೆ ನಡೆದಿದ್ದು, ಪುರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಮಾಲೀಕರು ಹೋಟೆಲ್ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ವೇಳೆ ಪರಿಶೀಲನೆ ಬಳಿಕ ಪುರಸಭೆ ಅಧಿಕಾರಿಗಳಿಂದ ಸದ್ಯ ಹೋಟೆಲ್ಗೆ ಬೀಗ ಜಡಿಯಲಾಗಿದೆ. ಬ್ರಾಹ್ಮಿನ್ಸ್ ಕೆಫೆಯ ಮಾಲೀಕ ಗೋಪಾಲ್ ಈ ಹೋಟೆಲ್ ನಡೆಸುತ್ತಿದ್ದು, ಇಡ್ಲಿ ಸಾಂಬಾರ್ ಸೇವಿಸುವ ಜಿರಳೆ ಇರುವುದು ಪತ್ತೆಯಾಗಿದೆ. ಆದರೆ ಈ ಬಗ್ಗೆ…
ಬೆಂಗಳೂರು : ಐಎಎಸ್ ಅಧಿಕಾರಿಗಳು ಸೇರಿದಂತೆ ದೊಡ್ಡ ದೊಡ್ಡ ಅಧಿಕಾರಿಗಳು ತಮ್ಮ ರಿಕ್ರಿಯೇಶನ್ ಗಾಗಿ ಕ್ಲಬ್ ಗಳನ್ನು ಮಾಡಿಕೊಂಡಿದ್ದಾರೆ ಹಾಗಾಗಿ ಶಾಸಕರಿಗೂ ಕೂಡ ಯಾಕೆ ಒಂದು ರೀಕ್ರೇಶನ್ ಗಾಗಿ, ಟೀ ಕಾಫಿ ವ್ಯವಸ್ಥೆ ಜೊತೆ ಕ್ಲಬ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಇಂದು ಅಧಿವೇಶನಕ್ಕೂ ತೆರಳುವ ಮುನ್ನ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದರು. ಐಎಎಸ್ ಅಧಿಕಾರಿಗಳು ತಮ್ಮ ರಿಕ್ರಿಯೇಶನ್ಗಾಗಿ ಕ್ಲಬ್ ಮಾಡಿಕೊಂಡಿದ್ದಾರೆ, ಸರ್ಕಾರಿ ನೌಕರರು ಸಹ ತಾವು ಕೂತು ಹರಟೆ ಹೊಡೆಯಲು ಜಾಗ ಮಾಡಿಕೊಂಡಿದ್ದಾರೆ, ಹಾಗೆಯೇ ಶಾಸಕರಿಗೂ ಒಂದು ಕ್ಲಬ್ ನ ಅವಶ್ಯಕತೆಯಿದೆ, ಅದಷ್ಟು ಬೇಗ ಅದು ಅಸ್ತಿತ್ವಕ್ಕೆ ಬರಲಿದೆ ಎಂದು ಇದೆ ವೇಳೆ ತಿಳಿಸದರು.
ಬೆಂಗಳೂರು : ದುಬೈನಿಂದ ಕೆ ಜಿ ಕಟ್ಟಲೆ ಅಕ್ರಮ ಚಿನ್ನ ಸಾಗಾಣಿ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರನ್ಯ ರಾವ್ ಅವರು ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದುಬೈ ನಿಂದ ಅಕ್ರಮವಾಗಿ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾರಾವ್ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಈ ಒಂದು ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ನಟಿ ರನ್ಯಾ ರಾವ್ ಅವರನ್ನು ತಮ್ಮ ಕೆಲಸಕ್ಕೆ ಬಳಸಿಕೊಂಡ ಮತ್ತೊಂದು ಟೀಂ ಇದರ ಹಿಂದೆ ಇದೆ ಎಂದು ತಿಳಿದುಬಂದಿದೆ. ಹೌದು ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.ನಟಿ ರನ್ಯಾರನ್ನು ಬಂಧಿಸಿರುವ ಡಿಆರ್ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ.…
ಬೆಂಗಳೂರು : ನಾಳೆ 16ನೇ ಬಾರಿ ದಾಖಲೆ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿ ವಿಶೇಷ ಸಂಪುಟ ಸಭೆಯಲ್ಲಿ ನಿಗದಿ ಮಾಡಿದ್ದೂ, ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ಅನುಮೋದನೆ ಪಡಿಸಲಿದ್ದಾರೆ. ಸಿದ್ಧರಾಮಯ್ಯ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಮಂಡಿ ನೋವಿನ ಮಧ್ಯೆಯೂ ಕೂಡ ಸಿಎಂ ಸಿದ್ದರಾಮಯ್ಯ ಬಜೆಟ್ಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಾರಿಯ ಬಜೆಟ್ ಮಾತ್ರ 4 ಲಕ್ಷ ಕೋಟಿ ಇರೋದು ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ ರಾಜ್ಯದ ಜನರು ವಿಶೇಷ ಅನುದಾನದ ನಿರೀಕ್ಷೆಯಲ್ಲಿ ಇದ್ದಾರೆ. ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಪಂಚ ಗ್ಯಾರಂಟಿಗಳ ಯೋಜನೆಯಿಂದಾಗುವ 52 ಸಾವಿರ ಕೋಟಿ ರು. ಹೊರೆ ಯನ್ನು ಅಷ್ಟು ಸುಲಭವಾಗಿ ಕಡಿಮೆ ಮಾಡಲಾಗದು ಎನ್ನುವುದನ್ನು ಮನಗಂಡಿರುವ ಸಿದ್ದರಾಮಯ್ಯ ಅವರು, ಏಕಾಏಕಿ ಕಡಿವಾಣ ಹಾಕದೆ, ಇದಕ್ಕಾಗಿ ಇತರ ಮೂಲಗಳಿಂದ ಆದಾಯ ಕ್ರೋಢೀಕರಿಸುವ ಯೋಚನೆಯಲ್ಲಿದ್ದಾರೆ…
ಉತ್ತರಕನ್ನಡ : SSLC ವಿದ್ಯಾರ್ಥಿನಿಯೋರ್ವಳು ಬಾಲಕಿಯರ ಬಾಲಮಂದಿರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಕೋಡಿಬಾಗದ ಬಳಿ ಇರುವ ಬಾಲಕಿಯರ ಬಾಲಮಂದಿರದಲ್ಲಿ ಶ್ವೇತಾ ಫಣೀಕರ (16) ಎನ್ನುವ SSLC ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಈಕೆಗೆ ಪಾಲಕರಿಲ್ಲದ ಕಾರಣದಿಂದ ಬಾಲಕಿಯರ ಬಾಲಮಂದಿರದಲ್ಲಿ ಆಸರೆ ಕಲ್ಪಿಸಲಾಗಿತ್ತು. ಈ ಹಿಂದೆ ನಡೆಸಲಾದ ಪೂರ್ವಸಿದ್ಧತೆ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದಳು. ಉಳಿದೆಲ್ಲ ವಿಷಯದ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಳು. ಪರೀಕ್ಷೆಯಲ್ಲಿ ಉತ್ತಮ ಅಂಕ ಸಾಧನೆ ಮಾಡುವ ಕುರಿತು ಆಕೆಗೆ ಸಲಹೆ ನೀಡಲಾಗಿತ್ತು. ಆಕೆಯೂ ಆತ್ಮವಿಶ್ವಾಸದಲ್ಲಿದ್ದಳು ಎಂದು ಪ್ರೌಢಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ. ಪೂರ್ವಸಿದ್ಧತೆ ಪರೀಕ್ಷೆ ನಡೆಯುತ್ತಿದ್ದು ಶಾಲೆಗೆ ಹೊರಡಲು ಸಿದ್ಧಗೊಳ್ಳುವುದಾಗಿ ಸಿಬ್ಬಂದಿಗೆ ತೆರಳಿದ ವಿದ್ಯಾರ್ಥಿನಿ ಕಟ್ಟಡ ಮೇಲಿನ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಮಂದಿರದ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಬಾಲಕಿಯ ಸಾವಿಗೆ ಕಾರಣ ಏನೆಂಬುದು ಇದುವರೆಗೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.