Author: kannadanewsnow05

ಬೆಂಗಳೂರು : ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಪ್ರತಿವರ್ಷದಂತೆ ಈ ವರ್ಷವೂ ಗವಿಗಂಗಾಧರ ದೇವಾಲಯ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ಸಂಕ್ರಾತಿಯಂದು ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಂಚಲನ ಮಾಡುವ ಶುಭಘಳಿಗೆ. ಈ ವೇಳೆ ಬೆಂಗಳೂರಿನ ಗವಿಪುರಂನಲ್ಲಿರುವ ಗವಿಗಂಗಾಧರೇಶ್ವರ ದೇಗುಲದ ಶಿವನ ಮೂರ್ತಿಯನ್ನು ಸೂರ್ಯನ ಕಿರಣಗಳು ಸ್ಪರ್ಶಿಸಲಿವೆ. ಇದನ್ನು ಶಿವನಿಗೆ ಸೂರ್ಯದೇವ ಸಲ್ಲಿಸೋ ಪೂಜೆ ಅಂತಾ ನಂಬಿಕೆಯಿದ್ದು, ಈ ಬಾರಿ ಸಂಜೆ 5:02 ರಿಂದ 5:04ರವರೆಗೆ ಅಂದರೆ ಎರಡು ನಿಮಿಷಗಳ ಕಾಲ ಶಿವನಿಗೆ ಭಾಸ್ಕರ ನಮಿಸಲಿದ್ದಾನೆ. ಇದನ್ನು ‘ಸೂರ್ಯನ ಅಭಿಷೇಕ’ ಎಂದೇ ಕರೆಯಲಾಗುತ್ತದೆ. ಈ ಕಿರಣಗಳು ನಂದಿಯ ಕೊಂಬುಗಳ ಮಧ್ಯದಿಂದ ಹೋಗಿ ಗರ್ಭಗುಡಿಯೊಳಗಿರುವ ಶಿವಲಿಂಗವನ್ನು ತಲುಪುವ ಮೂಲಕ ದೇವಸ್ಥಾನವನ್ನು ಬೆಳಗಿಸುತ್ತದೆ. ಈ ಪವಾಡವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಅನೇಕ ಭಾಗಗಳಿಂದ ಭಕ್ತರು ಭೇಟಿ ನೀಡುತ್ತಾರೆ. ಈ ಪವಾಡವನ್ನು 5 ರಿಂದ 10 ನಿಮಿಷಗಳ ಕಾಲ ನಡೆಯುತ್ತದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ…

Read More

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ಜಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ…

Read More

ಬೆಂಗಳೂರು : ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನವರಿ.22ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭಎಯಲ್ಲಿ ನಿರ್ಧರಿಸಲಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ ಎಂದರು. ವಿಬಿ ಜಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.

Read More

ಬೆಂಗಳೂರು : ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ. ವಿಶೇಷ ಅಧಿವೇಶನ ನಡೆಸಲು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ.22ರಿಂದ ನಡೆಯಲಿರುವಂತ ವಿಶೇಷ ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಕೇಸ್ ನಲ್ಲಿ ಮಾದಕ ವಸ್ತುಗಳು ಮತ್ತು ಆನೆದಂತ ವಿಗ್ರಹಗಳನ್ನು ಜಪ್ತಿ ಮಾಡಿದ್ದು ಇವುಗಳ ಒಟ್ಟೂ ಮೌಲ್ಯ ಸುಮಾರು 1.2 ಕೋಟಿ ಎನ್ನಲಾಗಿದೆ. ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಡ್ರಗ್ಸ್ ಡೀಲಿಂಗ್ ಜಾಲ ಭೇದಿಸಿ ಕೊಕೇನ್, ಹೈಡ್ರೋ ಗಾಂಜಾ ವಶಪಡಿಸಿಕೊಂಡರೆ, ಜಿಗಣಿ ಪೊಲೀಸರು ಕಾನೂನುಬಾಹಿರ ಆನೆದಂತ ಮಾರಾಟ ಜಾಲವನ್ನು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಡ್ರಗ್ ಡಿಲೀಂಗ್​​ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101 ಗ್ರಾಂ ಕೊಕೇನ್ ಮತ್ತು 481 ಗ್ರಾಂ ಹೈಡ್ರೋ ಗಾಂಜಾ ಸೀಜ್ ಮಾಡಲಾಗಿದೆ. ಬೇಗೂರು ವ್ಯಾಪ್ತಿಯಲ್ಲಿ ವಾಸವಿದ್ದ ಆಕಾಶ್​​ ಮತ್ತು ಉಚೆ ನಡುರಿ ಬಂಧಿತರಾಗಿದ್ದು, ಪರಿಚಯಸ್ಥರು, ವಿದ್ಯಾರ್ಥಿಗಳು ಮತ್ತು ಐಟಿಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಇವರು ಡ್ರಗ್ ಮಾರಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಮತ್ತೊಂದು ಪ್ರಕರಣದಲ್ಲಿ ಆನೆ ದಂತದಿಂದ ಮಾಡಿದ ವಿಗ್ರಹ ಮಾರಾಟ ಜಾಲ ಪತ್ತೆ…

Read More

ನವದೆಹಲಿ : ‘ರಾಹುಕೇತು’ ಚಿತ್ರದಲ್ಲಿ ಕಾಂತಾರ ದೈವದ ಕೂಗಿನ ಅನುಕರಣೆಗೆ ಬ್ರೇಕ್ ಹಾಕಲಾಗಿದೆ. ಸಿನಿಮಾದಲ್ಲಿ ದೈವದ ಧ್ವನಿಗೆ ಸೆನ್ಸಾರ್ ಮಂಡಳಿ ಇದೀಗ ಬ್ರೇಕ್ ಹಾಕಿದೆ. ಪುಲ್ಕಿತ್ ಸಾಮ್ರಾಟ್ ಹಾಗು ವರುಣ್ ಶರ್ಮ ಅಭಿನಯದ ರಾಹುಕೇತು ಚಿತ್ರದಲ್ಲಿ ಕಾಂತಾರ ಚಿತ್ರದ ದೈವದ ಕೂಗನ್ನು ಈ ಚಿತ್ರದಲ್ಲಿ ಬಳಸಲಾಗಿತ್ತು. ಇದೀಗ ಈ ಶಬ್ದವನ್ನು ಬದಲಿಸುವಂತೆ ಸೆನ್ಸಾರ್ ಮಂಡಳಿ ಸೂಚನೆ ನೀಡಿದೆ. ಚಿತ್ರದಲ್ಲೇ ಮಧ್ಯದ ಬೆರಳು ತೋರಿಸಲಾಗಿದೆ. ಮಧ್ಯದ ಬೆರಳಿನ ಸನ್ನೆ ಬದಲಿಸಲು ಸೂಚನೆ ನೀಡಿದೆ. ಚಿತ್ರದಲ್ಲಿ ಬಳಸಿದ ಸಂಸ್ಕೃತ ಶ್ಲೋಕಕ್ಕೆ ದೃಢೀಕರಣ ಪತ್ರ ಸಲ್ಲಿಸಲು ಸೂಚನೆ ನೀಡಿದೆ. ಜನವರಿ 16ರಂದು ರಾಹುಕೇತು ಸಿನಿಮಾ ಬಿಡುಗಡೆ ಆಗಲಿದೆ.

Read More

ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬಾಗಲಕೋಟೆಯ ನವನಗರ್ದಲ್ಲಿ ಬೀದಿ ನಾಯಿಗಳಿಂದ ಗಾಯಗೊಂಡಿದ್ದ ಹತ್ತು ವರ್ಷದ ಬಾಲಕಿ ಅಲೈನ ಇಂದು ಹುಬ್ಬಳ್ಳಿಯ ಕಿಂಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿತ ಸಾವನ್ನಪ್ಪಿದ್ದಳು ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಎರಡು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ಅಟ್ಯಾಕ್ ಮಾಡಿದೆ. ಹೌದು ಚಿಕ್ಕೋಡಿ ಪಟ್ಟಣದಲ್ಲಿ ಬೀದಿನಾಯಿಗಳು ಅಟ್ಟಹಾಸ ಮೆರೆದಿದ್ದು ಎರಡು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಎರಡು ವರ್ಷದ ಋತ್ವಿಕ್ ಕುದರೆ ಎಂಬ ಮಗುವಿನ ಮೇಲೆ ದಾಳಿ ಮಾಡಿವೆ. ಮಗುವಿನ ಬಲ ಭಾಗದ ಕೆನ್ನೆ ಕಚ್ಚಿ ನಾಯಿಗಳು ಗಾಯಗೊಳಿಸಿವೆ. ಇನ್ನು ನಾಯಿಗಳ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

Read More

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತರುವು ಮಾಡಿದ್ದಕ್ಕೆ ನಗರಸಭೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ರಾಜೇಗೌಡ ಅವಾಚ್ಯವಾಗಿ ಶಬ್ದ ಬಳಸಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮೃತ ಗೌಡ ಇದೀಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ನಾನು ಯಾವುದೇ ದುರುದ್ದೇಶದಿಂದ ಹೇಳಿಕೆ ನೀಡಿಲ್ಲ. ಅಕಸ್ಮಾತ್ ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವರ ಮನಸ್ಸಿಗೆ ಬೇಜಾರಾಗಿದ್ದರೆ ಮಹಿಳಾ ಅಧಿಕಾರಿಗೆ ನಾನು ಕ್ಷಮೆ ಕೇಳುತ್ತೇನೆ. ಯಾವುದೇ ರೀತಿಯಾದ ಜೀವ ಬೆದರಿಕೆ ನಾನು ಹಾಕಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಇನ್ನು ರಾಜೀವ್ ಗೌಡ ಕ್ಷಮೆ ಕೇಳಿದ ವಿಚಾರ ತಿಳಿದು ಮಹಿಳಾ ಅಧಿಕಾರಿ ಅಮೃತ ಗೌಡ ನನಗೆ ಯಾವುದೇ ಕ್ಷಮೆ ಬೇಡ. ನಾನು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದೇನೆ. ದೂರಿನಲ್ಲಿ ರಾಜೀವ್ ಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಿ…

Read More

ಚಿಕ್ಕಬಳ್ಳಾಪುರ : ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ಕಾಂಗ್ರೆಸ್ ಮುಖಂಡನೊಬ್ಬ ನಿಂದಿಸಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದು, ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ಆಡಿಯೋವನ್ನು ಶೇರ್ ಮಾಡಿರುವಂತ ಜೆಡಿಎಸ್ ಪಕ್ಷವು, ಕರ್ನಾಟಕ ಕಾಂಗ್ರೆಸ್ ಪಕ್ಷದ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ  ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಅಮೃತಾಗೌಡ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಠಾಣೆಗೆ ಅಮೃತ ಗೌಡ ದೂರು ನೀಡಿದ್ದಾರೆ. ರಾಜೇಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ತೀವ್ರವಾಗಿ ಆಘಾತವಾಗಿದೆ ನಾನು ಇಲ್ಲಿ ಒಬ್ಬಳೇ ವಾಸವಿದ್ದೇನೆ ನನಗೆ ಸೂಕ್ತವಾದ ರಕ್ಷಣೆ ನೀಡಬೇಕು ಎಂದು ಅಮೃತ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಘಟನೆ ಹಿನ್ನೆಲೆ? ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ,…

Read More

ಬೆಂಗಳೂರು: ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ. ವಿಶೇಷ ಅಧಿವೇಶನ ನಡೆಸಲು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ.22ರಿಂದ ನಡೆಯಲಿರುವಂತ ವಿಶೇಷ ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ ಇದೆ. ವಿಬಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.

Read More