Author: kannadanewsnow05

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟ್ಯಾಕ್ಸಿಕ್ ಸಿನಿಮಾ ಬಿಡುಗಡೆಯಾದ 24 ಗಂಟೆಯಲ್ಲಿಯೇ 500 ಮಿಲಿಯನ್ ಗು ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಆದರೆ ಈ ಒಂದು ಸಿನಿಮಾದಲ್ಲಿ ಅಶ್ಲೀಲ ಇರುವುದರಿಂದ ಈಗಾಗಲೇ ಸೆನ್ಸಾರ್ ಮಂಡಳಿಗೆ ದೂರು ನೀಡಲಾಗಿದೆ. ಇನ್ನು ಟಾಕ್ಸಿಕ್ ಟೀಸರ್ ನಲ್ಲಿ ನಟಿಸಿದ್ದ ನಟಿಗೆ ಈಗ ಎಲ್ಲೆಡೆ ಟೀಕೆಗಳು ಬರುತ್ತಿವೆ. ಈ ನೆಲೆಯಲ್ಲಿ ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಟಾಪಿಕ್ ಟೀಸರ್ ನಲ್ಲಿ ನಟ ಯಶ್ ಅವರ ಎಂಟ್ರಿಗು ಮುನ್ನ ಅಶ್ಲೀಲತೆ ಕಂಡುಬಂದಿದ್ದು ಈ ಹಿನ್ನಲೆಯಲ್ಲಿ ಟ್ಯಾಕ್ಸಿಕ್ ಸಿನಿಮಾ ವಿರುದ್ಧ ಹಲವರು ದೂರು ನೀಡಿದ್ದಾರೆ. ಬೀದರ್ ನಲ್ಲಿರುವ ನಟಿ ಹೆಸರು ಬರಲಾಗುತ್ತಿದ್ದಂತೆ ಇನ್ಸ್ಟಾಗ್ರಾಮ್ ನಲ್ಲಿ ಆಕೆಗೆ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಆ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ್ದಾರೆ.

Read More

ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಘೋರ ದುರಂತ ನಡೆದಿದ್ದು, ದೇವಸ್ಥಾನಕ್ಕೆಂದು ಹೋಗಿದ್ದ ಬಾಲಕನ ಶವ ಸಂಶಯಾಸ್ಪದ ರೀತಿಯಲ್ಲಿ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಇಂದು ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ ಎಂಬಲ್ಲಿ ನಡೆದಿದೆ. ಸಂಬೋಳ್ಯ ಎಂಬಲ್ಲಿಯ ನಿವಾಸಿ ಸುಬ್ರಹ್ಮಣ್ಯ ನಾಯಕ್​ ಅವರ ಪುತ್ರ, ಗೇರುಕಟ್ಟೆ ಪ್ರೌಢ ಶಾಲಾ ಒಂಬತ್ತನೇ ತರಗತಿ ವಿದ್ಯಾರ್ಥಿ ಸುಮಂತ್​ (15) ಎಂದಿನಂತೆ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಧನು ಪೂಜೆಗಾಗಿ ಬೆಳಗ್ಗೆ 5ರ ಸುಮಾರಿಗೆ ಮನೆಯಿಂದ ತೆರಳಿದ್ದಾನೆ. ಆದರೆ ಅತ್ತ ದೇವಸ್ಥಾನಕ್ಕೂ ಹೋಗದೆ, ಮನೆಗೂ ಹಿಂದಿರುಗದೇ ಇದ್ದಾಗ ಮನೆಯವರು ಗಾಬರಿಗೊಂಡು ಸ್ಥಳೀಯರೊಂದಿಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕ ಹೋಗಿದ್ದ ದಾರಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಚಿರತೆ ಕೊಂಡೊಯ್ದಿರಬಹುದು ಎಂಬ ಸಂಶಯ ಸ್ಥಳೀಯರಲ್ಲಿ ಮೂಡಿತ್ತು. ತಕ್ಷಣ ಪೊಲೀಸರಿಗೆ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ತಲೆಯ ಹಿಂಭಾಗ ಗಂಭೀರ ರೀತಿಯಲ್ಲಿ ಎರಡು ಗಾಯ…

Read More

ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಬಾಲಕನನ್ನು ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ ಅನುದಾನಿತ ಶಾಲೆಯಲ್ಲಿ ಕೊಲೆಯಾದ ನಿಂಗರಾಜ್ ಎಸ್ ಎಸ್ ಎಲ್ ಸಿ ಓದುತ್ತಿದ್ದ ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಶಾಸಕ ರಿಜ್ವಾನ್ ಆರ್ಷದ್ ಗೆ ಟಿಕೆಟ್ ಕೊಡಿಸಿದ್ದು, ಜಮೀರ್ ಅಹ್ಮದ್ ಖಾನ್ ಎಂದು ಮೈಸೂರು ನಲ್ಲಿ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಹೇಳಿಕೆ ನೀಡಿದರು. ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಿಜ್ವಾನ್ ರಿಜ್ವಾನ್ ಆರ್ಷದ್ ವೆ ಜಮೀರ್ ಅಹ್ಮದ್ ಖಾನ್ ಟಿಕೆಟ್ ಕೊಡಿಸಿದ್ದಾರೆ ಎಂದರು. 2023ರಲ್ಲಿ ನನಗೆ ಸಿದ್ದರಾಮಯ್ಯ ಅವರು ಬಿ ಫಾರಂ ನೀಡಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಶಿವಾಜಿನಗರ ಕ್ಷೇತ್ರದ ಶಾಸಕ ಶಾಸಕ ರಿಜ್ವಾನ್ ಗೆ ಟಿಕೆಟ್ ಕೊಡಿಸಿದ್ದೆ ನಮ್ಮ ತಂದೆ. ಚುನಾವಣೆಯಲ್ಲಿ ರಿಜ್ವಾನ್ ಆರ್ಷದ್ ಅವರನ್ನು ಗೆಲ್ಲಿಸಿದ್ದು ಸಹ ನಮ್ಮ ತಂದೆ ಶಿವಾಜಿನಗರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಾಗಿದ್ದಾರೆ. ನಮ್ಮ ಮನೆ ಸಹ ಶಿವಾಜಿನಗರ ಕ್ಷೇತ್ರದಲ್ಲಿಯೇ ಇದೆ ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ ಎಂದು ಜೈದ್ಖಾನ್ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋದಾಮು ಒಂದು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ. ಬೇಗುರಿನ ಅಕ್ಷಯನಗರದಲ್ಲಿರುವ ಹಳೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಗೋದಾಮಿನಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳು ದಗದಗನೆ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ದುರಂತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಎಂಆರ್‌ಸಿಎಲ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದು , ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್ಸಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ. ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಇದೀಗ ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ. ಪಾಸ್‌ಗಳನ್ನು ನಮ್ಮ ಮೆಟ್ರೋ ಅಧಿಕೃತ ಆಪ್ ಮೂಲಕ ಖರೀದಿಸಬಹುದು. ಇತರ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ. ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಪ್ರದರ್ಶಿಸಲಾದ ಕ್ಯೂಆರ್‌ ಕೋಡ್ ಅನ್ನು ಸ್ವಯಂಚಾಲಿತ ಸಂಗ್ರಹ (ಎಎಫ್‌ಸಿ) ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಿ ಪ್ರವೇಶ ಮತ್ತು ನಿರ್ಗಮನ ಪಡೆಯಬಹುದು. ಮೆಟ್ರೋ ದಿನದ ಪಾಸ್ ದರಗಳು 1 ದಿನದ ಪಾಸ್ -…

Read More

ಬೆಂಗಳೂರು : ಮಕರ ಸಂಕ್ರಾಂತಿ ಅಂಗವಾಗಿ ರಾಜ್ಯದ  ಎಲ್ಲ ದೇಗುಲಗಳಲ್ಲಿ ಎಳ್ಳು ಬೆಲ್ಲ ವಿತರಣೆಗೆ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇಗುಲಗಳಿಗೆ ಇದೀಗ ಸುತ್ತೋಲೆ ಹೊರಡಿಸಲಾಗಿದೆ. ದೇವರ ದರ್ಶನಕ್ಕೆ ಬರುವ ಎಲ್ಲಾ ಭಕ್ತರಿಗೆ ಎಳ್ಳು ಬೆಲ್ಲವಿಕರಿಸಬೇಕು ದೇವರಿಗೆ ನೈವೇದ್ಯ ಅರ್ಪಿಸಿದ ನಂತರ ಭಕ್ತರಿಗೆ ಎಳ್ಳು ಬೆಲ್ಲ ವಿತರಿಸಬೇಕು. ಸರ್ಕಾರದ ಲಾಂಛನ ಮುದ್ರಿಸಿದ ಕಾಗದ ಲಕೋಟೆಯಲ್ಲಿ ವಿತರಿಸಿ. ಪ್ರತಿಯೊಬ್ಬರಿಗೆ ಕನಿಷ್ಠ 50 ಗ್ರಾಂ ಎಳ್ಳು ಬೆಲ್ಲ ನೀಡುವಂತೆ ಸೂಚನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎಲ್ಲಾ ದೇಗುಲಗಳಿಗೆ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಹಾಗಾಗಿ ಎಲ್ಲಾಧಿ ಗುಣಗಳಲ್ಲಿ ಬರುವ ಭಕ್ತಾದಿಗಳಿಗೆ 50 ಗ್ರಾಂ ಎಳ್ಳುಬೆಲ್ಲ ವಿತರಿಸಬೇಕು ಎಂದು ಸೂಚಿಸಲಾಗಿದೆ.

Read More

ಬೆಂಗಳೂರು : ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಪ್ರತಿವರ್ಷದಂತೆ ಈ ವರ್ಷವೂ ಗವಿಗಂಗಾಧರ ದೇವಾಲಯ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ಸಂಕ್ರಾತಿಯಂದು ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಂಚಲನ ಮಾಡುವ ಶುಭಘಳಿಗೆ. ಈ ವೇಳೆ ಬೆಂಗಳೂರಿನ ಗವಿಪುರಂನಲ್ಲಿರುವ ಗವಿಗಂಗಾಧರೇಶ್ವರ ದೇಗುಲದ ಶಿವನ ಮೂರ್ತಿಯನ್ನು ಸೂರ್ಯನ ಕಿರಣಗಳು ಸ್ಪರ್ಶಿಸಲಿವೆ. ಇದನ್ನು ಶಿವನಿಗೆ ಸೂರ್ಯದೇವ ಸಲ್ಲಿಸೋ ಪೂಜೆ ಅಂತಾ ನಂಬಿಕೆಯಿದ್ದು, ಈ ಬಾರಿ ಸಂಜೆ 5:02 ರಿಂದ 5:04ರವರೆಗೆ ಅಂದರೆ ಎರಡು ನಿಮಿಷಗಳ ಕಾಲ ಶಿವನಿಗೆ ಭಾಸ್ಕರ ನಮಿಸಲಿದ್ದಾನೆ. ಇದನ್ನು ‘ಸೂರ್ಯನ ಅಭಿಷೇಕ’ ಎಂದೇ ಕರೆಯಲಾಗುತ್ತದೆ. ಈ ಕಿರಣಗಳು ನಂದಿಯ ಕೊಂಬುಗಳ ಮಧ್ಯದಿಂದ ಹೋಗಿ ಗರ್ಭಗುಡಿಯೊಳಗಿರುವ ಶಿವಲಿಂಗವನ್ನು ತಲುಪುವ ಮೂಲಕ ದೇವಸ್ಥಾನವನ್ನು ಬೆಳಗಿಸುತ್ತದೆ. ಈ ಪವಾಡವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಅನೇಕ ಭಾಗಗಳಿಂದ ಭಕ್ತರು ಭೇಟಿ ನೀಡುತ್ತಾರೆ. ಈ ಪವಾಡವನ್ನು 5 ರಿಂದ 10 ನಿಮಿಷಗಳ ಕಾಲ ನಡೆಯುತ್ತದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ…

Read More

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ಜಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ…

Read More

ಬೆಂಗಳೂರು : ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನವರಿ.22ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭಎಯಲ್ಲಿ ನಿರ್ಧರಿಸಲಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ ಎಂದರು. ವಿಬಿ ಜಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.

Read More