Author: kannadanewsnow05

ಚಿತ್ರದುರ್ಗ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದಂತಹ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಲಾರಿ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಎಂಬಲ್ಲಿ ನಡೆದಿದೆ. ಹೌದು ಸಿಬಾರ ಬಳಿ ಭೀಕರ ಅಪಘಾತವಾಗಿ ಸ್ಥಳದಲ್ಲಿ ಮೂರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಒಂದು ಅಪಘಾತ ಸಂಭವಿಸಿದ್ದು ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ, ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ಕುರಿತು ಚಿತ್ರದುರ್ಗದ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ಯುವಜನತೆ ಈ ಒಂದು ಹೃದಯಾಘಾತಕ್ಕೆ ಯಾಗುತ್ತಿದ್ದಾರೆ ಇದೀಗ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದೆಯೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯಕ್ಕೆ ಸಿ ಮಂಜುನಾಥ್ ಪುತ್ರ ಶಶಾಂಕ್ (28) ಸಾವನ್ನಪ್ಪಿದ್ದಾನೆ ಕಳೆದ ಭಾನುವಾರ ರಸ್ತೆ ಮೃತ ಶಶಾಂಕ್ ಹಸೆಮಣೆ ಏರಿದ್ದ ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನಿನ್ನೆ ಹೃದಯಾಘಾತದಿಂದ ಶಶಾಂಕ್ ಸಾವನಪ್ಪಿದ್ದಾನೆ.

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಶಾಲೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕಾಮುಕ ಶಿಕ್ಷಕನೊಬ್ಬ ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದಲ್ಲಿ ನಡೆದಿದೆ. ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕ ಗಿರೀಶ್ ಎಂದು ಹೇಳಲಾಗಿದ್ದು, ವಿದ್ಯಾರ್ಥಿನಿಯರಿಗೆ ಆದ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತೇ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಶಿಕ್ಷಕರ ವಿರುದ್ಧ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೋಷಕರು ಶಿಕ್ಷಕರ ಬಂಧನಕ್ಕೆ ಆಗ್ರಹಿಸಿದ್ದು, ಪ್ರಕರಣದ ಕಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ರಕ್ಷಕ ಗಿರೀಶ್ ಗಾಗಿ ಇದೀಗ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ನಿನ್ನೆ ನಡೆದ ಚಾಂಪಿಯನ್ಸ್ ಟ್ರೊಫಿ ಸೆಮಿ ಫೈನಲ್ ಮ್ಯಾಚ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತವು ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಅರ್ಹತೆ ಪಡೆದಿದೆ. ಮೆನ್ ಇನ್ ಬ್ಲೂ ತಂಡವು ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಪ್ರವೇಶಿಸಿತು. ಭಾರತ ಫೈನಲ್ ತಲುಪಿದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭಾರತ ತಂಡಕ್ಕೆ ಅಭಿನಂದನೆ ತಿಳಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಬ್ಲೂ ಬಾಯ್ಸ್ ಅದ್ಭುತ ಆಟದಿಂದ ಭಾರತ ಇಂದು ಗೆಲವು ಸಾಧಿಸಿದೆ. ಫೈನಲ್ ನಲ್ಲೂ ಹೀಗೆ ಆಡಿ ಐಸಿಸಿ ಚಾಂಪಿಯನ್ ಟ್ರೊಫಿ ಕಪ್ ಗೆಲ್ಲಲಿ ಎಂದು ಡಿಕೆ ಶಿವಕುಮಾರ್ ಟೀಂ ಇಂಡಿಯಾಗೆ ಶುಭ ಹಾರೈಸಿದ್ದಾರೆ. 265 ರನ್ಗಳ ಗುರಿ ಬೆನ್ನತ್ತಿದ ಭಾರತ ಒಂದು ಹಂತದಲ್ಲಿ 2 ವಿಕೆಟ್ ನಷ್ಟಕ್ಕೆ 43 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಪರಿಸ್ಥಿತಿಯನ್ನು ನಿಯಂತ್ರಿಸಿ 91 ರನ್ಗಳ ಅಮೂಲ್ಯ ಜೊತೆಯಾಟವನ್ನು ನೀಡಿದರು. ಶ್ರೇಯಸ್ 45…

Read More

ಯಾದಗಿರಿ : ಸದ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕುರಿತು ಬಾರಿ ಚರ್ಚೆ ನಡೆಯುತ್ತಿದ್ದು ಒಂದು ಕಡೆ ಟಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂದು ಹಲವರು ಭವಿಷ್ಯ ನುಡಿಸಿದರೆ ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ ಇದರ ಮಧ್ಯ ನೊಣವಿನಕೆರೆಯ ಶಿವಯೋಗೇಶ್ವರ ಶಿವಾಚಾರ್ಯರು ಡಿಕೆ ಶಿವಕುಮಾರ್ ಸಿಎಂ ಆಗುವುದು ಎಲ್ಲರ ಸಂಕಲ್ಪವಾಗಿದೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಯಾದಗಿರಿಯ ಅಬ್ಬೆತುಮಕೂರಲ್ಲಿ ಮಾತನಾಡಿದ ಅವರು, ಡಿಕೆ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದ್ದಿದ್ದಾರೆ. ನೊಣವಿನಕೆರೆಯ ಸೋಮ್ಮೆಕಟ್ಟೆ ಶಿವಯೋಗೇಶ್ವರ ಶಿವಾಚಾರ್ಯರು ಈ ಒಂದು ಭವಿಷ್ಯ ನುಡಿದಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಎಲ್ಲರ ಆಸೆಯಾಗಿದೆ. ರೈತರು ಸದ್ಭಕ್ತರು ವರ್ತಕರು ಸೇರಿದಂತೆ ಎಲ್ಲರ ಆಶಯ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಇದೆ. ಡಿಕೆ ಶಿವಕುಮಾರ್ ಸಿಎಂ ಆಗಲು ಯೋಗ್ಯವಾದ ವ್ಯಕ್ತಿ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಸಂಕಲ್ಪವಿದೆ. ಡಿಕೆ ಸಿಎಂ ಆಗಬೇಕೆಂಬುದು ನಮ್ಮ ಮಠದ ಆಶೀರ್ವಾದವೂ ಇದೆ. ಒಂದು ದಿನ ಡಿಕೆಸಿಎಂ ಆಗುತ್ತಾರೆಂದು…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ಬಂದು ವಿದೇಶಿಗರು ವಾಸಿಸುತ್ತಿದ್ದಾರೆ. ವೀಸಾ ಮುಗಿದರು ಸಹ ವಿದೇಶಕ್ಕೆ ತೆರಳದೆ ಇಲ್ಲಿಯೇ ಇದ್ದಾರೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಿಯರ ಕಾಯ್ದೆ ಪ್ರಕಾರ ವಿದೇಶಿ ಪ್ರಜೆಗಳಿಗೆ ತನ್ನ ಮನೆ ಬಾಡಿಗೆ ನೀಡಿದ 24 ತಾಸಿನೊಳಗೆ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್ ಪೋರ್ಟಲ್‌ನಲ್ಲಿ ಫಾರಂ-ಸಿ ಅನ್ನು ಅಧಿಕಾರಿಗಳಿಗೆ ಸಲ್ಲಿಸಬೇಕಿದೆ ಎಂದರು. ಎಫ್‌ಆರ್‌ಓಓ ಅಧಿಕಾರಿಗಳು ಅನುಮೋದಿಸಿದ ಮನೆಯ ಮಾಲೀಕ/ನಿರ್ವಹಕಾರ ವಿದೇಶಿ ವ್ಯಕ್ತಿ ವಾಸ್ತವ್ಯಕ್ಕೆ ಬಂದ 24 ತಾಸಿನಲ್ಲೇ ನಮೂನೆ-ಸಿ ರ ಮುದ್ರಿತ ಪ್ರತಿಗಳನ್ನು ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಮನೆ ಮಾಲೀಕರು ಪಾಲಿಸುತ್ತಿಲ್ಲ. ಕಳೆದ ಐದುವರ್ಷಗಳಲ್ಲಿ ವಿದೇಶಿಪ್ರಜೆಗಳಿಗೆ ಕಾನೂನುಬಾಹಿರವಾಗಿ ಮನೆಗಳನ್ನು ಬಾಡಿಗೆ ನೀಡಿದವರ ವಿರುದ್ಧ 70 ಪ್ರಕಣಣಗಳು ದಾಖಲಾಗಿವೆ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಭೀಕರವಾದಂತ ಅಪರಾಧ ಸಂಭವಿಸಿದ್ದು ಚಿಕ್ಕಮಂಗಳೂರು ಜಿಲ್ಲೆಯ ಹಿರೇಮಂಗಳೂರು ಸಮೀಪ ರೈಲ್ವೆ ಬ್ರಿಡ್ಜ್ ಬಳಿ ಕಾರು ಮತ್ತು ಬೈಕ್ ಮುಖಾಂತರ ಡಿಕ್ಕಿ ಹೊಡಿದಿವೆ. ಈ ಒಂದು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾದಗಳಾಗಿದ್ದು ಇಬ್ಬರ ಆರೋಗ್ಯ ಸ್ಥಿತಿ ಕೂಡ ಇದೀಗ ಚಿಂತಾಜನಕವಾಗಿದೆ ಎನ್ನಲಾಗಿದೆ. ಹೌದು ಚಿಕ್ಕಮಂಗಳೂರಿನ ಹಿರೇಮಗಳೂರು ರೈಲ್ವೆ ಬ್ರಿಡ್ಜ್ ಬಳಿ ಒಂದು ಅಪಘಾತ ಸಂಭವಿಸಿದೆ. ಚಿಕ್ಕಮಂಗಳೂರಿನ ಕೋಟೆ ಪ್ರದೇಶ ನಿವಾಸಿ ಚಿರಂತ (35) ತೆಗುರು ಗ್ರಾಮದ ನಿವಾಸಿ ತೇಜಸ್ (24) ಗಂಭೀರವಾದ ಗಾಯ ಆಗಿದೆ. ರೈಲ್ವೆ ಬ್ರಿಡ್ಜ್ ಡಿಕ್ಕಿಯಾಗಿ ಕಾರು ಬಿದ್ದು ನುಜ್ಜುಗುಜ್ಜಾಗಿದೆ. ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಹಾವಳಿಯಿಂದ ಅನೇಕ ಜನರು ಆತ್ಮಹತ್ಯೆ ಶರಣಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ, ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿ ತಡೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಮೂರು ವಿಧೇಯಕಗಳನ್ನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಂಡಿಸಿದರು. ಸಾಲ ಪಡೆದವರ ವಿರುದ್ಧ ಲೇವಾದೇವಿದಾರ ಅಥವಾ ಲೇವಾದೇವಿ ಸಂಸ್ಥೆ ಬಲವಂತದ ಕ್ರಮ ಕೈಗೊಳ್ಳುವುದನ್ನು ತಡೆಯುವ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ 2025, ಜತೆಗೆ ದುಬಾರಿ ಬಡ್ಡಿ ವಿಧಿಸುವುದನ್ನು ತಡೆಯುವುದು ಹಾಗೂ ಗಿರವಿದಾರರಿಂದ ರಕ್ಷಿಸುವ ಕರ್ನಾಟಕ ಗಿರವಿದಾರರ (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಡಿಸಲಾಯಿತು. ಸಾಲ ವಸೂಲಾತಿ ವಿಚಾರದಲ್ಲಿ ಕಿರುಕುಳ ನೀಡುವವರಿಗೆ ಗರಿಷ್ಠ 10 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ಹಾಗೂ 5 ಲಕ್ಷ ರು.ವರೆಗೆ ದಂಡ ವಿಧಿಸುವ ಕುರಿತ ತಿದ್ದುಪಡಿಯನ್ನು ಈ 3 ವಿಧೇಯಕಗಳಲ್ಲೂ…

Read More

ಬೆಂಗಳೂರು : ಈಗಾಗಲೇ KSRTC ಬಸ್, ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆ ಮಾಡಿ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದ್ದು, ಇದರ ಬೆನ್ನಲ್ಲೆ ಇದೀಗ ಮತ್ತೊಂದು ಶಾಕ್ ನೀಡಲು ಹೊರಟಿರುವ ಸರ್ಕಾರ ವಿವಿಧ ದರ ಏರಿಕೆಗಳಿಂದ ತತ್ತರಿಸಿರುವ ಸಾರ್ವಜನಿಕರಿಗೆ ಇದೀಗ ವಿದ್ಯುತ್ ಮೀಟರ್ ದರ ಶೇ.400 ರಿಂದ ಶೇ.800 ರಷ್ಟು ಏರಿಕೆ ಮಾಡಿ ಹೊಸ ಶಾಕ್ ನೀಡಿದೆ. ಹೌದು ಬೆಸ್ಕಾಂ ಸಂಸ್ಥೆ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.ಜ.15 ರಿಂದ ಅನ್ವಯವಾಗುವಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ತೆಗೆದುಕೊಳ್ಳುವ ಎಲ್ಲಾ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೂ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಇನ್ನು ಹೊಸ ಕಾಯಂ ಸಂಪರ್ಕ ಪಡೆಯಲೂ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದು, ಪ್ರಿಪೇಯ್ಡ್ ಅಥವಾ ಪೋಸ್ಟ್ ಪೇಯ್ಡ್ ಎಂಬ ಆಯ್ಕೆ ನೀಡಿದೆ. ಸ್ಮಾರ್ಟ್ ಮೀಟರ್ ನಿರ್ವಹಣೆ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದ್ದು, ಪ್ರಿಪೇಯ್ಡ್ ಗ್ರಾಹಕರು ಕನಿಷ್ಠ 100 ರು. ಅಥವಾ ಒಂದು…

Read More

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪತ್ನಿ ಪಾರ್ವತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysore Urban Development Authority -MUDA) ಭೂ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ.ಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಪ್ರಕರಣವನ್ನು ರಾಜ್ಯ ಒಂಬುಡ್ಸ್ ಮನ್ ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿ ನ್ಯಾಯಾಲಯವು ಫೆಬ್ರವರಿ 7 ರಂದು ಮನವಿಯನ್ನು…

Read More