Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ಗಾಳಿಪಟ ಹಾರಿಸುವಾಗ ಚೀನಾದ ಮಾಂಜಾ ಎನ್ನುವ ಗಾಜಿನಿಂದ ತಯಾರಿಸಿದ ದಾರವು ಬ್ಯಾನ್ ಆಗಿದ್ದರೂ ಕೂಡ ಮಕ್ಕಳ ಕೈಯಲ್ಲಿ ಗಾಳಿಪಟದ ಜೊತೆಗೆ ಮಾಂಜಾ ದಾರ ಸುಲಭವಾಗಿ ಸಿಗುತ್ತಿದೆ. ಇದೀಗ ಇದೆ ಮಜಾ ದಾರ ಬೈಕ್ ಸವರ್ಣ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಂಬುಳಗಿ ಗ್ರಾಮದ ಸಂಜೀವಕುಮಾರ್ (48) ಎಂದು ಗುರುತಿಸಲಾಗಿದೆ.ಸಂಜೀವಕುಮಾರ್ ಅವರು ತಮ್ಮ ಗ್ರಾಮದಿಂದ ಹುಮನಾಬಾದ್ ಗೆ ತೆರಳುವಾಗ ತಾಳಮಡಗಿ ಗ್ರಾಮದ ಹತ್ತಿರ ಗಾಳಿಪಟ ಹಾರಿಸುವ ಮಾಂಜಾ ಧಾರಾ ಅವರ ಕುತ್ತಿಗೆಗೆ ಸಿಲುಕಿ ಸ್ಥಳದಲ್ಲಿಯೇ ತುಂಬಾ ರಕ್ತ ಸ್ರಾವವಾಗಿ ಮೃತಪಟ್ಟಿದ್ದಾರೆ. ಮನ್ನಾಖೇಳಿ ಪಿಎಸ್ಐ ಮಹೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಳಿಪಟ ಹಾರಿಸುವಾಗ ಮಾಂಜಾ ಧಾರಾ ಬಳಸಬಾರದು ಹಾಗೆಯೇ ಅದನ್ನು ಮಾರಾಟ ಕೂಡ ಮಾಡಬಾರದು ಎಂದು ಜಾಗೃತಿ ಮೂಡಿಸಲಾಗಿತ್ತು. ಆದರೆ ಇಂತಹ ಘಟನೆ ನಡೆದದ್ದು ಬೇಸರದ ಸಂಗತಿಯಾಗಿದೆ. ಇದರ ವಿರುದ್ಧ ಪ್ರಕರಣ ದಾಖಲಿಸಿ…
ಪಶ್ಚಿಮಬಂಗಾಳ : ಸಾಮಾನ್ಯವಾಗಿ ಕುರಿ ಕೋಳಿ ಬಲಿ ನೀಡಿ ಸೇವಿಸೋದು ನೋಡಿದ್ದೇವೆ. ಆದರೆ ನರ ಭಕ್ಷಕನೊಬ್ಬ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದಾನೆ. ಪಶ್ಚಿಮ ಬಂಗಾಳದಲ್ಲಿ ನರಭಕ್ಷಕನೊಬ್ಬ ಪತ್ತೆಯಾಗಿದ್ದಾನೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದು ಇಡೀ ಬಂಗಾಳದ ಜನತೆಯೇ ಬೆಚ್ಚಿಬಿದ್ದಿದ್ದಾರೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದು ಇಡೀ ಬಂಗಾಳದ ಜನತೆಯೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ, ದಿನ್ಹಾಟಾ ಉಪಜಿಲ್ಲಾ ಪೊಲೀಸ್ ಅಧಿಕಾರಿ ಧಿಮಾನ್ ಮಿತ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 10 ರಂದು, ದಿನ್ಹಾಟಾ ಗಡಿಗೆ ಹೊಂದಿಕೊಂಡಿರುವ ಕುರ್ಷಾ ಹ್ಯಾಟ್ನಲ್ಲಿರುವ ದೂರದ ಸ್ಮಶಾನದಿಂದ ಪೊಲೀಸರು ಮಾನಸಿಕ ಅಸ್ವಸ್ಥ ವ್ಯಕ್ತಿಯ ಶವವನ್ನು ವಶಪಡಿಸಿಕೊಂಡಿದ್ದಾರೆ. ಮೃತದೇಹದ ಕುತ್ತಿಗೆ ಮತ್ತು ಭುಜಗಳ ಮೇಲೆ ಆಳವಾದ ಗಾಯಗಳಿದ್ದವು. ಅದರ ನಂತರ, ಪೊಲೀಸರು ಕೊಲೆ ಪ್ರಕರಣವನ್ನು…
ಚಿಕ್ಕಬಳ್ಳಾಪುರ : ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಆಯುಕ್ತೆಗೆ ಇದೀಗ ಜೀವಾ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ನಗರ ಸಭೆ ಆಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೇಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಧಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ ಹಿನ್ನೆಲೆಯಲ್ಲಿ ಅವಾಜ್ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ. ಚಪ್ಪಲಿಯಲ್ಲಿ ಹೊಡೆದು ದಂಗೆ ಎಬ್ಬಿಸುವುದಾಗಿ ಬೆದರಿಕೆ ಆರೋಪ ಕೇಳಿ ಬಂದಿದೆ ಶಾಸಕ ಬಿ.ಎನ್ ರವಿಕುಮಾರ್ ಕೂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಷ್ಟೆ ಅಲ್ಲದೆ ಪರೋಕ್ಷವಾಗಿ ಸಚಿವ ಡಾ.ಎಂಸಿ ಸುಧಾಕರ್ ಗು ನಿಂದನೆ…
ಮಂಡ್ಯ : ಹಾಸನದಲ್ಲಿ ಅಂಗಡಿ ವ್ಯಾಪಾರಿ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಬೆನ್ನಲ್ಲೆ, ಇದೀಗ ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇಂದು ಯೋಧನ ಮೃತದೇಹ ಮಂಡ್ಯಕ್ಕೆ ಆಗಮಿಸಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಬಳ್ಳಾರಿ : ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಘರ್ಷಣೆ ವೇಳೆ ಪೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಜನವರಿ 17 ರಿಂದ ಫೆಬ್ರವರಿ 5 ರವರೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ ಅವರು, ಒಂದೆರಡು ದಿನದಲ್ಲಿ ಪಾದಯಾತ್ರೆ ಬಗ್ಗೆ ಮಾಹಿತಿ ಸಿಗುತ್ತದೆ ಕೇವಲ ಶ್ರೀರಾಮಲು ಮತ್ತು ರೆಡ್ಡಿ ಅಭಿಪ್ರಾಯ ಮಾತ್ರ ಅಲ್ಲ ಬಿಜೆಪಿ ವರಿಷ್ಠರ ಜೊತೆ ಈಗಾಗಲೇ ಮಾತನಾಡಿದ್ದೇನೆ. ನಮ್ಮೆಲ್ಲರ ಅಭಿಪ್ರಾಯ ಕೂಡ ಪಾದಯಾತ್ರೆಯ ಪರವಾಗಿದೆ. ಬಿಜೆಪಿ ವರಿಷ್ಠರ ಜತೆಗೆ ಈಗಾಗಲೇ ಮಾತನಾಡಿದ್ದೇನೆ ಮೊದಲ ಹಂತದಲ್ಲಿ ಜನವರಿ 17ಕ್ಕೆ ಬಳ್ಳಾರಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು. ಬಳ್ಳಾರಿ ಪಾದಯಾತ್ರೆಗೆ ಇದೀಗ ರೂಟ್ ಮ್ಯಾಪ್ ಕೂಡ ರೆಡಿಯಾಗಿದೆ 20 ದಿನಗಳ ಪಾದಯಾತ್ರೆಗೆ ಶ್ರೀರಾಮುಲು ಹಾಗೂ ಜನಾರ್ಧನ…
ಜನರಿಂದ ಚಪ್ಲಿಲಿ ಹೊಡಸ್ತೀನಿ : ಬ್ಯಾನರ್ ತೆರವು ಮಾಡಿದಕ್ಕೆ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ!
ಚಿಕ್ಕಬಳ್ಳಾಪುರ : ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಆಯುಕ್ತೆಗೆ ಇದೀಗ ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ನಗರ ಸಭೆ ಆಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೇಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಧಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ ಹಿನ್ನೆಲೆಯಲ್ಲಿ ಅವಾಜ್ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ. ಚಪ್ಪಲಿಯಲ್ಲಿ ಹೊಡೆದು ದಂಗೆ ಎಬ್ಬಿಸುವುದಾಗಿ ಬೆದರಿಕೆ ಆರೋಪ ಕೇಳಿ ಬಂದಿದೆ ಶಾಸಕ ಬಿ.ಎನ್ ರವಿಕುಮಾರ್ ಕೂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಷ್ಟೆ ಅಲ್ಲದೆ ಪರೋಕ್ಷವಾಗಿ ಸಚಿವ ಡಾ.ಎಂಸಿ ಸುಧಾಕರ್ ಗು ನಿಂದನೆ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚಿರತೆಗಳ ಕಾಟ ಇದೀಗ ಮತ್ತೆ ಹೆಚ್ಚಾಗಿದ್ದು, ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲದಲ್ಲಿ ತಡರಾತ್ರಿ ನಾಯಿಯ ಮೇಲೆ ಚಿರತೆ ಒಂದು ದಾಳಿ ಮಾಡಿರುವ ಘಟನೆ ಇದೀಗ ವರದಿಯಾಗಿದೆ. ಹೌದು ನೆಲಮಂಗಲದಲ್ಲಿ ಚಿರತೆ ದಾಳಿ ಇದೀಗ ಮಿತಿಮೀರಿದ್ದು, ಹೇಮಗಂಗಾ ಬಡಾವಣೆ ಜನರಲ್ಲಿ ಆತಂಕ ಮನೆ ಮಾಡಿದೆ. ದೊಣ್ಣೆ ಹಿಡಿದು ಜನರು ರಾತ್ರಿ ಕಾವಲು ಕಾಯುತ್ತಿರುವ ಪರಿಸ್ಥಿತಿ ಬಂದಿದೆ. ರಕ್ಷಣೆಗಾಗಿ ಬಡಾವಣೆಯ ಜನರು ದೊಣ್ಣೆಗಳ ಮೊರೆ ಹೋಗಿದ್ದಾರೆ ಬಡಾವಣೆಯಲ್ಲಿರುವ ನಾಯಿಗಳ ಮೇಲೂ ಚಿರತೆಗಳು ದಾಳಿ ಮಾಡಿವೆ. ನಾಯಿಗಳನ್ನು ಚಿರತೆಯಿಂದ ರಕ್ಷಿಸಲು ಜನರು ಮುಂದಾಗಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯನ್ನು ಕೊಚ್ಚಿ ಕೊಂದಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೋಳೂರಿನಲ್ಲಿ ನಡೆದಿದೆ. ಕೊಡಲಿಂದ ಕೊಚ್ಚಿ ಕೊಂದಿದ್ದ ಆರೋಪಿ ವೀರಭದ್ರಯ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಳುರಿನಲ್ಲಿ ವೀರಭದ್ರಯ್ಯ (60) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕಳೆದ ಶನಿವಾರ ದಾಕ್ಷಾಯಿಣಮ್ಮ ಅವರನ್ನು ವೀರಭದ್ರಯ್ಯ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ. ಮಹಿಳೆಯನ್ನು ಕೊಂದ ಬಳಿಕ ವೀರಭದ್ರಯ್ಯ ಪರಾರಿಯಾಗಿದ್ದ. ಆರೋಪಿಗಾಗಿ ಪೊಲೀಸರು ಹುಡುಕಾಡಿದ್ದರು. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಪತ್ತೆಗೆ ಬೆಲೆ ಬೀಸಿದ್ದರು. ಇದೀಗ ವೀರಭದ್ರಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಮೇಲೆ ಹಲ್ಲೆ ಮಾಡಿ ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪದಡಿ ಪತಿಯನ್ನು DCRE (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಜೆಡ್ರೆಲಾ ಜಾಕೂಬ್ ಆರೂಪ್ ಬಂಧಿತ ಆರೋಪಿ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಆರೋಪಿಯು ದೂರುದಾರ ಯುವತಿಯನ್ನು ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ. ದಂಪತಿಗೆ 11 ತಿಂಗಳ ಮಗುವಿದೆ. ಇಬ್ಬರು ಅನೋನ್ಯವಾಗಿದ್ದಾಗಲೇ ಪತಿಗೆ ತನ್ನ ಕಂಪನಿಯಲ್ಲಿ ಪತ್ನಿ ಕೆಲಸ ಕೊಡಿಸಿದ್ದರು. ವೃತ್ತಿಗಾಗಿ ಬೆಂಗಳೂರಿಗೆ ಬಂದ ಬಳಿಕ ಆರೋಪಿಯು ಪರಸ್ತ್ರೀ ವ್ಯಾಮೋಹಕ್ಕೆ ಒಳಗಾಗಿ ಪತ್ನಿಯನ್ನು ಕಡೆಗಣಿಸಿದ್ದ. ಆರೋಪಿಯು ಭೂಪಾಲ್ ಮೂಲದ ಮಹಿಳೆಯನ್ನು ಪ್ರೀತಿಸಿದ್ದ. ಈ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಬಿಟಿಎಂ ಲೇಔಟ್ನಲ್ಲಿರುವ ಮನೆಯಲ್ಲಿ ಆರೋಪಿ ವಾಸ್ತವ್ಯ ಹೂಡಿದ್ದ. ಇದನ್ನು ಅರಿತ ಆರೋಪಿಯನ್ನು ಪತ್ನಿಯು ಪ್ರಶ್ನಿಸಿದಾಗ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದ. ಈ ಬಗ್ಗೆ ಪತಿ ವಿರುದ್ಧ ಜಾತಿನಿಂದನೆ ಹಾಗೂ ಹಲ್ಲೆ ಆರೋಪದಡಿ ಪತ್ನಿ ದೂರು ದಾಖಲಿಸಿದ್ದರು. ಜಾತಿನಿಂದನೆ ಆರೋಪ ಹಿನ್ನೆಲೆಯಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಘೋರ ದುರಂತ ಒಂದು ಸಂಭವಿಸಿದೆ. ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿದೆ. ಮೆಟ್ರೋ ಗರ್ಡರ್ ಜೋಡಿಸುವಾಗ ಈ ಒಂದು ಘಟನೆ ಸಂಭವಿಸಿದೆ. ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.













