Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಮೃತ ಹಳ್ಳಿಯಲ್ಲಿ 3 ಕೋಟಿ ಮೌಲ್ಯದ ಡ್ರಗ್ ಮತ್ತು ದ್ವಜವನ್ನು ಸೀಸ್ ಮಾಡಿದ್ದಾರೆ ಈ ವೇಳೆ ನೈಜೀರಿಯಾ ಪ್ರಜೆ ಪೇಪೇಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ನೈಜೆರಿಯಾ ಆರೋಪಿಯು ಅಮೃತಹಳ್ಳಿಯಲ್ಲಿ ಎಂಡಿಎಂಎ ಕ್ರಿಸ್ಟಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿ ಪೇಪೇಯನ್ನು ಬಂಧಿಸಿದ್ದಾರೆ. ಬಂಧಿತನ ಬಳಿ 3 ಕೋಟಿ ರೂಪಾಯಿ ಮೌಲ್ಯದ 3 ಕೆ.ಜಿ ಡ್ರಗ್ಸ್ ಮತ್ತು ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಬೆಂಗಳೂರು : ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ಇದೀಗ ಹೈದರಾಬಾದ್ನ ಚಂಚಲಗುಡ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿರುವ ಕಾರಣ ಪೊಲೀಸರು ಬಾಡಿ ವಾರೆಂಟ್ ಮೂಲಕ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯದ ಅನುಮತಿ ಮೇರೆಗೆ ಕರೆತರಲಾಗಿದೆ. ರಾಜ್ಯಕ್ಕೆ ಕರೆತಂದ ಬಳಿಕ ಪೊಲೀಸರು ಕಾನೂನಿನ ಪ್ರಕಾರ ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪರಪ್ಪನ ಆಗ್ರಹಾರ ಜೈಲಿಗೆ ಕಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಜೂ.4, 5 ಮತ್ತು 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕರೆತರಲಾಗಿದ್ದು, ವಿಚಾರಣೆ ಬಳಿಕ ಪುನಃ ಹೈದರಾಬಾದ್ ಜೈಲಿಗೆ ಕಳುಹಿಸಿಕೊಡಲಾಗುತ್ತದೆ. ಶಾಸಕರಾಗಿದ್ದ ವೇಳೆ ಜನಾರ್ದನರೆಡ್ಡಿ ವಿಚಾರಣೆಗೆ ಹಾಜರಾಗುತ್ತಿದ್ದರು. ಇದೀಗ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದಾರಾಬಾದ್…
ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಬೀದರ್, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣ ದೊಡ್ಡ ಸುದ್ದಿಯಾಗಿತ್ತು. ಇದೀಗ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದ್ದು, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ನಲ್ಲಿ ದರೋಡೆಕೋರರು ಬ್ಯಾಂಕಿಗೆ ನುಗ್ಗಿ ವಾಮಾಚಾರ ನಡೆಸಿ ಬಳಿಕ ಚಿನ್ನಾಭರಣ ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹೌದು ಬ್ಯಾಂಕ್ ಬಾಗಿಲಿನ ಬೀಗ ಮುರಿದು ಕಿಟಕಿಯ ಬಾರ್ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬ್ಯಾಂಕ್ನಲ್ಲಿ ಕಸಗೂಡಿಸಲು ಬಂದ ಕ್ಲೀನರ್ಗೆ ಕಪ್ಪು ಬಟ್ಟೆಯಿಂದ ಸುತ್ತಿದ್ದ ಗೊಂಬೆ, ನಿಂಬೆ ಹಣ್ಣು, ಕುಂಕುಮ ಹಾಗೂ ಇತರೆ ವಸ್ತುಗಳು ಸಿಕ್ಕಿವೆ. ಅಲ್ಲದೇ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿರುವುದು ಬೆಳಕಿಗೆ ಬಂದಿದೆ. ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಸೈರನ್ ಮೊಳಗದಂತೆ ನೋಡಿಕೊಂಡಿದ್ದಾರೆ. ಸಿಸಿ ಕ್ಯಾಮೆರಾಗಳ ಹಾರ್ಡ್…
ದಕ್ಷಿಣಕನ್ನಡ : ಸುಹಾಸ್ ಶೆಟ್ಟಿ ಭೀಕರ ಕೊಲೆ ಘಟನೆ ಮಾಸುವ ಮುನವೇ ದಕ್ಷಿಣ ಕನ್ನಡದಲ್ಲಿ ಮತ್ತೆ ರಕ್ತ ಹರಿದಿದ್ದು, ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ. ಅಬ್ದುಲ್ ರೆಹಮಾನ್ ಪರಿಚಯಸ್ಥರೇ ಆಗಿರುವ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ನಿಸಾರ್ ಎಂಬುವವರು ದೂರು ನೀಡಿದ್ದರು. ಇದೀಗ ಅವರ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 103,109, 118(1), 118 (2), 190 191(1),…
ಮೈಸೂರು : ಓನಡಿ ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದೆ ಇನ್ನೊಂದು ಕಡೆ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು ಇದರಿಂದ ಅನೇಕರು ಬಿಳಿ ಆಗುತ್ತಿದ್ದಾರೆ ಇದೀಗ ಮೈಸೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಮತ್ತೋರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನಲ್ಲಿ ನಡೆದಿದೆ. ಮರಕ್ಕೆ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಸಾಲಿಗ್ರಾಮ ತಾಲೂಕಿನ ಬೈಲಾಪುರ ಎಂಬ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಖಲೀಮ್ ರೆಹಮಾನ್ (65) ಹಾಗು ಶೇಖ್ ಅಬ್ದುಲ್ಲಾ ಖಾದರ್ (45) ಸಾವನಪ್ಪಿದ್ದಾರೆ. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಕಾರಿನಲ್ಲಿದಂತಹ ಮತ್ತೋರ್ವ ವ್ಯಕ್ತಿ ಶೇಕ್ ಮುನಿರ್ ಅಹಮದ್ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ…
ರಾಯಚೂರು : ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸುತ್ತಿದ್ದು, ನಿನ್ನೆ ರಾಜ್ಯದಲ್ಲಿ ಮಹಾಮಳೆಗೆ ಒಟ್ಟು 8 ಜನರು ಬಲಿಯಾಗಿದ್ದಾರೆ. ಇದೀಗ ರಾಯಚೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ತುಂಬಿ ಹರಿಯುತ್ತಿದ್ದ ಸೇತುವೆ ಮೇಲಿಂದ ಬೈಕ್ ಸವಾರ ನೊಬ್ಬ ಹಳ್ಳಕ್ಕೆ ಬಿದ್ದಿದ್ದಾನೆ. ಅದೃಷ್ಟವಶಾತ ಸ್ಥಳೀಯರ ಸಹಾಯದಿಂದ ಬಚಾವ್ ಆಗಿದ್ದಾನೆ. ಹೌದು ರಾಯಚೂರಿನಲ್ಲಿ ಮಳೆಗೆ ಹಳ್ಳದ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿವೆ. ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಇದೀಗ ಬೈಕ್ ಸವಾರನೊಬ್ಬ ದುಃಸಾಹಸಕ್ಕೆ ಮುಂದಾಗಿದ್ದು, ಮಾನ್ವಿ ತಾಲೂಕಿನ ದೋತರ ಬಂಡಿ ಬಳಿಯ ಸೇತುವೆ ಸಂಪೂರ್ಣವಾಗಿ ಮುಳುಗಿದೆ. ಈ ವೇಳೆ ಬೈಕ್ ಸಮೇತ ಹಳ್ಳಕ್ಕೆ ಸವಾರ ಬಿದ್ದಿದ್ದಾನೆ. ತಕ್ಷಣ ಸ್ಥಳಿಯರು ಆದನನ್ನು ರಕ್ಷಿಸಿದ್ದು ಬಳಿಕ ಜೆಸಿಬಿ ಮೂಲಕ ಬೈಕ್ ನನ್ನು ಹಳ್ಳದಿಂದ ಮೇಲಕ್ಕೆ ಎತ್ತಲಾಯಿತು.
ಬೆಂಗಳೂರು : ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಪುಟ್ಟೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಸ್ವಗೃಹದಲ್ಲಿ ಕೆ ಎನ್ ಪುಟ್ಟೇಗೌಡ ಅವರು ನಿಧನರಾಗಿದ್ದಾರೆ. ದೃಷ್ಟಿ ಹೀನರಿಗೆ ನೆರವಾಗಲೆಂದು ಅವರ ನೇತೃದಾನ ಮಾಡಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಆದಿಚುಂಚನಗಿರಿ ಆಸ್ಪತ್ರೆಗೆ ಕೆ.ಎನ್ ಪುಟ್ಟೇಗೌಡ ದೇಹದಾನ ಮಾಡಲು ಇದೀಗ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಕೆ.ಎನ್ ಪುಟ್ಟೇಗೌಡ ಪ್ರಮಾಣಿಕ ಮತ್ತು ಮೌಲ್ಯಯುತ ವಕೀಲರಾಗಿ ಹೆಸರಾಗಿದ್ದರು. ಬಿಬಿಎಂಪಿ ವಕೀಲರಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ರಕ್ಷಿಸಿದ್ದರು. ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೂಡ ಉತ್ತಮ ಆಡಳಿತವನ್ನು ನಡೆಸಿದ್ದರು.
ಬೆಂಗಳೂರು : ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಕಲ್ಪಿಸುವ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಸೂದೆ 2025ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಇದೀಗ ಅಧಿಸೂಚನೆ ಹೊರಡಿಸಿದೆ. ಈ ಸುಗ್ರೀವಾಜ್ಞೆಯಿಂದ ಪ್ಲಾಟ್ಫಾರ್ಮ್ ಆಧಾರಿತ ಸೇವೆಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್ ಡೆಲವರಿ ಮಾಡುವ, ರೈಡ್ ಶೇರಿಂಗ್ ಸೇವೆಗಳಾದ ಓಲಾ, ಉಬರ್, ರ್ಯಾಪಿಡೋ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು, ಇ–ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮತ್ತಿತ್ತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಕೌನ್ಸೆಲಿಂಗ್ ಮೂಲಕ ವೈದ್ಯಾಧಿಕಾರಿಗಳ ವರ್ಗಾವಣೆ: ಕೌನ್ಸಿಲಿಂಗ್ ಮೂಲಕ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ ತಿದ್ದುಪಡಿ ಮಸೂದೆ 2025ಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಇದೆ ಪ್ರಕಾರ ವೈದ್ಯಾಧಿಕಾರಿ ಮತ್ತು…
ನ್ಯೂಯಾರ್ಕ್ : ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕಾ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. ಅಮೆರಿಕಾದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನಿಷೇಧಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಹೊಸದಾಗಿ ವೀಸಾ ಸಲ್ಲಿಸುವ ಪ್ರಕ್ರಿಯೆಗೆ ಡೊನಾಲ್ಡ್ ಟ್ರಂಪ್ ಇದೀಗ ತಡೆ ನೀಡಿದ್ದಾರೆ. ವೀಸಾ ನಿಷೇಧದಿಂದ ಅಮೆರಿಕದ ಹಲವು ವಿಶ್ವವಿದ್ಯಾಲಯಗಳಿಗೆ ಸಂಕಷ್ಟ ಎದುರಾಗಿದೆ. ಹೌದು ಟ್ರಂಪ್ ಸರ್ಕಾರವು ಹೊಸದಾಗಿ ವೀಸಾಗೋಸ್ಕರ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ವೀಸಾ ನೀಡದಂತೆ ನಿಗದಿಪಡಿಸದಂತೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರಪಂಚದಾದ್ಯಂತದ ಯುಎಸ್ ರಾಯಭಾರ ಕಚೇರಿಗಳಿಗೆ ಆದೇಶಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಅಗತ್ಯವಿರುವ ಸಾಮಾಜಿಕ ಮಾಧ್ಯಮ ತಪಾಸಣೆ ಮತ್ತು ಪರಿಶೀಲನೆಯ ವಿಸ್ತರಣೆಗೆ ಸಿದ್ಧತೆಯಾಗಿ, ಮುಂದಿನ ಮಾರ್ಗದರ್ಶನ ನೀಡುವವರೆಗೆ ಕಾನ್ಸುಲರ್ ವಿಭಾಗಗಳು ಯಾವುದೇ ಹೆಚ್ಚುವರಿ ವಿದ್ಯಾರ್ಥಿ ಅಥವಾ ವಿನಿಮಯ ಸಂದರ್ಶಕರ (ಎಫ್, ಎಂ ಮತ್ತು ಜೆ) ವೀಸಾ ನೇಮಕಾತಿ ಸಾಮರ್ಥ್ಯವನ್ನು ಸೇರಿಸಬಾರದು ರೂಬಿಯೊ ಸೂಚಿಸಿದ್ದಾರೆ. ನೀವು ಶಾಲೆ ಬಿಟ್ಟರೆ, ತರಗತಿಗಳನ್ನು ಬಿಟ್ಟುಬಿಟ್ಟರೆ ಅಥವಾ ನಿಮ್ಮ ಶಾಲೆಗೆ ತಿಳಿಸದೆ ನಿಮ್ಮ ಅಧ್ಯಯನ ಕಾರ್ಯಕ್ರಮವನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು, ಪತಿಯೊಬ್ಬ ಮನೆಯಲ್ಲಿದ್ದ ಡಂಬಲ್ಸ್ ಗಳಿಂದ ರೂಂನಲ್ಲಿ ಮಲಗಿದ್ದ ಪತ್ನಿಯನ್ನು ಭೀಕರವಾಗಿ ಕೊಲೆಮಾಡಿ ಬಳಿಕ ಪತಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸುಮಾ ಎಂದು ತಿಳಿದುಬಂದಿದ್ದು, ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಎಸ್ ಪಿ ವೆಂಕಟೇಶ್ ಪ್ರಸನ್ನ ಹಾಗೂ ಡಿವೈಎಸ್ಪಿ ರವಿ ಭೇಟಿ ನೀಡಿ ಮಾಹಿತಿ ಪಡೆದರು.