Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಜೆಪಿಯವರು ಮೋಸ್ಟ್ ಕರಪ್ಟ್ ಪೀಪಲ್ಸ್ ಆನ್ ಅರ್ಥ್ ಎಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಬೆಳೆದಿದ್ದರೆ ಅದಕ್ಕೆ ಬಿಜೆಪಿ ಮತ್ತು RSS ಕಾರಣ ಎಂದು ಗಂಭಿರವಾಗಿ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮೋಸ್ಟ ಕರಪ್ಟ್ ಪೀಪಲ್ ಆನ್ ಅರ್ಥ್. ಯಾರಾದರೂ ಬಹಳ ಭ್ರಷ್ಟರು ಇದ್ದರೆ ಅದು ಆರ್ಎಸ್ಎಸ್ ಮತ್ತು ಬಿಜೆಪಿಯಲ್ಲಿ. ಇವತ್ತು ರಾಜ್ಯದಲ್ಲಿ ಇಷ್ಟೊಂದು ಮಟ್ಟದಲ್ಲಿ ಭ್ರಷ್ಟಾಚಾರ ಬೆಳೆಯುವುದಕ್ಕೆ ಬಿಜೆಪಿ ಆರ್ ಎಸ್ ಎಸ್ ಕಾರಣ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಷ್ಟು ಕಾಲ ಭ್ರಷ್ಟಾಚಾರ ಬೆಳೆದಿಲ್ಲ. ಬಿಜೆಪಿಯವರು ಬಂಡವಾಳ ಶಾಹಿಗಳು ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರ ಬೆಳೆಯಿತು. ಬಿಜೆಪಿಯವರು ಮೋಸ್ಟ್ ಕರೆಕ್ಟ್ ಪೀಪಲ್ಸ್ ಒನ್ ಅರ್ಥ್ ಎಂದು ತೀವ್ರ ವಾಗ್ದಾಳಿ ನಡೆಸಿದರು.
ವಿಜಯಪುರ : ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ರಕ್ಷಿಸಲು ಬಿಎ ವಿಜಯೇಂದ್ರ ಯತ್ನಿಸಿದ್ದರು ಎಂದು ಹೊಸ ಬಾಂಬ್ ಸಿಡಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಚಾಟಿಸಿದಂತೆ ಎಸ್ ಟಿ ಸೋಮಶೇಖರ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಉಚ್ಛಾಟಿಸಲಾಗಿದೆ. ಇವರಿಬ್ಬರನ್ನು ರಕ್ಷಿಸಲು ಬಿ.ವೈ ವಿಜಯೇಂದ್ರ ಬಹಳವಾಗಿ ಯತ್ನಿಸಿದ್ದರು. ಎಸ್ ಟಿ ಸೋಮಶೇಖರ್ ಹೆಬ್ಬಾರ್ ಬಿವೈ ವಿಜಯೇಂದ್ರಗೆ ಬಹಳ ಆತ್ಮೀಯರಾಗಿದ್ದರು. ಆದರೆ ಬಿ ವೈ ವಿಜಯೇಂದ್ರ ಪ್ರಯತ್ನ ವಿಫಲ ಆಗಿದೆ. ಕೇವಲ ಯತ್ನಾಳರನ್ನು ಹೊರಹಾಕಬೇಕು ಅಂತ ಪಿತೂರಿ ನಡೆಸಲಾಗಿತ್ತು. ಆದರೆ ಈಗ ಇಬ್ಬರನ್ನು ಉಚ್ಚಾಟಿಸಿದ ಕೇಂದ್ರೀಯ ಶಿಸ್ತು ಸಮಿತಿ ಬಿವೈ ವಿಜಯೇಂದ್ರಗೆ ಸಂದೇಶ ನೀಡಿದೆ.
ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ, ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.ಈ ವಿಚಾರವಾಗಿ ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. 2028ರ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಇನ್ನೂ 10 ರಿಂದ 12 ಸೀಟುಗಳು ಖಾಲಿ ಆಗುತ್ತವೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕವಾದ ಹೇಳಿಕೆ ನೀಡಿದರು. ಈ ವಿಚಾರವಾಗಿ ಬೆಂಗಳೂರಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಬೆಳಿಗ್ಗೆ 10:30ಕ್ಕೆ ಮೊಬೈಲ್ ನೋಡ್ತಾ ಇದ್ದೆ ಅವಾಗ ನನಗೆ ನೋಟಿಸ್ ಬಂದಿತ್ತು. ಉಚ್ಚಾಟನೆ ಮಾಡಿ ಹೈಕಮಾಂಡ್ ಒಳ್ಳೆಯ ನಿರ್ಧಾರ ಮಾಡಿದೆ. ಅಮಾವಾಸ್ಯೆಯ ದಿನ ಒಳ್ಳೇದು ಮಾಡಿದ್ದಾರೆ ಸಂತೋಷ. ಚುನಾವಣೆ ವೇಳೆ ಬಿಜೆಪಿಯ ಇನ್ನೂ 10-12 ಸೀಟ್ ಖಾಲಿ ಆಗಲಿವೆ. ಚುನಾವಣೆ ಘೋಷಣೆ ಆದಾಗ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಉದ್ಘಾಟನೆಗೂ ಮುನ್ನ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿತ್ತು. ಪಕ್ಷ…
ಉತ್ತರಕನ್ನಡ : ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಉಚ್ಚಾಟನೆ ವಿಚಾರವಾಗಿ, ನನ್ನ ಸೋಲಿಸಲು ಹುನ್ನಾರ ಮಾಡಿದವರನ್ನು ಬಿಟ್ಟು ನನ್ನನ್ನು ಉಚ್ಚಾಟಿಸಲಾಗಿದೆ. ಪಕ್ಷ ಯಾವುದೇ ನಿರ್ಣಯ ತೆಗೆದುಕೊಂಡರು ನಾನು ಸ್ವಾಗತ ಮಾಡುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶಾಸಕ ಶಿವರಾಂ ಅಬ್ಬಾರ್ ಪ್ರತಿಕ್ರಿಯೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಉಚ್ಚಾಟನೆ ಮಾಡಿರುವ ಆದೇಶದ ಪ್ರತಿ ತಲುಪಿದೆ. ಕೆಲವರು ಅನೇಕ ತಪ್ಪು ಮಾಡಿದ ಬಳಿಕ ಉಚ್ಚಾಟನೆ ಮಾಡಿದರು. ಕೆಲವರು ತಪ್ಪು ಮಾಡಿದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ತಪ್ಪೇ ಮಾಡಿಲ್ಲ ಉಚ್ಚಾಟನೆಯನ್ನು ಯಾಕೆ ನಿರೀಕ್ಷಿಸಲಿ? ನನ್ನ ಸೋಲಿಸಲು ಹುನ್ನಾರ ಮಾಡಿದರು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಾನು ಶಾಸಕ ಆಗಬಾರದು ಅಂತ ಇದ್ದರೆ ಬಿಫಾರಂ ಕೊಡಬಾರದಿತ್ತು. ಬಿಫಾರಂ ಕೊಟ್ಟು ಸೋಲಿಸುವ ಕೆಲಸ ಮಾಡಿದ್ದು ಎಷ್ಟು ಸರಿ? ಇದು ಚಿಕ್ಕ ವಿಷಯ ಅಂತ ತಿಳಿದುಕೊಳ್ಳಬೇಡಿ. ನನ್ನನ್ನು ಸೋಲಿಸಲು ಹುನ್ನಾರ ಮಾಡಿದವರನ್ನು ಉಚ್ಚಾಟಿಸುವ ಬದಲು ಇನ್ನಷ್ಟು ಎತ್ತರದ ಸ್ಥಾನ…
ಬೆಂಗಳೂರು : ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದರೆ ವಾಹನ ಟೋಯಿಂಗ್ ಆರಂಭಿಸುವುದಿಲ್ಲ ಎಂದು ಇಂದು ಬೆಳಿಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದರು. ಅದಾದಮೇಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭಿಸಲಾಗುತ್ತದೆ ಎಂದು ಸಹ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಲಿದೆ. ಟೋಯಿಂಗ್ ಆರಂಭದ ಬಗ್ಗೆ ಕೆಲ ದಿನಗಳಿಂದಲೇ ಚರ್ಚೆ ನಡೆಯುತ್ತಿತ್ತು. ಈಗ ಸರ್ಕಾರವೇ ಅಧಿಕೃತವಾಗಿ ಟೋಯಿಂಗ್ ಆರಂಭವಾಗುವ ಬಗ್ಗೆ ತಿಳಿಸಿದೆ. ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಬೆಂಗಳೂರು : ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ವಿಚಾರವಾಗಿ ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು. ಈ ವಿಚಾರವಾಗಿ ಬೆಂಗಳೂರಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ. ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು ಒಳ್ಳೆಯದಾಯ್ತು.ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು. 1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು…
ಬೆಳಗಾವಿ : ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವರಾದಂತಹ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಅರೆಸ್ಟ್ ಮಾಡಲಾಗಿದೆ. ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಆರೋಪದಡಿ ಪ್ರೀತಮ್ನನ್ನು ಬಂಧಿಸಲಾಗಿದೆ.ಸಚಿವ ಸತೀಶ ಜಾರಕಿಹೊಳಿ ಆಪ್ತ ಹಾಗೂ ಮಾಜಿ ಸಚಿವ ವೀರಕುಮಾರ ಪಾಟೀಲ ಅವರ ಪುತ್ರ ಪ್ರೀತಮ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಬೆಂಗಳೂರು : ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸರ್ಕಾರವು ರಾಜ್ಯಪಾಲರಿಗೆ ಮರುಸಲ್ಲಿಸಿದೆ. ಮೊದಲ ಬಾರಿಗೆ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಮಸೂದೆಯನ್ನು ಅನುಮೋದಿಸಿರಲಿಲ್ಲ. ಈಗ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಲಾಗಿದೆ. ಹೌದು ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಸೂದೆಯನ್ನು ಮರು ಸಲ್ಲಿಕೆ ಮಾಡಲಾಗಿದೆ. ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು…
ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರ ಹೊಸ ತಳಿ ವೈರಸ್ ಹರಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸುಮಾರು 80ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ವಿಷಯದ ಕುರಿತು ಸಿಎಂ ಸಿದ್ದರಾಮಯ್ಯ ಕೊರೊನ ವೈರಸ್ ಬಗ್ಗೆ ಯಾವುದೇ ನಿರ್ಲಕ್ಷ ವಹಿಸಬೇಡಿ, ಅನಾರೋಗ್ಯ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ.ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು.
ಬೆಂಗಳೂರು : ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಹಾಗೂ ಭೂಕುಸಿತ ಘಟನೆಗಳು ನಡೆದಿದೆ.ಇಂದು ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಮರ ಬಿದ್ದು ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ ಮರ ಬಿದ್ದು ಬೈಕ್ ಸವಾರನಿಗೆ ಗಂಭಿರವಾಗಿ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಬಿಎಂಪಿ ಹಾಗೂ ಅರಣ್ಯ ಇಲಾಖೆಯ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲು ಮಾಡಲಾಗಿದೆ.