Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟಲು ಪಾಯ ತೆಗೆಯುವಾಗ ಸುಮಾರು 850ಕ್ಕೂ ಹೆಚ್ಚು ಗ್ರಾಂ ನಿಧಿ ದೊರೆತಿದ್ದು, ಅದನ್ನು ಈಗಾಗಲೇ ಸರ್ಕಾರಕ್ಕೂ ಕೂಡ ಒಪ್ಪಿಸಲಾಗಿದೆ. ಇದೀಗ ಲಕ್ಕುಂಡಿಯಲ್ಲಿ ನಿಧಿ ದೊರೆತ ಬೆನ್ನೆಲೆ ರಾಜ್ಯ ಸರ್ಕಾರ ಗ್ರಾಮದಲ್ಲಿ ಉತ್ಖನನ ನಡೆಸಲು ನಿರ್ಧರಿಸಲಾಗಿದೆ. ಹೌದು ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ. ಲಕ್ಕುಂಡಿಯಲಿ ಈಗಾಗಲೇ 2024ರ ನವೆಂಬರ್ ತಿಂಗಳಿನಲ್ಲಿ ನಡೆದ ಅನ್ವೇಷಣೆಯಲ್ಲಿ ಸಾವಿರಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದವು. ಈಗ ನಿಧಿ ಪತ್ತೆಯಾಗಿದೆ. ಅನೇಕ ಭಾಗಗಳಲ್ಲಿ ನೀಲಮಣಿ, ಮುತ್ತು, ರತ್ನ, ಹವಳ, ವಜ್ರ, ವೈಡೂರ್ಯದಂತಹ ಅನೇಕ ವಸ್ತುಗಳು ಇಂದಿಗೂ ದೊರೆಯುತ್ತಿವೆ.ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಅಂದಾಜು 5,388 ಚದರ ಅಡಿ ವ್ಯಾಪ್ತಿಯಲ್ಲಿ ಉತ್ಪನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಫಲಿತಾಂಶವನ್ನು ಈಗಾಗಲೇ ಇಲಾಖಾ ವೆಬ್ ಸೈಟ್ https://sts.karnataka.gov.in/TET ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಅರ್ಹತಾ ಪ್ರಮಾಣ ಪತ್ರಗಳನ್ನು ಅಲ್ಲಿ ಒದಗಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ತಮ್ಮ ಅರ್ಹತಾ ಪ್ರಮಾಣಪತ್ರಗಳನ್ನು ಮುದ್ರಿಸಿಕೊಳ್ಳಬಹುದಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2014ರಿಂದ 2025ರ ತನಕ ನಡೆದ ಪರೀಕ್ಷೆಗಳ ಅರ್ಹತಾ ಪ್ರಮಾಣಪತ್ರಗಳನ್ನು ಇದೇ ಲಿಂಕಿನಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಅರ್ಹತಾ ಪ್ರಮಾಣ ಪತ್ರವು ಅಭ್ಯರ್ಥಿಯ ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ ಎಂದು ತಿಳಿಯಪಡಿಸಿದೆ.
ಬೆಂಗಳೂರು : RCB ಅಭಿಮಾನಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮ್ಯಾಚ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. KSCA ಹಾಗೂ RCB ನಡುವೆ ಇದೀಗ ತಿಕ್ಕಾಟ ನಡೆಯುತ್ತಿದ್ದು ವೆಂಕಟೇಶ್ ಪ್ರಸಾದ್ ಮತ್ತು ರಾಜೇಶ್ ನಡುವೆ ವಾಗ್ವಾದ ನಡೆದಿದೆ. ಬೆಂಗಳೂರಿನಲ್ಲಿ ಪಂದ್ಯ ನಡೆಸೋಕೆ ಆರ್ಸಿಬಿ ಹಿಂದೆಟು ಹಾಕುತ್ತಿದೆ. ಪ್ರಕರಣದಿಂದ ಆರ್ಸಿಬಿ ಮ್ಯಾನೇಜ್ಮೆಂಟ್ ಇದೀಗ ಆತಂಕಕ್ಕೆ ಒಳಗಾಗಿದ್ದು, ಪಂದ್ಯ ನಡೆಸಲು ಮ್ಯಾನೇಜ್ಮೆಂಟ್ ಹಿಂಜರಿಯುತ್ತಿದೆ. ಹಾಗಾಗಿ ಆರ್ಸಿಬಿ ಎಲ್ಲ ಪಂದ್ಯಗಳನ್ನು ರಾಯಪುರ ಮತ್ತು ಮುಂಬೈಗೆ ಶಿಫ್ಟ್ ಮಾಡಲು ರಾಜೇಶ್ ಮೆನನ್ ನಿರ್ಧರಿಸಿದ್ದಾರೆ.ಆರ್ಸಿಬಿ ತಂಡದ ಉಪಾಧ್ಯಕ್ಷ ಆಗಿರುವ ರಾಜೇಶ ಮೆನನ್ ಪ್ಲಾನ್ ಮಾಡಿದ್ದು, ಆದರೆ ರಾಜ್ಯ ಸರ್ಕಾರ ಆರ್ಸಿಬಿ ಪಂದಕ್ಕೆ ಸಮ್ಮತಿ ನೀಡಲು ತಯಾರಿ ನಡೆಸಿದೆ. ಇನ್ನು KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ರಾಜೇಶ್ ಮೆನನ್ ನಡುವೆ ವಾಗ್ವಾದ ನಡೆದಿದ್ದು, ಆರ್ಸಿಬಿ ಪಂದ್ಯ ಶಿಫ್ಟ್ ಮಾಡದಂತೆ ವೆಂಕಟೇಶ್ ಪ್ರಸಾದ್ ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನಿಂದ ಆರ್ಸಿಬಿ ಪಂದ್ಯಗಳನ್ನು ಮಾಡಿದಂತೆ ಪಟ್ಟು ಹಿಡಿದಿದ್ದಾರೆ ಸ್ಟೇಡಿಯಂ…
ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ಈ ಒಂದು ದುರಂತ ಸಂಭವಿಸಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿ ಧನುಷ್ (18) ಹಾಗೂ ಸಂತೋಷ (18) ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಬೆಂಗಳೂರಿನ ಕೋಣನಕುಂಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಬನಶಂಕರಿ ಬಳಿಯ ಖಾಸಗಿ ಕಾಲೇಜಿನಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸ್ನೇಹಿತರ ಜೊತೆಗೆ ಇಬ್ಬರು ಕಬ್ಬಾಳು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಕೊಲೆಯಾಗಿದ್ದು, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ ಚಾಕುವಿನಿಂದ ಇರಿದು ಸುಜಾತ (27) ಎನ್ನುವ ಪ್ರಿಯತಮೆಯನ್ನು ಪ್ರಿಯತಮ ಚಿರಂಜೀವಿ ಕೊಲೆ ಮಾಡಿದ್ದಾನೆ. ಕೊಲೆಯಾದ ಸುಜಾತ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದಿ ನಿವಾಸಿ ಎಂದು ತಿಳಿದುಬಂದಿದೆ. ಯುವತಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇನ್ನು ಆರೋಪಿ ಚಿರಂಜೀವಿ ಹೊಸಪೇಟೆ ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ಎಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ವಾರಾಣಾಸಿ : ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಉತ್ತರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಂಕ್ರಾಂತಿ ಹಬ್ಬದ ವೇಳೆ ಗಾಳಿಪಟ ಹಾರಾಟದಿಂದ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದಲ್ಲಿ 28 ವರ್ಷದ ಸಮೀರ್ ಹಂಶಿ ಶಾಲಾ ಕ್ಯಾಂಪಸ್ ಸಮೀಪ ಇಂತಹ ದುರಂತದಲ್ಲಿ ಮೃತಪಟ್ಟಿದ್ದಾರೆ. ಕೇರಕತ್ ಪಟ್ಟಣದ ನಿವಾಸಿಯಾಗಿದ್ದ ಅವರು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿಕೊಂಡು ಗಂಭೀರ ಗಾಯಗೊಂಡರು. ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಜೌನಪುರ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಇಂತಹ ಎರಡು ಸಾವುಗಳು ವರದಿಯಾಗಿವೆ. ಡಿಸೆಂಬರ್ 11ರಂದು ಶಾಲಾ ಶಿಕ್ಷಕ ಸಂದೀಪ್ ತ್ರಿಪಾಠಿ (45) ಗಾಜುಲೇಪಿತ ದಾರದಿಂದ ಕತ್ತು ಸೀಳಲ್ಪಟ್ಟು ಮೃತಪಟ್ಟಿದ್ದರು. ಬುಧವಾರ ಉತ್ತರಪ್ರದೇಶದ ಲಕೀಂಪುರ ಜಿಲ್ಲೆಯಲ್ಲಿ ವಲಸೆ ಕಾರ್ಮಿಕ…
ಬೆಳಗಾವಿ : ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ವಿರೋಧಿಸಿದ್ದಕ್ಕೆ ದೌರ್ಜನ್ಯ ನಡೆದಿದ್ದು ದಲಿತ ಸಮುದಾಯದ ಸದಾಶಿವ ಭಜಂತ್ರಿ ಕುಟುಂಬದವರ ಮೇಲೆ ಹಲ್ಲೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಸದಾಶಿವ ಭಜಂತ್ರಿ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಕಲ್ಲು ಎಸೆದು ಶೌಚಾಲಯ, ಮನೆ, ಮಾಳಿಗೆ ದ್ವಂಸ ಮಾಡಿದ್ದಾರೆ. ವಾಲ್ಮೀಕಿ ಭವನ ನಿರ್ಮಾಣದ ಜಾಗ ಸರ್ವೆಗೆ ಎಸ್ ಟಿ ಸಮುದಾಯದ ಯುವಕರು ಬಂದಿದ್ದರು. ಈ ವೇಳೆ ವಾಲ್ಮೀಕಿ ಸಮುದಾಯ ಭವನಕ್ಕೆ ಸದಾಶಿವ ಭಜಂತ್ರಿ ಕುಟುಂಬ ವಿರೋಧ ಮಾಡಿತ್ತು. ಆಗ ಸಮುದಾಯ ಭವನಕ್ಕೆ ವಿರೋಧಿಸಿದ್ದಕ್ಕೆ ಸದಾಶಿವ ಭಜಂತ್ರಿ ಕುಟುಂಬದವರ ಮೇಲೆ ಹಲ್ಲೆ ಮಾಡಿದೆ. ಸದಾಶಿವ ಮನೆಯಲ್ಲಿದ್ದ ವಸ್ತುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ಕಲ್ಲು ಕಟ್ಟಿಗೆಯಿಂದ ಹೊಡೆದು ಬಾಗಿಲು ಮುರಿದು ಒಳ ನುಗ್ಗಿ ಹಲ್ಲೆ ಮಾಡಿದ್ದಾರೆ. ಮಹಿಳೆ ಅನ್ನೋದನ್ನ ಲೆಕ್ಕಿಸಿದೆ ಆವಾಚ್ಯವಾಗಿ ನಿಂದನೆ…
ರಾಯಚೂರು : ರಾಯಚೂರಿನ ತಿಂಥಣಿಯ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಶ್ರೀ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬಳಿ ಇರುವ ಮಠದಲ್ಲಿ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 3:40ರ ಸುಮಾರಿಗೆ ಸ್ವಾಮೀಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿತರಿಳೆದಿದ್ದಾರೆ. ಜನವರಿ 12, 13 ಮತ್ತು 14 ರಂದು ಹಾಲುಮತದ ಉತ್ಸವ ನಡೆಸಿಕೊಟ್ಟಿದ್ದರು.2023-24 ರಲ್ಲಿ ಇದೆ ಮಠದ ಉತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು.
BIG NEWS : ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಕೇಸ್ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡನಿಗೆ ಪೊಲೀಸರು ತೀವ್ರ ಹುಡುಕಾಟ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಆಯುಕ್ತೆ ಅಮೃತಾಗೌಡಗೆ ಅಶ್ಲೀಲವಾಗಿ ನಿಂದನೆ ಮಾಡಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡನಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೌದು ನಗರಸಭೆ ಪೌರಾಯುಕ್ತೇ ಅಮೃತಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು ಅಲ್ಲದೆ, ಜೀವ ಬೆದರಿಕೆ ಹಾಕಿದ್ದ. ಬಳಿಕ ಅಮೃತ ಗೌಡ ಅವರು ರಾಜೇಗೌಡ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆ ಬಂಧನದ ಭೀತಿಯಿಂದ ಇದೀಗ ರಾಜೇಗೌಡ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಇದೀಗ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ಕಾರುಣ್ಯ ರಾಮ್ ಗೆ ಇದೀಗ ಸಾಲಗಾರರ ಕಾಟ ಶುರುವಾಗಿದ್ದು, ತಂಗಿಯ ಬೆಟ್ಟಿಂಗ್ ಹುಚ್ಚಿಗೆ ಬೇಸತ್ತು ಸಿಸಿಬಿ ಪೊಲೀಸರಿಗೆ ತಂಗಿ ವಿರುದ್ಧವೇ ಕಾರುಣ್ಯ ರಾಮ್ ದೂರು ನೀಡಿದ್ದಾರೆ. ಹೌದು ಸಮೃದ್ಧಿ ರಾಮ್ ಸೇರಿದಂತೆ ಹಲವರ ವಿರುದ್ಧ ಕಾರುಣ್ಯ ದೂರು ನೀಡಿದ್ದಾರೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ ವಿರುದ್ಧ ಕಾರುಣ್ಯ ದೂರು ನೀಡಿದ್ದಾರೆ. ಕಾರುಣ್ಯ ರಾಮ್ ಜೊತೆ ಮನೆಯಲ್ಲಿಯೇ ಸಮೃದ್ಧಿ ವಾಸವಿದ್ದರು. ಆನ್ಲೈನ್ ಬೆಟ್ಟಿಂಗ್ ನಲ್ಲಿ 25 ಲಕ್ಷ ರೂಪಾಯಿ ಸಮೃದ್ಧಿ ಕಳೆದುಕೊಂಡಿದ್ದಾರೆ. ಇದಕ್ಕಾಗಿ ಖಾಸಗಿ ವ್ಯಕ್ತಿಗಳಿಂದ 25 ಲಕ್ಷ ರೂಪಾಯಿ ಸಾಲ ಮಾಡಿದ್ದಳು ಇದೀಗ ಸಮೃದ್ಧಿ ಹಣ ನೀಡಿದವರಿಂದ ಕಾರುಣ್ಯ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಕಾರುಣ್ಯ ಮನೆಯವಳಿ ಬಂದು ಗಲಾಟೆ ಮಾಡಿದ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಕಾರುಣ್ಯ ರಾಮ್ ತಂಗಿ ಸಮೃದ್ಧ ರಾಮ ಸೇರಿದಂತೆ ಹಲವರ ವಿರುದ್ಧ ಸಿಸಿಬಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.














